ಕರಾವಳಿ

ಅರಣ್ಯಾಧಿಕಾರಿಗಳ ಮೇಲೆ ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಹರೀಶ್ ಪೂಂಜಾ| ಎಫ್ಐಆರ್ ವಾಪಾಸ್ಸಿಗೆ ಬಿಜೆಪಿ ಆಗ್ರಹ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ಅರಣ್ಯಾಧಿಕಾರಿಗಳಿಂದ ಮನೆ ತೆರವು ಪ್ರಕರಣವನ್ನು ಬಿಜೆಪಿ ಶಾಸಕ ಹರೀಶ್​​ ಪೂಂಜಾ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದರು. ಆದರೆ ಈ ವೇಳೆ ಬರಗಾಲ ಚರ್ಚೆ ಆರಂಭಿಸಿ ಎಂದು ಸ್ಪೀಕರ್ ಯು.ಟಿ.ಖಾದರ್​​ ಹೇಳಿದ್ದಾರೆ. ಅವಕಾಶ ನೀಡದ್ದಕ್ಕೆ ಸಿಟ್ಟಿಗೆದ್ದ ಶಾಸಕ ಪೂಂಜಾ ಸದನದ ಬಾವಿಗಿಳಿದು ಜೆಡಿಎಸ್​, ಬಿಜೆಪಿ ಸದಸ್ಯರಿಂದ ಪ್ರತಿಭಟನೆ ಮಾಡಿದ್ದಾರೆ. ಬಳಿಕ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಸ್ಪೀಕರ್ ಖಾದರ್ ಅವಕಾಶ ನೀಡಿದ್ದು,​ ಬಳಿಕ ವಿಪಕ್ಷ ಸದಸ್ಯರು ಧರಣಿ ಹಿಂಪಡೆದಿದ್ದಾರೆ. […]

ಅರಣ್ಯಾಧಿಕಾರಿಗಳ ಮೇಲೆ ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಹರೀಶ್ ಪೂಂಜಾ| ಎಫ್ಐಆರ್ ವಾಪಾಸ್ಸಿಗೆ ಬಿಜೆಪಿ ಆಗ್ರಹ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ನೇಜಿ ನಾಟಿ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಭತ್ತ ಬೇಸಾಯ ರಕ್ಷಿಸುವಲ್ಲಿ ಯುವಜನತೆಯ ಪಾತ್ರ ಕಾರ್ಯಕ್ರಮದ ಅಂಗವಾಗಿ ನೇಜಿ ನಾಟಿ ಕಾರ್ಯಕ್ರಮ ಹಾಗೂ ಪ್ರಾತ್ಯಕ್ಷಿಕೆ ಕಂದ್ರಪ್ಪಾಡಿ ಪ್ರೀತಮ್ ಮುಂಡೋಡಿ ಅವರ ಗದ್ದೆಯಲ್ಲಿ ನಡೆಯಿತು. ಕೃಷಿಯ ಬಗ್ಗೆ ಆಸಕ್ತಿ ಬೆಳೆಯಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕವಾಗಿ ಪಠ್ಯದ ವಿಚಾರಗಳ ಬಗ್ಗೆ ಚರ್ಚಿಸಿದೆ ಪಠ್ಯೇತರ ವಿಚಾರಗಳನ್ನೂ ಕಲಿಯಬೇಕಿದೆ. ಇತ್ತೀಚೆಗೆ ಗದ್ದೆಗಳು ಕಣ್ಮರೆಯಾಗುತ್ತಿದ್ದು, ಗದ್ದೆ ಕೃಷಿಯ ಬಗ್ಗೆ ಮಾಹಿತಿ ಇಂದಿನ ಮಕ್ಕಳಿಗೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ನೇಜಿ ನಾಟಿ Read More »

ಖಾಸಗಿ ಬಸ್‌-ಕಾರು ನಡುವೆ ಮುಖಾ-ಮುಖಿ ಡಿಕ್ಕಿ| ಕಾರು ಚಾಲಕನಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ಖಾಸಗಿ ಬಸ್‌ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮೂರ್ನಾಡು-ಮಡಿಕೇರಿ ಮುಖ್ಯರಸ್ತೆಯ ಮುತ್ತಾರುಮುಡಿ ಬಳಿ ನಡೆದಿದೆ. ಅಪಘಾತದಲ್ಲಿ ಎಮ್ಮೆಮಾಡು ಗ್ರಾಮದ ಇಬ್ರಾಹಿಂ ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಇಬ್ರಾಹಿಂ ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಖಾಸಗಿ ಬಸ್‌-ಕಾರು ನಡುವೆ ಮುಖಾ-ಮುಖಿ ಡಿಕ್ಕಿ| ಕಾರು ಚಾಲಕನಿಗೆ ಗಂಭೀರ ಗಾಯ Read More »

ದೇಶದೊಳಗಿನ ಸೈನಿಕರೇ ಗೃಹರಕ್ಷಕರು

ಸಮಗ್ರ ನ್ಯೂಸ್: ಗೃಹರಕ್ಷಕ ದಳ ಎನ್ನುವುದು ದೇಶದ ಕಾನೂನು ಮತ್ತು ಶಿಸ್ತು ಪಾಲನೆಯಲ್ಲಿ ಪೊಲೀಸ್ ಇಲಾಖೆಗೆ ಪೂರಕವಾಗಿ ಕೆಲಸ ಮಾಡುವ ಸರ್ಕಾರದ ಅಧೀನದಲ್ಲಿರುವ ಸ್ವತಂತ್ರವಾದ ಶಿಸ್ತುಬದ್ಧವಾದ ಸಮವಸ್ರದಾರಿ ಸ್ವಯಂಸೇವಕರ ಸೇವಾ ಸಂಸ್ಥೆ ಆಗಿರುತ್ತದೆ. ‘ನಿಷ್ಕಾಮ ಸೇವೆ’ ಎಂಬ ಧ್ಯೇಯ ವಾಕ್ಯದೊಂದಿಗೆ ದೇಶದ ಆಸ್ತಿಪಾಸ್ತಿ ರಕ್ಷಣೆ ಮತ್ತು ಜನರ ಜೀವದ ರಕ್ಷಣೆ ಮಾಡುವ ದೇಶದೊಳಗಿನ ಸೈನಿಕರೇ ನಮ್ಮ ಗೃಹರಕ್ಷಕರು. ಹೇಗೆ ದೇಶದ ಗಡಿಗಳಲ್ಲಿ ಸೈನಿಕರು ನಮ್ಮ ದೇಶವನ್ನು ವೈರಿಗಳಿಂದ ಮತ್ತು ನೆರೆಹೊರೆಗಳ ದೇಶಗಳಿಂದ ರಕ್ಷಿಸುತ್ತಾರೋ ಹಾಗೆ, ನಮ್ಮ ದೇಶದೊಳಗೆ

ದೇಶದೊಳಗಿನ ಸೈನಿಕರೇ ಗೃಹರಕ್ಷಕರು Read More »

ಸುಳ್ಯ: ಗ್ರಾಮ ಮಟ್ಟದಲ್ಲಿ ವಿಶೇಷಚೇತನರ ಸ್ಪರ್ಧಾ ಕಾರ್ಯಕ್ರಮಕ್ಕೆ ರೆಡಿಯಾಗ್ತಿದೆ ಗುತ್ತಿಗಾರು|

ಸಮಗ್ರ ನ್ಯೂಸ್: ಜಿಲ್ಲಾ ಮಟ್ಟದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಮ ಪಂಚಾಯತ್ ವಿಶೇಷ ಚೇತನರಿಗಾಗಿ ಸ್ಪರ್ಧಾ ಕಾರ್ಯಕ್ರಮ ಮತ್ತು ವಿಶ್ವ ವಿಕಲ ಚೇತನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಈ ವಿಶಿಷ್ಟ ಕಾರ್ಯಕ್ರಮ ನಡೆಯುತ್ತಿದ್ದು, ಗುತ್ತಿಗಾರು ಮತ್ತು ನಾಲ್ಕೂರು ಗ್ರಾಮಗಳ ವಿಶೇಷ ಚೇತನರಿಗೆ ಸ್ಪರ್ಧಾ ಕಾರ್ಯಕ್ರಮ ಹಾಗೂ ವಿಶ್ವ ವಿಕಲಚೇತನರ ದಿನಾಚರಣಾ ಕಾರ್ಯಕ್ರಮ ಡಿ‌.8ರಂದು ಗುತ್ತಿಗಾರಿನ ಪಂಚಾಯತ್ ಪ.ವರ್ಗದ ಸಭಾಭವನದಲ್ಲಿ ನಡೆಯಲಿದೆ. ಗ್ರಾಮ ಪಂಚಾಯತ್ ಗೊಳಪಟ್ಟ ಗ್ರಾಮಗಳ ವಿಶೇಷ ಚೇತನರು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕಾರ್ಯಕ್ರಮ ಆಯೋಜಕರು

ಸುಳ್ಯ: ಗ್ರಾಮ ಮಟ್ಟದಲ್ಲಿ ವಿಶೇಷಚೇತನರ ಸ್ಪರ್ಧಾ ಕಾರ್ಯಕ್ರಮಕ್ಕೆ ರೆಡಿಯಾಗ್ತಿದೆ ಗುತ್ತಿಗಾರು| Read More »

ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನ |ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರಿಗೆ ಸನ್ಮಾನ

ಸಮಗ್ರ ನ್ಯೂಸ್: ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ಇದರ ವತಿಯಿಂದ ಡಿ.2ರಂದು ಗಣಿತನಗರ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಕಳ ತಾಲೂಕು ಹತ್ತೊಂಬತ್ತನೇಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಹಿರಿಯ ಶಿಶು ಸಾಹಿತಿ ನಿವೃತ್ತ ಶಿಕ್ಷಕ ಸೂಡ ಸದಾನಂದ ಶೆಣೈ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆದ ಸಮ್ನೇಳನದಲ್ಲಿ ಗೌರವ ನೆರವೇರಿತು. ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಸಾಪ ತಾಲೂಕು ಘಟಕದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ

ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನ |ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರಿಗೆ ಸನ್ಮಾನ Read More »

ಉಜಿರೆ: ಸೌಜನ್ಯಳಿಗೆ ನ್ಯಾಯ ಕೊಡಿಸಲಾಗದಿದ್ದರೆ ನಮಗೆ ದಯಾಮರಣ ಕರುಣಿಸಿ| ಸೌಜನ್ಯಪರ ಪ್ರತಿಭಟನಾ ಸಭೆಯಲ್ಲಿ ತಿಮರೋಡಿ ಆಕ್ರೋಶ

ಸಮಗ್ರ ನ್ಯೂಸ್: ಕಳೆದ ಹನ್ನೆರಡು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರಗಳು ಕಣ್ಣು ಮುಚ್ಚಿ ಕುಳಿತಿವೆ. ನರೇಂದ್ರ ಮೋದಿ, ಸಿದ್ದರಾಮಯ್ಯ, ರಾಷ್ಟ್ರಪತಿಗಳು ಮಾತನಾಡುತ್ತಿಲ್ಲ. ನಿಮಗೆ ಸೌಜನ್ಯಳಿಗೆ ನ್ಯಾಯ ಕೊಡಿಸಲಾಗದಿದ್ದರೆ ಹೋರಾಟಗಾರರಿಗೆ ದಯಾಮರಣ ಕರುಣಿಸಿ’ ಎಂದು ಮಹೇಶ್ ಶೆಟ್ಟಿ ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಜಿರೆಯಲ್ಲಿ ನಡೆದ ಸೌಜನ್ಯ ಪರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ತಿಮರೋಡಿ, ‌ಹೋರಾಟದ ಹಾದಿ ತಪ್ಪಿಸಿದ ಅಧಿಕಾರಿಗಳ ವಿರುದ್ದ, ಹಾಗೂ ಉದ್ದೇಶ ಪೂರಕವಾಗಿ ಮಾತನಾಡುತ್ತಿರುವ ರಾಜ್ಯದ ಮಾಧ್ಯಮವೊಂದರ ಮುಖ್ಯಸ್ಥರ ವಿರುದ್ದ ಹರಿಹಾಯ್ದರು. ‘ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯ

ಉಜಿರೆ: ಸೌಜನ್ಯಳಿಗೆ ನ್ಯಾಯ ಕೊಡಿಸಲಾಗದಿದ್ದರೆ ನಮಗೆ ದಯಾಮರಣ ಕರುಣಿಸಿ| ಸೌಜನ್ಯಪರ ಪ್ರತಿಭಟನಾ ಸಭೆಯಲ್ಲಿ ತಿಮರೋಡಿ ಆಕ್ರೋಶ Read More »

ಮಂಗಳೂರು: ನೀರು ತುಂಬಿದ್ದ ಟಬ್ ಗೆ ಹಸುಗೂಸನ್ನು ಮುಳುಗಿಸಿ‌ ಹತ್ಯೆಗೈದ ತಾಯಿ| ನಾಲ್ಕೂವರೆ ತಿಂಗಳ ಕಂದಮ್ಮನ ಕೊಂದು ಆಕೆಯೂ ಆತ್ಮಹತ್ಯೆ

ಸಮಗ್ರ ನ್ಯೂಸ್: ನಾಲ್ಕೂವರೆ ತಿಂಗಳ ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗುಜ್ಜರಕೆರೆಯಲ್ಲಿ ಸಂಭವಿಸಿದೆ. ಫಾತಿಮಾ ರುಕಿಯಾ(23) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಫಾತಿಮಾ ಅವರಿಗೆ ಒಂದೂವರೆ ವರ್ಷದ ಹಿಂದೆ ವಿವಾಹವಾಗಿತ್ತು. ಕಳೆದ ಜು.7ರಂದು ಹೆರಿಗೆಯಾಗಿದ್ದು ಅವರಿಗೆ ಅಬ್ದುಲ್ಲಾ ಹೂದ್‌ ಹೆಸರಿನ ನಾಲ್ಕುವರೆ ತಿಂಗಳ ಮಗುವಿತ್ತು. ಹೆರಿಗೆಯ ಅನಂತರ ಫಾತಿಮಾ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಬಗ್ಗೆ ತನ್ನ ತಂದೆಯಲ್ಲಿ ಹೇಳುತ್ತಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಹೇಳುತ್ತಿದ್ದರು. ಹಾಗಾಗಿ ಅವರಿಗೆ ಮಾನಸಿಕ ವೈದ್ಯೆಯ ಮೂಲಕ ಚಿಕಿತ್ಸೆ

ಮಂಗಳೂರು: ನೀರು ತುಂಬಿದ್ದ ಟಬ್ ಗೆ ಹಸುಗೂಸನ್ನು ಮುಳುಗಿಸಿ‌ ಹತ್ಯೆಗೈದ ತಾಯಿ| ನಾಲ್ಕೂವರೆ ತಿಂಗಳ ಕಂದಮ್ಮನ ಕೊಂದು ಆಕೆಯೂ ಆತ್ಮಹತ್ಯೆ Read More »

ಸುಳ್ಯ:ಚಂದನ ಸಾಹಿತ್ಯ ವೇದಿಕೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಸಮಾರಂಭ

ಸಮಗ್ರ ನ್ಯೂಸ್: ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೇವಮ್ಮ ಸಭಾ ಭವನದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ-50 ರ ಪ್ರಯುಕ್ತ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಸಮಾರಂಭವು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ, ಯಶಸ್ವಿಯಾಗಿ ನೆರವೇರಿತು. ಪೋಲಿಸ್ ಠಾಣೆ ಸುಳ್ಯ ಇದರ ಠಾಣಾಧಿಕಾರಿ, ಸಾಹಿತಿ ಈರಯ್ಯ ದುಂತೂರು ಅವರು ಕಾರ್ಯಕ್ರಮ ಉದ್ಘಾಟಿಸಿದರು. ಖ್ಯಾತ ವಕೀಲರು ಮತ್ತು ನಗರ ಪಂಚಾಯತ್ ಸದಸ್ಯ ಎಂ ವೆಂಕಪ್ಪ ಗೌಡರು ಸಭಾಧ್ಯಕ್ಷತೆಯನ್ನು ವಹಿಸಿ ಕನ್ನಡ ನಾಡು ನುಡಿಯ ಮಹತ್ವವನ್ನು ವಿವರಿಸಿದರು. ಸಮ್ಮೇಳನ ಅಧ್ಯಕ್ಷತೆ ವಹಿಸಿದ್ದ

ಸುಳ್ಯ:ಚಂದನ ಸಾಹಿತ್ಯ ವೇದಿಕೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಸಮಾರಂಭ Read More »

ಸುಳ್ಯ: ಚಿನ್ನಾಭರಣ ಕಳ್ಳತನದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಚಿನ್ನಾಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಆರೋಪಿಯನ್ನು ಪೆರಿಯತ್ತಡ್ಕ, ಹೊಸದುರ್ಗ, ಕಾಸರಗೋಡು ನಿವಾಸಿಯಾದ ಆಸೀಮ್@ ಆಸೀಮ್ ಖುನಿಯ, ಬಿನ್ ಹಸನ್ ತಂಗಳ್ (43) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಅಂದಾಜು ರೂ 15,13,391/- ಮೌಲ್ಯದ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು, ಆರೋಪಿಯನ್ನು ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರು ಹಾಗೂ‌ ಸಿಬ್ಬಂದಿಗಳ ತಂಡ ಜಾಲ್ಸೂರಿನ

ಸುಳ್ಯ: ಚಿನ್ನಾಭರಣ ಕಳ್ಳತನದ ಆರೋಪಿ ಅರೆಸ್ಟ್ Read More »