ಕರಾವಳಿ

ಮಂಗಳೂರು: ಬೋಟ್ ಕಾರ್ಮಿಕರ ನಡುವೆ ಜಗಳ| ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಕೇರಳ ಮೂಲದ ಬೋಟ್ ಕಾರ್ಮಿಕ ಮತ್ತೊಬ್ಬ ಕಾರ್ಮಿಕನಿಗೆ ಇರಿದು ಹತ್ಯೆ ಮಾಡಿದ ಘಟನೆ ಪಣಂಬೂರು ಠಾಣೆ ವ್ಯಾಪ್ತಿಯ ತಣ್ಣೀರುಬಾವಿಯಲ್ಲಿ ನಡೆದಿದೆ. ಕೊಲ್ಲಂ ಮೂಲದ ಬಿನು (41) ಕೊಲೆಯಾದ ದುರ್ದೈವಿ, ಮತ್ತು ತಳಿಪರಂಬ ನಿವಾಸಿ ಜಾನ್ಸನ್ ಬಿನೋಯ್ (52) ತಣ್ಣೀರುಬಾವಿಯಲ್ಲಿ ಬೋಟ್ ರಿಪೇರಿ ಕೆಲಸದಲ್ಲಿ ತೊಡಗಿದ್ದರು. ಇಬ್ಬರು ಸ್ಥಳೀಯವಾಗಿ ಪ್ರತ್ಯೇಕವಾಗಿ ವಾಸವಿದ್ದರು. ಡಿ. 9ರಂದು ಸಂಜೆ ಕುಡಿದ ಮತ್ತಿನಲ್ಲಿ ಇಬ್ಬರು ಕೂಡ ಜಗಳಾಡಿಕೊಂಡಿದ್ದರು. ಆದರೆ ಆ ಬಳಿಕ, ರಾತ್ರಿ ವೇಳೆಗೆ ಬಿನೋಯ್ ತನ್ನ ರೂಮಿನಲ್ಲಿ ಮಲಗಿದ್ದಾಗ

ಮಂಗಳೂರು: ಬೋಟ್ ಕಾರ್ಮಿಕರ ನಡುವೆ ಜಗಳ| ಕೊಲೆಯಲ್ಲಿ ಅಂತ್ಯ Read More »

ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಹಾಡಿ ಹೊಗಳಿದ ಹೆಚ್‌ಡಿಕೆ

ಸಮಗ್ರ ನ್ಯೂಸ್: ಹಿಂದೆ ಕಲ್ಲಡ್ಕ ಪ್ರಭಾಕರ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇಂದು ನನ್ನ ಕಣ್ಣು ತೆರೆದಿದೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಿದ ಹೆಚ್‌ಡಿಕೆ ಅವರು ಪ್ರಭಾಕರ ಭಟ್‌ ಅವರನ್ನು ಹಾಡಿ ಹೊಗಳಿದ್ದಾರೆ. ಹಿಂದೆ ಒಂದು ರೀತಿಯಾಗಿ ಮಾತನಾಡುತ್ತಿದ್ದ ಕುಮಾರಸ್ವಾಮಿ ಈ ಕಾರ್ಯಕ್ರಮ ಭಾಗವಹಿಸಿದ್ದು ಹೇಗೆ ಎಂದು ಕೆಲವರು

ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಹಾಡಿ ಹೊಗಳಿದ ಹೆಚ್‌ಡಿಕೆ Read More »

ನಲ್ಕೆ ಮತ್ತು ಗೌಡ ಸಮುದಾಯಕ್ಕೆ ಅವಹೇಳನಕಾರಿ ಪದಪ್ರಯೋಗ| ಜೀವ‌‌ ಬೆದರಿಕೆ ಅಡಿಯೋ ವೈರಲ್; ಕೇಸು ದಾಖಲಿಸುವಂತೆ ಚರ್ಚೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕರಾವಳಿಯ ನಲ್ಕೆ ಸಮುದಾಯದವರು ದೈವಕೋಲದಲ್ಲಿ ಭಾಗಿಯಾಗಿ ಪಾರಂಪರಿಕ ಆಚರಣೆ ನಂಬಿಕೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ತರಾಟೆಗೆ ತೆಗೆದುಕೊಂಡು ಗೌಡ ಮತ್ತು ನಲ್ಕೆ ಸಮುದಾಯಕ್ಕೆ ಅವಹೇಳನಕಾರಿ ಮಾತನಾಡಿದ್ದಕ್ಕೆ ಕ್ರುದ್ದರಾದ ಕರಾವಳಿಯ ಗೌಡ ಸಮುದಾಯ ಯುವಕನೋರ್ವನಿಗೆ ತರಾಟೆ ತೆಗೆದುಕೊಂಡ ಘಟನೆ ವೈರಲ್ ಆಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ದೈವ ನೇಮೋತ್ಸವ ಜರಗಿತ್ತು. ಈ ಬಗ್ಗೆ ಕರಾವಳಿ ಭಾಗ ಹೊರತಾದ ಪ್ರದೇಶದಲ್ಲಿ ನೇಮೋತ್ಸವಕ್ಕೆ ದೈವ ಕಟ್ಟಿದ ವಿಚಾರ ಮತ್ತು ದೈವ ಪಾತ್ರಿ ದೈವಕ್ಕೆ

ನಲ್ಕೆ ಮತ್ತು ಗೌಡ ಸಮುದಾಯಕ್ಕೆ ಅವಹೇಳನಕಾರಿ ಪದಪ್ರಯೋಗ| ಜೀವ‌‌ ಬೆದರಿಕೆ ಅಡಿಯೋ ವೈರಲ್; ಕೇಸು ದಾಖಲಿಸುವಂತೆ ಚರ್ಚೆ Read More »

ಸುಳ್ಯ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ| ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ

ಸಮಗ್ರ ನ್ಯೂಸ್: ಸುಳ್ಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಮಾಹಿತಿ ಕಾರ್ಯಗಾರ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಡಿ. 9ರಂದು ನಡೆಯಿತು. ಕೆಲಸದ ಒತ್ತಡದ ನಡುವೆ ನೌಕರರ ಆರೋಗ್ಯ ಕಾಳಜಿ ಮಾಹಿತಿ ಕಾರ್ಯಗಾರವನ್ನು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ. ಇ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆರೋಗ್ಯ ಇಲಾಖಾ ನಿವೃತ್ತ ಆರೋಗ್ಯ ಮೇಲ್ವಿಚಾರಕ ಜಯರಾಮ ಪೂಜಾರಿ ಯವರು ಮಾತನಾಡಿ, ನಾವು

ಸುಳ್ಯ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ| ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ Read More »

ಸುಳ್ಯದ ಖ್ಯಾತ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಬೆಂಗಳೂರಲ್ಲಿ ನವಚೈತನ್ಯ ಶ್ರೀ ರಾಜ್ಯ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ವಿಶ್ವ ಚೇತನ ಬಳಗ ಬೆಂಗಳೂರು ವತಿಯಿಂದ ಜರುಗಿದ 3ನೇ ಕಲಾ ಸಾಂಸ್ಕೃತಿಕ ಮಹಾ ಸಮ್ಮೇಳನದಲ್ಲಿ ಸುಳ್ಯದ ಖ್ಯಾತ ಸಾಹಿತಿ, ಜ್ಯೋತಿಷಿ, ಸಂಘಟಕ ಮತ್ತು ಗಾಯಕರಾದ ಎಚ್. ಭೀಮರಾವ್ ವಾಷ್ಠರ್ ಅವರಿಗೆ ಇವರ 25 ವರ್ಷಗಳ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ 2023 ನೇ ಸಾಲಿನ ನವ ಚೈತನ್ಯಶ್ರೀ ರಾಜ್ಯ ಪ್ರಶಸ್ತಿ ಯನ್ನು ವಿಶ್ವ ಚೇತನ ಬಳಗ ಇದರ ಅಧ್ಯಕ್ಷ ಶಿವಸ್ವಾಮಿ ಅವರು ನೀಡಿ ಸನ್ಮಾನಿಸಿ ಗೌರವಿಸಿದ್ದಾರೆ. ಎಚ್. ಭೀಮರಾವ್

ಸುಳ್ಯದ ಖ್ಯಾತ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಬೆಂಗಳೂರಲ್ಲಿ ನವಚೈತನ್ಯ ಶ್ರೀ ರಾಜ್ಯ ಪ್ರಶಸ್ತಿ ಪ್ರದಾನ Read More »

ಬಂಟ್ವಾಳ : ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನ ಪ್ರಕರಣ|ಆರೋಪಿ ಸುಮ್ಮಿ ಅಲಿಯಾಸ್ ಸುಮಿತ್ ಆಳ್ವ & ಗ್ಯಾಂಗ್ ಬಂಧನ…!

ಸಮಗ್ರ ನ್ಯೂಸ್: ಮನೆಯಂಗಳಕ್ಕೆ ಪ್ರವೇಶಿಸಿದ ನಾಲ್ಕೈದು ಮಂದಿಯ ಗುಂಪು ಗೇಟ್ ಬಿಸಾಕಿ ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮೀಟರ್ ಬಡ್ಡಿ ವಸೂಲಿಗಾರ ಸುಮಿತ್ ಆಳ್ವ ಅಲಿಯಾಸ್ ಸುಮ್ಮಿ, ಮಹಮ್ಮದ್ ಜುನೈದ್, ಸೀಯಾನ್ ಮತ್ತು ಮಹಮ್ಮದ್ ತೌಫೀಕ್ ನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಂಗ ಬಂಧನ

ಬಂಟ್ವಾಳ : ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನ ಪ್ರಕರಣ|ಆರೋಪಿ ಸುಮ್ಮಿ ಅಲಿಯಾಸ್ ಸುಮಿತ್ ಆಳ್ವ & ಗ್ಯಾಂಗ್ ಬಂಧನ…! Read More »

ಸುಳ್ಯ: ಹಲ್ಲೆ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ

ಸಮಗ್ರ ನ್ಯೂಸ್: ವ್ಯಕ್ತಿಯೋರ್ವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. 2018ರ ನವೆಂಬರ್ 11 ರಂದು ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಪೇರಾಲ್ ಎಂಬಲ್ಲಿ ಮಾಜಿ ಸೈನಿಕರಾದ ಅಡ್ಡಂತಡ್ಕ ದೇರಣ್ಣ ಗೌಡರು ಪೇರಾಲು ಅಂಚೆ ಕಚೇರಿಯ ಬಳಿ ರಸ್ತೆಯಲ್ಲಿ ನಿಂತುಕೊಂಡಿದ್ದ ಸಮಯ ಆರೋಪಿ ನಾಗೇಶನು ಹಿಂಬದಿಯಿಂದ ಬಂದು ಏಕಾಏಕಿ ಅವ್ಯಾಚ್ಯ ಶಬ್ದಗಳಿಂದ ಬೈದು ಮರದ ದೊಣ್ಣೆಯಿಂದ ಅವರಿಗೆ ತಲೆಗೆ ಹೊಡೆದು ನಿನ್ನನ್ನು ಜೀವ ಸಹಿತ ಬಿಡುವುದಿಲ್ಲವೆಂದು ಜೀವ ಬೆದರಿಕೆ

ಸುಳ್ಯ: ಹಲ್ಲೆ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ Read More »

ಮದುವೆಯಾದ ಭಿನ್ನಕೋಮಿನ ಜೋಡಿ ಸುರತ್ಕಲ್ ಠಾಣೆಗೆ ಹಾಜರ್

ಸಮಗ್ರ ನ್ಯೂಸ್: ಸುರತ್ಕಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯ 7ನೇ ಬ್ಲಾಕ್‌ ಕಾಟಿಪಳ್ಳ ಯುವಕ ಪ್ರಶಾಂತ್‌ ಭಂಡಾರಿ (31) ಮತ್ತು 3ನೇ ಬ್ಲಾಕ್‌ ಆಶ್ರಯ ಕಾಲನಿಯ ನಿವಾಸಿ ಆಯೇಷಾ ಮದುವೆಯಾಗಿ ಶುಕ್ರವಾರ ಸಂಜೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಹಾಜರಾಗಿ ತಮ್ಮ ಅಭಿಪ್ರಾಯ ಮಂಡಿಸಿದರು. 3 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಇವರು ಅನ್ಯ ಧರ್ಮಿàಯರಾದ ಕಾರಣ ಒಪ್ಪಿಗೆ ದೊರೆಯುವ ಅನುಮಾನ ಬಂದ ಮೇರೆಗೆ ಜತೆಯಾಗಿ ಡಿ. 1ರಂದು ನಾಪತ್ತೆಯಾಗಿದ್ದರು. ಇದೀಗ ವಿವಾಹವಾಗಿ ಪತ್ತೆಯಾಗಿದ್ದಾರೆ. ಆಯೆಷಾ ತನ್ನ ಹೆಸರನ್ನು ಅಕ್ಷತಾ ಎಂದು

ಮದುವೆಯಾದ ಭಿನ್ನಕೋಮಿನ ಜೋಡಿ ಸುರತ್ಕಲ್ ಠಾಣೆಗೆ ಹಾಜರ್ Read More »

ಮಂಗಳೂರು: ಬಸ್‌ ಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನಕ್ಕೆ ಹಲವರ ವಿರೋಧ

ಸಮಗ್ರ ನ್ಯೂಸ್: ನಗರದಲ್ಲಿ ಖಾಸಗಿ ಬಸ್ ರೂಟ್ ಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ನಡೆದಿತ್ತು. ಆದರೆ ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಡಿ. 10 ರಿಂದ ಪೂರ್ಣ ಪ್ರಮಾಣದಲ್ಲಿ ಈ ಅಭಿಯಾನ ಆರಂಭಿಸಲು ಕನ್ನಡಪರ ಸಂಘಟನೆಗಳು ಸಿದ್ಧತೆ ನಡೆಸುತ್ತಿವೆ. ಇದರ ನಡುವೆ ಕನ್ನಡ ಸ್ಟಿಕರ್ ಅಭಿಯಾನಕ್ಕೆ ಜಿಲ್ಲೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬಸ್ ಗಳಿಗೆ ಸ್ಟಿಕರ್ ಅಂಟಿಸಿ ಸ್ಥಳದಲ್ಲಿಯೇ ಬಸ್ ಸಿಬ್ಬಂದಿಯಿಂದ ಸ್ಟಿಕರ್ ನ ಬಾಬ್ತು ಹಣವನ್ನು ವಸೂಲಿ ಮಾಡಲಾಗಿದೆ. ಆದರೆ ಯಾವುದೇ ರಶೀದಿ ನೀಡದೇ

ಮಂಗಳೂರು: ಬಸ್‌ ಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನಕ್ಕೆ ಹಲವರ ವಿರೋಧ Read More »

ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿ ಪತ್ತೆ!? ಫೋಟೋ ವೈರಲ್…

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನಲಾದ ಪೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19) ಡಿ.1 ರಂದು ನಾಪತ್ತೆಯಾಗಿದ್ದರು. ಇದೀಗ ಈ ಜೋಡಿ ಮದುವೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಪ್ರಕರಣಕ್ಕೆ ಪುಷ್ಠಿ ಎಂಬಂತೆ ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು

ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿ ಪತ್ತೆ!? ಫೋಟೋ ವೈರಲ್… Read More »