ಕರಾವಳಿ

ಮಂಗಳೂರು: ಗ್ರಾಹಕರ ಪರ ಆದೇಶ ಪಾಲಿಸದ ಐವರು ಬಿಲ್ಡರ್ ಗಳಿಗೆ ಜೈಲುಶಿಕ್ಷೆ

ಸಮಗ್ರ ನ್ಯೂಸ್: ಗ್ರಾಹಕರ ಪರವಾಗಿ ನೀಡಿದ್ದ ಆದೇಶವನ್ನು ಪಾಲಿಸದ ಐವರು ಬಿಲ್ಡರ್‌ಗಳು ತಲಾ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಬೇಕು ಮತ್ತು ತಲಾ ₹ 1 ಲಕ್ಷ ದಂಡ ಪಾವತಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಆದೇಶ ಮಾಡಿದೆ. ಮಂಗಳೂರು ನಗರದ ಮಾರಿಯನ್ ಇನ್ಫ್ರಾಸ್ಟ್ರಕ್ಚರ್ಸ್‌ ಸಂಸ್ಥೆಯ ಪಾಲುದಾರರಾಗಿರುವ ಉಜ್ವಲ ಡಿಸೋಜ ಮತ್ತು ನವೀನ್ ಕಾರ್ಡೋಜ ಹಾಗೂ ಅವರೊಂದಿಗೆ ಅಭಿವೃದ್ಧಿ ಪಾಲುದಾರಾರಾಗಿರುವ ವಿಲಿಯಂ ಸಲ್ದಾನ, ಗಾಯತ್ರಿ ಪೈ ಬಿ., ಮತ್ತು ಲ್ಯೂಸಿ ಸಲ್ದಾನ […]

ಮಂಗಳೂರು: ಗ್ರಾಹಕರ ಪರ ಆದೇಶ ಪಾಲಿಸದ ಐವರು ಬಿಲ್ಡರ್ ಗಳಿಗೆ ಜೈಲುಶಿಕ್ಷೆ Read More »

ಸುಳ್ಯ: ಕಲ್ಕಿ ಮೊಬೈಲ್ ನಲ್ಲಿ ಕೊನೆಯ ಲಕ್ಕಿ ಕೂಪನ್ ಡ್ರಾ

ಸಮಗ್ರ ನ್ಯೂಸ್: ಸುಳ್ಯದ ಪ್ರಭು ಬುಕ್ ಸ್ಟಾಲ್ ಎದುರಿನ ಕಾಮತ್ ಕಾಂಪ್ಲೆಕ್ಸ್ ನಲ್ಲಿರುವ ಕಲ್ಕಿ ಮೊಬೈಲ್ ನಲ್ಲಿ ದಸರಾ ಮತ್ತು ದೀಪಾವಳಿ ಪ್ರಯುಕ್ತ ಏರ್ಪಡಿಸಿದ ಲಕ್ಕಿ ಕೂಪನ್ ನ ಸ್ಮಾರ್ಟ್ ವಾಚ್ ನ ಕೊನೆಯ ಡ್ರಾವು ನ.20 ರಂದು ನಡೆಯಿತು. ಜ್ಯೋತಿಷ್ಯ ಭೀಮರಾವ್ ವಾಷ್ಠರ್ ನೆರವೇರಿಸಿದರು. ಸಂಸ್ಥೆಯ ಮಾಲಕ ಕೃಷ್ಣಪ್ರಸಾದ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯ: ಕಲ್ಕಿ ಮೊಬೈಲ್ ನಲ್ಲಿ ಕೊನೆಯ ಲಕ್ಕಿ ಕೂಪನ್ ಡ್ರಾ Read More »

ಸುಳ್ಯ: ಮದ್ಯದ ನಶೆಯಲ್ಲಿ ಹೆತ್ತವರ ಮೇಲೆ ಕತ್ತಿ ಬೀಸಿದ ಪುತ್ರ| ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಸಮಗ್ರ ನ್ಯೂಸ್: ಕುಡಿತದ ನಶೆಯಲ್ಲಿ ಹೆತ್ತ ತಂದೆ ತಾಯಿ ಮೇಲೆ‌ ಮಗನೋರ್ವ ಕತ್ತಿಬೀಸಿದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಪಣೆಯಲ್ಲಿ ನ.20ರ ರಾತ್ರಿ ನಡೆದಿದೆ. ಕೊಡಿಯಾಲ ನಿವಾಸಿಗಳಾದ ಮಂಜುನಾಥ್, ಧರ್ಮಾವತಿ ಗಾಯಗೊಂಡ ದಂಪತಿಗಳು ಎಂದು ತಿಳಿದುಬಂದಿದೆ. ಮಗ ದೇವಿ ಪ್ರಸಾದ್ ಎಂಬಾತ ಕುಡಿದ ಮತ್ತಿನಿಂದ ಜಾಗದ ವಿಚಾರವಾಗಿ ತಕರಾರು ಎದ್ದು ತಂದೆ ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮಗನನ್ನು ಪೊಲೀಸರು ಬಂದಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ತಂದೆ-ತಾಯಿಯನ್ನು ಮಂಗಳೂರಿನ

ಸುಳ್ಯ: ಮದ್ಯದ ನಶೆಯಲ್ಲಿ ಹೆತ್ತವರ ಮೇಲೆ ಕತ್ತಿ ಬೀಸಿದ ಪುತ್ರ| ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು Read More »

ಪುತ್ತೂರು:ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

ಸಮಗ್ರ ನ್ಯೂಸ್: ಬನ್ನೂರು ಕೃಷ್ಣ ನಗರ ಅಲುಂಬುಡ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ. 15ರಂದು ಮಕ್ಕಳ ದಿನಾಚರಣೆಯನ್ನು ಆಚರಸಲಾಯಿತು. ನಂತರ ಆಟೋಟ ಸ್ಪರ್ಧೆಗಳಿಂದ ಆರಂಭಗೊಂಡು , ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಹುಭಾಷಾ ಮಕ್ಕಳ ಸಾಹಿತಿ ಉಲ್ಲಾಸಣ್ಣ (ಯು.ಕೆ.ಪೈ) ಅವರು ಪಾಲ್ಗೊಂಡು ಕಾರ್ಯಕ್ರಮದ ಔಚಿತ್ಯದ ಬಗ್ಗೆ ತಿಳಿಸಿದರು ಹಾಗೆಯೇ ಮಕ್ಕಳೊಂದಿಗೆ ಮಕ್ಕಳಾಗಿ ಶಿಶು ಗೀತೆಗಳನ್ನು ಮಕ್ಕಳಿಗೆ ಅಭಿನಯದ ಮೂಲಕ ಹೇಳಿಕೊಟ್ಟರು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ವಹಿಸಿದ್ದರು. ಮಕ್ಕಳ

ಪುತ್ತೂರು:ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ Read More »

ಉಬರಡ್ಕ: ಸೌಜನ್ಯ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನೆ ಆರಂಭ

ಸಮಗ್ರ ನ್ಯೂಸ್: ಸೌಜನ್ಯ ಪರ ಹೋರಾಟ ಸಮಿತಿ ಉಬರಡ್ಕ ಮಿತ್ತೂರು ಆಶ್ರಯದಲ್ಲಿ ಸೌಜನ್ಯ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆ ಉಬರಡ್ಕದಲ್ಲಿ ನ. 20ರಂದು ನಡೆಯಿತು. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಉದ್ಘಾಟಿಸಿದರು. ತುಳು ಜಾನಪದ ವಾಗ್ಮಿ ತಮ್ಮಣ್ಣ ಶೆಟ್ಟಿ, ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್, ಸೌಜನ್ಯ ತಾಯಿ ಕುಸುಮಾವತಿ, ನ್ಯಾಯವಾದಿ ಮೋಹಿತ್ ಕುಮಾರ್, ಸಾಮಾಜಿಕ ಕಾರ್ಯಕರ್ತೆ ಪ್ರಸನ್ನರವಿ, ಗೌಡ ಯುವ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ವೆಂಕಟ್ರಮಣ ಗೌಡ ಕೆದಂಬಾಡಿ ಮತ್ತಿತರರು ಉಪಸ್ಥಿತರಿದ್ದರು. ಉಬರಡ್ಕ ಮಿತ್ತೂರು

ಉಬರಡ್ಕ: ಸೌಜನ್ಯ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನೆ ಆರಂಭ Read More »

ಬೆಳ್ತಂಗಡಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ| ಬಿಜೆಪಿ‌ ಕಾರ್ಯಕರ್ತನ ಮೇಲೆ‌ ಬಿತ್ತು ಕೇಸ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ ಆಡಿಯೋ ವೈರಲ್ ಅಗಿದ್ದು, ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿರುವ ದೂರಿನಂತೆ ರಜಿತ್ ಕೊಕ್ಕಡ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿ, ಸೆಲೂನ್ ನಲ್ಲಿ ಕೆಲಸ ಮಾಡುವ ಬಿಜೆಪಿ ಕಾರ್ಯಕರ್ತ ರಜಿತ್ ಕೊಕ್ಕಡ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಬಗ್ಗೆ ಅಶ್ಲೀಲವಾಗಿ ನಿಂದಿಸಿ ಮಾತನಾಡಿರುವ ಬಗ್ಗೆ

ಬೆಳ್ತಂಗಡಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ| ಬಿಜೆಪಿ‌ ಕಾರ್ಯಕರ್ತನ ಮೇಲೆ‌ ಬಿತ್ತು ಕೇಸ್ Read More »

ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆ|ಸುಳ್ಯದ ಸೈಂಟ್ ಜೋಸೆಫ್ ಶಾಲೆ ಪ್ರಥಮ

ಸಮಗ್ರ ನ್ಯೂಸ್: ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಸ್ಕೌಟ್ ತಂಡಕ್ಕೆ ಪ್ರಥಮ ಬಹುಮಾನ ಪಡೆದುಕೊಂಡಿತು. ರಾಜ್ಯದ 31 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಂತಿಮ ಸುತ್ತಿಗೆ ಬಂದ 4 ತಂಡಗಳಲ್ಲಿ ಸೈಂಟ್ ಜೋಸೆಫ್ ಶಾಲಾ ತಂಡ ಪ್ರಥಮ ಬಹುಮಾನ ಪಡೆದಿದೆ.

ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆ|ಸುಳ್ಯದ ಸೈಂಟ್ ಜೋಸೆಫ್ ಶಾಲೆ ಪ್ರಥಮ Read More »

ಹಿಂದೂ ಕಾರ್ಯಕರ್ತರ ಗಡಿಪಾರು ನೋಟಿಸ್ ಖಂಡಿಸಿ|ಸುಳ್ಯದಲ್ಲಿ ವಿಶ್ವ ಹಿಂದೂ ಪರುಷದ್ ಬಜರಂಗ ದಳದ ವತಿಯಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಬಜರಂಗದಳದ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ವತಿಯಿಂದ ಬೃಹತ್ ಪ್ರತಿಭಟನೆ ಸುಳ್ಯ ತಾಲೂಕು ಕಛೇರಿ ಬಳಿ ನಡೆಯಿತು. ವಿಶ್ವ ಹಿಂದೂ ಪರಿಷದ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಮಾತನಾಡಿ, ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ, ಗೋ ಕಳ್ಳತನ, ಅಕ್ರಮ ಮರಳುಗಾರಿಕೆ, ರೌಡಿಸಂ ನಡೆಯುತ್ತಿದ್ದು, ಇದರಲ್ಲಿ ಎಷ್ಟು ಜನರ ಮೇಲೆ

ಹಿಂದೂ ಕಾರ್ಯಕರ್ತರ ಗಡಿಪಾರು ನೋಟಿಸ್ ಖಂಡಿಸಿ|ಸುಳ್ಯದಲ್ಲಿ ವಿಶ್ವ ಹಿಂದೂ ಪರುಷದ್ ಬಜರಂಗ ದಳದ ವತಿಯಿಂದ ಪ್ರತಿಭಟನೆ Read More »

ಕಡಬ: ಹ್ಯಾಕರ್ ಗಳ ಮೋಸದಿಂದ ಸೌದಿಯಲ್ಲಿ ಜೈಲುಪಾಲಾಗಿದ್ದ ಯುವಕ ಮರಳಿ ತವರಿಗೆ| ಕೈಹಿಡಿದ ಗೆಳೆಯರು, ಕೈ ಕೊಟ್ಟ ಜನಪ್ರತಿನಿಧಿಗಳ ಭರವಸೆ!!

ಸಮಗ್ರ ನ್ಯೂಸ್: ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಇಂದು (ನವೆಂಬರ್ 20) ಸ್ವದೇಶಕ್ಕೆ ಆಗಮಿಸಲಿದ್ದಾರೆ. ನವೆಂಬರ್ 20ರಂದು ಬೆಳಗ್ಗೆ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅವರು ಮುಂಬಯಿನಿಂದ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ್‌ 2022ರಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಅದೇ ಕಂಪೆನಿಯ ಮೂಲಕ ಸೌದಿ ಅರೇಬಿಯಾಕ್ಕೆ

ಕಡಬ: ಹ್ಯಾಕರ್ ಗಳ ಮೋಸದಿಂದ ಸೌದಿಯಲ್ಲಿ ಜೈಲುಪಾಲಾಗಿದ್ದ ಯುವಕ ಮರಳಿ ತವರಿಗೆ| ಕೈಹಿಡಿದ ಗೆಳೆಯರು, ಕೈ ಕೊಟ್ಟ ಜನಪ್ರತಿನಿಧಿಗಳ ಭರವಸೆ!! Read More »

ಸುಬ್ರಹ್ಮಣ್ಯ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸಹಿ ಸಂಗ್ರಹ ಅಭಿಯಾನ

ಸಮಗ್ರ ನ್ಯೂಸ್: NEP ಯನ್ನು ರದ್ದುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಸುಬ್ರಹ್ಮಣ್ಯ ಶಾಖೆಯಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಪದ್ಮಕುಮಾರ್ ಗುಂಡಡ್ಕ NEP ಯ ಮಹತ್ವ ಮತ್ತು NEP ಯನ್ನು ರದ್ದುಗೊಳಿಸಿದಲ್ಲಿ ಆಗುವ ಪರಿಣಾಮಗಳನ್ನು ನೆರೆದಿದ್ದ ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಿಗೆ ಮನದಟ್ಟು ಮಾಡಿ, ರಾಜ್ಯ ಸರ್ಕಾರ ಈ ಕೂಡಲೇ ಈ ನಿರ್ಧಾರವನ್ನು ಕೈ ಬಿಡಬೇಕು ಇಲ್ಲದಿದ್ದಲ್ಲಿ ವಿದ್ಯಾರ್ಥಿ ಶಕ್ತಿಯನ್ನು ಎದುರಿಸುವ ಅಪಾಯ ಸರಕಾರಕ್ಕೆ ಬರುವುದು

ಸುಬ್ರಹ್ಮಣ್ಯ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸಹಿ ಸಂಗ್ರಹ ಅಭಿಯಾನ Read More »