ಕರಾವಳಿ

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ| ನ್ಯಾಯಕ್ಕಾಗಿ ನಾಳೆ(ನ.20) ಸುಳ್ಯದ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆ

ಸಮಗ್ರ ನ್ಯೂಸ್: ಹನ್ನೆರಡು ವರ್ಷಗಳ‌ ಹಿಂದೆ ಧರ್ಮಸ್ಥಳದ ಪಾಂಗಾಳ ಸಮೀಪ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಾಳೆ(ನ. ೨೦) ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ರಾಜ್ಯಾದ್ಯಂತ ಸೌಜನ್ಯ ಪರ ಹೋರಾಟಗಾರರು ಪ್ರಕರಣವನ್ನು ಮರುತನಿಖೆ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನ.20 ರಂದು ಸೌಜನ್ಯ ಪರ ನ್ಯಾಯಕ್ಕಾಗಿ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ವೇದಿಕೆ ತಯಾರಾಗಿದ್ದು ಸುಮಾರು 3000ಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಎಂದು ಸಂಘಟಕರು ತಿಳಿಸಿದ್ದಾರೆ. ಉಬರಡ್ಕದಿಂದ […]

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ| ನ್ಯಾಯಕ್ಕಾಗಿ ನಾಳೆ(ನ.20) ಸುಳ್ಯದ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆ Read More »

ಪುತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ಮೃತದೇಹ ಪತ್ತೆ

ಸಮಗ್ರ ನ್ಯೂಸ್:ರಾಷ್ಟ್ರೀಯ ಹೆದ್ದಾರಿ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಬಂಕ್ ಎದುರಿನಲ್ಲಿ ನ. 19ರಂದು ನಡೆದಿದೆ. ಮೃತರನ್ನು ಆಂಧ್ರ ಮೂಲದ ಶೇಖ್ ಖಾನ್ ಎಂದು ಗುರುತಿಸಲಾಗಿದೆ. ಇಂದು(ನ.19) ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ ಯಾವುದೋ ವಾಹನ ಅವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಪುತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ಮೃತದೇಹ ಪತ್ತೆ Read More »

ಕಡಬ:ವಿದ್ಯುತ್ ಕಂಬಕ್ಕೆ ಬೊಲೆಲೋ ಡಿಕ್ಕಿ|ಪ್ರಯಾಣಿಕರು ಪಾರು

ಸಮಗ್ರ ನ್ಯೂಸ್: ಕಡಬ-ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ವಾಹನದಲ್ಲಿದ್ದವರು ಪವಾಡ ಸದೃಶವಾಗಿ ಪಾರಾದ ಘಟನೆ ಇಂದು (ನ.19) ಮುಂಜಾನೆ ಸಂಭವಿಸಿದೆ. ಸುಳ್ಯ ತಾಲೂಕಿನ ಕಲ್ಲುಗುಂಡಿಯ ಚೇತನ್ ಎಂಬವರ ಕುಟುಂಬಸ್ಥರು ಕಾರ್ಯಕ್ರಮದ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಕೋಡಿಂಬಾಳದಲ್ಲಿ ವಾಹನ ಅಪಘಾತವಾಗಿದೆ. ವಾಹನದಲ್ಲಿ ಮಗು ಸಹಿತ ಮೂರು ಮಂದಿ ಇದ್ದು ಜೀವ ಹಾನಿಯಿಂದ ಪಾರಾಗಿದ್ದಾರೆ. ವಾಹನ ಜಖಂ ಗೊಂಡಿದ್ದು ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಸ್ಥಳೀಯರು

ಕಡಬ:ವಿದ್ಯುತ್ ಕಂಬಕ್ಕೆ ಬೊಲೆಲೋ ಡಿಕ್ಕಿ|ಪ್ರಯಾಣಿಕರು ಪಾರು Read More »

ಸುಳ್ಯ: ಪೆರುವಾಜೆಯಿಂದ ನಾಪತ್ತೆಯಾಗಿದ್ದ ಬಾಲಕ ಮೈಸೂರಿನಲ್ಲಿ ಪತ್ತೆ

ಸಮಗ್ರ ನ್ಯೂಸ್: ಎರಡು ದಿನಗಳ ಹಿಂದೆ ಅಂಗಡಿಗೆ ತೆರಳುವುದಾಗಿ ತೆರಳಿ ಬಳಿಕ ನಾಪತ್ತೆಯಾಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಶನಿವಾರ ಮೈಸೂರಿನಲ್ಲಿ ಪತ್ತೆಯಾಗಿದ್ದಾನೆ. ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನ.16ರ ಸಂಜೆಯಿಂದ ನಾಪತ್ತೆಯಾಗಿದ್ದ. ಈತ ತಲಪಾಡಿಯ ಬಿಲಾಲ್ ಮಸೀದಿಯಲ್ಲಿ ಮದ್ರಸ ಶಿಕ್ಷಣದ ಜತೆಗೆ ಶಾಲಾ ಶಿಕ್ಷಣ ಪಡೆಯುತಿದ್ದ. ಎಂಟನೇ ತರಗತಿಯ ವಿದ್ಯಾರ್ಥಿ ಆಗಿರುವ ಈತ ಗುರುವಾರ

ಸುಳ್ಯ: ಪೆರುವಾಜೆಯಿಂದ ನಾಪತ್ತೆಯಾಗಿದ್ದ ಬಾಲಕ ಮೈಸೂರಿನಲ್ಲಿ ಪತ್ತೆ Read More »

ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಕವಿಗೋಷ್ಠಿ ಕಾರ್ಯಕ್ರಮ

ಸಮಗ್ರ ನ್ಯೂಸ್:ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ವತಿಯಿಂದ KSRTC ಬಸ್ ಸ್ಟಾಂಡ್ ಬಳಿ ಇರುವ ಶಾರದಾ ವಿದ್ಯಾಲಯದಲ್ಲಿ ಇತ್ತೀಚಿಗೆ ದೀಪಾವಳಿ ಕವಿಗೋಷ್ಠಿ ಮತ್ತು ಸಾಹಿತ್ಯ ಕೃತಿ ಬಿಡುಗಡೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಗಣ್ಯರನ್ನು ಮತ್ತು ಕವಿಗಳನ್ನು ಬಸ್ ನಿಲ್ದಾಣದಿಂದ ಮೆರವಣಿಗೆ ಮೂಲಕ ವಿದ್ಯಾಲಯಕ್ಕೆ ಬರಮಾಡಿಕೊಳ್ಳಲಾಯಿತು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ ಮತ್ತು ಜ್ಯೋತಿಷ್ಯರಾದ ಎಚ್. ಭೀಮರಾವ್ ವಾಷ್ಠರ್ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಶಾರದಾ ವಿದ್ಯಾಲಯದ ಪ್ರಾಂಶುಪಾಲರಾದ ಶಾರದಾ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಕವಿಗೋಷ್ಠಿ ಕಾರ್ಯಕ್ರಮ Read More »

ಸುಳ್ಯ:ಅರಣ್ಯದಂಚಿನ ನಿವಾಸಿಗಳ ವಸತಿ ಹಕ್ಕುಪತ್ರ, ಕೋವಿ ನವೀಕರಣ| ನ. 23 ರಂದು ಎಪಿಎಂಸಿ ಸಭಾಂಗಣದಲ್ಲಿ ಸಮಾಲೋಚನಾ ಸಭೆ

ಸಮಗ್ರ ನ್ಯೂಸ್:ಪೋಡಿ(Plotting) ಬಾಕಿ ಪ್ರಕ್ರಿಯೆಯ, ಅರಣ್ಯದಂಚಿನ ನಿವಾಸಿಗಳ ವಸತಿ ಹಕ್ಕು ಪತ್ರ ಕೋವಿ ನವೀಕರಣ ಮತ್ತು ಹೊಸ ಆಯುಧ ಪರವಾನಗಿ ಸಿಗದೆ ಇರುವವರನ್ನು ಸೇರಿಸಿ ಕಾನೂನು ಬದ್ಧವಾಗಿ ಲಿಖಿತವಾಗಿ ರೂಪದಲ್ಲಿ ಮನವಿ ಕೊಟ್ಟಾಗ ಪರವಾನಗಿ ಸಮಸ್ಯೆಯನ್ನು ಎದುರಿಸುವುದು ಸಾಧ್ಯ ಎಂದು ಅಶೋಕ್ ಎಡಮಲೆ ಅವರು ಹೇಳಿದರು. ಸುಳ್ಯ ಮಲೆನಾಡು ಜಂಟಿ ಕ್ರೀಯ ಸಮಿತಿ ವತಿಯಿಂದ ಪೋಡಿ (Plotting) ಬಾಕಿ ಪ್ರಕ್ರಿಯೆಯ, ಅರಣ್ಯದಂಚಿನ ನಿವಾಸಿಗಳ ವಸತಿ ಹಕ್ಕು ಪತ್ರ, ಕೋವಿ ನವೀಕರಣ ಮತ್ತು ಹೊಸ ಆಯುಧ ಪರವಾನಿಗೆ ಬಗ್ಗೆ

ಸುಳ್ಯ:ಅರಣ್ಯದಂಚಿನ ನಿವಾಸಿಗಳ ವಸತಿ ಹಕ್ಕುಪತ್ರ, ಕೋವಿ ನವೀಕರಣ| ನ. 23 ರಂದು ಎಪಿಎಂಸಿ ಸಭಾಂಗಣದಲ್ಲಿ ಸಮಾಲೋಚನಾ ಸಭೆ Read More »

ಕುಮಾರ್ ಪೆರ್ನಾಜೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರು ಸಂಸ್ಥೆಯ ಸಲಹಾ ಸಮಿತಿಗೆ ನೇಮಕ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಮತ್ತು ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16ರಂದು ಮಂಗಳೂರಿನ ಮರೋಲಿ ಸೂರ್ಯನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕೃಷಿ ಸಂಶೋಧನಾ ಪ್ರಶಸ್ತಿ ಪುರಸ್ಕೃತರು, ಜಿಲ್ಲಾ ರಾಜ್ಯೋತ್ಸವ, ಹವ್ಯಕರತ್ನ, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಜಿಲ್ಲಾ ಮಟ್ಟದ ಪ್ರಗತಿ

ಕುಮಾರ್ ಪೆರ್ನಾಜೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರು ಸಂಸ್ಥೆಯ ಸಲಹಾ ಸಮಿತಿಗೆ ನೇಮಕ Read More »

ಕುಕ್ಕೆ ಸುಬ್ರಹ್ಮಣ್ಯ: ಗರ್ಭಗುಡಿಯ ಫೋಟೋ ಜೊತೆ ಅರ್ಚಕರ‌ ಮೇಲೆ ನಿಂದನಾತ್ಮಕ ಬರಹ; ದೂರು ದಾಖಲು

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಪೋಟೋ ತೆಗೆದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ದೂರು ನೀಡಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯುಲು ನಿಷೇಧವಿದ್ದರೂ ಕುಲ್ಕುಂದದ ವ್ಯಕ್ತಿಯೊಬ್ಬರು ಗರ್ಭ ಗುಡಿಯ ಪೋಟೋ ತೆಗೆದಿದ್ದಾರೆ. ಅಲ್ಲದೆ ಈ ಫೋಟೋವನ್ನು ಕುಕ್ಕೆ ಶ್ರೀ ದೇವಾಲಯ ಉಳಿಸಿ, ಶೈವಾಗಮ ಕ್ಷೇತ್ರ ಶ್ರೀ

ಕುಕ್ಕೆ ಸುಬ್ರಹ್ಮಣ್ಯ: ಗರ್ಭಗುಡಿಯ ಫೋಟೋ ಜೊತೆ ಅರ್ಚಕರ‌ ಮೇಲೆ ನಿಂದನಾತ್ಮಕ ಬರಹ; ದೂರು ದಾಖಲು Read More »

ಪುತ್ತೂರು ಡಿವೈಎಸ್ಪಿ ಡಾ. ಗಾನಾ ಪಿ. ಕುಮಾರ್ ವರ್ಗಾವಣೆ

ಸಮಗ್ರ ನ್ಯೂಸ್: ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಗಾನಾ ಪಿ.ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ರಾಜ್ಯ ಗುಪ್ತ ವಾರ್ತೆಗೆ ವರ್ಗಾವಣೆ ಆದೇಶದಲ್ಲಿರುವ ಅರುಣ್ ನಾಗೇಗೌಡ ಅವರನ್ನು ಪುತ್ತೂರು ಡಿವೈಎಸ್‌ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಸರಕಾರ ಸಿಐಡಿಗೆ ವರ್ಗಾವಣೆಗೊಳಿಸಿತ್ತು. ಆ ಬಳಿಕ ಅವರ ವರ್ಗಾವಣೆ ರದ್ದುಗೊಳಿಸಿ ಎಸ್ಪಿ ಕಚೇರಿಯ ಡಿಸಿಆರ್‌ಬಿ ಡಿವೈಎಸ್ಪಿಯಾಗಿ ನಿಯೋಜಿಸಲಾಗಿತ್ತು. ಪುತ್ತೂರಿನಲ್ಲಿ ನಡೆದ ಬ್ಯಾನರ್ ಪ್ರಕರಣವೊಂದಕ್ಕೆ ಸಂಬಂಧಿಸಿ

ಪುತ್ತೂರು ಡಿವೈಎಸ್ಪಿ ಡಾ. ಗಾನಾ ಪಿ. ಕುಮಾರ್ ವರ್ಗಾವಣೆ Read More »

ಬೆಳ್ತಂಗಡಿ: ಗರ್ಭವತಿಯಾದ ಖಾಸಗಿ ಕಾಲೇಜು ವಿದ್ಯಾರ್ಥಿನಿ| ಪ್ರಭಾವಕ್ಕೆ ಒಳಗಾಗಿ ಪೋಕ್ಸೋ ದಾಖಲಿಸದ ಪೊಲೀಸರು – ಗಿರೀಶ್ ಮಟ್ಟಣ್ಣನವರ್

ಸಮಗ್ರ ನ್ಯೂಸ್: ‘ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ (ಪೊಕ್ಸೊ) ಜಿಲ್ಲೆಯ ಠಾಣೆಯೊಂದರಲ್ಲಿ ದಾಖಲಾದ ಪ್ರಕರಣದಲ್ಲಿ ಸಂತ್ರಸ್ತೆಯು ತನ್ನ ಮೊದಲ ಹೇಳಿಕೆ ನೀಡಿದಾಗ ಹೆಸರಿಸಿದ ಆರೋಪಿ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಈ ಪ್ರಕರಣದ ತನಿಖೆಯನ್ನು ದಾರಿತಪ್ಪಿಸಲಾಗುತ್ತಿದೆ’ ಎಂದು ಗಿರೀಶ್‌ ಮಟ್ಟಣ್ಣನವರ್‌ ಆರೋಪಿಸಿದರು. ‘ಬಾಲಕಿಯನ್ನು ಆರೋಗ್ಯ ತಪಾಸಣೆಗಾಗಿ ಇಲ್ಲಿನ ಲೇಡಿಗೋಷನ್‌ ಆಸ್ಪತ್ರೆಗೆ ಕರೆತಂದಾಗ ಆಕೆ ಮೇಲೆ ನಡೆದ ಲೈಂಗಿಕ ದೌರ್ಜನ್ಯದಿಂದ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಆಸ್ಪತ್ರೆಯ ವೈದ್ಯರು ನೀಡಿದ ಮಾಹಿತಿ ಆಧಾರದಲ್ಲಿ ಜಿಲ್ಲೆಯ ಮಹಿಳಾ

ಬೆಳ್ತಂಗಡಿ: ಗರ್ಭವತಿಯಾದ ಖಾಸಗಿ ಕಾಲೇಜು ವಿದ್ಯಾರ್ಥಿನಿ| ಪ್ರಭಾವಕ್ಕೆ ಒಳಗಾಗಿ ಪೋಕ್ಸೋ ದಾಖಲಿಸದ ಪೊಲೀಸರು – ಗಿರೀಶ್ ಮಟ್ಟಣ್ಣನವರ್ Read More »