Wild elephant attack;ಬೆಳ್ತಂಗಡಿ: ಕಾರಿನ ಮೇಲೆ ದಾಳಿ ಮಾಡಿದ ಕಾಡಾನೆ| ಇಬ್ಬರು ಜಖಂ; ಮಗು ಸಹಿತ ಏಳು ಮಂದಿ ಪವಾಡ ಸದೃಶ ಪಾರು
ಸಮಗ್ರ ನ್ಯೂಸ್: ಕಾರೊಂದರ ಮೇಲೆ ಕಾಡಾನೆ ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿ, ಕಾರಿಗೆ ಹಾನಿ ಉಂಟು ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಸೋಮವಾರ ನ.27 ರಾತ್ರಿ ಸಂಭವಿಸಿದೆ. ಕಾರಿನಲ್ಲಿ ಮಗು ಸಹಿತ ಏಳು ಮಂದಿಯಿದ್ದು ಅವರು ನೆರಿಯದ ಸಂಬಂಧಿಕರ ಮನೆಗೆ ಪ್ರಯಾಣಿಸುತ್ತಿದ್ದರು. ಪುತ್ತೂರು ಮೂಲದ ಅಬ್ದುಲ್ ರೆಹಮಾನ್ (40) ಮತ್ತು ನಾಸಿಯಾ (30) ಗಾಯಾಳುಗಳು ಎಂದು ತಿಳಿದು ಬಂದಿದೆ. ರೆಹಮಾನ್ ಅವರ ತಲೆ ಮತ್ತು ಕಾಲಿಗೆ ಹಾಗೂ ನಾಸಿಯಾ ಅವರ ಕಾಲಿಗೆ ಗಾಯವಾಗಿದ್ದು, ಅವರಿಗೆ










