ಕರಾವಳಿ

Wild elephant attack;ಬೆಳ್ತಂಗಡಿ: ಕಾರಿನ ಮೇಲೆ ದಾಳಿ ಮಾಡಿದ ಕಾಡಾನೆ| ಇಬ್ಬರು ಜಖಂ; ಮಗು ಸಹಿತ ಏಳು ಮಂದಿ ಪವಾಡ ಸದೃಶ ಪಾರು

ಸಮಗ್ರ ನ್ಯೂಸ್: ಕಾರೊಂದರ ಮೇಲೆ ಕಾಡಾನೆ ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿ, ಕಾರಿಗೆ ಹಾನಿ ಉಂಟು ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಸೋಮವಾರ ನ.27 ರಾತ್ರಿ ಸಂಭವಿಸಿದೆ. ಕಾರಿನಲ್ಲಿ ಮಗು ಸಹಿತ ಏಳು ಮಂದಿಯಿದ್ದು ಅವರು ನೆರಿಯದ ಸಂಬಂಧಿಕರ ಮನೆಗೆ ಪ್ರಯಾಣಿಸುತ್ತಿದ್ದರು. ಪುತ್ತೂರು ಮೂಲದ ಅಬ್ದುಲ್ ರೆಹಮಾನ್ (40) ಮತ್ತು ನಾಸಿಯಾ (30) ಗಾಯಾಳುಗಳು ಎಂದು ತಿಳಿದು ಬಂದಿದೆ. ರೆಹಮಾನ್ ಅವರ ತಲೆ ಮತ್ತು ಕಾಲಿಗೆ ಹಾಗೂ ನಾಸಿಯಾ ಅವರ ಕಾಲಿಗೆ ಗಾಯವಾಗಿದ್ದು, ಅವರಿಗೆ

Wild elephant attack;ಬೆಳ್ತಂಗಡಿ: ಕಾರಿನ ಮೇಲೆ ದಾಳಿ ಮಾಡಿದ ಕಾಡಾನೆ| ಇಬ್ಬರು ಜಖಂ; ಮಗು ಸಹಿತ ಏಳು ಮಂದಿ ಪವಾಡ ಸದೃಶ ಪಾರು Read More »

ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಹುರಿದ ಅಡಿಕೆ| ಮಂಗಳೂರು ಮಾರುಕಟ್ಟೆಗೆ ಲಗ್ಗೆ ಇಟ್ಟ 20 ಕಂಟೈನರ್ ಆಮದು ಅಡಿಕೆ

ಸಮಗ್ರ ನ್ಯೂಸ್: ಹುರಿದ ಅಡಿಕೆ ರೂಪದಲ್ಲಿ ಕಸ್ಟಮ್ಸ್ ಸುಂಕ ತಪ್ಪಿಸಿಕೊಂಡು ಅವ್ಯಾಹತವಾಗಿ ವಿದೇಶ ಅಡಿಕೆ ಭಾರತಕ್ಕೆ ಬರುತ್ತಿರುವುದು ರಾಜ್ಯದ ಅಡಿಕೆ ವಹಿವಾಟು ಸಂಸ್ಥೆಗಳು ಹಾಗೂ ಬೆಳೆಗಾರರ ನಿದ್ದೆಗೆಡಿಸಿದೆ. ‘ತಿಂಗಳ ಈಚೆಗೆ ಸುಮಾರು 20 ಕಂಟೇನರ್ ಅಡಿಕೆ ವಿದೇಶದಿಂದ ಭಾರತಕ್ಕೆ ಬಂದಿದ್ದು, ಪ್ರತಿ ಕಂಟೇನರ್‌ನಲ್ಲಿ 20ರಿಂದ 24 ಟನ್ ಅಡಿಕೆ ಇರಬಹುದೆಂದು ಅಂದಾಜಿಸಲಾಗಿದೆ. ಇವುಗಳಲ್ಲಿ ಬಹುಪಾಲು ಹುರಿದ ಅಡಿಕೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ಕಸ್ಟಮ್ಸ್ ಇಲಾಖೆಯವರು ಹೇಳುವಂತೆ ಹುರಿದ ಅಡಿಕೆಗೆ ಕನಿಷ್ಠ ಆಮದು ಸುಂಕ ಅನ್ವಯವಾಗುವುದಿಲ್ಲ. ಹೀಗಾಗಿ,

ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಹುರಿದ ಅಡಿಕೆ| ಮಂಗಳೂರು ಮಾರುಕಟ್ಟೆಗೆ ಲಗ್ಗೆ ಇಟ್ಟ 20 ಕಂಟೈನರ್ ಆಮದು ಅಡಿಕೆ Read More »

ಸುಳ್ಯ: ಎಂಟು ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲ್ ಸಾಧನ ಹಸ್ತಾಂತರ

ಸಮಗ್ರ ನ್ಯೂಸ್: ನ. 27ರಂದು ಶಿಕ್ಷಣ ಫೌಂಡೇಶನ್, ಡೆಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಸುಳ್ಯ ತಾಲೂಕಿನಲ್ಲಿ ಆಯ್ಕೆಯಾದ 8 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲ್ ಸಾಧನಗಳಾದ ಮೊಬೈಲ್ ಮತ್ತು ಸ್ಪೀಕರ್ ಗಳನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಹಾಗೂ ಸುಳ್ಯ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಅವರ ಮುಖೇನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಫೌಂಡೇಶನ್ ನ ಗ್ರಾಮ ಡಿಜಿ

ಸುಳ್ಯ: ಎಂಟು ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲ್ ಸಾಧನ ಹಸ್ತಾಂತರ Read More »

ಬಂಟ್ವಾಳ: ನೆರೆಕರೆಯ ಹುಡುಗ, ಹುಡುಗಿ ಒಂದೇ ದಿನ ನಾಪತ್ತೆ

ಸಮಗ್ರ ನ್ಯೂಸ್: ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಮತ್ತು ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾದವರು. ದೇರಳಕಟ್ಟೆಯ ನಡುಪದವು ಪಿ.ಎ.ಕಾಲೇಜಿನಲ್ಲಿ ಫಾರ್ಮಸಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಒಂದು ವಾರಗಳ ಕಾಲ ರಜೆಯಿದ್ದ ಕಾರಣ

ಬಂಟ್ವಾಳ: ನೆರೆಕರೆಯ ಹುಡುಗ, ಹುಡುಗಿ ಒಂದೇ ದಿನ ನಾಪತ್ತೆ Read More »

ಆಟಗಾರರ ಬದಲಾವಣೆಗೆ ಇಂದು ಕೊನೆಯ ದಿನ/ ಆರ್‍ಸಿಬಿಯಲ್ಲೂ ಒಂದು ಬದಲಾವಣೆ

ಸಮಗ್ರ ನ್ಯೂಸ್: ಐಪಿಎಲ್ ಟೂರ್ನಿಗೆ ಎಲ್ಲಾ ತಂಡಗಳು ಸಿದ್ದತೆ ನಡೆಸುತ್ತಿದ್ದು. ಅದಕ್ಕೂ ಮುನ್ನ ಆಟಗಾರರ ಹರಾಜು ಪಕ್ರಿಯೆ ನಡೆಯಲಿದೆ, ಇಂದು ಆಟಗಾರರ ಬದಲಾವಣೆಗೆ ಕಡೆಯ ದಿನವಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಲ್‍ರೌಂಡರ್ ಶೆಹಬಾಜ್ ಅಹಮದ್ ಅವರನ್ನು ಸನ್‍ರೈಸರ್ಸ್ ಹೈದರಾಬಾದ್‍ಗೆ ನೀಡಿ, ಅಲ್ಲಿಂದ ಮಯಾಂಕ್ ಅವರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಶೆಹಬಾಜ್ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿರಲಿಲ್ಲ. ಶೆಹಬಾಜ್ ಅಹಮದ್ 10 ಪಂದ್ಯಗಳನ್ನಾಡಿ ಕೇವಲ 42 ರನ್ ಗಳನ್ನಷ್ಟೇ ಬಾರಿಸಿದ್ದರು.

ಆಟಗಾರರ ಬದಲಾವಣೆಗೆ ಇಂದು ಕೊನೆಯ ದಿನ/ ಆರ್‍ಸಿಬಿಯಲ್ಲೂ ಒಂದು ಬದಲಾವಣೆ Read More »

ಡಾ. ಅನುರಾಧಾ ಕುರುಂಜಿ ಅವರಿಗೆ ಕಾಸರಗೋಡಿನ ಮುಳ್ಳೇರಿಯಾದಲ್ಲಿ ಗೌರವಾರ್ಪಣೆ

ಸಮಗ್ರ ನ್ಯೂಸ್: ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕಾಸರಗೋಡಿನ ಮುಳ್ಳೇರಿಯಾದ ಶ್ರೀ ಧರ್ಮಶಾಸ್ತ್ರಾ ಭಜನಾ ಮಂದಿರ ದೇಲಂಪಾಡಿಯಲ್ಲಿ 18 ವರ್ಷಗಳ ಬಳಿಕ ನಡೆದ 4 ದಿನಗಳ ವಿಜೃಂಭಣೆಯ ಅಯ್ಸಪ್ಪನ ಉತ್ಸವ “ಅಯ್ಯಪ್ಪ ತಿರುವಳಕ್ಕ್ ಮಹೋತ್ಸವ”ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕೇರಳ, ಕಾಸರಗೋಡಿನ ಸುತ್ತ ಮುತ್ತಲ ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯಕ ಮೊದಲಾದ ಹತ್ತು ಹಲವು ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಯಾಗಿ, ತರಬೇತುದಾರರಾಗಿ, ಪ್ರಧಾನ ಭಾಷಣಕಾರರಾಗಿ, ಭಾಗವಹಿಸುತ್ತಿರುವ ಡಾ. ಅನುರಾಧಾ ಕುರುಂಜಿಯವರನ್ನು ವಿಜಯಕುಮಾರ್

ಡಾ. ಅನುರಾಧಾ ಕುರುಂಜಿ ಅವರಿಗೆ ಕಾಸರಗೋಡಿನ ಮುಳ್ಳೇರಿಯಾದಲ್ಲಿ ಗೌರವಾರ್ಪಣೆ Read More »

ಪುತ್ತೂರು: ಕೈತಪ್ಪಿದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ| ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್​ನಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಳು. ಆದರೆ, ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಕ್ಕಿರಲಿಲ್ಲ. ಇದರಿಂದ ನಿಶಾ ತೀವ್ರ ಬೇಸರಗೊಂಡಿದ್ದಳು. ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ

ಪುತ್ತೂರು: ಕೈತಪ್ಪಿದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ| ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಬೆಳ್ಳಾರೆ: ಅಡಿಕೆ ಕಳ್ಳತನ ಮಾಡುವ ವೇಳೆ ಸಿಕ್ಕಿಬಿದ್ದ ಖದೀಮರು| ಮಾಲೀಕನ ಮೇಲೆಯೇ ತಲವಾರಿನಿಂದ ಹಲ್ಲೆಗೆ ಯತ್ನ

ಸಮಗ್ರ ನ್ಯೂಸ್: ಸವಣೂರಿನ ಫಾರ್ಮ್ಸ್ ಒಂದರಿಂದ ಅಡಕೆ ಕಳ್ಳತನಕ್ಕೆ ಇಬ್ಬರ ತಂಡ ವಾಹನದಲ್ಲಿ ಬಂದಿದ್ದು ಅಡಿಕೆ ದೋಚುವ ಸಂದರ್ಭದಲ್ಲಿ ಫಾರ್ಮ್ ಮಾಲೀಕನ ಪುತ್ರನ ಕೈಗೆ ಸಿಕ್ಕಿಬಿದ್ದ ಸಂದರ್ಭ ತಲವಾರು ದಾಳಿ ನಡೆಸಿ ಮಾಲೀಕರ ಪುತ್ರನನ್ನು ಗಾಯಗೊಳಿಸಿದ ಪ್ರಕರಣಕ್ಕೆ ನಡೆದಿದೆ. ಎಡಪತ್ಯ ಫಾರ್ಮ್ಸ್ ಮಾಲೀಕ ರಾಮಚಂದ್ರ ಎಡಪತ್ಯ ಅವರ ಪುತ್ರ ನಿಷ್ಕಲ್ ರಾಮ್ ಎಡಪತ್ಯ ತಲವಾರು ದಾಳಿ ನಡೆಸಿ ಅಡಿಕೆ ಕಳವು ನಡೆದಿತ್ತು. ಶನಿವಾರ ಬೆಳಿಗ್ಗೆ ಬೇರೊಂದು ಡ್ರೈಯರ್ ನ ಅಡಿಕೆ ತೆರವುಗೊಳಿಸಲು ನೋಡಿದಾಗ ಅದರಲ್ಲಿ ಅಡಿಕೆ ಕಳವು

ಬೆಳ್ಳಾರೆ: ಅಡಿಕೆ ಕಳ್ಳತನ ಮಾಡುವ ವೇಳೆ ಸಿಕ್ಕಿಬಿದ್ದ ಖದೀಮರು| ಮಾಲೀಕನ ಮೇಲೆಯೇ ತಲವಾರಿನಿಂದ ಹಲ್ಲೆಗೆ ಯತ್ನ Read More »

ಸುಬ್ರಹ್ಮಣ್ಯ: ರೋವರ್ ರೇಂಜರ್, ಸ್ಕೌಟ್ಸ್ ಗೈಡ್ಸ್,ಬುಲ್ ಬುಲ್ ಶಿಬಿರದ ಸಮಾರೋಪ ಸಮಾರಂಭ

ಸಮಗ್ರ ನ್ಯೂಸ್: ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಸುಳ್ಯ ದ.ಕ ಇದರ ಸಹಭಾಗಿತ್ವದಲ್ಲಿ ನಡೆದ ರೋವರ್ ರೇಂಜರ್ ಸಮಾಗಮ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಉತ್ಸವ 2023-2024ರ ಶಿಬಿರದ ಸಮಾರೋಪ ಸಮಾರಂಭದ ಸಮಾರೋಪವು ನ.25 ರಂದು ನಡೆಯಿತು. ಈ ಸಮಾರಂಭದಲ್ಲಿ ಪ್ರಾದೇಶಿಕ ನಿರ್ದೇಶಕ ವಿಟಿಯು ಬೆಳಗಾವಿ ಡಾ. ಶಿವಕುಮಾರ್ ಹೊಸೊಳಿಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಷ್ಟ ಎನ್ನುವುದು ಪ್ರತಿಯೊಬ್ಬರಿಗೂ ಬಂದು ಹೋಗುತ್ತಾ ಇರುತ್ತದೆ

ಸುಬ್ರಹ್ಮಣ್ಯ: ರೋವರ್ ರೇಂಜರ್, ಸ್ಕೌಟ್ಸ್ ಗೈಡ್ಸ್,ಬುಲ್ ಬುಲ್ ಶಿಬಿರದ ಸಮಾರೋಪ ಸಮಾರಂಭ Read More »

ಸಾಹಿತಿ, ಗಾಯಕ, ಜ್ಯೋತಿಷಿ ಭೀಮರಾವ್ ವಾಷ್ಠರ್ ರಿಗೆ ಕಾಸರಗೋಡಲ್ಲಿ ಸನ್ಮಾನ

ಸಮಗ್ರ ನ್ಯೂಸ್: ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ, ಜ್ಯೋತಿಷಿ, ಗಾಯಕರಾದ ಎಚ್ ಭೀಮರಾವ್ ವಾಷ್ಠರ್ ಅವರನ್ನು ಇತ್ತೀಚಿಗೆ ಕಾಸರಗೋಡಿನ ಬದಿಯಡ್ಕದ ಸಂಸ್ಕೃತಿ ಸಭಾಂಗಣದಲ್ಲಿ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆಯ ವತಿಯಿಂದ ಜರುಗಿದ ಕನ್ನಡ ರಾಜ್ಯೋತ್ಸವ ಮತ್ತು ಕರೋಕೆ ಸಂಗೀತ ಸ್ಪರ್ಧೆಯ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆಯ ಅಧ್ಯಕ್ಷ ವಸಂತ್ ಬಾರಡ್ಕ, ಕರ್ನಾಟಕ ಇತಿಹಾಸ ಅಕಾಡೆಮಿಯ ಗಡಿನಾಡ ಘಟಕದ ಅಧ್ಯಕ್ಷರು ಶ್ರೀ ಪ್ರಭಾಕರ ಕಲ್ಲೂರಾಯ ಬನದಗದ್ದೆ, ಡಾ.ರಾಮಚಂದ್ರ ಹೂಡಿ

ಸಾಹಿತಿ, ಗಾಯಕ, ಜ್ಯೋತಿಷಿ ಭೀಮರಾವ್ ವಾಷ್ಠರ್ ರಿಗೆ ಕಾಸರಗೋಡಲ್ಲಿ ಸನ್ಮಾನ Read More »