ಕರಾವಳಿ

ಸುಳ್ಯ: ಗ್ರಾಹಕರ ಜೊತೆಗೆ ಉದ್ದಟತನ ಮೆರೆದ ಮೆಸ್ಕಾ ಎಇ ಸುಪ್ರೀತ್ ಸಸ್ಪೆಂಡ್

ಸಮಗ್ರ ನ್ಯೂಸ್: ಗ್ರಾಹಕರ ಜೊತೆಗೆ ದೂರವಾಣಿಯಲ್ಲಿ ಅನುಚಿತವಾಗಿ ಮಾತನಾಡಿದ ಸುಳ್ಯ ಮೆಸ್ಕಾಂ ಎಇ ಸುಪ್ರೀತ್ ರನ್ನು ಸಸ್ಪೆಂಡ್ ಮಾಡಲಾಗಿದೆ. ವಿದ್ಯುತ್ ಸಪ್ಲೈ ಬಗ್ಗೆ ಗ್ರಾಹಕರೊಬ್ಬರು ಸಮಸ್ಯೆ ಹೇಳಿಕೊಂಡಿದ್ದು ಈ ವೇಳೆ ಗ್ರಾಹಕರ ಜೊತೆಗೆ ಸುಪ್ರೀತ್ ಅವಾಚ್ಯವಾಗಿ ನಿಂದಿಸಿ ಮಾತನಾಡಿದ್ದರು. ಈ ಆಡಿಯೋ ವೈರಲ್ ಆಗಿದ್ದು, ಸುಪ್ರೀತ್ ಕುಮಾರ್ ರವರ ಮೇಲೆ ಆಕ್ರೋಶ ವ್ಯಕ್ತವಾಗಿತ್ತು. ಅನುಚಿತ ಮಾತುಗಳ ಆಡಿಯೋ ವೈರಲ್ ಆಗಿರುವುದರಿಂದ ಮೆಸ್ಕಾಂನ ಘನತೆಗೆ ಕುಂದುಂಟಾಗಿರುವುದರಿಂದ ಸುಪ್ರೀತ್ ರನ್ನು ಅಮಾನತುಗೊಳಿಸಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಸುಳ್ಯ: ಗ್ರಾಹಕರ ಜೊತೆಗೆ ಉದ್ದಟತನ ಮೆರೆದ ಮೆಸ್ಕಾ ಎಇ ಸುಪ್ರೀತ್ ಸಸ್ಪೆಂಡ್ Read More »

ಸುಳ್ಯದಲ್ಲಿ `ಶೋ’ ತೋರಿಸಿ ಗುಜುರಿ ಪಾಲಾಯಿತೇ ‘ಮತ್ಸ್ಯವಾಹಿನಿ’| ಏಕಾಏಕಿ ತ್ರಿಚಕ್ರ ವಾಹನಗಳನ್ನು ಹೊತ್ತೊಯ್ದದ್ದೆಲ್ಲಿಗೆ?

ಸಮಗ್ರ ನ್ಯೂಸ್: ಸ್ವ ಉದ್ಯೋಗಕ್ಕಾಗಿ ಕಳೆದ 8 ತಿಂಗಳ ಹಿಂದೆ ಸುಳ್ಯಕ್ಕೆ ಬಂದಿದ್ದ ಮೀನುಗಾರಿಕಾ ಇಲಾಖೆಯ ಮತ್ಸ್ಯವಾಹಿನಿ ರಿಕ್ಷಾವನ್ನು ಅನಾಮಿಕು ಹೊತ್ತೊಯ್ದಿದ್ದು, ಈ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಈ ಸಮಾಜದಲ್ಲಿ ದುಡಿದು ತಿನ್ನುವರಿಗಿಂತ ಬಡಿದು ತಿನ್ನುವವರೇ ಹೆಚ್ಚು. ಆದರೆ ಸುಳ್ಯದಲ್ಲಿ ಜನತೆ ತಮ್ಮ ಪಾಲಿನ ರೊಟ್ಟಿಯನ್ನು ತಾವೇ ದುಡಿದು ತಿನ್ನುವವರೇ ಹೆಚ್ಚಾಗಿ ಇರುವುದು. ಅಂತಃ ಮನಸ್ಥಿತಿ ಇರುವ ಜನರಿಗೆ ಬಡಿದು ತಿನ್ನುವ ಅಯೋಗ್ಯರು ಅನ್ಯಾಯ ಮಾಡಿಬಿಟ್ಟಿದ್ದಾರೆ. ಕಳೆದ ಮಾ. 26ರಂದು ಕೇಂದ್ರ ಸರಕಾರದ ಪ್ರಧಾನ ಮಂತ್ರಿ

ಸುಳ್ಯದಲ್ಲಿ `ಶೋ’ ತೋರಿಸಿ ಗುಜುರಿ ಪಾಲಾಯಿತೇ ‘ಮತ್ಸ್ಯವಾಹಿನಿ’| ಏಕಾಏಕಿ ತ್ರಿಚಕ್ರ ವಾಹನಗಳನ್ನು ಹೊತ್ತೊಯ್ದದ್ದೆಲ್ಲಿಗೆ? Read More »

ಮಂಗಳೂರು: ಗಡಿಪಾರು ಅಸ್ತ್ರದ ವಿರುದ್ದ ಸಂಸದ ನಳಿನ್ ವಾಗ್ದಾಳಿ

ಸಮಗ್ರ ನ್ಯೂಸ್: ಪುತ್ತೂರಿನ ಭಜರಂಗದಳ ಕಾರ್ಯಕರ್ತರ ವಿರುದ್ದ ಗಡಿಪಾರು ಅಸ್ತ್ರ ವಿಚಾರವಾಗಿ ಪುತ್ತೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ದ ಸಂಸದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ‌ಮಾಡುತ್ತಿದೆ. ಸುಳ್ಳು ಪ್ರಕರಣ ದಾಖಲಿಸಿ ಅಪರಾಧಿ ಅಲ್ಲದಿದ್ದರೂ ಗಡೀಪಾರು ಮಾಡ್ತಿದಾರೆ. ಪುತ್ತೂರಿನಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಇಂಥ ದ್ವೇಷದ ರಾಜಕಾರಣ ಸರಿಯಲ್ಲ, ಇದನ್ನ ಖಂಡಿಸುತ್ತೇನೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ. ಗಡಿಪಾರು ವಿಚಾರವಾಗಿ ಅಧಿಕಾರಿಗಳ ತರಾಟೆಗೆ ತೆಗೊಂಡಿದೇನೆ, ಒಂದು ಕೇಸ್

ಮಂಗಳೂರು: ಗಡಿಪಾರು ಅಸ್ತ್ರದ ವಿರುದ್ದ ಸಂಸದ ನಳಿನ್ ವಾಗ್ದಾಳಿ Read More »

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರುಗೆ ಹಾವು ಕಡಿತ

ಸಮಗ್ರ ನ್ಯೂಸ್: ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಗುರುವಾರ ರಾತ್ರಿ ವಿಷಪೂರಿತ ಹಾವು ಕಡಿದಿದ್ದು, ಅವರು ಇಲ್ಲಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಹಿರೇಬಂಡಾಡಿಯಲ್ಲಿ ಮನೆ ಬಳಿಯ ತೋಟಕ್ಕೆ ಹೋದ ವೇಳೆ ಅವರಿಗೆ ವಿಷಪೂರಿತ ಕಟ್ಟು ಹಾವು (ಕ್ರೈಟ್‌) ಕಡಿದಿತ್ತು. ಅವರಿಗೆ ಪ್ರಥಮ ಚಿಕಿತ್ಸೆ ಕೊಡಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರುಗೆ ಹಾವು ಕಡಿತ Read More »

ಯೋಗೀಶ್ ಹೊಸೋಳಿಕೆ ಸಂಪಾದನೆಯ ಎಲಾಡಿಕೆ ಕೃತಿ ಬಿಡುಗಡೆ

ಸಮಗ್ರ ನ್ಯೂಸ್: ಯೋಗೀಶ್ ಹೊಸೋಳಿಕೆ ಸಂಪಾದನೆಯ ಮದುವೆ ನೆನಪಿನ ಕುರಿತ ಮೊತ್ತ ಮೊದಲ ಅರೆಭಾಷೆಯ ಎಲಾಡಿಕೆ ಕೃತಿಯು ನ. 14ರಂದು ಹೊಸೋಳಿಕೆ ಕಟ್ಟೆಮನೆ ದೈವಸ್ಥಾನದಲ್ಲಿ ದೀಪಾವಳಿ ಆಚರಣೆಯೊಂದಿಗೆ ಕುಟುಂಬಸ್ಥರು ಹಾಗೂ ಬಂಧು ಮಿತ್ರರ ಸಮ್ಮುಖದಲ್ಲಿ ವಿಶಿಷ್ಟ ರೀತಿಯಲ್ಲಿ ಬಿಡುಗಡೆಗೊಂಡಿತು. ಗುತ್ತಿಗಾರು ಕಿರಣ ರಂಗ ಅಧ್ಯಯನ ಸಂಸ್ಥೆ ಪುಸ್ತಕ ಪ್ರಕಟಿಸಿ, ಕುಟುಂಬದ ಹಿರಿಯರಾದ ವಿಶ್ವನಾಥ ಹೊಸೋಳಿಕೆ ಪುಸ್ತಕ ಬಿಡುಗಡೆ ಗೊಳಿಸಿದರು. ಕುಟುಂಬದ ಅಧ್ಯಕ್ಷ ಎಚ್.ಬಿ. ಕೇಶವ ಹೊಸೋಳಿಕೆ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಿರಣ ಸಂಸ್ಥೆ

ಯೋಗೀಶ್ ಹೊಸೋಳಿಕೆ ಸಂಪಾದನೆಯ ಎಲಾಡಿಕೆ ಕೃತಿ ಬಿಡುಗಡೆ Read More »

ಸುಳ್ಯ: ನೈತಿಕ ಪೊಲೀಸ್ ಗಿರಿ ಹಿನ್ನಲೆ| ಐದು ಮಂದಿ ಮೇಲೆ ಗಡಿಪಾರು ಆದೇಶ

ಸಮಗ್ರ ನ್ಯೂಸ್: ಕರ್ನಾಟಕ ಪೋಲಿಸ್ ಅಧಿನಿಯಮ 1953 ರ ಕಲಂ 55 ಪ್ರಕಾರ ಬಳ್ಳಾರಿ ಜಿಲ್ಲೆಗೆ ಲತೀಶ್ ಗುಂಡ್ಯ ಸೇರಿದಂತೆ ಐವರ ಮೇಲೆ ಗಡಿಪಾರು ಆದೇಶ ಹೊರಡಿಸಲಾಗಿದೆ. ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಇದೀಗ ಪೊಲೀಸರು ಮತ್ತೆ ಗಡಿಪಾರು ಅಸ್ತ್ರ ಪ್ರಯೋಗ ಮಾಡಿದ್ದು ಜಿಲ್ಲೆಯ ಐದು ಮಂದಿ ಬಜರಂಗದಳ ಸಂಘಟನೆಯ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ಬಜರಂಗದಳ ಕಾರ್ಯಕರ್ತ ಲತೀಶ್ ಗುಂಡ್ಯ, ಪ್ರಜ್ವಲ್,

ಸುಳ್ಯ: ನೈತಿಕ ಪೊಲೀಸ್ ಗಿರಿ ಹಿನ್ನಲೆ| ಐದು ಮಂದಿ ಮೇಲೆ ಗಡಿಪಾರು ಆದೇಶ Read More »

ಉಡುಪಿ: ತಾಯಿ ಮಕ್ಕಳ ಕಗ್ಗೊಲೆ ಪ್ರಕರಣ| ಸ್ಥಳ ಮಹಜರು ವೇಳೆ ಆಕ್ರೋಶಿತರಿಂದ ಹಲ್ಲೆಗೆ ಯತ್ನ

ಸಮಗ್ರ ನ್ಯೂಸ್: ಉಡುಪಿಯ ನೇಜಾರು ತೃಪ್ತಿ ಲೇಔಟ್‌ ನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಪೊಲೀಸರು ಸ್ಥಳ ಮಹಜರು ನಡೆಸಲು ಕರೆ ತಂದ ವೇಳೆ ಸ್ಥಳದಲ್ಲಿ ಸೇರಿದ್ದ ಆಕ್ರೋಶಿತರ ಗುಂಪು ಆರೋಪಿಗೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮಹಜರು ನಡೆಸುವ ವೇಳೆ ಆರೋಪಿಯನ್ನು ತಮ್ಮ ಕೈಗೆ ಒಪ್ಪಿಸುವಂತೆ ಒತ್ತಾಯಿಸಿದ್ದ ಆಕ್ರೋಶಿತ ಗುಂಪು, ಆತನಿಗೆ ಬದುಕುವ

ಉಡುಪಿ: ತಾಯಿ ಮಕ್ಕಳ ಕಗ್ಗೊಲೆ ಪ್ರಕರಣ| ಸ್ಥಳ ಮಹಜರು ವೇಳೆ ಆಕ್ರೋಶಿತರಿಂದ ಹಲ್ಲೆಗೆ ಯತ್ನ Read More »

ಉಡುಪಿ ಕೊಲೆ ಪ್ರಕರಣ| ಆರೋಪಿ ಪ್ರವೀಣ್ ಗೆ ಮುಸ್ಲಿಂ ಯುವತಿ ಜೊತೆ ಮದ್ವೆಯಾಗಿತ್ತಂತೆ!!

ಸಮಗ್ರ ನ್ಯೂಸ್: ಉಡುಪಿಯ ನೇಜಾರುವಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಪ್ರವೀಣ್ ಚೌಗಲೆ(39) ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿ ಮೂರು ತಿಂಗಳ ಕಾಲ ಪೊಲೀಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿದ್ದನು ಎಂದು ತಿಳಿದು ಬಂದಿದೆ. ಪೊಲೀಸ್ ತನಿಖೆಯ ಪ್ರಕಾರ, ಚೌಗುಲೆ ಮಹಾರಾಷ್ಟ್ರದ ಮಾಜಿ ಪೊಲೀಸ್ ಆಗಿದ್ದು, ಮಂಗಳೂರಿನ ಏರ್ ಇಂಡಿಯಾ ಕಂಪೆನಿಯಲ್ಲಿ ಕೆಲಸ ಸಿಕ್ಕಿರುವ ಹಿನ್ನೆಲೆಯಲ್ಲಿ ಪೊಲೀಸ್ ವೃತ್ತಿಗೆ ರಾಜೀನಾಮೆ ನೀಡಿದ್ದನು ಎನ್ನಲಾಗಿದೆ. ಬಳಿಕ ವಿಮಾನಯಾನ ಉದ್ಯಮಕ್ಕೆ ಸೇರಿಕೊಂಡಿದ್ದರು ಮತ್ತು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಸಿಬ್ಬಂದಿ ಸದಸ್ಯರಾಗಿ ಕೆಲಸ

ಉಡುಪಿ ಕೊಲೆ ಪ್ರಕರಣ| ಆರೋಪಿ ಪ್ರವೀಣ್ ಗೆ ಮುಸ್ಲಿಂ ಯುವತಿ ಜೊತೆ ಮದ್ವೆಯಾಗಿತ್ತಂತೆ!! Read More »

ಉಡುಪಿ: ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣ|ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಿದ್ದಾರೆ. ಪ್ರವೀಣ್​​​​ ಅರುಣ್​​​ ಚೌಗಲೆ ಬಂಧಿತ ಆರೋಪಿ. ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್​​​​ ಅರುಣ್​​​ ಚೌಗಲೆ CRPF ಸಿಬ್ಬಂದಿಯಾಗಿದ್ದ. ಕುಡಚಿಯ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದ ಪ್ರವೀಣ್​ ನನ್ನು ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಆರೋಪಿ ಅರೆಸ್ಟ್​​ ಮಾಡಲಾಗಿದೆ. ನವೆಂಬರ್​ 12ರಂದು ಉಡುಪಿಯ ಮನೆಗೆ ಬಂದು ಪಾಪಿ ತಾಯಿ ಮೂವರು ಮಕ್ಕಳಾದ

ಉಡುಪಿ: ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣ|ಆರೋಪಿ ಪೊಲೀಸ್ ವಶಕ್ಕೆ Read More »

ವೈದ್ಯಕೀಯ ಸಾಹಿತ್ಯ ಜನ ಮಾನಸಕ್ಕೆ ತಲುಪಲಿ:ಡಾ ಚಕ್ರಪಾಣಿ

ಸಮಗ್ರ ನ್ಯೂಸ್: ಡಾ|ಚೂಂತಾರು ಅವರು ಬರೆದ ಧನ್ವಂತರಿ ಪುಸ್ತಕವು ವಿವಿಧ ರೋಗ ಲಕ್ಷಣಗಳು ಹಾಗೂ ವಿವರವನ್ನು ನೀಡುವ ಕೃತಿಯಾಗಿದ್ದು ಓಡಿಸಿಕೊಂಡು ಹೋಗುವ ಗುಣವುಳ್ಳ ಭಾಷೆ ಹೊಂದಿದೆ. ಜೀವನ ಶೈಲಿ ಬದಲಾಯಿಸಿಕೊಂಡು ರೋಗದಿಂದ ದೂರ ಉಳಿಯಬಹುದಾದ ಸಲಹೆಗಳು ಮತ್ತು ಭವಿಷ್ಯದಲ್ಲಿ ವೈದ್ಯಕೀಯ ಎಂಬ ವೈದ್ಯಕೀಯ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಬಲ್ಲ ಅಧ್ಯಾಯ ಹೊಂದಿದೆ. ವೈದ್ಯ ನಿಂತ ನೀರಾಗದೆ ನಿರಂತರ ಅಧ್ಯಯನ/ಅಭ್ಯಾಸಶೀಲನಾಗಬೇಕು ಎಂದು ಡಾ. ಶಿಕಾರಿಪುರ ಕೃಷ್ಣಮೂರ್ತಿ ನುಡಿದರು. ಪುಸ್ತಕ ವನ್ನು ಲೋಕಾರ್ಪಣೆ ಗೊಳಿಸಿದ ಡಾ ಚಕ್ರಪಾಣಿ ಅವರು ಇಂತಹ ಕೃತಿಗಳಿಂದ

ವೈದ್ಯಕೀಯ ಸಾಹಿತ್ಯ ಜನ ಮಾನಸಕ್ಕೆ ತಲುಪಲಿ:ಡಾ ಚಕ್ರಪಾಣಿ Read More »