ಕರಾವಳಿ

ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆ|ಸುಳ್ಯದ ಸೈಂಟ್ ಜೋಸೆಫ್ ಶಾಲೆ ಪ್ರಥಮ

ಸಮಗ್ರ ನ್ಯೂಸ್: ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಸ್ಕೌಟ್ ತಂಡಕ್ಕೆ ಪ್ರಥಮ ಬಹುಮಾನ ಪಡೆದುಕೊಂಡಿತು. ರಾಜ್ಯದ 31 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಂತಿಮ ಸುತ್ತಿಗೆ ಬಂದ 4 ತಂಡಗಳಲ್ಲಿ ಸೈಂಟ್ ಜೋಸೆಫ್ ಶಾಲಾ ತಂಡ ಪ್ರಥಮ ಬಹುಮಾನ ಪಡೆದಿದೆ.

ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆ|ಸುಳ್ಯದ ಸೈಂಟ್ ಜೋಸೆಫ್ ಶಾಲೆ ಪ್ರಥಮ Read More »

ಹಿಂದೂ ಕಾರ್ಯಕರ್ತರ ಗಡಿಪಾರು ನೋಟಿಸ್ ಖಂಡಿಸಿ|ಸುಳ್ಯದಲ್ಲಿ ವಿಶ್ವ ಹಿಂದೂ ಪರುಷದ್ ಬಜರಂಗ ದಳದ ವತಿಯಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಬಜರಂಗದಳದ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ವತಿಯಿಂದ ಬೃಹತ್ ಪ್ರತಿಭಟನೆ ಸುಳ್ಯ ತಾಲೂಕು ಕಛೇರಿ ಬಳಿ ನಡೆಯಿತು. ವಿಶ್ವ ಹಿಂದೂ ಪರಿಷದ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಮಾತನಾಡಿ, ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ, ಗೋ ಕಳ್ಳತನ, ಅಕ್ರಮ ಮರಳುಗಾರಿಕೆ, ರೌಡಿಸಂ ನಡೆಯುತ್ತಿದ್ದು, ಇದರಲ್ಲಿ ಎಷ್ಟು ಜನರ ಮೇಲೆ

ಹಿಂದೂ ಕಾರ್ಯಕರ್ತರ ಗಡಿಪಾರು ನೋಟಿಸ್ ಖಂಡಿಸಿ|ಸುಳ್ಯದಲ್ಲಿ ವಿಶ್ವ ಹಿಂದೂ ಪರುಷದ್ ಬಜರಂಗ ದಳದ ವತಿಯಿಂದ ಪ್ರತಿಭಟನೆ Read More »

ಕಡಬ: ಹ್ಯಾಕರ್ ಗಳ ಮೋಸದಿಂದ ಸೌದಿಯಲ್ಲಿ ಜೈಲುಪಾಲಾಗಿದ್ದ ಯುವಕ ಮರಳಿ ತವರಿಗೆ| ಕೈಹಿಡಿದ ಗೆಳೆಯರು, ಕೈ ಕೊಟ್ಟ ಜನಪ್ರತಿನಿಧಿಗಳ ಭರವಸೆ!!

ಸಮಗ್ರ ನ್ಯೂಸ್: ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಇಂದು (ನವೆಂಬರ್ 20) ಸ್ವದೇಶಕ್ಕೆ ಆಗಮಿಸಲಿದ್ದಾರೆ. ನವೆಂಬರ್ 20ರಂದು ಬೆಳಗ್ಗೆ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅವರು ಮುಂಬಯಿನಿಂದ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ್‌ 2022ರಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಅದೇ ಕಂಪೆನಿಯ ಮೂಲಕ ಸೌದಿ ಅರೇಬಿಯಾಕ್ಕೆ

ಕಡಬ: ಹ್ಯಾಕರ್ ಗಳ ಮೋಸದಿಂದ ಸೌದಿಯಲ್ಲಿ ಜೈಲುಪಾಲಾಗಿದ್ದ ಯುವಕ ಮರಳಿ ತವರಿಗೆ| ಕೈಹಿಡಿದ ಗೆಳೆಯರು, ಕೈ ಕೊಟ್ಟ ಜನಪ್ರತಿನಿಧಿಗಳ ಭರವಸೆ!! Read More »

ಸುಬ್ರಹ್ಮಣ್ಯ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸಹಿ ಸಂಗ್ರಹ ಅಭಿಯಾನ

ಸಮಗ್ರ ನ್ಯೂಸ್: NEP ಯನ್ನು ರದ್ದುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಸುಬ್ರಹ್ಮಣ್ಯ ಶಾಖೆಯಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಪದ್ಮಕುಮಾರ್ ಗುಂಡಡ್ಕ NEP ಯ ಮಹತ್ವ ಮತ್ತು NEP ಯನ್ನು ರದ್ದುಗೊಳಿಸಿದಲ್ಲಿ ಆಗುವ ಪರಿಣಾಮಗಳನ್ನು ನೆರೆದಿದ್ದ ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಿಗೆ ಮನದಟ್ಟು ಮಾಡಿ, ರಾಜ್ಯ ಸರ್ಕಾರ ಈ ಕೂಡಲೇ ಈ ನಿರ್ಧಾರವನ್ನು ಕೈ ಬಿಡಬೇಕು ಇಲ್ಲದಿದ್ದಲ್ಲಿ ವಿದ್ಯಾರ್ಥಿ ಶಕ್ತಿಯನ್ನು ಎದುರಿಸುವ ಅಪಾಯ ಸರಕಾರಕ್ಕೆ ಬರುವುದು

ಸುಬ್ರಹ್ಮಣ್ಯ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸಹಿ ಸಂಗ್ರಹ ಅಭಿಯಾನ Read More »

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ| ನ್ಯಾಯಕ್ಕಾಗಿ ನಾಳೆ(ನ.20) ಸುಳ್ಯದ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆ

ಸಮಗ್ರ ನ್ಯೂಸ್: ಹನ್ನೆರಡು ವರ್ಷಗಳ‌ ಹಿಂದೆ ಧರ್ಮಸ್ಥಳದ ಪಾಂಗಾಳ ಸಮೀಪ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಾಳೆ(ನ. ೨೦) ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ರಾಜ್ಯಾದ್ಯಂತ ಸೌಜನ್ಯ ಪರ ಹೋರಾಟಗಾರರು ಪ್ರಕರಣವನ್ನು ಮರುತನಿಖೆ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನ.20 ರಂದು ಸೌಜನ್ಯ ಪರ ನ್ಯಾಯಕ್ಕಾಗಿ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ವೇದಿಕೆ ತಯಾರಾಗಿದ್ದು ಸುಮಾರು 3000ಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಎಂದು ಸಂಘಟಕರು ತಿಳಿಸಿದ್ದಾರೆ. ಉಬರಡ್ಕದಿಂದ

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ| ನ್ಯಾಯಕ್ಕಾಗಿ ನಾಳೆ(ನ.20) ಸುಳ್ಯದ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆ Read More »

ಪುತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ಮೃತದೇಹ ಪತ್ತೆ

ಸಮಗ್ರ ನ್ಯೂಸ್:ರಾಷ್ಟ್ರೀಯ ಹೆದ್ದಾರಿ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಬಂಕ್ ಎದುರಿನಲ್ಲಿ ನ. 19ರಂದು ನಡೆದಿದೆ. ಮೃತರನ್ನು ಆಂಧ್ರ ಮೂಲದ ಶೇಖ್ ಖಾನ್ ಎಂದು ಗುರುತಿಸಲಾಗಿದೆ. ಇಂದು(ನ.19) ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ ಯಾವುದೋ ವಾಹನ ಅವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಪುತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ಮೃತದೇಹ ಪತ್ತೆ Read More »

ಕಡಬ:ವಿದ್ಯುತ್ ಕಂಬಕ್ಕೆ ಬೊಲೆಲೋ ಡಿಕ್ಕಿ|ಪ್ರಯಾಣಿಕರು ಪಾರು

ಸಮಗ್ರ ನ್ಯೂಸ್: ಕಡಬ-ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ವಾಹನದಲ್ಲಿದ್ದವರು ಪವಾಡ ಸದೃಶವಾಗಿ ಪಾರಾದ ಘಟನೆ ಇಂದು (ನ.19) ಮುಂಜಾನೆ ಸಂಭವಿಸಿದೆ. ಸುಳ್ಯ ತಾಲೂಕಿನ ಕಲ್ಲುಗುಂಡಿಯ ಚೇತನ್ ಎಂಬವರ ಕುಟುಂಬಸ್ಥರು ಕಾರ್ಯಕ್ರಮದ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಕೋಡಿಂಬಾಳದಲ್ಲಿ ವಾಹನ ಅಪಘಾತವಾಗಿದೆ. ವಾಹನದಲ್ಲಿ ಮಗು ಸಹಿತ ಮೂರು ಮಂದಿ ಇದ್ದು ಜೀವ ಹಾನಿಯಿಂದ ಪಾರಾಗಿದ್ದಾರೆ. ವಾಹನ ಜಖಂ ಗೊಂಡಿದ್ದು ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಸ್ಥಳೀಯರು

ಕಡಬ:ವಿದ್ಯುತ್ ಕಂಬಕ್ಕೆ ಬೊಲೆಲೋ ಡಿಕ್ಕಿ|ಪ್ರಯಾಣಿಕರು ಪಾರು Read More »

ಸುಳ್ಯ: ಪೆರುವಾಜೆಯಿಂದ ನಾಪತ್ತೆಯಾಗಿದ್ದ ಬಾಲಕ ಮೈಸೂರಿನಲ್ಲಿ ಪತ್ತೆ

ಸಮಗ್ರ ನ್ಯೂಸ್: ಎರಡು ದಿನಗಳ ಹಿಂದೆ ಅಂಗಡಿಗೆ ತೆರಳುವುದಾಗಿ ತೆರಳಿ ಬಳಿಕ ನಾಪತ್ತೆಯಾಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಶನಿವಾರ ಮೈಸೂರಿನಲ್ಲಿ ಪತ್ತೆಯಾಗಿದ್ದಾನೆ. ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನ.16ರ ಸಂಜೆಯಿಂದ ನಾಪತ್ತೆಯಾಗಿದ್ದ. ಈತ ತಲಪಾಡಿಯ ಬಿಲಾಲ್ ಮಸೀದಿಯಲ್ಲಿ ಮದ್ರಸ ಶಿಕ್ಷಣದ ಜತೆಗೆ ಶಾಲಾ ಶಿಕ್ಷಣ ಪಡೆಯುತಿದ್ದ. ಎಂಟನೇ ತರಗತಿಯ ವಿದ್ಯಾರ್ಥಿ ಆಗಿರುವ ಈತ ಗುರುವಾರ

ಸುಳ್ಯ: ಪೆರುವಾಜೆಯಿಂದ ನಾಪತ್ತೆಯಾಗಿದ್ದ ಬಾಲಕ ಮೈಸೂರಿನಲ್ಲಿ ಪತ್ತೆ Read More »

ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಕವಿಗೋಷ್ಠಿ ಕಾರ್ಯಕ್ರಮ

ಸಮಗ್ರ ನ್ಯೂಸ್:ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ವತಿಯಿಂದ KSRTC ಬಸ್ ಸ್ಟಾಂಡ್ ಬಳಿ ಇರುವ ಶಾರದಾ ವಿದ್ಯಾಲಯದಲ್ಲಿ ಇತ್ತೀಚಿಗೆ ದೀಪಾವಳಿ ಕವಿಗೋಷ್ಠಿ ಮತ್ತು ಸಾಹಿತ್ಯ ಕೃತಿ ಬಿಡುಗಡೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಗಣ್ಯರನ್ನು ಮತ್ತು ಕವಿಗಳನ್ನು ಬಸ್ ನಿಲ್ದಾಣದಿಂದ ಮೆರವಣಿಗೆ ಮೂಲಕ ವಿದ್ಯಾಲಯಕ್ಕೆ ಬರಮಾಡಿಕೊಳ್ಳಲಾಯಿತು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ ಮತ್ತು ಜ್ಯೋತಿಷ್ಯರಾದ ಎಚ್. ಭೀಮರಾವ್ ವಾಷ್ಠರ್ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಶಾರದಾ ವಿದ್ಯಾಲಯದ ಪ್ರಾಂಶುಪಾಲರಾದ ಶಾರದಾ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಕವಿಗೋಷ್ಠಿ ಕಾರ್ಯಕ್ರಮ Read More »

ಸುಳ್ಯ:ಅರಣ್ಯದಂಚಿನ ನಿವಾಸಿಗಳ ವಸತಿ ಹಕ್ಕುಪತ್ರ, ಕೋವಿ ನವೀಕರಣ| ನ. 23 ರಂದು ಎಪಿಎಂಸಿ ಸಭಾಂಗಣದಲ್ಲಿ ಸಮಾಲೋಚನಾ ಸಭೆ

ಸಮಗ್ರ ನ್ಯೂಸ್:ಪೋಡಿ(Plotting) ಬಾಕಿ ಪ್ರಕ್ರಿಯೆಯ, ಅರಣ್ಯದಂಚಿನ ನಿವಾಸಿಗಳ ವಸತಿ ಹಕ್ಕು ಪತ್ರ ಕೋವಿ ನವೀಕರಣ ಮತ್ತು ಹೊಸ ಆಯುಧ ಪರವಾನಗಿ ಸಿಗದೆ ಇರುವವರನ್ನು ಸೇರಿಸಿ ಕಾನೂನು ಬದ್ಧವಾಗಿ ಲಿಖಿತವಾಗಿ ರೂಪದಲ್ಲಿ ಮನವಿ ಕೊಟ್ಟಾಗ ಪರವಾನಗಿ ಸಮಸ್ಯೆಯನ್ನು ಎದುರಿಸುವುದು ಸಾಧ್ಯ ಎಂದು ಅಶೋಕ್ ಎಡಮಲೆ ಅವರು ಹೇಳಿದರು. ಸುಳ್ಯ ಮಲೆನಾಡು ಜಂಟಿ ಕ್ರೀಯ ಸಮಿತಿ ವತಿಯಿಂದ ಪೋಡಿ (Plotting) ಬಾಕಿ ಪ್ರಕ್ರಿಯೆಯ, ಅರಣ್ಯದಂಚಿನ ನಿವಾಸಿಗಳ ವಸತಿ ಹಕ್ಕು ಪತ್ರ, ಕೋವಿ ನವೀಕರಣ ಮತ್ತು ಹೊಸ ಆಯುಧ ಪರವಾನಿಗೆ ಬಗ್ಗೆ

ಸುಳ್ಯ:ಅರಣ್ಯದಂಚಿನ ನಿವಾಸಿಗಳ ವಸತಿ ಹಕ್ಕುಪತ್ರ, ಕೋವಿ ನವೀಕರಣ| ನ. 23 ರಂದು ಎಪಿಎಂಸಿ ಸಭಾಂಗಣದಲ್ಲಿ ಸಮಾಲೋಚನಾ ಸಭೆ Read More »