ಕರಾವಳಿ

ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ. ಇದರ ಕಛೇರಿಗೆ ಹವಾನಿಯಂತ್ರಿತ ಯಂತ್ರದ ಕೊಡುಗೆ

ಸಮಗ್ರ ನ್ಯೂಸ್: ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ದಲ್ಲಿ ನ. 7 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಸಹಕಾರಿಯ ಕಛೇರಿಗೆ ಹವಾನಿಯಂತ್ರಿತ ಯಂತ್ರವನ್ನು ಕೊಡುಗೆಯಾಗಿ ನೀಡಿದ ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮಲ್ಲಿಕಾ ಸ್ಟಾಲ್ ಅಂಗಡಿಯ ಮಾಲಕ ತೊಡಿಕಾನ ಗ್ರಾಮದ ಬಾಳೆಕಜೆಯ ಶ್ರಿ ಬಾಲಕೃಷ್ಣ ಬಿ ವಿ ಇವರನ್ನು ಸನ್ಮಾನಿಸಲಾಯಿತು ಮತ್ತು ಇವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿಯ ಅಧ್ಯಕ್ಷ ಜನಾರ್ದನ […]

ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ. ಇದರ ಕಛೇರಿಗೆ ಹವಾನಿಯಂತ್ರಿತ ಯಂತ್ರದ ಕೊಡುಗೆ Read More »

ಉಪ್ಪಿನಂಗಡಿ: ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಹೃದಯಾಘಾತದಿಂದ ವಿದ್ಯಾರ್ಥಿಯೊರ್ವ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯ ಕೌಕ್ರಾಡಿಯಲ್ಲಿ ನಡೆದಿದೆ. ಕೌಕ್ರಾಡಿ ಶಾಂತಿ ಬೆಟ್ಟು ನಿವಾಸಿ ಯೂಸುಫ್ ಅವರ ಪುತ್ರ ಮಹಮ್ಮದ್‌ ಇರ್ಫಾನ್‌ (18) ಹೃದಯಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಮೃತ ಇರ್ಫಾನ್ ಎ.ಸಿ ಮೆಕ್ಯಾನಿಂಗ್ ವಾಸಂಗವನ್ನು ಮಾಡುತ್ತಿದ್ದರು.

ಉಪ್ಪಿನಂಗಡಿ: ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ Read More »

ಡಿ.14ರಿಂದ ಮೂಡಬಿದಿರೆಯಲ್ಲಿ ಆಳ್ವಾಸ್ ವಿರಾಸತ್-2023

ಸಮಗ್ರ ನ್ಯೂಸ್: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್- 2023’ ಡಿ.14ರಿಂದ 17ರ ವರೆಗೆ ಇಲ್ಲಿ ನಡೆಯಲಿದೆ. ಆಳ್ವಾಸ್ ವಿರಾಸತ್‌ಗೆ 29ನೇ ವರ್ಷವಾಗಿದ್ದು, ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ, ಸಂಸ್ಕೃತಿಪ್ರಿಯರಿಗೆ ರಸದೌತಣ ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪ್ರತಿದಿನ ಸಂಜೆ 6 ಗಂಟೆಯಿಂದ ರಾತ್ರಿ 9.30ರ ವರೆಗೆ ಕಾರ್ಯಕ್ರಮ ನಡೆಯಲಿದೆ. ಸಭಾಂಗಣದಲ್ಲಿ ಸುಮಾರು 50 ಸಾವಿರ

ಡಿ.14ರಿಂದ ಮೂಡಬಿದಿರೆಯಲ್ಲಿ ಆಳ್ವಾಸ್ ವಿರಾಸತ್-2023 Read More »

ಪುತ್ತೂರು: ಕೇವಲ ₹2000 ದ ಕಾರಣಕ್ಕೆ ಅಕ್ಷಯ್ ಕಲ್ಲೇಗ ಹತ್ಯೆಯಾಯಿತೇ? ದಿಕ್ಕುತೋಚದೆ ‘ಅಕ್ಷಯ್, ಅಕ್ಷಯ್’ ಎಂದು ಕಣ್ಣೀರಾದ ತಂದೆ…

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಹುಲಿವೇಷ ತಂಡಗಳಲ್ಲಿ ಒಂದಾದ ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ಪ್ರಮುಖ ನಾಯಕನನ್ನು ದುಷ್ಕರ್ಮಿಗಳು ತಲವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ. ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕಡಿದು ಹತ್ಯೆ ಮಾಡಲಾಗಿದ್ದು, ಅಕ್ಷಯ್ ಕಲ್ಲೇಗ ಪುತ್ತೂರಿನಲ್ಲಿ ಇದ್ದಾಗ

ಪುತ್ತೂರು: ಕೇವಲ ₹2000 ದ ಕಾರಣಕ್ಕೆ ಅಕ್ಷಯ್ ಕಲ್ಲೇಗ ಹತ್ಯೆಯಾಯಿತೇ? ದಿಕ್ಕುತೋಚದೆ ‘ಅಕ್ಷಯ್, ಅಕ್ಷಯ್’ ಎಂದು ಕಣ್ಣೀರಾದ ತಂದೆ… Read More »

ಉಡುಪಿ: ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳಿಗೆ ಪಿತೃವಿಯೋಗ

ಸಮಗ್ರ‌ ನ್ಯೂಸ್: ಪೇಜಾವರ ಮಠದ ಮಠಾಧಿಪತಿಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಪೂರ್ವಾಶ್ರಮದ ತಂದೆಯವರಾದ ಅಂಗಡಿಮಾರು ಕೃಷ್ಣಭಟ್ಟ ನಿಧನರಾಗಿದ್ದಾರೆ ಅವರಿಗೆ 103 ವರ್ಷ ಆಗಿತ್ತು. ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ಅವರು ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಅನೇಕ ಕನ್ನಡ ಹಾಗೂ ತುಳು ಭಜನೆ, ಪ್ರಾರ್ಥನಾ ಶ್ಲೋಕಗಳನ್ನು ರಚಿಸುವ ಮೂಲಕ ಸಾರಸ್ವತ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು. ಐದು ವೇದಗಳನ್ನು ಅಧ್ಯಯನ ಮಾಡಿರುವ ಇವರು ಸಂಹಿತಾ ಯಾಗಗಳು, ಮತ್ತಿನ್ನಿತರ ಯಾಗಗಳನ್ನು ಮಾಡಿರುವ ಸಾಧಕರೆನಿಸಿದ್ದರು. ದಶಕಗಳ ಹಿಂದೆ

ಉಡುಪಿ: ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳಿಗೆ ಪಿತೃವಿಯೋಗ Read More »

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ‌ ಕ್ಷೇತ್ರದ ಭಕ್ತರಿಗೆ ಮನವಿ |ವಿಜಯಪುರ-ಮಂಗಳೂರು ರೈಲು ವೇಳಾಪಟ್ಟಿ ಪರಿಷ್ಕರಣೆಗೆ ಸಹಿ ಅಭಿಯಾನ

ಸಮಗ್ರ ನ್ಯೂಸ್: ಆನ್‌ಲೈನ್ ಸಹಿ ಅಭಿಯಾನಕ್ಕೆ ಬೆಂಬಲ ನೀಡುವಂತೆ ಕುಕ್ಕೆ ಸುಬ್ರಮಣ್ಯ ಮತ್ತು ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ಮನವಿ ಮಾಡಲಾಗಿದೆ. ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಲಾಗಿದೆ, ಸಹಿ ಮಾಡಲು ಲಿಂಕ್ ಸಹ ನೀಡಲಾಗಿದೆ. ಆನ್‌ಲೈನ್ ಸಹಿ ಅಭಿಯಾನ ಆರಂಭಿಸಿರುವ Dakshina Kannada Railway Users ಇದುವರೆಗೂ 890 ಸಹಿಗಳು ಸಂಗ್ರಹಗೊಂಡಿದೆ. ನಿಮ್ಮ ಬೆಂಬಲ ಹೀಗೆ ಇರಲಿ ಎಲ್ಲರೂ ಸಹಿ ಮಾಡುವ ಮೂಲಕ ಅಭಿಯಾನವನ್ನು ಬೆಂಬಲಿಸಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದೆ. ಫೇಸ್‌ಬುಕ್ ಪೋಸ್ಟ್‌ನಲ್ಲಿ

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ‌ ಕ್ಷೇತ್ರದ ಭಕ್ತರಿಗೆ ಮನವಿ |ವಿಜಯಪುರ-ಮಂಗಳೂರು ರೈಲು ವೇಳಾಪಟ್ಟಿ ಪರಿಷ್ಕರಣೆಗೆ ಸಹಿ ಅಭಿಯಾನ Read More »

ಸುಳ್ಯ: ಆಟೋಗೆ ಡಿಕ್ಕಿ ಹೊಡೆದ ಓಮ್ನಿ| ಆಟೋ ಚಾಲಕ ಸಾವು; ಸಹಪ್ರಯಾಣಿಕ ಗಂಭೀರ

ಸಮಗ್ರ ನ್ಯೂಸ್: ಅಟೋ ರಿಕ್ಷಾಕ್ಕೆ ಓಮ್ನಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಸುಳ್ಯದ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ. ಜಾಲ್ಸೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಜಾಲ್ಸೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂಬವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ನಿಗೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಚಾಲಕ ಬಾಬು ಪಾಟಾಳಿ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ

ಸುಳ್ಯ: ಆಟೋಗೆ ಡಿಕ್ಕಿ ಹೊಡೆದ ಓಮ್ನಿ| ಆಟೋ ಚಾಲಕ ಸಾವು; ಸಹಪ್ರಯಾಣಿಕ ಗಂಭೀರ Read More »

ಸುಳ್ಯ: ನ. 8ರಂದು ವಿದ್ಯಾಮಾತ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಉದ್ಘಾಟನೆ

ಸಮಗ್ರ ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಉದ್ಘಾಟನೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನ.8ರಂದು ಸುಳ್ಯದ ವಿದ್ಯಾಮಾತಾ ಅಕಾಡಮಿಯಲ್ಲಿ ನಡೆಯಲಿದೆ. ನಿವೃತ್ತ ಲೋಕಾಯುಕ್ತ ಜಸ್ಟಿಸ್ ಸಂತೋಷ್ ಹೆಗ್ಡೆ ಅವರು ವಿದ್ಯಾಮಾತಾ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ತರಗತಿ ಉದ್ಘಾಟಿಸುವರು ಎಂದು ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಚಂದ್ರಾವತಿ ಬಡ್ಡಡ್ಕ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೆಪ್ಟೆಂಬರ್ 28

ಸುಳ್ಯ: ನ. 8ರಂದು ವಿದ್ಯಾಮಾತ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಉದ್ಘಾಟನೆ Read More »

ಕಡಬ: ಗಂಡ-ಹೆಂಡತಿ ಜಗಳ ವಿಷಸೇವನೆಯಲ್ಲಿ ಅಂತ್ಯ| ಪತ್ನಿ‌ ಸಾವು; ಪತಿ ಸ್ಥಿತಿ ಚಿಂತಾಜನಕ

ಸಮಗ್ರ ನ್ಯೂಸ್: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಅನ್ನುತ್ತಾರೆ. ಆದರೆ ಇಲ್ಲಿ ಗಂಡ –ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಸಾವಿನಲ್ಲಿ ಅಂತ್ಯವಾಗಿದೆ. ಈ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪೆಲ್ಲ ಎಂಬಲ್ಲಿ ನ.04ರಂದು ಸಂಜೆ ನಡೆದಿದ್ದು, ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ನಿವಾಸಿಗಳಾದ ಸಂಜೀವ ಮತ್ತು ಕುಸುಮ ದಂಪತಿ ನಡುವೆ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಶನಿವಾರ ಕೂಡ ಮಾತಿಗೆ ಮಾತು ಬೆಳೆದಿದೆ. ಕೋಪದ ಭರದಲ್ಲಿ

ಕಡಬ: ಗಂಡ-ಹೆಂಡತಿ ಜಗಳ ವಿಷಸೇವನೆಯಲ್ಲಿ ಅಂತ್ಯ| ಪತ್ನಿ‌ ಸಾವು; ಪತಿ ಸ್ಥಿತಿ ಚಿಂತಾಜನಕ Read More »

ಸುಳ್ಯ: ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ವರದಿಯಾಗಿದೆ. ಪಂಜ ಸಮೀಪದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಮತ್ತು ಹೊನ್ನಮ್ಮ ದಂಪತಿಯ ಪುತ್ರ ಬಿಪಿನ್ ಚಿದ್ಗಲ್ಲು ಸಮುದ್ರ ಪಾಲಾದ ಯುವಕ. ಬಿಪಿನ್ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ನಿನ್ನೆ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದು, ಇಂದು(ನ.5) ಅಲ್ಲಿ ಬೀಚ್‌ಗೆ ಹೋಗಿದ್ದ ವೇಳೆ ಸಮುದ್ರ ಪಾಲಾಗಿದ್ದಾನೆ. ಆತನ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಊರಿಗೆ ತರುವ ಪ್ರಕ್ರಿಯೆ ನಡೆಯುತ್ತಿದೆ.

ಸುಳ್ಯ: ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು Read More »