ಕರಾವಳಿ

ಕಡಬ: ಬಸ್ ಗೆ ಹತ್ತುವವರ ಜನಜಾತ್ರೆಗೆ ಹೆದರಿ ಬಸ್ ಓಡಿಸಲು ನಿರಾಕರಿಸಿದ ಕೆಎಸ್ಆರ್ ಟಿಸಿ ಡ್ರೈವರ್

ಸಮಗ್ರ ನ್ಯೂಸ್:ಕಡಬದಿಂದ ಪುತ್ತೂರಿಗೆ ತೆರಳುವ ಕೆಎಸ್‌ಆರ್ ಟಿಸಿ ಬಸ್ ಗೆ ಬರುವ ಜನಜಾತ್ರೆ ನೋಡಿ ಹೆದರಿ ಬಸ್ ಡ್ರೈವರ್ ಬಸ್ ಓಡಿಸಲು ನಿರಾಕರಿಸಿದ ಘಟನೆ ನಡೆದಿದೆ. ಕಡಬ ಭಾಗದಿಂದ ಶಾಂತಿಮುಗೇರು ಮಾರ್ಗವಾಗಿ ಪುತ್ತೂರಿಗೆ ಬೆಳಗ್ಗಿನ ಸಮಯ ಇದ್ದ ಒಂದು ಬಸ್ಸನ್ನು ಇತ್ತೀಚೆಗೆ ನಿಲ್ಲಿಸಲಾಗಿತ್ತು.ಇದರಿಂದಾಗಿ ಬೆಳಗ್ಗಿನ ಆರಂಭದ ಬಸ್ಸು ಓವರ್ ಲೋಡ್ ಇತ್ತೀಚೆಗೆ ಅದರ ಟಯರ್ ಬ್ಲಾಸ್ಟ್ ಆಗಿದ ಘಟನೆ ನಡೆದಿತ್ತು, ಜನರು ಹೆಚ್ಚುವರಿ ಬಸ್ ಹಾಕಿ ಎಂದು ಹೇಳಿದರೂ ಅಧಿಕಾರಿಗಳು ಮಾತ್ರ ಕೇಳಿಸಿಕೊಳ್ಳದೇ ಸೈಲೆಂಟ್ ಆಗಿದ್ದಾರೆ. ಕಡಬದಿಂದ […]

ಕಡಬ: ಬಸ್ ಗೆ ಹತ್ತುವವರ ಜನಜಾತ್ರೆಗೆ ಹೆದರಿ ಬಸ್ ಓಡಿಸಲು ನಿರಾಕರಿಸಿದ ಕೆಎಸ್ಆರ್ ಟಿಸಿ ಡ್ರೈವರ್ Read More »

ಮನೆ ಬಿಟ್ಟು ಹೋದ ತಂದೆಯ ಕಾರಣ ಖಿನ್ನತೆಗೊಳಗಾದ ಮಗ| ವೇದನೆ ಸಹಿಸದೆ ಆತ್ಮಹತ್ಯೆಗೈದ ಪುತ್ರ|

ಸಮಗ್ರ ನ್ಯೂಸ್: ಒಣಗಿದ ಅಡಕೆ ರಾಶಿ ಮಧ್ಯೆ ಯುವಕನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯ ಎಂಬವರ ಪುತ್ರ ಸೈಬಿನ್ ಮೃತರು. ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಶುಕ್ರವಾರ(ಅ.27) ಮಧ್ಯಾಹ್ನದ ವೇಳೆಗೆ ಪತ್ತೆಯಾಗಿತ್ತು. ಈ ಮಧ್ಯೆ ಮೂರು ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದ ಸೈಬಿನ್ ತಂದೆ ಸಿರಿಯಾಕ್ ಮ್ಯಾಥ್ಯೂ ಗುತ್ತಿಗಾರಿಗೆ ಬಂದಿರುವುದಾಗಿ ತಿಳಿದುಬಂದಿದೆ ಸಿರಿಯಾಕ್ ಮಾಥ್ ಅವರು 3 ತಿಂಗಳ ಹಿಂದೆ

ಮನೆ ಬಿಟ್ಟು ಹೋದ ತಂದೆಯ ಕಾರಣ ಖಿನ್ನತೆಗೊಳಗಾದ ಮಗ| ವೇದನೆ ಸಹಿಸದೆ ಆತ್ಮಹತ್ಯೆಗೈದ ಪುತ್ರ| Read More »

ಉಜಿರೆ: ಬೈಕ್ ಡಿಕ್ಕಿ ಹೊಡೆದು ಬಾಲಕಿ ಮೃತ್ಯು

ಸಮಗ್ರ ನ್ಯೂಸ್: ಉಜಿರೆ ಶಾಲೆ ಬಳಿ ಬೈಕ್ ಡಿಕ್ಕಿ ಹೊಡೆದು 3ನೇ ತರಗತಿ ಬಾಲಕಿ ಸಾವನ್ನಪ್ಪಿದ ಘಟನೆ ಅ. 27ರಂದು ನಡೆದಿದೆ. ಘಟನೆಯಲ್ಲಿ ದಿ. ಅಶೋಕ ಮತ್ತು ಜಯಶ್ರೀ ದಂಪತಿಗಳ ಪುತ್ರಿ ಅಂಕಿತಾ ಬದನಾಜೆ ಸರಕಾರಿ ಹಿ.ಪ್ರಾ. ಶಾಲೆಯ ಎದುರು ಮಾರ್ಗ ದಾಟುತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ತಾಯಿ ಎದುರಲ್ಲೇ ಕೊನೆಯುಸಿರೆಳೆದಿದ್ದಾಳೆ.

ಉಜಿರೆ: ಬೈಕ್ ಡಿಕ್ಕಿ ಹೊಡೆದು ಬಾಲಕಿ ಮೃತ್ಯು Read More »

ಸುಳ್ಯ: ಒಣ ಅಡಿಕೆ ರಾಶಿ‌ ಮಧ್ಯೆ ಯುವಕನ ಅರೆಬೆಂದ ಶವ ಪತ್ತೆ

ಸಮಗ್ರ ನ್ಯೂಸ್: ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ‌‌ ಸುಳ್ಯ ತಾಲೂಕಿನ ಗುತ್ತಿಗಾರು‌ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ. ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ.‌ ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಲಾಗಿದೆ. ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಇಂದು ಮಧ್ಯಾಹ್ನದ ವೇಳೆಗೆ ಘಟನೆ ಬೆಳಕಿಗೆ

ಸುಳ್ಯ: ಒಣ ಅಡಿಕೆ ರಾಶಿ‌ ಮಧ್ಯೆ ಯುವಕನ ಅರೆಬೆಂದ ಶವ ಪತ್ತೆ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ|ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಯಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ೨೦೨೨ ಜುಲೈ ೨೬ರಂದು ಹತ್ಯೆಯಾದ ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ನಂಬರ್ ೨೩ ಆಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಷದ್ (೩೨) ಎಂಬಾತ ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ|ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ Read More »

ಚಂದ್ರಗ್ರಹಣ ಹಿನ್ನಲೆ| ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಸಮಯದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ಅಕ್ಟೋಬರ್​ 28ರಂದು ಈ ವರ್ಷದ ಕೊನೆಯ ಚಂದ್ರಗ್ರಹಣ. ಹಾಗಾಗಿ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸವಿರುತ್ತದೆ. ಶನಿವಾರದಂದು ಸುಬ್ರಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ರಾತ್ರಿಯ ಮಹಾಪೂಜೆ ಸಂಜೆ 6.30 ಕ್ಕೇ ಮುಕ್ತಾಯವಾಗಲಿದೆ. ಅಕ್ಟೋಬರ್​ 28ರ ಸಂಜೆ ಶನಿವಾರ ಸಂಜೆ 6.30ರ ಬಳಿಕ ದೇವರ ದರ್ಶನ ಬಂದ್ ಮಾಡಲಾಗಿದೆ. ಶನಿವಾರ ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ (Annadana) ಸೇವೆಯನ್ನೂ

ಚಂದ್ರಗ್ರಹಣ ಹಿನ್ನಲೆ| ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಸಮಯದಲ್ಲಿ ಬದಲಾವಣೆ Read More »

ಸುಳ್ಯ ಮೂಲದ ಉದ್ಯಮಿಯ ಪತ್ನಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸುಳ್ಯ ಮೂಲದ ಉದ್ಯಮಿಯೋರ್ವರ ಪತ್ನಿ ಬೆಂಗಳೂರಿನಲ್ಲಿ ಆತ್ಮಹತ್ಯೆ ಗೆ ಶರಣಾದ ಘಟನೆ ಅ.26 ರಂದು ಬೆಂಗಳೂರಿನಲ್ಲಿ ನಡೆದಿದೆ. ಕನಕಮಜಲು ಗ್ರಾಮದ , ಪ್ರಸ್ತುತ ಬೆಂಗಳೂರಿನಲ್ಲಿ ಡೈರಿ ರೀಚ್ ಐಸ್ ಕ್ರೀಂನ ಉದ್ಯಮಿಯಾಗಿರುವ ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಇವರ ಪತ್ನಿ ಐಶ್ವರ್ಯ(26) ಆತ್ಮಹತ್ಯೆಗೆ ಶರಣಾದವರು. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿಯ ಪುತ್ರಿಯಾದ ಐಶ್ವರ್ಯ ಅವರನ್ನು ರಾಜೇಶ್ ಅವರಿಗೆ ಸುಮಾರು 4 ವರ್ಷದ ಹಿಂದೆ ಮದುವೆ ಮಾಡಿ

ಸುಳ್ಯ ಮೂಲದ ಉದ್ಯಮಿಯ ಪತ್ನಿ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »

ಮಂಗಳೂರು: ಹಳಿಯಲ್ಲಿ ಮೃತದೇಹ ಮಹಜರು ವೇಳೆ ಧಾವಿಸಿ ಬಂದ‌ ರೈಲು| ಪೊಲೀಸರು ಪ್ರಾಣಾಪಾಯದಿಂದ ಜಸ್ಟ್ ಮಿಸ್!!

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ‌ ಮುಲ್ಕಿ ಕುಬೆವೂರು ರೈಲು ಸೇತುವೆ ಬಳಿ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಪತ್ತೆಯಾದ ಬಗ್ಗೆ ಮೂಲ್ಕಿ ಠಾಣೆಯ ಪೊಲೀಸ್‌ ಸಿಬ್ಬಂದಿ ಮಹಜರು ನಡೆಸುವಾಗ ರೈಲೊಂದು ಧಾವಿಸಿ ಬಂದಿದ್ದು, ಸಿಬ್ಬಂದಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಮೂಲ್ಕಿ ರೈಲು ನಿಲ್ದಾಣದ ಸಿಬ್ಬಂದಿ ಕುಮಾರ್ ಅವರ ಪುತ್ರ ವಿಶ್ಲೇಷ್ (26) ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು ಮಾಹಿತಿ ಪಡೆದ ಮೂಲ್ಕಿ ಠಾಣೆಯ ಎಎಸ್‌ಐ ಸಂಜೀವ, ಚಂದ್ರಶೇಖರ, ಶಂಕರ, ಬಸವರಾಜ್

ಮಂಗಳೂರು: ಹಳಿಯಲ್ಲಿ ಮೃತದೇಹ ಮಹಜರು ವೇಳೆ ಧಾವಿಸಿ ಬಂದ‌ ರೈಲು| ಪೊಲೀಸರು ಪ್ರಾಣಾಪಾಯದಿಂದ ಜಸ್ಟ್ ಮಿಸ್!! Read More »

ಮಂಗಳೂರು: ವಾಮಂಜೂರು ಶಾರದೋತ್ಸವದಲ್ಲಿ ಪ್ರದರ್ಶನಗೊಂಡ ಸೌಜನ್ಯಳ ಫೋಟೋ ಇದ್ದ ಟ್ಯಾಬ್ಲೋ

ಸಮಗ್ರ ನ್ಯೂಸ್: ಮಂಗಳೂರು ದಸರಾದ ಶೋಭಾ ಯಾತ್ರೆಯಲ್ಲಿ ಸೌಜನ್ಯಳ ಫೋಟೊ ಇದ್ದ ಕಾರಣಕ್ಕೆ ನಿಷೇಧಿಸಲ್ಪಟ್ಟ ಟ್ಯಾಬ್ಲೋ ಮಂಗಳೂರಿನ ವಾಮಾಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆಯಿತು. ಮಂಗಳೂರಿನ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಬೇಕಿದ್ದ ಈ ಟ್ಯಾಬ್ಲೋ ಕುದ್ರೊಳಿ ದೇವಳದ ಆಡಳಿತ ಮಂಡಳಿಯ ವಿರೋಧದಿಂದ ಕೊನೆ ಕ್ಷಣದಲ್ಲಿ ಪೊಲೀಸ್ ಅಧಿಕಾರಿಗಳು ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ತಡೆಹಿಡಿದ್ದರು, ಇದ್ದಕ್ಕೆ ವ್ಯಾಪಕ ಆಕ್ರೋಶ ಸಾರ್ವಜನಿಕ ವಲಯದಲ್ಲೂ ವ್ಯಕ್ತವಾಗಿತ್ತು. ಮಾಹಿತಿ ತಿಳಿದ ವಾಮಾಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಾಂಜೂರು ಸಾರ್ವಜನಿಕ

ಮಂಗಳೂರು: ವಾಮಂಜೂರು ಶಾರದೋತ್ಸವದಲ್ಲಿ ಪ್ರದರ್ಶನಗೊಂಡ ಸೌಜನ್ಯಳ ಫೋಟೋ ಇದ್ದ ಟ್ಯಾಬ್ಲೋ Read More »

ಸುಳ್ಯ‌ ನ.ಪಂ‌ ಉದ್ಯೋಗಿ‌ಯಿಂದ ಹುಲಿ ಉಗುರು ಹೋಲುವ ಲಾಕೆಟ್ ವಶಕ್ಕೆ ಪಡೆದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಹುಲಿ ಉಗುರನ್ನು ಹೋಲುವ ಲಾಕೆಟ್ ಧರಿಸಿದ್ದ ನಗರ ಪಂಚಾಯತ್ ಉದ್ಯೋಗಿ ಫೋಟೋ ವೈರಲ್ ಆಗಿ ಅರಣ್ಯ ಇಲಾಖೆ ಅಧಿಕಾರಿಗಳು ಲಾಕೆಟ್ ಪಡೆದುಕೊಂಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರ ಪಂಚಾಯತ್ ಉದ್ಯೋಗಿ ಶಶಿಕಲಾ ಎಂಬವರು ಹುಲಿ ಉಗುರನ್ನು ಹೋಲುವ ಲಾಕೆಟ್ ಧರಿಸಿದ್ದ ಫೋಟೋ ವೈರಲ್ ಸಾಮಾಜಿಕ ಜಾಲತಾಣದಲ್ಲಿ ಆಗಿತ್ತು. ಈ ಹಿನ್ನೆಲೆಯಲ್ಲಿ ಸುಳ್ಯ ಅರಣ್ಯ ಇಲಾಖೆ ಅಧಿಕಾರಿಗಳಿಂದ ಶಶಿಕಲಾ ಸೂಚನೆ ನೀಡಲ್ಪಟ್ಟಿದ್ದು, ವಲಯ ಅರಣ್ಯಾಧಿಕಾರಿ ಕಚೇರಿಗೆ ತೆರಳಿ ಶಶಿಕಲಾ ಲಾಕೆಟ್ ಹಸ್ತಾಂತರಿಸಿದ್ದಾರೆ. ಲಾಕೆಟ್ ನಲ್ಲಿರುವುದು

ಸುಳ್ಯ‌ ನ.ಪಂ‌ ಉದ್ಯೋಗಿ‌ಯಿಂದ ಹುಲಿ ಉಗುರು ಹೋಲುವ ಲಾಕೆಟ್ ವಶಕ್ಕೆ ಪಡೆದ ಅರಣ್ಯ ಇಲಾಖೆ Read More »