ಕರಾವಳಿ

ಸುಳ್ಯ: ಆಟೋಗೆ ಡಿಕ್ಕಿ ಹೊಡೆದ ಓಮ್ನಿ| ಆಟೋ ಚಾಲಕ ಸಾವು; ಸಹಪ್ರಯಾಣಿಕ ಗಂಭೀರ

ಸಮಗ್ರ ನ್ಯೂಸ್: ಅಟೋ ರಿಕ್ಷಾಕ್ಕೆ ಓಮ್ನಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಸುಳ್ಯದ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ. ಜಾಲ್ಸೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಜಾಲ್ಸೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂಬವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ನಿಗೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಚಾಲಕ ಬಾಬು ಪಾಟಾಳಿ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ

ಸುಳ್ಯ: ಆಟೋಗೆ ಡಿಕ್ಕಿ ಹೊಡೆದ ಓಮ್ನಿ| ಆಟೋ ಚಾಲಕ ಸಾವು; ಸಹಪ್ರಯಾಣಿಕ ಗಂಭೀರ Read More »

ಸುಳ್ಯ: ನ. 8ರಂದು ವಿದ್ಯಾಮಾತ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಉದ್ಘಾಟನೆ

ಸಮಗ್ರ ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಉದ್ಘಾಟನೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನ.8ರಂದು ಸುಳ್ಯದ ವಿದ್ಯಾಮಾತಾ ಅಕಾಡಮಿಯಲ್ಲಿ ನಡೆಯಲಿದೆ. ನಿವೃತ್ತ ಲೋಕಾಯುಕ್ತ ಜಸ್ಟಿಸ್ ಸಂತೋಷ್ ಹೆಗ್ಡೆ ಅವರು ವಿದ್ಯಾಮಾತಾ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ತರಗತಿ ಉದ್ಘಾಟಿಸುವರು ಎಂದು ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಚಂದ್ರಾವತಿ ಬಡ್ಡಡ್ಕ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೆಪ್ಟೆಂಬರ್ 28

ಸುಳ್ಯ: ನ. 8ರಂದು ವಿದ್ಯಾಮಾತ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಉದ್ಘಾಟನೆ Read More »

ಕಡಬ: ಗಂಡ-ಹೆಂಡತಿ ಜಗಳ ವಿಷಸೇವನೆಯಲ್ಲಿ ಅಂತ್ಯ| ಪತ್ನಿ‌ ಸಾವು; ಪತಿ ಸ್ಥಿತಿ ಚಿಂತಾಜನಕ

ಸಮಗ್ರ ನ್ಯೂಸ್: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಅನ್ನುತ್ತಾರೆ. ಆದರೆ ಇಲ್ಲಿ ಗಂಡ –ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಸಾವಿನಲ್ಲಿ ಅಂತ್ಯವಾಗಿದೆ. ಈ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪೆಲ್ಲ ಎಂಬಲ್ಲಿ ನ.04ರಂದು ಸಂಜೆ ನಡೆದಿದ್ದು, ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ನಿವಾಸಿಗಳಾದ ಸಂಜೀವ ಮತ್ತು ಕುಸುಮ ದಂಪತಿ ನಡುವೆ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಶನಿವಾರ ಕೂಡ ಮಾತಿಗೆ ಮಾತು ಬೆಳೆದಿದೆ. ಕೋಪದ ಭರದಲ್ಲಿ

ಕಡಬ: ಗಂಡ-ಹೆಂಡತಿ ಜಗಳ ವಿಷಸೇವನೆಯಲ್ಲಿ ಅಂತ್ಯ| ಪತ್ನಿ‌ ಸಾವು; ಪತಿ ಸ್ಥಿತಿ ಚಿಂತಾಜನಕ Read More »

ಸುಳ್ಯ: ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ವರದಿಯಾಗಿದೆ. ಪಂಜ ಸಮೀಪದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಮತ್ತು ಹೊನ್ನಮ್ಮ ದಂಪತಿಯ ಪುತ್ರ ಬಿಪಿನ್ ಚಿದ್ಗಲ್ಲು ಸಮುದ್ರ ಪಾಲಾದ ಯುವಕ. ಬಿಪಿನ್ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ನಿನ್ನೆ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದು, ಇಂದು(ನ.5) ಅಲ್ಲಿ ಬೀಚ್‌ಗೆ ಹೋಗಿದ್ದ ವೇಳೆ ಸಮುದ್ರ ಪಾಲಾಗಿದ್ದಾನೆ. ಆತನ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಊರಿಗೆ ತರುವ ಪ್ರಕ್ರಿಯೆ ನಡೆಯುತ್ತಿದೆ.

ಸುಳ್ಯ: ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು Read More »

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ.

ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 8310148064 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಏನಿದು ಬ್ರೈಟ್ ಭಾರತ್!?ಬ್ರೈಟ್ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. Read More »

ಬೆಳ್ಳಾರೆ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ವಿಶೇಷ ರಿಯಾಯಿತಿ ಮಾರಾಟ| ಈಗಲೇ ಭೇಟಿ ನೀಡಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನಲ್ಲೇ ಪ್ರಸಿದ್ಧಿ ಪಡೆದಿರುವ, ಜವುಳಿ ಉದ್ಯಮದಲ್ಲಿ ಸದಾ ಹೊಸತನ ಪರಿಚಯಿಸುತ್ತಾ, ಬೆಳ್ಳಾರೆಯ ಹೃದಯ ಭಾಗದಲ್ಲಿರುವ ಪ್ರತಿಷ್ಟಿತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ಮದುವೆ ಸಂಭ್ರಮ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ 5ರಿಂದ 10℅ ವಿಶೇಷ ರಿಯಾಯಿತಿ ಸೇಲ್ ಪ್ರಾರಂಭಗೊಂಡಿದೆ. 1972 ರಲ್ಲಿ ಸ್ಥಾಪನೆಗೊಂಡ ಜವುಳಿ ಮಳಿಗೆ ಇಂದು ನೂತನ ಸುಸಜ್ಜಿತ ವಿಶಾಲವಾದ, ಉತ್ಕೃಷ್ಟ ಗುಣಮಟ್ಟದ ಸೇವೆಯನ್ನು ನೀಡುತ್ತ ಜನಮನ ಗೆದ್ದಿದೆ. ಪ್ರಸಾದ್ ಟೆಕ್ಸ್ ಟೈಲ್ಸ್ ಗೆ ಸುಳ್ಯ ತಾಲೂಕಿನ ಗ್ರಾಹಕರು ಮಾತ್ರವಲ್ಲದೆ, ಹೊರ

ಬೆಳ್ಳಾರೆ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ವಿಶೇಷ ರಿಯಾಯಿತಿ ಮಾರಾಟ| ಈಗಲೇ ಭೇಟಿ ನೀಡಿ Read More »

ಇಸ್ರೋ ಸಂಸ್ಥೆಯ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನವೆಂಬರ್ 9 ರಂದು ಸುಳ್ಯಕ್ಕೆ ಆಗಮಿಸಲಿದೆ

ಸಮಗ್ರ ನ್ಯೂಸ್: ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೋದ ಸಾಧನೆಗಳನ್ನು ಪರಿಚಯಿಸುವ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನವೆಂಬರ್ 7 ರಿಂದ 9 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಲಿದೆ. ನವೆಂಬರ್ 9 ರಂದು ಸುಳ್ಯಕ್ಕೆ ಆಗಮಿಸಿ ಸುಳ್ಯದ ಜೂನಿಯರ್ ಕಾಲೇಜಿನ (ಸರಕಾರಿ ಪದವಿ ಪೂರ್ವ ಕಾಲೇಜು) ಮೈದಾನದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವೀಕ್ಷಣೆಗೆ ಲಭ್ಯವಿದೆ. ದಕ್ಷಿಣ ಕನ್ನಡ ವಿಜ್ಞಾನ ಪ್ರತಿಷ್ಠಾನ ಮತ್ತು ಕರ್ನಾಟಕ ರಾಜ್ಯ

ಇಸ್ರೋ ಸಂಸ್ಥೆಯ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನವೆಂಬರ್ 9 ರಂದು ಸುಳ್ಯಕ್ಕೆ ಆಗಮಿಸಲಿದೆ Read More »

ಕೆ.ವಿ.ಜಿ.ಪಾಲಿಟೆಕ್ನಿಕ್ : ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ”ದ ಆಚರಣೆ

ಸುಳ್ಯದ ಕೆ.ವಿ.ಜಿ.ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ” ಆಚರಣೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ.ಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ವೇದಿಕೆಯಲ್ಲಿ ವಿಭಾಗ ಮುಖ್ಯಸ್ಥರುಗಳಾದ ದೇವರಾಜ್ ಜಿ.ಕೆ, ರಮಾದೇವಿ, ಯತೀಶ್ ಕೆ.ಎನ್, ಬಿಂದು ಕೆ.ವಿ.ವಿದ್ಯಾರ್ಥಿ ಕ್ಷೇಮಾಧಿಕಾರಿ ಸುನಿಲ್ ಕುಮಾರ್ ಎನ್.ಪಿ ಉಪಸ್ಥಿತರಿದ್ದರು. ಸಿವಿಲ್ ವಿಭಾಗದ ಶಿಕ್ಷಕ ನಾರಾಯಣ ಪಾಟಾಳಿ ಕಾರ್ಯಕ್ರಮ ಸಂಘಟಿಸಿ, ನಿರೂಪಿಸಿದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸಂಘಟನೆಗೆ ಸಹಕರಿಸಿದರು.ವಿದ್ಯಾರ್ಥಿಗಳಿಂದ ಕನ್ನಡ ಗೀತ ಗಾಯನ ಹಾಗೂ ಭಾಷಣ ಕಾರ್ಯಕ್ರಮ ನಡೆಯಿತು.

ಕೆ.ವಿ.ಜಿ.ಪಾಲಿಟೆಕ್ನಿಕ್ : ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ”ದ ಆಚರಣೆ Read More »

ಸುಳ್ಯದ ಪರಿವಾರಕಾನ ಬಳಿ ಕುಸಿದ ಭೂಮಿ| ಅವೈಜ್ಞಾನಿಕ ಕಾಮಗಾರಿ ಶಂಕೆ!?

ಸಮಗ್ರ ನ್ಯೂಸ್: ಸುಳ್ಯದ ಪರಿವಾರಕಾನದಲ್ಲಿನ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗದಲ್ಲಿ ಸುಮಾರು ಹತ್ತು ಅಡಿಯಷ್ಟು ಉದ್ದಕ್ಕೆ ಗುಂಡಿ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ. ಈ ಫೋಟೋ ಹಾಗೂ ವಿಡಿಯೋ ಎಲ್ಲ ಕಡೆ ವೈರಲ್ ಆಗುತ್ತಿದ್ದು, ಏಕಾಏಕಿ ಭೂಮಿ ಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಶಂಕೆ ಉಂಟಾಗಿದೆ. ಸುಳ್ಯದಲ್ಲಿ ಜೋರಾದ ಮಳೆ‌ ಸುರಿದಿದ್ದು, ಈ ಹಿನ್ನಲೆಯಲ್ಲಿ ಭೂಕುಸಿತ ಆಗಿದೆ ಎನ್ನುವುದು ಕೆಲವರ ಹೇಳಿಕೆ. ಆದರೆ ಇಂಟರ್ ಲಾಕ್ ಅಳವಡಿಸಿರುವ ಭೂಮಿಯಡಿ ನೀರು ರಭಸವಾಗಿ ನುಗ್ಗದಿದ್ದರೂ ಭೂಕುಸಿತ ಹೇಗೆ ಸಂಭವಿಸಿತು ಎನ್ನುವುದು

ಸುಳ್ಯದ ಪರಿವಾರಕಾನ ಬಳಿ ಕುಸಿದ ಭೂಮಿ| ಅವೈಜ್ಞಾನಿಕ ಕಾಮಗಾರಿ ಶಂಕೆ!? Read More »

ವಿಹರಿಸಲು ಒಲ್ಲೆನೆಂದ ಪ್ರಿಯತಮೆ|ಅವಳು ತಂಗಿದ್ದ ಪಿಜಿಗೆ ಕಲ್ಲೆಸೆತ| ಸುಳ್ಯದ ಯುವಕನಿಗೆ ಮಂಗ್ಳೂರಲ್ಲಿ ಸಿಕ್ತು ಬಿಸಿಬಿಸಿ ಕಜ್ಜಾಯ

ಸಮಗ್ರ ನ್ಯೂಸ್: ಪ್ರೀತಿಸುತ್ತಿದ್ದ ಯುವತಿ ತಿರುಗಾಡಲು ಬರಲಿಲ್ಲ ಎಂದು ಕೋಪಗೊಂಡು ಆಕೆಯ ಪಿಜಿಗೆ ಕಲ್ಲೆಸೆದ ಯುವಕನಿಗೆ ಸಾರ್ವಜನಿಕರಿಂದ ಧರ್ಮದೇಟು ನೀಡಿದ ಘಟನೆ ಮಂಗಳೂರು ನಗರದಲ್ಲಿ ಸಂಭವಿಸಿದೆ. ಸುಳ್ಯ ನಿವಾಸಿ ಲೈಟಿಂಗ್ ಕೆಲಸ ಮಾಡುತ್ತಿದ್ದ ವಿವೇಕ್ (18) ಎಂಬಾತ ಬೆಂದೂರು ಬಳಿ ಪಿಜಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಐನ್ನು ಪ್ರೀತಿಸುತ್ತಿದ್ದ. ಗುರುವಾರ ಸಂಜೆ ಆಕೆ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಬಂದು ತನ್ನ ಜತೆ ತಿರುಗಾಡಲು ಬರುವಂತೆ ಕರೆ ಮಾಡಿದ್ದಾನೆ. ಆದರೆ, ಯುವತಿ ಆತನೊಂದಿಗೆ ಸುತ್ತಾಟಕ್ಕೆ ಬರಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ

ವಿಹರಿಸಲು ಒಲ್ಲೆನೆಂದ ಪ್ರಿಯತಮೆ|ಅವಳು ತಂಗಿದ್ದ ಪಿಜಿಗೆ ಕಲ್ಲೆಸೆತ| ಸುಳ್ಯದ ಯುವಕನಿಗೆ ಮಂಗ್ಳೂರಲ್ಲಿ ಸಿಕ್ತು ಬಿಸಿಬಿಸಿ ಕಜ್ಜಾಯ Read More »