ಕರಾವಳಿ

ಪುತ್ತೂರು: MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ| ಪುತ್ತಿಲ ಪರಿವಾರದ ಮುಖಂಡ ರಾಜಶೇಖರ ವಿರುದ್ಧ FIR

ಸಮಗ್ರ ನ್ಯೂಸ್: ಬಿಜೆಪಿಯಲ್ಲಿ ಎಂ. ಎಲ್. ಎ. ಟಿಕೆಟ್ ಕೊಡಿಸುವುದಾಗಿ ಸಿ. ಶಿವಮೂರ್ತಿ ಎಂಬ ವ್ಯಕ್ತಿಗೆ ನಂಬಿಸಿ, ರಾಜ್ ಶೇಖರ್ ತನ್ನ ಖಾತೆಗೆ ಎರಡು ಕೋಟಿಗೂ ಅಧಿಕ ಹಣ ವರ್ಗಾವಣೆ ಮಾಡಿಸಿಕೊಂಡು, ಸುಮಾರು ಒಟ್ಟು 2.50 ಕೋಟಿ ರೂಪಾಯಿ ವಂಚನೆ ಮಾಡಿದ ಬಗ್ಗೆ ವಿಜಯನಗರ ಪೋಲೀಸರಿಗೆ ಈಗ ದೂರು ನೀಡಿದ್ದಾರೆ. ಹಾಗೂ ಬೆಂಗಳೂರಿನ‌ಲ್ಲಿ ಪೋಲೀಸ್ ಮಹಾನಿರ್ದೇಶಕರು, ಸನ್ಮಾನ್ಯ ಮುಖ್ಯಮಂತ್ರಿಗಳಿಗೂ ದೂರು ನೀಡಿದ್ದಾರೆ. ಸಿದ್ದಲಿಂಗಪ್ಪ ಎಂಬ ವ್ಯಕ್ತಿಗೆ ವಿಜಯನಗರ ಜಿಲ್ಲೆಯ ಹರಿಗಬೊಮ್ಮನ ಹಳ್ಳಿಯ ಎಂಬ‌ ಮೀಸಲು ವಿಧಾನಸಭಾ ಕ್ಷೇತ್ರದ […]

ಪುತ್ತೂರು: MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ| ಪುತ್ತಿಲ ಪರಿವಾರದ ಮುಖಂಡ ರಾಜಶೇಖರ ವಿರುದ್ಧ FIR Read More »

ಸುಳ್ಯ: ಕನಕಮಜಲು ಸ್ವರ್ಣ ಮಹಿಳಾ ಮಂಡಲದ ಆಶ್ರಯದಲ್ಲಿ ಆರೋಗ್ಯ ಅರಿವು ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯದ ಕನಕಮಜಲು ಸ್ವರ್ಣ ಮಹಿಳಾ ಮಂಡಲ ಇದರ ಆಶ್ರಯದಲ್ಲಿ ಕನಕಮಜಲು ಶ್ರೀ ಆತ್ಮರಾಮ ಭಜನಾ ಮಂದಿರದ ಸಭಾಭವನದಲ್ಲಿ ಅ. 21 ರಂದು ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು. ಸುಳ್ಯ ವಿಧಾನಸಭಾ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ಸ್ವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕುಸುಮ ಶೇಷಪ್ಪ ಅಡ್ಕಾರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನಕಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದ ಉಗ್ಗಮೂಲೆ, ಸುಳ್ಯ ಆರೋಗ್ಯ ಇಲಾಖೆ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ.

ಸುಳ್ಯ: ಕನಕಮಜಲು ಸ್ವರ್ಣ ಮಹಿಳಾ ಮಂಡಲದ ಆಶ್ರಯದಲ್ಲಿ ಆರೋಗ್ಯ ಅರಿವು ಕಾರ್ಯಕ್ರಮ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಶಾರದಾ ಪೂಜೆ, ಆಯುಧ ಪೂಜೆ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ಕಾಲೇಜಿನ ವಿದ್ಯಾರ್ಥಿ ಪರಿಷತ್ತಿನ ವತಿಯಿಂದ ಅ. 21ರಂದು ಶಾರದಾ ಪೂಜೆ ಹಾಗೂ ಆಯುಧ ಪೂಜೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ 10 ಗಂಟೆಯಿಂದ 12ರ ವರೆಗೆ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪ್ರತಿ ವಿದ್ಯಾರ್ಥಿಗಳಿಂದ ತರಲ್ಪಟ್ಟ ಪುಸ್ತಕಗಳಿಗೆ ಪೂಜೆಯನ್ನು ನೆರವೇರಿಸಲಾಯಿತು. ನಂತರ ಕಾಲೇಜಿನ ಗ್ರಂಥಾಲಯ, ಪ್ರಯೋಗಾಲಯ ಹಾಗೂ ಜಿಮ್ ಗಳಿಗೆ ಪೂಜೆ ಮಾಡಲಾಯಿತು. ಕಾಲೇಜಿನ ಆಯುಧಗಳಿಗೆ ಪೂಜೆಯನ್ನು ಪೂರ್ಣಗೊಳಿಸಿ, ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ವಾಹನಗಳಿಗೆ ಪೂಜೆ ಮಾಡಿ, ಎಲ್ಲರಿಗೂ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಶಾರದಾ ಪೂಜೆ, ಆಯುಧ ಪೂಜೆ Read More »

75 ವರ್ಷದ ಹಳೆಯ ಲಾರಿ/ ಇನ್ನು ಮುಂದೆ ಮಂಜೂಷಾದಲ್ಲಿ ಪ್ರದರ್ಶನಕ್ಕೆ

ಸಮಗ್ರ ನ್ಯೂಸ್: 1948ರಲ್ಲಿ ಫೋರ್ಡ್ ಕಂಪನಿಯು ಎಂ ಸೀರೀಸ್‍ನ ಲಾರಿಯು ಧರ್ಮಸ್ಥಳ ಕ್ಷೇತ್ರದ ಸರಕು ಸಾಗಾಣಿಕೆಯಲ್ಲಿ 30 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದು, ನಂತರ ಬಿಡಿ ಭಾಗದ ಕೊರತೆಯಿಂದ ತನ್ನ ಸೇವೆಯನ್ನು ನಿಲ್ಲಿಸಿತ್ತು. ಇದೀಗ ಈ ಲಾರಿಯು ಹೊಸ ವಿನ್ಯಾಸದೊಂದಿಗೆ ವಿಂಟೇಜ್ ಲುಕ್‍ನಲ್ಲಿ ಸಿದ್ದವಾಗಿದ್ದು, ಮಂಜೂಷಾ ಮ್ಯೂಸಿಯಂ ಸೇರಿಕೊಂಡಿದೆ. ಅದ್ಭುತವಾಗಿ ವಿನ್ಯಾಸಗೊಂಡಿರುವ ಈ ವಾಹನದ ನೀಲನಕ್ಷೆಯನ್ನು ಸ್ವತಃ ವೀರೇಂದ್ರ ಹೆಗ್ಗಡೆಯವರೇ ತಯಾರಿಸಿದ್ದಾರೆ ಎನ್ನಲಾಗಿದೆ.

75 ವರ್ಷದ ಹಳೆಯ ಲಾರಿ/ ಇನ್ನು ಮುಂದೆ ಮಂಜೂಷಾದಲ್ಲಿ ಪ್ರದರ್ಶನಕ್ಕೆ Read More »

ಸುಳ್ಯ: ನಂದಾ ಎಲೆಕ್ಟ್ರಾನಿಕ್ಸ್ ಸ್ಥಳಾಂತರಗೊಂಡು ಶುಭಾರಂಭ

ಸಮಗ್ರ ನ್ಯೂಸ್:ಸುಳ್ಯದ ಗಾಂಧಿನಗರದಲ್ಲಿ 24 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ನಂದಾ ಎಲೆಕ್ಟ್ರಾನಿಕ್ಸ್ ಈಗ ಗ್ರಾಹಕರ ಹೆಚ್ಚಿನ ಅನುಕೂಲಕ್ಕಾಗಿ ಚೆನ್ನಕೇಶವ ದೇವಸ್ಥಾನದ ಹತ್ತಿರ ಇರುವ ಆಶೀರ್ವಾದ ಕಾಂಪ್ಲೆಕ್ಸ್ ಗೆ ಅ.20 ರಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಬೆಳಿಗ್ಗೆ ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭದಲ್ಲಿ ಮಾಲಕ ಸತ್ಯಾನಂದ ಕುರುಂಜಿ ಹಾಗೂ ಮನೆಯವರು, ಸಿಬ್ಬಂದಿಗಳು, ಗಣ್ಯರು ಉಪಸ್ಥಿತರಿದ್ದರು.

ಸುಳ್ಯ: ನಂದಾ ಎಲೆಕ್ಟ್ರಾನಿಕ್ಸ್ ಸ್ಥಳಾಂತರಗೊಂಡು ಶುಭಾರಂಭ Read More »

ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಹೊಸ್ತಾರೋಗಣೆ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಹೊಸ್ತಾರೋಗಣೆ ಮತ್ತು ಕದಿರು ಕಟ್ಟುವ ಕಾರ್ಯ ಶುಕ್ರವಾರ ಶ್ರದ್ಧಾ ಭಕ್ತಿಯಿಂದ ನಡೆಯಿತು.ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಸುಬ್ರಹ್ಮಣ್ಯ ದೇವರ ಮೂಲ ವಿಗ್ರಹಕ್ಕೆ ಪಂಚಾಮೃತಾಭಿಷೇಕ ನೆರವೇರಿಸಿದರು. ಅಭಿಷೇಕದ ಬಳಿಕ ತೆನೆ ತರಲು ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ದರ್ಪಣತೀರ್ಥ ನದಿ ತೀರಕ್ಕೆ ತೆರಳಿದರು. ನದಿ ತಟದಲ್ಲಿ ಭತ್ತದ ತೆನೆಗೆ ಅರ್ಚಕರು ಪೂಜೆ ನೆರವೇರಿಸಿದರು. ಬತ್ತದ ತೆನೆಯನ್ನು ದೀವಟಿಗೆ, ಬ್ಯಾಂಡ್, ವಾದ್ಯದ ನಿನಾದದೊಂದಿಗೆ, ಆನೆ, ಬಿರುದಾವಳಿಗಳ ಮೂಲಕ ಮಂತ್ರಘೋಷದೊಂದಿಗೆ ಮೆರವಣಿಗೆಯಲ್ಲಿ ದೇವಳಕ್ಕೆ

ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಹೊಸ್ತಾರೋಗಣೆ Read More »

ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆದು ರೆಕಾರ್ಡ್ ನಿರ್ಮಿಸಿದ ಕುಕ್ಕೆ ಸುಬ್ರಹ್ಮಣ್ಯದ ಕಲಾವಿದ

ಸಮಗ್ರ ನ್ಯೂಸ್: ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆಯುವ ಮೂಲಕ ಕುಕ್ಕೆ ಸುಬ್ರಹ್ಮಣ್ಯದ ಕಲಾವಿದ ಮೈಕ್ರೊ ಪರಮೇಶ್ ಇಂಡಿಯಾ ಬುಕ್ ಆಪ್ ರೆಕಾರ್ಡ್‌ ಸೇರಿದ್ದಾರೆ. ನಾಡಗೀತೆ ಬರೆಯಲು 136 ಅಕ್ಕಿ ಕಾಳು ಹಾಗೂ 2 ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಕಡಿಮೆ ಅವಧಿಯಲ್ಲಿ, ಕಡಿಮೆ ಅಕ್ಕಿ ಕಾಳುಗಳನ್ನು ಬಳಸಿಕೊಂಡು ಈ ದಾಖಲೆ ಮಾಡಿರುವುದು ಅವರ ಸಾಧನೆಯಾಗಿದೆ. ಇಂಡಿಯಾ ಬುಕ್ ಆಪ್ ರೆಕಾರ್ಡ್‌ ಸಂಸ್ಥೆಯುವರು ಇತ್ತೀಚೆಗೆ ಕುಕ್ಕೆಗೆ ಬಂದು ಪರಮೇಶ ಅವರ ಸಾಧನೆಯನ್ನು ವೀಡಿಯೊ ದಾಖಲೆ ಮಾಡಿಕೊಂಡು ಹೋಗಿದ್ದರು. ಗುರುವಾರ ಸಂಸ್ಥೆಯು

ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆದು ರೆಕಾರ್ಡ್ ನಿರ್ಮಿಸಿದ ಕುಕ್ಕೆ ಸುಬ್ರಹ್ಮಣ್ಯದ ಕಲಾವಿದ Read More »

ಕಾಣಿಯೂರು: ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ನಾಲ್ಕನೇ ಸ್ಥಾನ

ಸಮಗ್ರ ನ್ಯೂಸ್: ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಬೆಂಗಳೂರು ವಿಭಾಗ ಮಟ್ಟದ ಯೋಗಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ನಾಲ್ಕನೇ ಸ್ಥಾನ. ಇವರು ಕಾಣಿಯೂರು ಪ್ರಗತಿ ವಿದ್ಯದಸಂಸ್ಥೆಯ ಆರನೇ ತರಗತಿ ವಿದ್ಯಾರ್ಥಿ. ಹಾಗೂ ಯೋಗ ಶಿಕ್ಷಕಿ ಶಶಿಕಲಾ ಅವರ ವಿದ್ಯಾರ್ಥಿ.

ಕಾಣಿಯೂರು: ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ನಾಲ್ಕನೇ ಸ್ಥಾನ Read More »

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್, ವೀಲ್ ಚೇರ್ ಹಸ್ತಾಂತರ

ಸಮಗ್ರ ನ್ಯೂಸ್:ಸುಳ್ಯ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ನೀಡಲಾದ ವಾಟರ್ ಬೆಡ್ ಮತ್ತು ವೀಲ್ ಚೇರ್ ಅನ್ನು ವಲಯ ಮೇಲ್ವಿಚಾರಕ ಗೋಪಾಲಕೃಷ್ಣ ಅವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಸುಳ್ಯ ತಾಲೂಕಿನ ಐವರ್ನಾಡು ಒಕ್ಕೂಟದ ಕೋಡ್ತಿಲು ಸ್ವರ್ಣಗೌರಿ ಸಂಘದ ಸದಸ್ಯ ಮಲ್ಲು ರವರ ತಾಯಿ ಚೋಮು ಅವರಿಗೆ ಹಾಗೂ ಐವರ್ನಾಡು ಗ್ರಾಮದ ಪಾಲೇಪ್ಪಾಡಿ ಒಕ್ಕೂಟದ ಅಧ್ಯಕ್ಷ ರಾಮಚಂದ್ರರವರ ತಾಯಿ ಸೀತಮ್ಮ ಅವರಿಗೆ ವಾಟರ್ ಬೆಡ್ ಮತ್ತು ಶ್ರೀ ಲಕ್ಷ್ಮೀ ಸ್ವ ಸಹಾಯ ಸಂಘದ ಸದಸ್ಯೆ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್, ವೀಲ್ ಚೇರ್ ಹಸ್ತಾಂತರ Read More »

ಸುಳ್ಯ: ಗಣಪತಿ ಕಲಾ ಕೇಂದ್ರದವರಿಂದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ವ್ಯಾಘ್ರಚಾಮುಂಡಿ ದೇವಸ್ಥಾನ ಕಾಯರ್ತೋಡಿಯಲ್ಲಿ ನವರಾತ್ರಿ ಉತ್ಸವದ 5ನೇ ದಿನದಂದು ಶ್ರೀ ಗಣಪತಿ ಕಲಾ ಕೇಂದ್ರ ಸುಳ್ಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಹಾರ್ಮೋನಿಯಂನಲ್ಲಿ ಶಿವಾನಂದ ಉಪ್ಪಲ, ತಬಲದಲ್ಲಿ ವಿನೋದ್ ಅರಂಬೂರು, ಕೊಳಲು ವಾದನದಲ್ಲಿ ಜಯರಾಂ ಶಾಂತಿನಗರ ಸಹಕರಿಸಿದರು. ಗಾಯಕರಾಗಿ ಯೋಗೀಶ್ ಎಸ್. ಜಯನಗರ, ಲಕ್ಷ್ಮೀನಾರಾಯಣ, ಚಂದ್ರಶೇಖರ ಮೇನಾಲ, ವಸುಚರಣ್ ಶಾಂತಿನಗರ,ವಿಜೇಶ್ ಬೊಳುಬೈಲು, ಕೀರ್ತನ ಜಯನಗರ, ವಿದ್ಯಾ ಅರಂಬೂರು ಭಾಗವಹಿಸಿದ್ದರು.

ಸುಳ್ಯ: ಗಣಪತಿ ಕಲಾ ಕೇಂದ್ರದವರಿಂದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ Read More »