ಕರಾವಳಿ

ವಿಟ್ಲದ ಕೊಟ್ಟಾರಿಕಟ್ಟೆ ಬಸ್ ನಿಲ್ದಾಣದಲ್ಲಿ ದನದ ಕಿವಿ!! ಗೋಮಾತೆಯ ಮೇಲೆ ವಿಕೃತಿ ಮೆರೆದವರಿಗೆ ಶೋಧ

ಸಮಗ್ರ ನ್ಯೂಸ್: ದುಷ್ಕರ್ಮಿಗಳು ದನದ ಕಿವಿ ಕತ್ತರಿಸಿ ಬಿಸಾಕಿದ ಘಟನೆ‌ ವಿಟ್ಲದ ಕೆಲಿಂಜ ಕೊಟ್ಟಾರಿ ಕಟ್ಟೆ ಬಸ್ಸು ನಿಲ್ದಾಣದ ಬಳಿ ಅ. 20 ರಂದು ಬೆಳಕಿಗೆ ಬಂದಿದೆ. ವೀರಕಂಭ ಗ್ರಾಮದ ಕೊಟ್ಟಾರಿ ಕಟ್ಟೆ ಬಸ್ ನಿಲ್ದಾಣದ ಬಳಿ ಅ. 20ರಂದು ಮುಂಜಾನೆ ಕತ್ತರಿಸಿದ ದನದ ಕಿವಿ ಮತ್ತು ಚರ್ಮ ಪತ್ತೆಯಾಗಿದೆ. ಸ್ಥಳೀಯರು ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಸೇರಿದ್ದು, ಈ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಡಹಬ್ಬ ದಸರಾ ಮತ್ತು […]

ವಿಟ್ಲದ ಕೊಟ್ಟಾರಿಕಟ್ಟೆ ಬಸ್ ನಿಲ್ದಾಣದಲ್ಲಿ ದನದ ಕಿವಿ!! ಗೋಮಾತೆಯ ಮೇಲೆ ವಿಕೃತಿ ಮೆರೆದವರಿಗೆ ಶೋಧ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಧ್ಯಯನ ಭೇಟಿ.

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯಹಾಗೂ ಉದ್ಯಮಾಡಳಿತ ವಿಭಾಗದ ವಿದ್ಯಾರ್ಥಿಗಳಿಂದ ಅಧ್ಯಯನ ಭೇಟಿ. ಕುಕ್ಕೇ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದಿಂದ ಅ.16ರಂದು ಜಿ.ಕೆ.ಬಯೋ ಪ್ಲೇಟ್ಸ್ ಕೆಂಜಾಲ ಕೈಗಾರಿಕಾ ಸಂಸ್ಥೆಗೆ ಅಧ್ಯಯನ ಭೇಟಿ ನೀಡಲಾಯಿತು. ಜಿ.ಕೆ. ಬಯೋಪ್ಲೇಟ್ಸ್ ಮಾಲೀಕರಾದ ಗೊಪಾಲಕೃಷ್ಣ ಭಟ್ ಹಾಗೂ ವಿದ್ಯಾಭಟ್ ವಿಧ್ಯಾರ್ಥಿ ಗಳಿಗೆ ಉತ್ಪಾದನ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿದರು. ವಾಣಿಜ್ಯ ಹಾಗೂ ಉದ್ಯಮಾಡಳಿತ ಉಪನ್ಯಾಸಕರದ ಶ್ರೀಮತಿ ಪುಷ್ಪ ಡಿ ಹಾಗೂ ಶ್ರೀಮತಿ ಪ್ರಮಿಳಾ ಅಧ್ಯಯನ ಭೇಟಿಯನ್ನು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಧ್ಯಯನ ಭೇಟಿ. Read More »

ಉಜಿರೆ: ಹುಟ್ಟುಹಬ್ಬದಂದೇ ದಿ. ಸೌಜನ್ಯಳ ಮೂರ್ತಿ ಪ್ರತಿಷ್ಟಾಪನೆ| ದೇವಿಯಾಗಿ ಆವೀರ್ಭವಿಸಲಿ ಎಂದು ಪ್ರಾರ್ಥನೆ|

ಸಮಗ್ರ ನ್ಯೂಸ್: 2012ರಲ್ಲಿ ಅತ್ಯಾಚಾರಿಗಳ ಅಟ್ಟಹಾಸಕ್ಕೆ ಬಲಿಯಾದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಳ 28ನೇ ವರ್ಷದ ಹುಟ್ಟುಹಬ್ಬದಂದು ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಸೌಜನ್ಯ ಜೀವಂತವಾಗಿದ್ದರೆ ಆಕೆ ತನ್ನ 28ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಳು. ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನಲ್ಲಿ ನಿರ್ಮಿಸಿದ ಅಂದಾಜು ಒಂದುವರೆ ಅಡಿ ಎತ್ತರದ ಕೂತಿರುವ ಶೈಲಿಯ ಕಲ್ಲಿನ ಪ್ರತಿಮೆ ಪ್ರತಿಷ್ಠಾಪನೆಗೊಳಿಸಿ ನವರಾತ್ರಿ ಪ್ರಯುಕ್ತ 9 ತಂಡದ ಭಜನೋತ್ಸವ ನಡೆಯಿತು. ಬುಧವಾರ ಸೌಜನ್ಯ ನಿವಾಸದಲ್ಲಿ ಆಕೆಯ ಸಮಾಧಿ ಬಳಿ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಆ ಸಂದರ್ಭ ಹಲವು

ಉಜಿರೆ: ಹುಟ್ಟುಹಬ್ಬದಂದೇ ದಿ. ಸೌಜನ್ಯಳ ಮೂರ್ತಿ ಪ್ರತಿಷ್ಟಾಪನೆ| ದೇವಿಯಾಗಿ ಆವೀರ್ಭವಿಸಲಿ ಎಂದು ಪ್ರಾರ್ಥನೆ| Read More »

ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ಐವರ ಮೇಲೆ ಹರಿದ ಕಾರು|ಓರ್ವ ಮೃತ್ಯು, ನಾಲ್ವರು ಗಂಭೀರ

ಸಮಗ್ರ ನ್ಯೂಸ್: ಮಂಗಳೂರಿನ ಲೇಡಿ ಹಿಲ್‌ ಬಳಿ ಫುಟ್ ಪಾತ್‌ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐವರು ಯುವತಿಯರ ಗುಂಪಿನ ಮೇಲೆ ವಾಹನ ಹರಿಸಿ ಒರ್ವ ಮಹಿಳೆ ಸಾವನ್ನಪ್ಪಿದ್ದು ಒರ್ವ ಬಾಲಕಿ ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರೂಪಶ್ರೀ(23) ಎಂಬ ಯುವತಿ ಸಾವನ್ನಪ್ಪಿದ್ದಾರೆ. ಸುರತ್ಕಲ್ ನ ಕಾನ, ಬಾಳದ ಗಂಗಾಧರ್ ಅವರ ಪುತ್ರಿಯಾದ ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದರೆಂದು ತಿಳಿದುಬಂದಿದೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ಐವರ ಮೇಲೆ ಹರಿದ ಕಾರು|ಓರ್ವ ಮೃತ್ಯು, ನಾಲ್ವರು ಗಂಭೀರ Read More »

ಬೆಳ್ತಂಗಡಿ:ಪಿಕಪ್ ಡಿಕ್ಕಿ | ಬಾಲಕ ಸಾವು

ಸಮಗ್ರ ನ್ಯೂಸ್:ರಸ್ತೆ ದಾಟುತ್ತಿರುವ ವೇಳೆ ಪಿಕಪ್‌ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬಾಲಕ ಸಾವನ್ನಪ್ಪಿದ ಘಟನೆ ಅ. 18ರಂದು ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಅರ್ತಿಲಾ ಮನೆಯ ಮಹಮ್ಮದ್ ರಫೀಕ್ ಅವರ ಮಗ ಮಹಮ್ಮದ್ ರಂಝಿನ್(10) ಶಾಲಾ ರಜೆಯ ಹಿನ್ನಲೆ ಸಂಬಂಧಿಕರ ಮನೆಗೆ ಬಂದಿದ್ದು, ಅ. 18ರಂದು 11:50ರ ಸುಮಾರಿಗೆ ಅಂಗಡಿಗೆ ಹೋಗಿ ವಾಪಾಸ್‌ ರಸ್ತೆ ದಾಟುವಾಗ ಲಾಯಿಲ ಜಂಕ್ಷನ್‌ ಬಳಿ ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬಂದ ಪಿಕಪ್ ವಾಹನ

ಬೆಳ್ತಂಗಡಿ:ಪಿಕಪ್ ಡಿಕ್ಕಿ | ಬಾಲಕ ಸಾವು Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ| ಉಡುಪಿ ಕೃಷ್ಣ ಮಠವೂ ಉಗ್ರರ ಹಿಟ್ ಲಿಸ್ಟ್ ನಲ್ಲಿ!! ತನಿಖೆಯಲ್ಲಿ ಬಹಿರಂಗವಾಯ್ತು ಆತಂಕಕಾರಿ ಸಂಗತಿ

ಸಮಗ್ರ ನ್ಯೂಸ್: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ತನಿಖೆಯಿಂದ ಉಗ್ರಗಾಮಿ ಸಂಘಟನೆಯ ಸಂಚುಕೋರರ ಒಂದೊಂದೇ ಭಯಾನಕ ಪ್ಲಾನ್‌ಗಳು ಹೊರಬೀಳುತ್ತಿದ್ದು, ಉಡುಪಿಯ ಶ್ರೀ ಕೃಷ್ಣ ಮಠವು ಕೂಡ ಶಂಕಿತ ಉಗ್ರರ ಟಾರ್ಗೆಟ್‌ ಆಗಿತ್ತು ಎನ್ನುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಕುಕ್ಕರ್ ಬಾಂಬ್ ಸ್ಫೋಟದ ಪ್ರಕರಣದ ಸಂಚು ರೂಪಿಸಿದ್ದ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಕರ್ನಾಟಕದಲ್ಲಿ ಮೂರು ಸ್ಥಳಗಳಲ್ಲಿ ಬಾಂಬ್​​ ಬ್ಲಾಸ್ಟ್​ ಮಾಡಲು ಸಂಚು ರೂಪಿಸಲಾಗಿತ್ತು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ| ಉಡುಪಿ ಕೃಷ್ಣ ಮಠವೂ ಉಗ್ರರ ಹಿಟ್ ಲಿಸ್ಟ್ ನಲ್ಲಿ!! ತನಿಖೆಯಲ್ಲಿ ಬಹಿರಂಗವಾಯ್ತು ಆತಂಕಕಾರಿ ಸಂಗತಿ Read More »

ಸುಳ್ಯ: ಕೆ.ವಿಜಿ. ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿಯನ್ನು ಬೆದರಿಸಿದ ಆರೋಪ|ಕೆ.ವಿ.ಚಿದಾನಂದ ಸಹಿತ 5 ಮಂದಿಗೆ ಜಾಮೀನು

ಸಮಗ್ರ ನ್ಯೂಸ್:‌ ಸುಳ್ಯದ ಕೆ.ವಿಜಿ ಪಾಲಿಟೆಕ್ನಿಕ್‌ ಕಾಲೇಜಿಗೆ ಅಕ್ಟೋಬರ್ 5ರಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿಯನ್ನು ಬೆದರಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಕೆ.ವಿ.ಚಿದಾನಂದ ಸಹಿತ 5 ಮಂದಿ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಿದ್ದು ಅವರೆಲ್ಲರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡುವುದಾಗಿ ತಿಳಿದುಬಂದಿದೆ. ಆಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ. ಜ್ಯೋತಿ ರೇಣುಕಾ ಪ್ರಸಾದ್ ರವರು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಅ.5 ರಂದು ದೂರು ನೀಡಿ, ಬಾವ ಕೆ.ವಿ ಚಿದಾನಂದ, ಅದರ ಪತ್ನಿ, ಶೋಭಾ ಚಿದಾನಂದ,

ಸುಳ್ಯ: ಕೆ.ವಿಜಿ. ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿಯನ್ನು ಬೆದರಿಸಿದ ಆರೋಪ|ಕೆ.ವಿ.ಚಿದಾನಂದ ಸಹಿತ 5 ಮಂದಿಗೆ ಜಾಮೀನು Read More »

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ| ಯುವಕ ಬಂಧನ

ಸಮಗ್ರ ನ್ಯೂಸ್: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪದಡಿ ಯುವಕನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ ಘಟನೆ ವರದಿಯಾಗಿದೆ. ಕಡಬ ಪಿಜಕ್ಕಳ ನಿವಾಸಿ ಯಜ್ಞೇಶ್‌ ಪೋಕ್ಸೊ ಕಾಯ್ದೆಯಡಿ ಬಂಧನವಾದ ಆರೋಪಿ. ಕೆಲ ತಿಂಗಳುಗಳ ಹಿಂದೆ ಆರೋಪಿಯು ಬಾಲಕಿಯನ್ನು ಮಡಿಕೇರಿಯ ಲಾಡ್ಜ್‌ ವೊಂದಕ್ಕೆ ಕರೆದುಕೊಂಡು ಹೊಗಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸಗಳು ಕಾಣಿಸಿದ ಹಿನ್ನಲೆಯಲ್ಲಿ ಆಕೆ ಕಲಿಯುತ್ತಿದ್ದ ಶಾಲೆಯ ಶಿಕ್ಷಕಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಪೊಲೀಸ್‌

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ| ಯುವಕ ಬಂಧನ Read More »

ಕರಾವಳಿಯ ಹಲವೆಡೆ ಸಿಡಿಲಾಘಾತ| ವ್ಯಾಪಕ ಹಾನಿ, ಅಪಾರ ನಷ್ಟ

ಸಮಗ್ರ ನ್ಯೂಸ್: ಮಿಂಚು, ಗುಡುಗಿನಿಂದ ಸುರಿದ ಭಾರೀ ಮಳೆಯಿಂದ ಕರಾವಳಿಯ ಹಲವೆಡೆ ಸಿಡಿಲಾಘಾತ ಉಂಟಾಗಿ ವ್ಯಾಪಕ ಹಾನಿ ಸಂಘವಿಸಿದೆ. ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ಹಿತ್ತಲಗದ್ದೆ ನಿವಾಸಿ ರಂಜಿತಾ ಜಗದೀಶ ಗೌಡ ಇವರೇ ಸಿಡಿಲಿನ ಆಘಾತಕ್ಕೆ ಒಳಗಾದ ಮಹಿಳೆಯಾಗಿದ್ದು ಇವರನ್ನು ಕೂಡಲೇ ಅಂಕೋಲಾ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರು ಹೊರವಲಯದ ವಾಮಂಜೂರು ಅಮೃತ ನಗರದ ಗೋಪಾಲ ಪೂಜಾರಿ ಎಂಬುವವರ ಮನೆಯಲ್ಲಿ ಸಿಡಿಲಿನಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಸಿಡಿಲಿನ ಸದ್ದಿಗೆ ಮನೆಯಲ್ಲಿದ್ದ ಮಹಿಳೆ ಹಾಗೂ 5 ವರ್ಷದ

ಕರಾವಳಿಯ ಹಲವೆಡೆ ಸಿಡಿಲಾಘಾತ| ವ್ಯಾಪಕ ಹಾನಿ, ಅಪಾರ ನಷ್ಟ Read More »

ಅರಣ್ಯಾಧಿಕಾರಿಗೆ ಅವಾಚ್ಯ ಪದಗಳಿಂದ ನಿಂದನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಜಾಮೀನು ರಹಿತ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕರ್ತವ್ಯ ನಿರತ , ಯುನಿಫಾರ್ಮ್ ನಲ್ಲಿದ್ದ ವಲಯ ಅರಣ್ಯಾಧಿಕಾರಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದ್ದು, ಧರ್ಮಸ್ಥಳ ಪೊಲೀಸರು ಸೆಕ್ಷನ್ 353 ರಂತೆ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದರೊಂದಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜಾರ ವಿರುದ್ದ ಪುತ್ತೂರು ಸಹಾಯಕ ಆಯುಕ್ತರಿಗೂ ದೂರು ನೀಡಲಾಗಿದೆ. ಪ್ರಕರಣದ ವಿವರ: ಬೆಳ್ತಂಗಡಿ

ಅರಣ್ಯಾಧಿಕಾರಿಗೆ ಅವಾಚ್ಯ ಪದಗಳಿಂದ ನಿಂದನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಜಾಮೀನು ರಹಿತ ಪ್ರಕರಣ ದಾಖಲು Read More »