ಕರಾವಳಿ

ಕರಾವಳಿಗರೇ ಎಚ್ಚರ… ವಾಯುಭಾರ ಕುಸಿತ, ಚಂಡಮಾರುತ ಭೀತಿ| ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದ ಲಕ್ಷದ್ವೀಪದ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ. ಇದರಿಂದ ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಂಗಳವಾರ ತಿಳಿಸಿದೆ. ಕರಾವಳಿ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ಮಧ್ಯಾಹ್ನದ ನಂತರ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಅಕ್ಟೋಬರ್ 16 ಮತ್ತು 17 ರಂದು ಸಂಜೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, […]

ಕರಾವಳಿಗರೇ ಎಚ್ಚರ… ವಾಯುಭಾರ ಕುಸಿತ, ಚಂಡಮಾರುತ ಭೀತಿ| ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

ಸುಳ್ಯ: ಕಲ್ಪಡ ಮೊವಪ್ಪೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕುಣಿತ ಭಜನೆ ಕಾರ್ಯಕ್ರಮ

ಸಮಗ್ರ ನ್ಯೂಸ್:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೊಡಿಯಾಲ ‘ಎ’ ಅಧ್ಯಕ್ಷರು ಪದಾಧಿಕಾರಿಗಳ ಸಹಕಾರದೊಂದಿಗೆ ಅ. 17ರಂದು ಕಲ್ಪಡ ಮೊವಪ್ಪೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ “ಕುಣಿತ ಭಜನೆ” ಕಾರ್ಯಕ್ರಮ ನಡೆಯಿತು. ದೇವಸ್ಥಾನ ಅರ್ಚಕ ಶಿವರಾಮ ಉಪಾಧ್ಯಯ ಅವರು ದೇವರ ಸ್ತುತಿ ಮೂಲಕ ಉದ್ಘಾಟನೆ ಮಾಡಿದರು. ಬೆಳ್ಳಾರೆ ವಲಯ ಮೇಲ್ವಿಚಾರಕ ಗೋಪಾಲಕೃಷ್ಣ ಪ್ರಸ್ತಾವಿಕ ವಾಗಿ ಮಾತನಾಡಿದರು. ತರಬೇತಿ ಪಡೆಯುವ 23 ಮಕ್ಕಳು ಭಾಗವಹಿಸಿದರು. ಈ ಸಂಧರ್ಭದಲ್ಲಿ ಕುಣಿತ ಭಜನೆ ತರಬೇತುದಾರ

ಸುಳ್ಯ: ಕಲ್ಪಡ ಮೊವಪ್ಪೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕುಣಿತ ಭಜನೆ ಕಾರ್ಯಕ್ರಮ Read More »

ಸುಬ್ರಹ್ಮಣ್ಯ: ಕಿಕು ಬೇಕ್ಸ್ ಅ.18ರಂದು ಶುಭಾರಂಭ

ಸಮಗ್ರ ನ್ಯೂಸ್: ಕಿಕು ಬೇಕ್ಸ್ ಅ.18ರಂದು ಸುಬ್ರಹ್ಮಣ್ಯದ ಕುಲ್ಕುಂದ ಶಿವಗಿರಿ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ. ಜೋಮಿನ್ ವೇಶ್ನಾಲ್ ಮಾಲಕತ್ವದ ಕಿಕು ಬೇಕ್ಸ್ ದ.ಕ. ಜಿಲ್ಲೆಯ ಮಾಜಿ ಸೈನಿಕ ಸಂಘದ ಜಿಲ್ಲಾ ಅಧ್ಯಕ್ಷ ಜೆ.ಪಿ.ಎಂ. ಚೇರಿಯನ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲೆಯ ಮಾಜಿ ಸೈನಿಕ ಸಂಘದ ಗೌರವ ಅಧ್ಯಕ್ಷ ವಾಸುದೇವ ಗೌಡ ಭಾಗವಹಿಸಲಿದ್ದಾರೆ. ನೆಟ್ಟಣ ಸಂತ ಮಾರಿಯಮ್ಮನವರ ದೇವಾಲಯದ ಧರ್ಮ ಗುರು ಪ.ಪೂ. ಆದರ್ಶ ಪಿ. ಜೋಸೆಫ್ ಅವರ ಆಶೀರ್ವಚನದಲ್ಲಿ ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ತರಹದ ವಿಧ ವಿಧ

ಸುಬ್ರಹ್ಮಣ್ಯ: ಕಿಕು ಬೇಕ್ಸ್ ಅ.18ರಂದು ಶುಭಾರಂಭ Read More »

ಉಡುಪಿ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ| ಕೊಲೆ ಶಂಕೆ

ಸಮಗ್ರ ನ್ಯೂಸ್: ಉಡುಪಿಯ ಕರಾವಳಿ ಹೋಟೆಲಿನ ಆವರಣದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೆಎಂಸಿ ಮಣಿಪಾಲ ಹಾಗೂ ಮಂಗಳೂರಿನ ನ್ಯಾಯ ವಿಜ್ಞಾನ ಪ್ರಯೋಗಾಲಯದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರಿತವಾದ ಆಯುಧದಿಂದ ವ್ಯಕ್ತಿಯ ಬಲ ಕೈ ಕಡಿದಿದ್ದು ತೀವ್ರ ರಕ್ತಸ್ರಾವದಿಂದ ಮೃತಪಟ್ಟಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಉಡುಪಿ ಠಾಣೆಯಲ್ಲಿ ಈ

ಉಡುಪಿ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ| ಕೊಲೆ ಶಂಕೆ Read More »

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿ| ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪ, ನೈರುತ್ಯ ಅರಬ್ಬೀ ಸಮುದ್ರ ಮತ್ತು ಕೇರಳ ಕರಾವಳಿಯ ಮಧ್ಯೆ ಸಮುದ್ರ ಮಟ್ಟದಿಂದ ಮೂರು ಕಿಮೀ ಎತ್ತರದಲ್ಲಿ ಚಂಡಮಾರುತ ಮಾದರಿ ವರ್ತುಲ ಉಂಟಾಗಿದ್ದು, ಇದರಿಂದಾಗಿ ಅರಬ್ಬೀ ಸಮುದ್ರ ಮತ್ತು ಕರ್ನಾಟಕ, ಕೇರಳ ಕರಾವಳಿಯಲ್ಲಿ ಅ.17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಮಾರುತಗಳು ಉತ್ತರ ಭಾಗದತ್ತ

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿ| ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ Read More »

ಪುತ್ತೂರು: ಈಜಲು ಹೋಗಿ ಕಣ್ಮರೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಸ್ನೇಹಿತರೊಂದಿಗೆ ಹೊಳೆಗೆ ಈಜಲು ಇಳಿದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಕೆಯ್ಯೂರು ಗ್ರಾಮದ ಎರಕ್ಕಲದ ಬಾಲಕನ ಮೃತದೇಹ ಇಂದು(ಅ16) ಬೆಳಗ್ಗೆ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಹಾಜಿ ಎಂಬವರ ಪುತ್ರ ತಸ್ಲೀಮ್ (17) ಮೃತ ಬಾಲಕ. ಇವರು ಸುಳ್ಯದ ಅರಂತೋಡಿನಲ್ಲಿರುವ ತನ್ನ ಅಜ್ಜಿ ಮನೆಯಲ್ಲಿದ್ದು, ಅಲ್ಲಿಂದ ಪಿಯು ಕಾಜೇಜಿಗೆ ಹೋಗುತ್ತಿದ್ದರು. ಕಾಲೇಜಿಗೆ ರಜೆ ಇದ್ದ ಕಾರಣ ಮನೆಗೆ ಬಂದಿದ್ದರು ಎನ್ನಲಾಗಿದೆ. ತಸ್ಲೀಮ್ ರವಿವಾರ ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು

ಪುತ್ತೂರು: ಈಜಲು ಹೋಗಿ ಕಣ್ಮರೆಯಾಗಿದ್ದ ಬಾಲಕ ಶವವಾಗಿ ಪತ್ತೆ Read More »

ಬಂಟ್ವಾಳ: ಉಡ ಬೇಟೆಯಾಡಿ ಪೌರುಷ ಮೆರೆದಾತನ ಬೇಟೆಗಿಳಿದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಭಾರತದ ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡಾವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದನ್ನು ಹಿಡಿದು ಫೋಟೊಗಳಿಗೆ ಫೋಸ್ ನೀಡಿ ವಿಜ್ರಂಭಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ. ಉಡಾವನ್ನು ಸಾಯಿಸಿದ ವ್ಯಕ್ತಿಯನ್ನು ವಗ್ಗದ ಸುಧಾಕರ ಎಂದು ಗುರುತ್ತಿಸಲಾಗಿದ್ದು ಆತನ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆ1972 ಅನ್ವಯ ಕೇಸ್ ದಾಖಲು ಮಾಡಿದ್ದಾರೆ. ಅಕ್ಟೋಬರ್ 11 ರಂದು ಘಟನೆ ಬೆಳಕಿಗೆ ಬಂದಿದ್ದು ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು ಸಾಯಿಸಿ ಬಳಿಕ

ಬಂಟ್ವಾಳ: ಉಡ ಬೇಟೆಯಾಡಿ ಪೌರುಷ ಮೆರೆದಾತನ ಬೇಟೆಗಿಳಿದ ಅರಣ್ಯ ಇಲಾಖೆ Read More »

ಸುಳ್ಯ:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ದಸರಾ ಗೊಂಬೆ ಉತ್ಸವ

ಸಮಗ್ರ ನ್ಯೂಸ್:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಅ.15ರಂದು ದಸರಾ ಪ್ರಯುಕ್ತ ಗೊಂಬೆ ಉತ್ಸವವನ್ನು ಏರ್ಪಡಿಸಲಾಗಿತ್ತು. ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾ ಕುಮಾರ್ ನಾಯರ್ ಕೆರೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸುಳ್ಯದಲ್ಲಿ ಪ್ರಪ್ರಥಮವಾಗಿ ಆಚರಿಸುತ್ತಿರುವ ಗೊಂಬೆ ಹಬ್ಬ ಹಾಗೂ ಶಾಲೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಇನ್ನೋರ್ವ ಅತಿಥಿ ಡಾ.ಸಾಯಿಗೀತಾ ಜ್ಞಾನೇಶ್ ಅವರು ದೇವಿಯ ಭಜನೆ ಹಾಡಿ ವಿಜಯದಶಮಿಯ ಬಗ್ಗೆ ತಿಳಿಸಿಕೊಟ್ಟರು. ಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ.ಜಿ ಅವರು ಗೊಂಬೆ ಹಬ್ಬದ ವಿಶೇಷ

ಸುಳ್ಯ:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ದಸರಾ ಗೊಂಬೆ ಉತ್ಸವ Read More »

ಸುರತ್ಕಲ್:ವೇತನ ತಾರತಮ್ಯ|ಎಂಆರ್ ಪಿಎಲ್ ವಿರುದ್ಧ ಪ್ರತಿಭಟನೆ

ಸಮಗ್ರ ನ್ಯೂಸ್: ಕೈಗಾರಿಕೆ ಸ್ಥಾಪನೆ ಸಂದರ್ಭದಲ್ಲಿ ಭೂಮಿ ಕಳೆದುಕೊಂಡಿದ್ದ 293 ಮಂದಿ ನಿರ್ವಸಿತರಿಗೆ ಓಎಂಪಿಎಲ್ ಕಂಪೆನಿ ಕೆಪಿಟಿಯಲ್ಲಿ ತರಬೇತಿ ಕೊಟ್ಟು ಕೆಲಸಕ್ಕೆ ನೇಮಿಸಿಕೊಂಡಿತ್ತು. ಆದರೆ ಈಗ ಕಂಪೆನಿಯು ಎಂಆರ್ ಪಿಎಲ್ ಜೊತೆಗೆ ವಿಲೀನಗೊಂಡಿದ್ದರೂ ತಮಗೆ ವೇತನ ಪಾವತಿಯಲ್ಲಿ ಅಧಿಕಾರಿಗಳು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾರ್ಮಿಕರು ಎಂಆರ್ ಪಿಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ಸುಧೀರ್ ಕುಮಾರ್ ನೇತೃತ್ವದಲ್ಲಿ ಎರಡು ದಿನಗಳ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾನ ಬಳಿ ಪ್ರತಿಭಟನೆ ನಡೆಸುತ್ತಿರುವ ಕಂಪೆನಿಯ ಕಾರ್ಮಿಕರು

ಸುರತ್ಕಲ್:ವೇತನ ತಾರತಮ್ಯ|ಎಂಆರ್ ಪಿಎಲ್ ವಿರುದ್ಧ ಪ್ರತಿಭಟನೆ Read More »

ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ| ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರದ ಭರವಸೆ

ಸಮಗ್ರ ನ್ಯೂಸ್: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಅ.15ರಂದು ಭೇಟಿ ನೀಡಿ, ಸೇವೆ ಸಲ್ಲಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ದಕ್ಷಿಣ ಕನ್ನಡದಲ್ಲಿ ಅಡಿಕೆ ಕೃಷಿಗೆ ಎದುರಾಗಿರುವ ಎಲೆ ಚುಕ್ಕಿ ರೋಗಕ್ಕೆ ಈ ಬಾರಿಯ ಬಜೆಟ್ ನಲ್ಲಿ ಪರಿಹಾರ ಧನ ಮೀಸಲಿಡುವ ಬಗ್ಗೆ ಗಮನ ಹರಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಮಾಜಿ ತಾ.ಪಂ

ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ| ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರದ ಭರವಸೆ Read More »