ಕರಾವಳಿ

ಚಂದ್ರಗ್ರಹಣ ಹಿನ್ನಲೆ| ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಸಮಯದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ಅಕ್ಟೋಬರ್​ 28ರಂದು ಈ ವರ್ಷದ ಕೊನೆಯ ಚಂದ್ರಗ್ರಹಣ. ಹಾಗಾಗಿ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸವಿರುತ್ತದೆ. ಶನಿವಾರದಂದು ಸುಬ್ರಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ರಾತ್ರಿಯ ಮಹಾಪೂಜೆ ಸಂಜೆ 6.30 ಕ್ಕೇ ಮುಕ್ತಾಯವಾಗಲಿದೆ. ಅಕ್ಟೋಬರ್​ 28ರ ಸಂಜೆ ಶನಿವಾರ ಸಂಜೆ 6.30ರ ಬಳಿಕ ದೇವರ ದರ್ಶನ ಬಂದ್ ಮಾಡಲಾಗಿದೆ. ಶನಿವಾರ ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ (Annadana) ಸೇವೆಯನ್ನೂ

ಚಂದ್ರಗ್ರಹಣ ಹಿನ್ನಲೆ| ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಸಮಯದಲ್ಲಿ ಬದಲಾವಣೆ Read More »

ಸುಳ್ಯ ಮೂಲದ ಉದ್ಯಮಿಯ ಪತ್ನಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸುಳ್ಯ ಮೂಲದ ಉದ್ಯಮಿಯೋರ್ವರ ಪತ್ನಿ ಬೆಂಗಳೂರಿನಲ್ಲಿ ಆತ್ಮಹತ್ಯೆ ಗೆ ಶರಣಾದ ಘಟನೆ ಅ.26 ರಂದು ಬೆಂಗಳೂರಿನಲ್ಲಿ ನಡೆದಿದೆ. ಕನಕಮಜಲು ಗ್ರಾಮದ , ಪ್ರಸ್ತುತ ಬೆಂಗಳೂರಿನಲ್ಲಿ ಡೈರಿ ರೀಚ್ ಐಸ್ ಕ್ರೀಂನ ಉದ್ಯಮಿಯಾಗಿರುವ ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಇವರ ಪತ್ನಿ ಐಶ್ವರ್ಯ(26) ಆತ್ಮಹತ್ಯೆಗೆ ಶರಣಾದವರು. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿಯ ಪುತ್ರಿಯಾದ ಐಶ್ವರ್ಯ ಅವರನ್ನು ರಾಜೇಶ್ ಅವರಿಗೆ ಸುಮಾರು 4 ವರ್ಷದ ಹಿಂದೆ ಮದುವೆ ಮಾಡಿ

ಸುಳ್ಯ ಮೂಲದ ಉದ್ಯಮಿಯ ಪತ್ನಿ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »

ಮಂಗಳೂರು: ಹಳಿಯಲ್ಲಿ ಮೃತದೇಹ ಮಹಜರು ವೇಳೆ ಧಾವಿಸಿ ಬಂದ‌ ರೈಲು| ಪೊಲೀಸರು ಪ್ರಾಣಾಪಾಯದಿಂದ ಜಸ್ಟ್ ಮಿಸ್!!

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ‌ ಮುಲ್ಕಿ ಕುಬೆವೂರು ರೈಲು ಸೇತುವೆ ಬಳಿ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಪತ್ತೆಯಾದ ಬಗ್ಗೆ ಮೂಲ್ಕಿ ಠಾಣೆಯ ಪೊಲೀಸ್‌ ಸಿಬ್ಬಂದಿ ಮಹಜರು ನಡೆಸುವಾಗ ರೈಲೊಂದು ಧಾವಿಸಿ ಬಂದಿದ್ದು, ಸಿಬ್ಬಂದಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಮೂಲ್ಕಿ ರೈಲು ನಿಲ್ದಾಣದ ಸಿಬ್ಬಂದಿ ಕುಮಾರ್ ಅವರ ಪುತ್ರ ವಿಶ್ಲೇಷ್ (26) ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು ಮಾಹಿತಿ ಪಡೆದ ಮೂಲ್ಕಿ ಠಾಣೆಯ ಎಎಸ್‌ಐ ಸಂಜೀವ, ಚಂದ್ರಶೇಖರ, ಶಂಕರ, ಬಸವರಾಜ್

ಮಂಗಳೂರು: ಹಳಿಯಲ್ಲಿ ಮೃತದೇಹ ಮಹಜರು ವೇಳೆ ಧಾವಿಸಿ ಬಂದ‌ ರೈಲು| ಪೊಲೀಸರು ಪ್ರಾಣಾಪಾಯದಿಂದ ಜಸ್ಟ್ ಮಿಸ್!! Read More »

ಮಂಗಳೂರು: ವಾಮಂಜೂರು ಶಾರದೋತ್ಸವದಲ್ಲಿ ಪ್ರದರ್ಶನಗೊಂಡ ಸೌಜನ್ಯಳ ಫೋಟೋ ಇದ್ದ ಟ್ಯಾಬ್ಲೋ

ಸಮಗ್ರ ನ್ಯೂಸ್: ಮಂಗಳೂರು ದಸರಾದ ಶೋಭಾ ಯಾತ್ರೆಯಲ್ಲಿ ಸೌಜನ್ಯಳ ಫೋಟೊ ಇದ್ದ ಕಾರಣಕ್ಕೆ ನಿಷೇಧಿಸಲ್ಪಟ್ಟ ಟ್ಯಾಬ್ಲೋ ಮಂಗಳೂರಿನ ವಾಮಾಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆಯಿತು. ಮಂಗಳೂರಿನ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಬೇಕಿದ್ದ ಈ ಟ್ಯಾಬ್ಲೋ ಕುದ್ರೊಳಿ ದೇವಳದ ಆಡಳಿತ ಮಂಡಳಿಯ ವಿರೋಧದಿಂದ ಕೊನೆ ಕ್ಷಣದಲ್ಲಿ ಪೊಲೀಸ್ ಅಧಿಕಾರಿಗಳು ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ತಡೆಹಿಡಿದ್ದರು, ಇದ್ದಕ್ಕೆ ವ್ಯಾಪಕ ಆಕ್ರೋಶ ಸಾರ್ವಜನಿಕ ವಲಯದಲ್ಲೂ ವ್ಯಕ್ತವಾಗಿತ್ತು. ಮಾಹಿತಿ ತಿಳಿದ ವಾಮಾಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಾಂಜೂರು ಸಾರ್ವಜನಿಕ

ಮಂಗಳೂರು: ವಾಮಂಜೂರು ಶಾರದೋತ್ಸವದಲ್ಲಿ ಪ್ರದರ್ಶನಗೊಂಡ ಸೌಜನ್ಯಳ ಫೋಟೋ ಇದ್ದ ಟ್ಯಾಬ್ಲೋ Read More »

ಸುಳ್ಯ‌ ನ.ಪಂ‌ ಉದ್ಯೋಗಿ‌ಯಿಂದ ಹುಲಿ ಉಗುರು ಹೋಲುವ ಲಾಕೆಟ್ ವಶಕ್ಕೆ ಪಡೆದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಹುಲಿ ಉಗುರನ್ನು ಹೋಲುವ ಲಾಕೆಟ್ ಧರಿಸಿದ್ದ ನಗರ ಪಂಚಾಯತ್ ಉದ್ಯೋಗಿ ಫೋಟೋ ವೈರಲ್ ಆಗಿ ಅರಣ್ಯ ಇಲಾಖೆ ಅಧಿಕಾರಿಗಳು ಲಾಕೆಟ್ ಪಡೆದುಕೊಂಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರ ಪಂಚಾಯತ್ ಉದ್ಯೋಗಿ ಶಶಿಕಲಾ ಎಂಬವರು ಹುಲಿ ಉಗುರನ್ನು ಹೋಲುವ ಲಾಕೆಟ್ ಧರಿಸಿದ್ದ ಫೋಟೋ ವೈರಲ್ ಸಾಮಾಜಿಕ ಜಾಲತಾಣದಲ್ಲಿ ಆಗಿತ್ತು. ಈ ಹಿನ್ನೆಲೆಯಲ್ಲಿ ಸುಳ್ಯ ಅರಣ್ಯ ಇಲಾಖೆ ಅಧಿಕಾರಿಗಳಿಂದ ಶಶಿಕಲಾ ಸೂಚನೆ ನೀಡಲ್ಪಟ್ಟಿದ್ದು, ವಲಯ ಅರಣ್ಯಾಧಿಕಾರಿ ಕಚೇರಿಗೆ ತೆರಳಿ ಶಶಿಕಲಾ ಲಾಕೆಟ್ ಹಸ್ತಾಂತರಿಸಿದ್ದಾರೆ. ಲಾಕೆಟ್ ನಲ್ಲಿರುವುದು

ಸುಳ್ಯ‌ ನ.ಪಂ‌ ಉದ್ಯೋಗಿ‌ಯಿಂದ ಹುಲಿ ಉಗುರು ಹೋಲುವ ಲಾಕೆಟ್ ವಶಕ್ಕೆ ಪಡೆದ ಅರಣ್ಯ ಇಲಾಖೆ Read More »

ಸುಳ್ಯ: ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ

ಸಮಗ್ರ ನ್ಯೂಸ್: ಸುಳ್ಯ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆಯು ಅ. 26ರಂದು ಸುಳ್ಯದ ಸಿಎ ಬ್ಯಾಂಕ್ ಸಭಾಭವನದಲ್ಲಿ ಜರಗಿತು. ಟ್ರಸ್ಟ್ ನ ಅಧ್ಯಕ್ಷ ಇಂದಿರಾ ರಾಜಶೇಖರ್ ರೈ ಅಧ್ಯಕ್ಷತೆ ವಹಿಸಿದ್ದರು. ಮಹಾಸಭೆಯ ನೋಟಿಸ್ ಟ್ರಸ್ಟ್ ನ ನಿರ್ದೇಶಕ ವೀಣಾ ಮೊಂಟೆಡ್ಕ ಓದಿ ದಾಖಲಿಸಿದರು. ಪ್ರಾಸ್ತಾವಿಕ ಮಾತಿನೊಂದಿಗೆ 2022-23 ನೇ ಸಾಲಿನ ವಾರ್ಷಿಕ ವರದಿಯನ್ನು ಟ್ರಸ್ಟ್ ನ ಕಾರ್ಯದರ್ಶಿ ಗುಣವತಿ ಕೊಲ್ಲಂತಡ್ಕ ಮಂಡಿಸಿದರು. 2022-23 ನೇ ಸಾಲಿನ ಲೆಕ್ಕ ಪರಿಶೀಲನಾ ವರದಿಯನ್ನು ಟ್ರಸ್ಟ್

ಸುಳ್ಯ: ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ Read More »

ಪುತ್ತೂರು: ಕಾಸು ಪಡೆದು ಫ್ರೀ ಟಿಕೆಟ್ ಕೊಟ್ಟ ಕೆಎಸ್ಆರ್ ಟಿಸಿ ನಿರ್ವಾಹಕ!!

ಸಮಗ್ರ ನ್ಯೂಸ್: ಸರ್ಕಾರ ಮಹಿಳೆಯರಿಗೆ ಹೊರಡಿಸಿದ ಫ್ರೀ ಬಸ್ ವ್ಯವಸ್ಥೆಯನ್ನು ಕೆಲವು ಕಂಡಕ್ಟರ್ ಗಳು ಹಣ ಕೊಟ್ಟು ಪ್ರಯಾಣಿಸುವ ಮಹಿಳೆಯರಿಗೆ ಸರ್ಕಾರ ನೀಡಿದ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರ ಉಚಿತ ಚೀಟಿ ನೀಡುತ್ತಿದ್ದಾರೆ. ಈ ಮೂಲಕ ಸರ್ಕಾರಕ್ಕೆ ಮತ್ತೆ ಹೊರೆ ಹೊರಿಸುತ್ತಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಒಂದರಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನೆಹರೂ ನಗರದಿಂದ ಪುತ್ತೂರಿಗೆ ಆಧಾರ್‌ ತೋರಿಸದೇ ಹಣ ಕೊಟ್ಟು ಟಿಕೆಟ್ ಪಡೆದಿದ್ದಳು. ಆದರೆ ಆಕೆಗೆ ಫ್ರೀ ಟಿಕೆಟ್

ಪುತ್ತೂರು: ಕಾಸು ಪಡೆದು ಫ್ರೀ ಟಿಕೆಟ್ ಕೊಟ್ಟ ಕೆಎಸ್ಆರ್ ಟಿಸಿ ನಿರ್ವಾಹಕ!! Read More »

ಸುಳ್ಯ: ಅ. 29ರಂದು ಮುಕ್ತ ರಸ್ತೆ ಓಟ

ಸಮಗ್ರ ನ್ಯೂಸ್: ಸುಳ್ಯ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ನ ದಶಮಾನೋತ್ಸವದ ಪ್ರಯುಕ್ತ ಅ. 29 ರಂದು ಸುಳ್ಯದಲ್ಲಿ ಮುಕ್ತ ಓಟ ಸ್ಪರ್ಧೆ ನಡೆಯಲಿದೆ. ಪುರುಷರ ಮುಕ್ತ ಓಟ ಸ್ಪರ್ಧೆಯು ಅರಂತೋಡಿನಿಂದ, ಮಹಿಳೆಯರಿಗೆ ಪೆರಾಜೆ, 17 ಕೆಳಗಿನ ಬಾಲಕ ಬಾಲಕಿಯರಿಗೆ ಅರಂಬೂರಿನಿಂದ ಸ್ಪರ್ಧೆ ಆರಂಭಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಸುಳ್ಯ ಇದರ ಸಂಘಟಕರನ್ನು (9535040270, 9980343515, 9449268699, 9164154656) ಸಂಪರ್ಕಿಸಬಹುದಾಗಿದೆ. ಸ್ಪರ್ಧಾ ವಿಜೇತರಿಗೆ ನಗದು ಹಾಗೂ ಪ್ರಮಾಣ ಪತ್ರ ನೀಡಿ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

ಸುಳ್ಯ: ಅ. 29ರಂದು ಮುಕ್ತ ರಸ್ತೆ ಓಟ Read More »

ಸುಳ್ಯ: ಕಾರು-ಬುಲೆಟ್ ಬೈಕ್ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಕಾರು ಹಾಗೂ ಬುಲೆಟ್ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಅರಂತೋಡು ಗ್ರಾಮದ ಪೆಲ್ತಡ್ಕದಲ್ಲಿ ಅ.24ರಂದು ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬುಲೆಟ್ ಬೈಕ್ ಹಾಗೂ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಪೆಲ್ತಡ್ಕದಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ಪರಿಣಾಮ ಬೈಕ್ ಸವಾರನ ಕಾಲಿಗೆ ಗಾಯವಾಗಿದೆ.

ಸುಳ್ಯ: ಕಾರು-ಬುಲೆಟ್ ಬೈಕ್ ಮುಖಾಮುಖಿ ಡಿಕ್ಕಿ Read More »

ಸುಳ್ಯ: ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನದಲ್ಲಿ ಆಯುಧಪೂಜೆ

ಸಮಗ್ರ ನ್ಯೂಸ್: ಸುಳ್ಯ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ, ಶ್ರೀ ಗುಳಿಗ ದೈವ, ಸ್ವಾಮಿ ಶ್ರೀ ಕೊರಗಜ್ಜ ದೈವಸ್ಥಾನ ಶ್ರೀ ಕ್ಷೇತ್ರ ಕೊರಂಬಡ್ಕ ಇಲ್ಲಿ ನವರಾತ್ರಿಯ ಪ್ರಯುಕ್ತ ಸಾಮೂಹಿಕ ಆಯುಧಪೂಜೆ ಕಾರ್ಯಕ್ರಮ ನಡೆಯಿತು.

ಸುಳ್ಯ: ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನದಲ್ಲಿ ಆಯುಧಪೂಜೆ Read More »