ಕರಾವಳಿ

ಸುಳ್ಯ: ಹೊಸಗದ್ದೆ ನಾದ ಪಯಸ್ವಿನಿ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಶ್ರೀ ದುರ್ಗಾ ಮಹಾಲಕ್ಷ್ಮೀ ದೇವಸ್ಥಾನ ಶ್ರೀಧಾಮ ಮಾಣಿಲದಲ್ಲಿ ನವರಾತ್ರಿ ಪ್ರಯುಕ್ತ ದುರ್ಗಾಪೂಜೆ ಅ. 21ರಂದು ನಡೆಯಿತು. ಈ ಸಂಧರ್ಭದಲ್ಲಿ ಸುಳ್ಯ ನಾದ ಪಯಸ್ವಿನಿ ಭಜನಾ ತಂಡ ಹೊಸಗದ್ದೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಭಜನಾ ಕಾರ್ಯಕ್ರಮವನ್ನು ಜನಾರ್ಧನ ಜಿ. ಜಯನಗರ, ಭವನ್ ನಾರಜೆ, ಅನಿಲ್ ಕುದ್ಪಾಜೆ, ಮನೋಜ್ ಕುದ್ಪಾಜೆ, ನಮಿತಾ ಕುದ್ಪಾಜೆ, ರಶ್ಮಿತಾ ಕುದ್ಪಾಜೆ, ಆತ್ಮಿಕ ಜಿ. ಜಯನಗರ, ಅಂಕಿತ ಕುದ್ಪಾಜೆ, ಯಶ್ವಿನಿ ಬಿ.ಯಸ್. ಹೊಸಗದ್ದೆ, ಸಾನಿಧ್ಯ ಕುದ್ಪಾಜೆ, ಯದ್ವಿತ್ ಬಿ.ಯಸ್. ಹೊಸಗದ್ದೆ ನಡೆಸಿಕೊಟ್ಟರು.

ಸುಳ್ಯ: ಹೊಸಗದ್ದೆ ನಾದ ಪಯಸ್ವಿನಿ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ Read More »

ಪುತ್ತೂರು: ಮದುವೆ ಟೆಂಪೋ ಪಲ್ಟಿ| ಹಲವರಿಗೆ ಗಾಯ

ಸಮಗ್ರ ನ್ಯೂಸ್: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆಯ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಾಲ್ತಾಡಿ ಬಳಿ ಪಲ್ಟಿಯಾದ ಘಟನೆ ಅ. 22 ರಂದು ನಡೆದಿದೆ. ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕರೆ ತರಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಪುತ್ತೂರು: ಮದುವೆ ಟೆಂಪೋ ಪಲ್ಟಿ| ಹಲವರಿಗೆ ಗಾಯ Read More »

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಒಳಗೆ ಅಕ್ರಮ ಪ್ರವೇಶ| ಇತ್ತಂಡಗಳ 20 ಮಂದಿ ವಿರುದ್ಧ ಕೇಸ್ ದಾಖಲು

ಸಮಗ್ರ ನ್ಯೂಸ್: ಪರಶುರಾಮ ಥೀಮ್ ಪಾರ್ಕ್ ವಿಚಾರಕ್ಕೆ ಸಂಬಂಧಿಸಿದಂತೆ ಅ. 21 ರಂದು ಒಟ್ಟು 20 ಮಂದಿಯ ವಿರುದ್ಧ ಕೇಸ್ ದಾಖಲಾಗಿದೆ. ನಿರ್ಮಿತಿ ಕೇಂದ್ರದ ಅಧಿಕಾರಿಗಳು ಭೇಟಿ ನೀಡಿದ ನಂತರ ಅ. 19ರಂದು ಕೆಲವರು ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮೂರ್ತಿಯ ಪಕ್ಕಕ್ಕೆ ಹೋಗಿ ಮೂರ್ತಿಯ ಪಾದಕ್ಕೆ ಸುತ್ತಿಗೆಯಿಂದ ಹೊಡೆದು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ. ಇದರಿಂದ ನನ್ನ ಮತ್ತು ಇತರ ಸಮಾನ ಮನಸ್ಕರ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ ಎಂದು ದಿವ್ಯಾ ನಾಯಕ್‌ ಎಂಬವರು ಸುಹಾಸ್‌ ಶೆಟ್ಟಿ ಮುಟ್ಲುಪಾಡಿ,

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಒಳಗೆ ಅಕ್ರಮ ಪ್ರವೇಶ| ಇತ್ತಂಡಗಳ 20 ಮಂದಿ ವಿರುದ್ಧ ಕೇಸ್ ದಾಖಲು Read More »

ಸುರತ್ಕಲ್:ರಕ್ತದಾನ ಮಹಾದಾನ-ಡಾ. ಕೆ.ವಿ. ಪ್ರಕಾಶ್|ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ವತಿಯಿಂದ ರಕ್ತದಾನ ಶಿಬಿರ

ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ವತಿಯಿಂದ ರಕ್ತದಾನ ಶಿಬಿರ ಸುರತ್ಕಲ್: ವೆನ್ಲಾಕ್ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ಪಣಂಬೂರಿನ ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ವತಿಯಿಂದ ರಕ್ತದಾನ ಶಿಬಿರವು ಆದಿತ್ಯವಾರ ಬೆಳಗ್ಗೆ ಪಣಂಬೂರು ಎನ್ ಎಂಪಿಎ ಆಫೀಸರ್ಸ್ ಕ್ಲಬ್ ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಸಿ ಮಾತಾಡಿದ ಡಾ. ಕೆ.ವಿ. ಪ್ರಕಾಶ್ ಅವರು, “ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ನಂತಹ ಸಾಮಾಜಿಕ ಸಂಘಟನೆಗಳು ರಕ್ತದಾನಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಒಬ್ಬ ವ್ಯಕ್ತಿ ಮಾಡುವ ರಕ್ತದಾನದಿಂದ ನಾಲ್ಕು ಜನರ

ಸುರತ್ಕಲ್:ರಕ್ತದಾನ ಮಹಾದಾನ-ಡಾ. ಕೆ.ವಿ. ಪ್ರಕಾಶ್|ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ವತಿಯಿಂದ ರಕ್ತದಾನ ಶಿಬಿರ Read More »

ಉಡುಪಿ: ಸ್ನಾನಕ್ಕೆ ನದಿಗೆ ತೆರಳಿದ್ದ ಇಬ್ಬರು ನೀರುಪಾಲು

ಸಮಗ್ರ ನ್ಯೂಸ್: ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರು ಪಾಲಾದ ಘಟನೆ ಉಡುಪಿಯ ಹೆಬ್ರಿ ಸಮೀಪದ ಕಬ್ಬಿನಾಲೆ ಮತ್ತಾವು ಎಂಬಲ್ಲಿ ಅ. 21ರಂದು ನಡೆದಿದೆ. ಕರ್ಜೆ ನಿವಾಸಿ ಉಮೇಶ್ ಶೆಟ್ಟಿ (48) ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಚಾರ ಹುರ್ತುರ್ಕೆ ನಿವಾಸಿ ಪ್ರಸ್ತುತ್ ಹೆಗ್ಡೆ (21) ಅ. 21ರಂದು ಸಂಜೆ 3 ಗಂಟೆಗೆ ಸ್ನಾನಕ್ಕೆ ಹೋದವರು ಕಾಲು ಜಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಸ್ನಾನಕ್ಕೆ ನದಿಗೆ ತೆರಳಿದ್ದ ಇಬ್ಬರು ನೀರುಪಾಲು Read More »

ಪುತ್ತೂರು: MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ| ಪುತ್ತಿಲ ಪರಿವಾರದ ಮುಖಂಡ ರಾಜಶೇಖರ ವಿರುದ್ಧ FIR

ಸಮಗ್ರ ನ್ಯೂಸ್: ಬಿಜೆಪಿಯಲ್ಲಿ ಎಂ. ಎಲ್. ಎ. ಟಿಕೆಟ್ ಕೊಡಿಸುವುದಾಗಿ ಸಿ. ಶಿವಮೂರ್ತಿ ಎಂಬ ವ್ಯಕ್ತಿಗೆ ನಂಬಿಸಿ, ರಾಜ್ ಶೇಖರ್ ತನ್ನ ಖಾತೆಗೆ ಎರಡು ಕೋಟಿಗೂ ಅಧಿಕ ಹಣ ವರ್ಗಾವಣೆ ಮಾಡಿಸಿಕೊಂಡು, ಸುಮಾರು ಒಟ್ಟು 2.50 ಕೋಟಿ ರೂಪಾಯಿ ವಂಚನೆ ಮಾಡಿದ ಬಗ್ಗೆ ವಿಜಯನಗರ ಪೋಲೀಸರಿಗೆ ಈಗ ದೂರು ನೀಡಿದ್ದಾರೆ. ಹಾಗೂ ಬೆಂಗಳೂರಿನ‌ಲ್ಲಿ ಪೋಲೀಸ್ ಮಹಾನಿರ್ದೇಶಕರು, ಸನ್ಮಾನ್ಯ ಮುಖ್ಯಮಂತ್ರಿಗಳಿಗೂ ದೂರು ನೀಡಿದ್ದಾರೆ. ಸಿದ್ದಲಿಂಗಪ್ಪ ಎಂಬ ವ್ಯಕ್ತಿಗೆ ವಿಜಯನಗರ ಜಿಲ್ಲೆಯ ಹರಿಗಬೊಮ್ಮನ ಹಳ್ಳಿಯ ಎಂಬ‌ ಮೀಸಲು ವಿಧಾನಸಭಾ ಕ್ಷೇತ್ರದ

ಪುತ್ತೂರು: MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ| ಪುತ್ತಿಲ ಪರಿವಾರದ ಮುಖಂಡ ರಾಜಶೇಖರ ವಿರುದ್ಧ FIR Read More »

ಸುಳ್ಯ: ಕನಕಮಜಲು ಸ್ವರ್ಣ ಮಹಿಳಾ ಮಂಡಲದ ಆಶ್ರಯದಲ್ಲಿ ಆರೋಗ್ಯ ಅರಿವು ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯದ ಕನಕಮಜಲು ಸ್ವರ್ಣ ಮಹಿಳಾ ಮಂಡಲ ಇದರ ಆಶ್ರಯದಲ್ಲಿ ಕನಕಮಜಲು ಶ್ರೀ ಆತ್ಮರಾಮ ಭಜನಾ ಮಂದಿರದ ಸಭಾಭವನದಲ್ಲಿ ಅ. 21 ರಂದು ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು. ಸುಳ್ಯ ವಿಧಾನಸಭಾ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ಸ್ವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕುಸುಮ ಶೇಷಪ್ಪ ಅಡ್ಕಾರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನಕಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದ ಉಗ್ಗಮೂಲೆ, ಸುಳ್ಯ ಆರೋಗ್ಯ ಇಲಾಖೆ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ.

ಸುಳ್ಯ: ಕನಕಮಜಲು ಸ್ವರ್ಣ ಮಹಿಳಾ ಮಂಡಲದ ಆಶ್ರಯದಲ್ಲಿ ಆರೋಗ್ಯ ಅರಿವು ಕಾರ್ಯಕ್ರಮ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಶಾರದಾ ಪೂಜೆ, ಆಯುಧ ಪೂಜೆ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ಕಾಲೇಜಿನ ವಿದ್ಯಾರ್ಥಿ ಪರಿಷತ್ತಿನ ವತಿಯಿಂದ ಅ. 21ರಂದು ಶಾರದಾ ಪೂಜೆ ಹಾಗೂ ಆಯುಧ ಪೂಜೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ 10 ಗಂಟೆಯಿಂದ 12ರ ವರೆಗೆ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪ್ರತಿ ವಿದ್ಯಾರ್ಥಿಗಳಿಂದ ತರಲ್ಪಟ್ಟ ಪುಸ್ತಕಗಳಿಗೆ ಪೂಜೆಯನ್ನು ನೆರವೇರಿಸಲಾಯಿತು. ನಂತರ ಕಾಲೇಜಿನ ಗ್ರಂಥಾಲಯ, ಪ್ರಯೋಗಾಲಯ ಹಾಗೂ ಜಿಮ್ ಗಳಿಗೆ ಪೂಜೆ ಮಾಡಲಾಯಿತು. ಕಾಲೇಜಿನ ಆಯುಧಗಳಿಗೆ ಪೂಜೆಯನ್ನು ಪೂರ್ಣಗೊಳಿಸಿ, ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ವಾಹನಗಳಿಗೆ ಪೂಜೆ ಮಾಡಿ, ಎಲ್ಲರಿಗೂ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಶಾರದಾ ಪೂಜೆ, ಆಯುಧ ಪೂಜೆ Read More »

75 ವರ್ಷದ ಹಳೆಯ ಲಾರಿ/ ಇನ್ನು ಮುಂದೆ ಮಂಜೂಷಾದಲ್ಲಿ ಪ್ರದರ್ಶನಕ್ಕೆ

ಸಮಗ್ರ ನ್ಯೂಸ್: 1948ರಲ್ಲಿ ಫೋರ್ಡ್ ಕಂಪನಿಯು ಎಂ ಸೀರೀಸ್‍ನ ಲಾರಿಯು ಧರ್ಮಸ್ಥಳ ಕ್ಷೇತ್ರದ ಸರಕು ಸಾಗಾಣಿಕೆಯಲ್ಲಿ 30 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದು, ನಂತರ ಬಿಡಿ ಭಾಗದ ಕೊರತೆಯಿಂದ ತನ್ನ ಸೇವೆಯನ್ನು ನಿಲ್ಲಿಸಿತ್ತು. ಇದೀಗ ಈ ಲಾರಿಯು ಹೊಸ ವಿನ್ಯಾಸದೊಂದಿಗೆ ವಿಂಟೇಜ್ ಲುಕ್‍ನಲ್ಲಿ ಸಿದ್ದವಾಗಿದ್ದು, ಮಂಜೂಷಾ ಮ್ಯೂಸಿಯಂ ಸೇರಿಕೊಂಡಿದೆ. ಅದ್ಭುತವಾಗಿ ವಿನ್ಯಾಸಗೊಂಡಿರುವ ಈ ವಾಹನದ ನೀಲನಕ್ಷೆಯನ್ನು ಸ್ವತಃ ವೀರೇಂದ್ರ ಹೆಗ್ಗಡೆಯವರೇ ತಯಾರಿಸಿದ್ದಾರೆ ಎನ್ನಲಾಗಿದೆ.

75 ವರ್ಷದ ಹಳೆಯ ಲಾರಿ/ ಇನ್ನು ಮುಂದೆ ಮಂಜೂಷಾದಲ್ಲಿ ಪ್ರದರ್ಶನಕ್ಕೆ Read More »

ಸುಳ್ಯ: ನಂದಾ ಎಲೆಕ್ಟ್ರಾನಿಕ್ಸ್ ಸ್ಥಳಾಂತರಗೊಂಡು ಶುಭಾರಂಭ

ಸಮಗ್ರ ನ್ಯೂಸ್:ಸುಳ್ಯದ ಗಾಂಧಿನಗರದಲ್ಲಿ 24 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ನಂದಾ ಎಲೆಕ್ಟ್ರಾನಿಕ್ಸ್ ಈಗ ಗ್ರಾಹಕರ ಹೆಚ್ಚಿನ ಅನುಕೂಲಕ್ಕಾಗಿ ಚೆನ್ನಕೇಶವ ದೇವಸ್ಥಾನದ ಹತ್ತಿರ ಇರುವ ಆಶೀರ್ವಾದ ಕಾಂಪ್ಲೆಕ್ಸ್ ಗೆ ಅ.20 ರಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಬೆಳಿಗ್ಗೆ ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭದಲ್ಲಿ ಮಾಲಕ ಸತ್ಯಾನಂದ ಕುರುಂಜಿ ಹಾಗೂ ಮನೆಯವರು, ಸಿಬ್ಬಂದಿಗಳು, ಗಣ್ಯರು ಉಪಸ್ಥಿತರಿದ್ದರು.

ಸುಳ್ಯ: ನಂದಾ ಎಲೆಕ್ಟ್ರಾನಿಕ್ಸ್ ಸ್ಥಳಾಂತರಗೊಂಡು ಶುಭಾರಂಭ Read More »