ಕರಾವಳಿ

ದೇವರಮನೆಗೆ ತೆರಳಿದ‌ ಬೆಳ್ತಂಗಡಿಯ ಯುವಕ ಕಾಣೆ

ಸಮಗ್ರ ನ್ಯೂಸ್: ಮೂಡಿಗೆರೆಯ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿಯ ಯುವಕನೊಬ್ಬ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನಿಂದ ನಾಲ್ಕು ಯುವಕರ ತಂಡ ದೇವರಮನೆಗೆ ಪ್ರವಾಸಕ್ಕೆ ತೆರಳಿದ್ದಾರೆ. ಈ ನಡುವೆ ಪ್ರವಾಸ ಮುಗಿಸಿ ಹಿಂದಿರುಗುವಾಗ ಗುಡ್ಡ ತೋಟ ಬಳಿ ಕಾರು ನಿಲ್ಲಿಸಿ ಯುವಕರು ಜಗಳವಾಡಿಕೊಂಡಿದ್ದಾರೆ. ಈ ವೇಳೆ ದೀಕ್ಷಿತ್ ಕಾರು ಹತ್ತದೆ ತೆರಳಿದ್ದು, ಯುವಕ ಕಣ್ಮರೆಯಾಗಿದ್ದಾನೆ. ಅ. 10ರ ಸಂಜೆ […]

ದೇವರಮನೆಗೆ ತೆರಳಿದ‌ ಬೆಳ್ತಂಗಡಿಯ ಯುವಕ ಕಾಣೆ Read More »

ಕಾಣಿಯೂರು: ಪ್ರಗತಿ ವಿದ್ಯದಸಂಸ್ಥೆ ವಿದ್ಯಾರ್ಥಿ ಮೋನಿಷ್ ತಂಟೆಪ್ಪಾಡಿ ಯೋಗಾಸನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ

ಸಮಗ್ರ ನ್ಯೂಸ್: ಅಮೃತ ಭಾರತೀ ವಿದ್ಯಾಲಯ ಹೆಬ್ರಿ ಯಲ್ಲಿ ನಡೆದ ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ನಾಲ್ಕನೇ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ. ಇವರು ಕಾಣಿಯೂರಿನ ಪ್ರಗತಿ ವಿದ್ಯಾಸಂಸ್ಥೆಯ ಆರನೇ ತರಗತಿ ವಿದ್ಯಾರ್ಥಿ. ಯೋಗ ಗುರು ಶಶಿಕಲಾ ಅವರ ಶಿಷ್ಯ.

ಕಾಣಿಯೂರು: ಪ್ರಗತಿ ವಿದ್ಯದಸಂಸ್ಥೆ ವಿದ್ಯಾರ್ಥಿ ಮೋನಿಷ್ ತಂಟೆಪ್ಪಾಡಿ ಯೋಗಾಸನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ Read More »

ಮಂಗಳೂರು: ಬೆಂಗ್ರೆ ಬಂದರಿನಲ್ಲಿ ಮೀನುಗಾರಿಕಾ ಬೋಟ್ ಬೆಂಕಿಗಾಹುತಿ

ಸಮಗ್ರ ನ್ಯೂಸ್: ಆಕಸ್ಮಿಕ ಬೆಂಕಿಗೆ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ಅ. 10ರಂದು ಮುಂಜಾನೆ 4.30ಕ್ಕೆ ಸಂಭವಿಸಿದೆ. ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಆವರಿಸಿ ಕೋಟ್ಯಾಂತರ ಮೌಲ್ಯದ ವಸ್ತು ನಾಶವಾಗಿದೆ. ಬೆಂಕಿ ಬಂದರಿನಲ್ಲಿ ಲಂಗರು ಹಾಕಿರುವ ಇನ್ನಷ್ಟು ಬೋಟ್ ಗಳಿಗೆ ಹರಡುವ ಮುನ್ಸೂಚನೆ ದೊರೆತ ಹಿನ್ನಲೆಯಲ್ಲಿ ಸ್ಥಳೀಯರು ಬೆಂಕಿ ತಗುಲಿದ ಬೋಟನ್ನು ಬಂದರಿನಿಂದ ನದಿ ಕಡೆಗೆ ಕೊಂಡೊಯ್ದಿದ್ದಾರೆ. ಸ್ಥಳೀಯರ ಮುನ್ನೆಚರಿಕೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಅರುಣ್

ಮಂಗಳೂರು: ಬೆಂಗ್ರೆ ಬಂದರಿನಲ್ಲಿ ಮೀನುಗಾರಿಕಾ ಬೋಟ್ ಬೆಂಕಿಗಾಹುತಿ Read More »

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉದ್ಯೋಗಿ ತನ್ನ ವಾಸದ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 9ರಂದು ವರದಿಯಾಗಿದೆ. ಮೃತ ಹನುಮಂತ (24) ಇವರು ಮೂಲತಃ ಬಾಗಲಕೋಟೆಯವರು ಎಂದು ತಿಳಿದುಬಂದಿದೆ. ಅವರು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿ ಕೂಡ ಆಗಿದ್ದಾರೆ. ಪ್ರಸ್ತುತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯ ಮೂಡಬಿದಿರೆ ಪೋಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ Read More »

ಮಂಗಳೂರು ವಿಮಾನ ನಿಲ್ದಾಣ ಅ. 31ರಿಂದ ಅದಾನಿ ಗ್ರೂಪ್ ಆಡಳಿತಕ್ಕೆ

ಸಮಗ್ರ ನ್ಯೂಸ್:ಮಂಗಳೂರು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಪೂರ್ಣ ನಿರ್ವಹಣೆಯನ್ನು ಅ. 31ರಿಂದ ಅದಾನಿ ಗ್ರೂಪ್ ಸಂಸ್ಥೆಗೆ ಕಾರ್ಯಾಚರಣೆ ಗುತ್ತಿಗೆ ಜವಾಬ್ದಾರಿ ಹೊತ್ತುಕೊಳ್ಳಲಿದೆ. ಮೂರು ವರ್ಷಗಳ ಹಿಂದೆ ಈ ಗುತ್ತಿಗೆ ಅದಾನಿ ಗ್ರೂಪ್ ಪಾಲಾಗಿತ್ತು. ಅಕ್ಟೋಬರ್ 31, 2020 ರಂದು, ಅದಾನಿ ಗ್ರೂಪ್ ದೇಶದ ಆರು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ವಹಿಸಿಕೊಂಡಿತ್ತು. ವಿಮಾನ ನಿಲ್ದಾಣಗಳ ಅಭಿವೃದ್ಧಿ ನಿಟ್ಟಿನಲ್ಲಿ ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರದ ನಿರ್ಧಾರವಾಗಿತ್ತು. ಅದಾನಿ ಗ್ರೂಪ್ ಮೊದಲು ನಗರದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತೆಗೆದುಕೊಂಡಿತು. ನಂತರ ಅದು

ಮಂಗಳೂರು ವಿಮಾನ ನಿಲ್ದಾಣ ಅ. 31ರಿಂದ ಅದಾನಿ ಗ್ರೂಪ್ ಆಡಳಿತಕ್ಕೆ Read More »

ಸುಬ್ರಹ್ಮಣ್ಯ: ಕಾರಿನ ಗಾಜು ಹೊಡೆದು ಚಿನ್ನ, ದಾಖಲೆಗಳ ಬ್ಯಾಗ್ ಕಳವು

ಸುಬ್ರಹ್ಮಣ್ಯ: ಕ್ಷೇತ್ರ ಸಂದರ್ಶನಕ್ಕೆ ಬಂದಿದ್ದ ಕೇರಳದ ವ್ಯಕ್ತಿ ಯೊಬ್ಬರ ಕಾರಿನ ಗಾಜು ಹೊಡೆದು ಚಿನ್ನ, ದಾಖಲೆ ಇದ್ದ ಬ್ಯಾಗ್ ಕಳವು ಗೈದಿರುವ ಘಟನೆ ರವಿವಾರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಡೆದಿದೆ.ಕೇರಳದ ಕನ್ನೂರು ಜಿಲ್ಲೆಯ ಪಾಡೋಯೋಟು ಚಲ್ಲ್‌ ನಿವಾಸಿ ಸುಯಿಶ್‌ ಟಿ.ಸಿ. (34) ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ಅವರು ರವಿವಾರ ಸಂಜೆ ಕಾರಿನಲ್ಲಿ, ತನ್ನ ಚಿಕ್ಕಮ್ಮನೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ಬಂದಿದ್ದು, ರಥ ಬೀದಿಯ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ ಹೋಗಿದ್ದಾರೆ. ಬಳಿಕ

ಸುಬ್ರಹ್ಮಣ್ಯ: ಕಾರಿನ ಗಾಜು ಹೊಡೆದು ಚಿನ್ನ, ದಾಖಲೆಗಳ ಬ್ಯಾಗ್ ಕಳವು Read More »

ಪುತ್ತೂರು: ಅನಿತಾ ಬೀಡಿ ವರ್ಕ್ಸ್ ಕಂಪೆನಿ ಮಾಲೀಕರ‌ ಮನೆಗೆ ಐಟಿ ದಾಳಿ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಪ್ರತಿಷ್ಟಿತ ಬೀಡಿ ಕಂಪೆನಿ ಅನಿತಾ ಬೀಡಿ ವರ್ಕ್ ನ ಮಾಲೀಕರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿರುವ ಅನಿತಾ ಬೀಡಿ ವರ್ಕ್ಸ್ ಮಾಲೀಕರ ಮಹಮ್ಮದ್ ಆಲಿ ಯಾನೆ ಮಮ್ಮು ಅವರ ಮನೆ ಮೇಲೆ ಐಟಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಪೆರ್ನೆ ಸಮೀಪ ಇರುವ ಅವರ ಮನೆ ಬಳಿಯೇ ಅನಿತಾ ಬೀಡಿ ಕಂಪೆನಿ

ಪುತ್ತೂರು: ಅನಿತಾ ಬೀಡಿ ವರ್ಕ್ಸ್ ಕಂಪೆನಿ ಮಾಲೀಕರ‌ ಮನೆಗೆ ಐಟಿ ದಾಳಿ Read More »

ಬೆಳ್ತಂಗಡಿ: ಅರಣ್ಯಾಧಿಕಾರಿಗಳಿಂದ ಮನೆ ತೆರವಿಗೆ ಯತ್ನ| ಶಾಸಕರ ತಂಡದಿಂದ ತೀವ್ರ ತರಾಟೆ

ಸಮಗ್ರ ನ್ಯೂಸ್: ಹಲವಾರು ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ವಾಸವಿದ್ದ ಕುಟುಂಬವನ್ನು ಒಕ್ಕಲೆಬ್ಬಿಸಲು ಬಂದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ಪರಿಷತ್‌ ಸದಸ್ಯರು ಒಟ್ಟಾಗಿ ತರಾಟೆಗೆತ್ತಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಂಜದಲ್ಲಿ ನಡೆದಿದೆ. ಕಳಂಜ ಪ್ರದೇಶದಲ್ಲಿ ಹಲವಾರು ವರ್ಷಗಳಿಂದ ನೆಲೆಸಿರುವ ಧರ್ಮಣ್ಣ ಗೌಡ ಎಂಬವರಿಗೆ ಸೇರಿದ ಮನೆ ತೆರವಿಗೆ ಅಧಿಕಾರಿಗಳು ಸೋಮವಾರ ಬಂದಿದ್ದರು. ಈ ವೇಳೆ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಸುಳ್ಯ ಶಾಸಕಿ ಭಾಗೀರಥಿ

ಬೆಳ್ತಂಗಡಿ: ಅರಣ್ಯಾಧಿಕಾರಿಗಳಿಂದ ಮನೆ ತೆರವಿಗೆ ಯತ್ನ| ಶಾಸಕರ ತಂಡದಿಂದ ತೀವ್ರ ತರಾಟೆ Read More »

ಪುತ್ತೂರು: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿಯ ಪಡ್ಡು ಬಳಿ ಅ. 10ರಂದು ನಡೆದಿದೆ. ಮೃತರನ್ನು ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್(17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಪುತ್ತೂರು: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಇಸ್ರೇಲ್ ನಿಂದ ಮರಳಲು ನಿರಾಕರಿಸಿದ ಉಡುಪಿ ಮೂಲದ ನರ್ಸ್

ಸಮಗ್ರ ನ್ಯೂಸ್: ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಸಿದ್ಧತೆ ಭರದಿಂದ ಸಾಗಿದೆ. ಹಲವರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಈ ನಡುವೆ ಉಡುಪಿಯ ನರ್ಸ್‌ವೊಬ್ಬರು ದೇಶಕ್ಕೆ ಮರಳಲು ನಿರಾಕರಿಸಿದ್ದಾರೆ. ‘ಭಾರತ ನನಗೆ ಜನ್ಮ ನೀಡಿತು, ಇಸ್ರೇಲ್ ಜೀವ ನೀಡಿತು; ಕಷ್ಟದ ಸಮಯದಲ್ಲಿ ಅವರೊಂದಿಗೆ ನಿಲ್ಲುತ್ತೇನೆ’ ಎಂದು ಇಸ್ರೇಲ್‌ನ ಟೆಲ್ ಅವಿವ್-ಯಾಫೊದಲ್ಲಿದ್ದು, ನರ್ಸ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರಮೀಳಾ ಪ್ರಭು ಹೇಳಿದ್ದಾರೆ. ಅಕ್ಟೋಬರ್ 7 ರಂದು ಇಸ್ರೇಲ್‌ನಲ್ಲಿ ರಾತ್ರಿ 8.30ರ ಸುಮಾರಿಗೆ ದಾಳಿ ಆರಂಭವಾಗಿತ್ತು. ಸೈರನ್ ಮೊಳಗುವುದನ್ನು ಕೇಳಿದ ಅವರು, ತಮ್ಮ

ಇಸ್ರೇಲ್ ನಿಂದ ಮರಳಲು ನಿರಾಕರಿಸಿದ ಉಡುಪಿ ಮೂಲದ ನರ್ಸ್ Read More »