ಕರಾವಳಿ

ಸುಳ್ಯ:ಬಸ್ ಹತ್ತಲು ಯತ್ನಿಸಿದ ಪ್ರಯಾಣಿಕ ಆಯತಪ್ಪಿ ಬಿದ್ದು ಚಿಕಿತ್ಸೆ ಫಲಿಸದೆ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ ಹತ್ತಲು ಯತ್ನಿಸಿ ವ್ಯಕ್ತಿಯೊಬ್ಬರು ರಸ್ತೆಗೆ ಎಸೆಯಲ್ಪಟ್ಡು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯ ಆಲೆಟ್ಟಿ ಕ್ರಾಸ್ ಬಳಿ ನಡೆದಿದೆ. ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಅವರು ಸುಳ್ಯ ಆಲೆಟ್ಟಿ ಕ್ರಾಸ್ ಬಳಿ ಖಾಸಗಿ ಬಸ್ ಹತ್ತಲು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಚಿಕಿತ್ಸೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆ ಬಳಿಕ ಮನೆಯಲ್ಲೇ ಮರುದಿನ ಮುಂಜಾನೆ ಸಮಸ್ಯೆ ಉಲ್ಬಣವಾದ […]

ಸುಳ್ಯ:ಬಸ್ ಹತ್ತಲು ಯತ್ನಿಸಿದ ಪ್ರಯಾಣಿಕ ಆಯತಪ್ಪಿ ಬಿದ್ದು ಚಿಕಿತ್ಸೆ ಫಲಿಸದೆ ಸಾವು Read More »

”ಚಪ್ಪಲಿಯಿಂದ ಪೆಟ್ಟು ತಿಂದವನ ಕೈಯಿಂದ ನಾನು ಬುದ್ದಿ ಕಲೀಬೇಕಿಲ್ಲ”| ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ವಿರುದ್ಧ ಗುಡುಗಿದ ತುಳು ವಾಗ್ಮಿ ತಮ್ಮಣ್ಣ ಶೆಟ್ಟಿ

ಸಮಗ್ರ ನ್ಯೂಸ್: ” ಒಬ್ಬ ಹೆಣ್ಣುಮಗಳಿಂದ ಚಪ್ಪಲಿಯಿಂದ ಪೆಟ್ಟು ತಿಂದು ಮರ್ಯಾದೆ ಕಳೆದುಕೊಂಡವನಿಂದ ನಾನು ಬುದ್ದಿ ಕಲಿಯಬೇಕಾದ ಅವಶ್ಯಕತೆ ಇಲ್ಲ. ನಿನ್ನ ಬಳಿ ನನ್ನ ಕುರಿತಾದ ದಾಖಲಿಗಳಿದ್ರೆ ನಿನ್ನ ಪೆಟ್ಟಿಗೆಯಲ್ಲಿ ಹಾಕಿ ತೋರಿಸು”. ಹೀಗೆ ಏಕವಚನದಲ್ಲೇ ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿಯ ಚಳಿ ಬಿಡಿಸಿದ್ದು ತುಳು ವಾಗ್ಮಿ ತಮ್ಮಣ್ಣ ಶೆಟ್ಟಿ. ಸುಳ್ಯದ ಐವರ್ನಾಡಿನಲ್ಲಿ ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ”ಒಬ್ಬ ಹೆಣ್ಣುಬಾಕ, ಪಿಂಪ್, ಟ್ರಾವೆಲ್

”ಚಪ್ಪಲಿಯಿಂದ ಪೆಟ್ಟು ತಿಂದವನ ಕೈಯಿಂದ ನಾನು ಬುದ್ದಿ ಕಲೀಬೇಕಿಲ್ಲ”| ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ವಿರುದ್ಧ ಗುಡುಗಿದ ತುಳು ವಾಗ್ಮಿ ತಮ್ಮಣ್ಣ ಶೆಟ್ಟಿ Read More »

ಕಟ್ಟಡ ಕಾರ್ಮಿಕರ ಸಂಘಟನೆ ವತಿಯಿಂದ ಅ. 9ರಂದು ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಹಲವು ಬದಲಾವಣೆಗಳು ಆಗುತ್ತಿದ್ದು ಸವಲತ್ತುಗಳನ್ನು ಕಡಿತಗೊಳಿಸುವ ಕಾರ್ಯಯೋಜನೆಯಾಗುತ್ತಿದೆ ಎಂದು ಮೂಲದಿಂದ ತಿಳಿದು ಬಂದಿದೆ. ಕಾರ್ಮಿಕರಿಗೆ ಅನ್ಯಾಯ ಎಸಗುವ ಸಕಲ ಯೋಜನೆಯು ಸಿದ್ಧವಾಗಿದೆ ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಅನ್ನು ಕೂಡ ತಡೆ ಹಿಡಿದಿದೆ. ಕಟ್ಟಡ ಕಾರ್ಮಿಕರ ಹಕ್ಕನ್ನು ಕಸಿದುಕೊಳ್ಳುವ ಸಕಲ ಸಿದ್ಧತೆಯೇ ನಡೆದಿದೆ. ಆದ್ದರಿಂದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಅ. 3ರಂದು ಬೆಳಿಗ್ಗೆ ಘಂಟೆ 9.00 ಕ್ಕೆ ಸುಳ್ಯ ಖಾಸಗಿ ಬಸ್ ನಿಲ್ದಾಣದ

ಕಟ್ಟಡ ಕಾರ್ಮಿಕರ ಸಂಘಟನೆ ವತಿಯಿಂದ ಅ. 9ರಂದು ಬೃಹತ್ ಪ್ರತಿಭಟನೆ Read More »

ಸುಳ್ಯ: ವಿದ್ಯುತ್ ಶಾಕ್ ಗೆ ಮಹಿಳೆ ಸಾವು

ಸಮಗ್ರ ನ್ಯೂಸ್: ವಿದ್ಯುತ್ ಶಾಕ್ ತಗುಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಸಮೀಪದ ಬೊಮ್ಮಾರು ಬಳಿ ಸಂಭವಿಸಿದೆ. ಇಲ್ಲಿನ‌‌ ನೆಲ್ಲೂರು ಕೇಮ್ರಾಜೆ ಗ್ರಾಮದ ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ಪ್ರಾಯ) ಎಂಬವರೇ ಮೃತ ದುರ್ದೈವಿ. ಲಲಿತಾ ರವರು ದಿನಂಪ್ರತಿ ಮಲಗುವ ಸಮಯದಲ್ಲಿ‌ ಇನ್ವರ್ಟರ್ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್ ನ್ನು ತೆಗೆದು ಮಲಗುತ್ತಿದ್ದರೆನ್ನಲಾಗಿದ್ದು, ನಿನ್ನೆ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ.

ಸುಳ್ಯ: ವಿದ್ಯುತ್ ಶಾಕ್ ಗೆ ಮಹಿಳೆ ಸಾವು Read More »

ನಾಳೆ(ಅ.08) ಸುಳ್ಯದ ಐವರ್ನಾಡಿನಲ್ಲಿ ಸೌಜನ್ಯ ಪರ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆ

ಸಮಗ್ರ ನ್ಯೂಸ್: ಸೌಜನ್ಯ ಪರ ಹೋರಾಟ ಸಮಿತಿ ಐವರ್ನಾಡು ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ನಾಳೆ(ಅ.08) ಐವರ್ನಾಡಿನ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ, ತುಳು ಜಾನಪದ ವಾಗ್ಮಿ ತಮ್ಮಣ್ಣ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಪ್ರಸನ್ನ ರವಿ, ಸೌಜನ್ಯಳ ತಾಯಿ ಕುಸುಮಾವತಿ, ನಿವೃತ್ತ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟನವರ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ. ನ್ಯಾಯಕ್ಕಾಗಿ ಸೌಜನ್ಯ ಹೋರಾಟ ಸಮಿತಿಯ ಸುಳ್ಯ

ನಾಳೆ(ಅ.08) ಸುಳ್ಯದ ಐವರ್ನಾಡಿನಲ್ಲಿ ಸೌಜನ್ಯ ಪರ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆ Read More »

ಮಂಗಳೂರು:ಜಿಎಸ್‌ಟಿ ಮಾಹಿತಿ ಕಾರ್ಯಾಗಾರ| ಸಂಪನ್ನ ರಾಷ್ಟ್ರ ನಿರ್ಮಾಣ ಸಹಕಾರ ಭಾರತಿ ಧ್ಯೇಯ- ಕೊಂಕೋಡಿ

ಸಮಗ್ರ ನ್ಯೂಸ್: ಪಾರದರ್ಶಿತ್ವದ ಜತೆ ಪ್ರಾಮಾಣಿಕ ಜನರ ಬಲದಿಂದ ಸಹಕಾರಿ ರಂಗವನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ಕಾರ್ಯತತ್ಪರ ನಿಸ್ವಾರ್ಥ ಸಂಘಟನೆ ಸಹಕಾರ ಭಾರತಿ. ಸಹಕಾರಿ ಕ್ಷೇತ್ರದ ಸದೃಢತೆ ಮುಖೇನ ಸಂಪನ್ನ ರಾಷ್ಟ್ರ ನಿರ್ಮಾಣ ಸಹಕಾರ ಭಾರತಿಯ ಪ್ರಧಾನ ಧ್ಯೇಯ ಎಂದು ಕ್ಯಾಂಪ್ಕೋ ಮಾಜಿ ಅಧ್ಯಕ್ಷ, ಸಹಕಾರ ಭಾರತಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಕೊಂಕೋಡಿ ಪದ್ಮನಾಭ ಹೇಳಿದರು. ಸಹಕಾರಿ ಭಾರತಿ ಮಹಾನಗರ ಜಿಲ್ಲೆ ಮಂಗಳೂರು ವತಿಯಿಂದ, ಅ.2ರಂದು ನಗರದ ಶರವು ಶ್ರೀ ಮಹಾಗಣಪತಿ ದೇಗುಲ ಬಳಿಯ ಬಾಲಂಭಟ್ ಸಭಾಂಗಣದಲ್ಲಿ ಸಂಪನ್ನಗೊಂಡ,

ಮಂಗಳೂರು:ಜಿಎಸ್‌ಟಿ ಮಾಹಿತಿ ಕಾರ್ಯಾಗಾರ| ಸಂಪನ್ನ ರಾಷ್ಟ್ರ ನಿರ್ಮಾಣ ಸಹಕಾರ ಭಾರತಿ ಧ್ಯೇಯ- ಕೊಂಕೋಡಿ Read More »

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಲಾರಿ

ಸಮಗ್ರ ನ್ಯೂಸ್: ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಘಟನೆ ಅ. 7ರಂದು ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ನಾವೂರಿನ ಹಂಚಿಕಟ್ಟೆ ಎಂಬಲ್ಲಿ ನಡೆದಿದೆ. ಲಾರಿಯು ಬಂಟ್ವಾಳ ಕಡೆಯಿಂದ ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಕೆಳಕ್ಕೆ ಕಮರಿಗೆ ಮಗುಚಿ ಬಿದ್ದಿದೆ. ಪಕ್ಕದಲ್ಲೇ ವಿದ್ಯುತ್ ತಂತಿ ಹಾದು ಹೋಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸದೇ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಲಾರಿ Read More »

ಚೂಂತಾರು ವೇ.ಮೂ. ಲಕ್ಷ್ಮೀನಾರಾಯಣ ಭಟ್ಟರ ಸ್ಮರಣಾರ್ಥ ವೆಂಕಟ್ರಮಣ ಭಟ್ ಮತ್ತು ಪದ್ಮನಾಭ ಭಟ್ಟರಿಗೆ ವೈದಿಕರಿಗೆ ಪುರಸ್ಕಾರ

ಸಮಗ್ರ ನ್ಯೂಸ್:ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ ಚೂಂತಾರುರವರ ಸ್ಮರಣಾರ್ಥ ವೈದಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅವರ ಪುಣ್ಯತಿಥಿಯ ದಿನವಾದ ಅ. 3ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಆಶ್ರಯದಲ್ಲಿ ಚೂಂತಾರು ಉಪಾಸನಾದಲ್ಲಿ ನಡೆಯಿತು. ಪ್ರಥಮ ವರ್ಷದ ಪುರಸ್ಕಾರವನ್ನು ಕೊಳ್ತಿಗೆ ಗ್ರಾಮದ ಚೌರ್ಕಾಡು ಮನೆತನದವರಾದ ದರ್ಭೆ ವೆಂಕಟ್ರಮಣ ಭಟ್ ಮತ್ತು ಐವರ್ನಾಡು ದೇವಸ್ಥಾನದ ಅರ್ಚಕ ಪರಕ್ಕಜೆ ಮೂಲದ ಪದ್ಮನಾಭ ಭಟ್ ರಿಗೆ ನೀಡಲಾಯಿತು.ವಂದಿಸಿದರು. ಪ್ರಶಸ್ತಿಯನ್ನು ರೂ. 5000/- ಮೊತ್ತದೊಂದಿಗೆ, ಸನ್ಮಾನಪತ್ರವನ್ನು ನೀಡಲಾಯಿತು. ನೀರಬಿದಿರೆ ಶಂಕರ ಭಟ್

ಚೂಂತಾರು ವೇ.ಮೂ. ಲಕ್ಷ್ಮೀನಾರಾಯಣ ಭಟ್ಟರ ಸ್ಮರಣಾರ್ಥ ವೆಂಕಟ್ರಮಣ ಭಟ್ ಮತ್ತು ಪದ್ಮನಾಭ ಭಟ್ಟರಿಗೆ ವೈದಿಕರಿಗೆ ಪುರಸ್ಕಾರ Read More »

ಪ್ರಚೋದನಕಾರಿ ಹೇಳಿಕೆ| ಶಿವಮೊಗ್ಗದಲ್ಲಿ ಅರುಣ್ ಪುತ್ತಿಲ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ನಿನ್ನೆ ಶಿವಮೊಗ್ಗದ ರಾಗಿಗುಡ್ಡದ ಗಲಭೆ ಪೀಡಿತ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದರು. ಈ ವೇಳೆ‌ ಅಲ್ಲಿನ ಜನರೊಂದಿಗೆ ಮಾತನಾಡುತ್ತಾ ಮನೆಯಲ್ಲಿದ್ದ ಆಯುಧಗಳಿಗೆ ಪೂಜೆ ಮಾಡಿ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿಕೆ ನೀಡಿದ್ದರು. ರಾಗಿಗುಡ್ಡ ಗಲಭೆ ಪೀಡಿತ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಯಿದ್ದು ನಿಷೇಧಾಜ್ಞೆ ಇದ್ದರೂ ಇದರ ನಡುವೆ ಅರುಣ್ ಕುಮಾರ್ ಪುತ್ತಿಲ ಪ್ರಚೋದನಾಕಾರಿ‌

ಪ್ರಚೋದನಕಾರಿ ಹೇಳಿಕೆ| ಶಿವಮೊಗ್ಗದಲ್ಲಿ ಅರುಣ್ ಪುತ್ತಿಲ ವಿರುದ್ದ ದೂರು ದಾಖಲು Read More »

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನಾಳೆ ಸುಬ್ರಹ್ಮಣ್ಯಕ್ಕೆ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀ ಹೆಚ್ ಡಿ ದೇವೇಗೌಡರು ನಾಳೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಮಧ್ಯಾಹ್ನ ಪತ್ನಿ ಸಮೇತರಾಗಿ ಬೆಂಗಳೂರಿನಿಂದ ಹೆಲಿಕಾಪ್ಟರ್‍ನಲ್ಲಿ ಹೊರಡಲಿರುವ ದೇವೇಗೌಡರು, ಬಿಳಿನೆಲೆ ಗೋಪಾಲಕೃಷ್ಣ ಫ್ರೌಡಶಾಲೆ ಮೈದಾನದಲ್ಲಿ ಇಳಿದು ನಂತರ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ. ನಾಳೆ ಸಂಜೆ 6.00 ಗಂಟೆಗೆ ಸುಬ್ರಹ್ಮಣ್ಯ ದೇಗುಲದಲ್ಲಿ ಪೂಜೆ ಸಲ್ಲಿಸಲಿರುವ ದೇವೇಗೌಡರು, ರಾತ್ರಿ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರದಂದು ಬೆಳಿಗ್ಗೆ ಪೂಜೆ ಸಲ್ಲಿಸಿ, ನಂತರ ಬೆಂಗಳೂರಿಗೆ ತೆರಳಲಿದ್ದಾರೆ.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನಾಳೆ ಸುಬ್ರಹ್ಮಣ್ಯಕ್ಕೆ Read More »