ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ| ಉಡುಪಿ ಕೃಷ್ಣ ಮಠವೂ ಉಗ್ರರ ಹಿಟ್ ಲಿಸ್ಟ್ ನಲ್ಲಿ!! ತನಿಖೆಯಲ್ಲಿ ಬಹಿರಂಗವಾಯ್ತು ಆತಂಕಕಾರಿ ಸಂಗತಿ
ಸಮಗ್ರ ನ್ಯೂಸ್: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ತನಿಖೆಯಿಂದ ಉಗ್ರಗಾಮಿ ಸಂಘಟನೆಯ ಸಂಚುಕೋರರ ಒಂದೊಂದೇ ಭಯಾನಕ ಪ್ಲಾನ್ಗಳು ಹೊರಬೀಳುತ್ತಿದ್ದು, ಉಡುಪಿಯ ಶ್ರೀ ಕೃಷ್ಣ ಮಠವು ಕೂಡ ಶಂಕಿತ ಉಗ್ರರ ಟಾರ್ಗೆಟ್ ಆಗಿತ್ತು ಎನ್ನುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಕುಕ್ಕರ್ ಬಾಂಬ್ ಸ್ಫೋಟದ ಪ್ರಕರಣದ ಸಂಚು ರೂಪಿಸಿದ್ದ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಕರ್ನಾಟಕದಲ್ಲಿ ಮೂರು ಸ್ಥಳಗಳಲ್ಲಿ ಬಾಂಬ್ ಬ್ಲಾಸ್ಟ್ ಮಾಡಲು ಸಂಚು ರೂಪಿಸಲಾಗಿತ್ತು










