ಕರಾವಳಿ

ಸುಳ್ಯ: ವಿದ್ಯಾಮಾತಾ ಅಕಾಡಮಿಯಲ್ಲಿ ಉಚಿತ ತರಬೇತಿ ಕಾರ್ಯಗಾರ ನೋಂದಣಿ ಪ್ರಾರಂಭ

ಸಮಗ್ರ ನ್ಯೂಸ್: ವಿದ್ಯಾಭ್ಯಾಸದ ನಂತರ ನಾವೇನು ಮಾಡಬೇಕು? ಎಂಬುದಕ್ಕೆ ಉತ್ತರವಾಗಿ ಇದೇ ಬರುವ ದಿನಾಂಕ ಸೆ. 15ರ ಭಾನುವಾರದಂದು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 3:30ರ ವರೆಗೆ ಐಎಎಸ್, ಕೆಎಎಸ್, ಬ್ಯಾಂಕಿಂಗ್, ಎಸ್.ಡಿ .ಎ ಮತ್ತು ಎಫ್.ಡಿ.ಎ ಇತ್ಯಾದಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಮಾಡುವುದು ಹೇಗೆ ಮತ್ತು ನೇಮಕಾತಿಗಳ ವಿವರ, ಪ್ರಶ್ನೆಪತ್ರಿಕೆಗಳ ಸ್ವರೂಪ – ಪರೀಕ್ಷೆಗಳು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳ ಮೂಲಕ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ತನ್ನ […]

ಸುಳ್ಯ: ವಿದ್ಯಾಮಾತಾ ಅಕಾಡಮಿಯಲ್ಲಿ ಉಚಿತ ತರಬೇತಿ ಕಾರ್ಯಗಾರ ನೋಂದಣಿ ಪ್ರಾರಂಭ Read More »

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಮೇಲೆ ಅಕ್ರಮ ದಾಳಿ; ದೂರು ದಾಖಲು

ಸಮಗ್ರ ನ್ಯೂಸ್: ಸುಳ್ಯದ ಕುರುಂಜಿಭಾಗ್‌ನಲ್ಲಿರುವ ಪಾಲಿಟೆಕ್ನಿಕ್‌‌ ಕಾಲೇಜಿಗೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ| ಜ್ಯೋತಿ ಆರ್‌‌ ಪ್ರಸಾದ್‌‌ (52) ಎಂಬವರು ನೀಡಿದ ದೂರಿನಂತೆ ಐಪಿಸಿ ಕಲಂ 448, 506 ಜೊತೆಗೆ 34 ಯಂತೆ ಪ್ರಕರಣ ದಾಖಲಾಗಿದೆ. ದೂರುದಾರರ ಬಾವ ಡಾ |ಚಿದಾನಂದ, ಅವರ ಹೆಂಡತಿ ಶೋಭ ಚಿದಾನಂದ, ಮಗ ಅಕ್ಷಯ್‌‌ ಕೆ ಸಿ, ಮಗಳು

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಮೇಲೆ ಅಕ್ರಮ ದಾಳಿ; ದೂರು ದಾಖಲು Read More »

ಕಾಸರಗೋಡು: ರೈಲು ಬಡಿದು ಮಹಿಳೆ ಮೃತ್ಯು..!

ಸಮಗ್ರ ನ್ಯೂಸ್: ರೈಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೆ. 6ರಂದು ಸಂಜೆ ಕಾಸರಗೋಡಿನ ಕುಂಬಳೆ ಸಮೀಪದ ಪೆರುವಾಡ್ ಎಂಬಲ್ಲಿ ನಡೆದಿದೆ. ಮೃತಪಟ್ಟ ಶಂಶೀನಾ (36) ಅವರು ಪೇಟೆಗೆ ಬಂದು ಸಾಮಾಗ್ರಿ ಖರೀದಿಸಿ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

ಕಾಸರಗೋಡು: ರೈಲು ಬಡಿದು ಮಹಿಳೆ ಮೃತ್ಯು..! Read More »

ಧರ್ಮಸ್ಥಳ: ರೈಸ್ ಆಯಿಲ್ ಪ್ಲೋರ್ ಮಿಲ್ಸ್ ನ ಕಾರ್ಮಿಕ ಶವವಾಗಿ ಪತ್ತೆ| ತಿಂಗಳ ಹಿಂದೆ ನಡೆದ ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಧರ್ಮಸ್ಥಳದ ರೈಸ್ ಆಯಿಲ್ ಫ್ಲೋರ್ ಮಿಲ್ಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣಪ್ಪ ಸಫಲ್ಯ (60ವ) ಎಂಬವರ ಮೃತದೇಹ ಅ.3 ರಂದು ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿಸಿಟ್ಟಿರುವ ದೊಡ್ಡ ಗಾತ್ರದ ಸ್ಟೀಲ್ ಪಾತ್ರೆಯ ಒಳಗೆ ನೀರಿನಲ್ಲಿ ಕವುಚಿ ತೇಲಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮೃತರ ಪುತ್ರ ವಿನಯ್ ಕುಮಾರ್ ರವರ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಕೃಷ್ಣಪ್ಪ ಸಫಲ್ಯ ರವರು ರೈಸ್

ಧರ್ಮಸ್ಥಳ: ರೈಸ್ ಆಯಿಲ್ ಪ್ಲೋರ್ ಮಿಲ್ಸ್ ನ ಕಾರ್ಮಿಕ ಶವವಾಗಿ ಪತ್ತೆ| ತಿಂಗಳ ಹಿಂದೆ ನಡೆದ ಸಾವಿನ ಸುತ್ತ ಅನುಮಾನದ ಹುತ್ತ Read More »

ಕಡಬ: ದೈವಾರಾಧನೆಯ ನರ್ತನ ಪ್ರದರ್ಶನ ಮೆರವಣಿಗೆಗಳಲ್ಲಿ ಪ್ರದರ್ಶಿಸಿಸುವುದು ತರವಲ್ಲ: ಕಿಟ್ಟು ಕಲ್ಲುಗುಡ್ಡೆ

ಸಮಗ್ರ ನ್ಯೂಸ್:ನಮ್ಮ ಧಾರ್ಮಿಕ ಆಚರಣೆಯ ಮೆರವಣಿಗೆಗಳಲ್ಲಿ ದೈವಾರಾಧನೆಯ ನರ್ತನ ಪ್ರದರ್ಶನ ಮಾಡುವುದು ಸರಿಯಲ್ಲ ಇದರ ಬಗ್ಗೆ ಜನರಿಗೆ ತಿಳವಳಿಕೆ ಮೂಡಿಸುವ ಕಾರ್ಯ ಆಗಬೇಕಿದೆ ಎಂದು ಕಡಬ ತಾಲೂಕಿನ ನಲಿಕೆ ಸಮಾಜ ಸೇವಾ ಸಂಘದ ದೈವಾರಾಧನ ಸಮಿತಿಯ ಅಧ್ಯಕ್ಷ ಕಿಟ್ಟು ಕಲ್ಲುಗುಡ್ಡೆ ಹೇಳಿದರು. ಅ.5 ರಂದು ಕಡಬದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದೈವಗಳ ನರ್ತನವು ದೈವದ ಕೊಡಿಮರದಡಿಯಲ್ಲೇ ನಡೆಯಬೇಕು ಹೊರತು ಹಾದಿಬೀದಿಯಲ್ಲಿ ನಡೆಯಬಾರದು ಎಂದರು. ತುಳುನಾಡಿನಲ್ಲಿ ದೈವಾರಧನೆ ಮಾಡುವಾಗ ಅದಕ್ಕೆ 16 ಕಟ್ಟಲೆ ಎನ್ನುವ ನಿಯಮವಿದೆ, ಸಿಕ್ಕಸಿಕ್ಕವರು ದೈವ ನರ್ತನ

ಕಡಬ: ದೈವಾರಾಧನೆಯ ನರ್ತನ ಪ್ರದರ್ಶನ ಮೆರವಣಿಗೆಗಳಲ್ಲಿ ಪ್ರದರ್ಶಿಸಿಸುವುದು ತರವಲ್ಲ: ಕಿಟ್ಟು ಕಲ್ಲುಗುಡ್ಡೆ Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಅರಣ್ಯ ಸಚಿವರ ಭೇಟಿ| ಕಡಬ ತಾಲೂಕಿನ ಹಲವೆಡೆ ಕಾಡಾನೆ ಹಾವಳಿ ವಿರುದ್ಧ ಕ್ರಮಕ್ಕೆ ಮನವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು, ಕೊಣಾಜೆ, ಸುಬ್ರಹ್ಮಣ್ಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಮರಳಿಸುವಂತೆ ಮತ್ತು ನಾಡಿಗೆ ಬಾರದಂತೆ ಕ್ರಮ ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸುಳ್ಯ ಶಾಸಕರಿಗೆ ಭರವಸೆ ನೀಡಿದ್ದಾರೆ. ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಮನವಿ ಸ್ವೀಕರಿಸಿದ ಸಚಿವರು, ಈ ವರ್ಷ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಅರಣ್ಯ ಸಚಿವರ ಭೇಟಿ| ಕಡಬ ತಾಲೂಕಿನ ಹಲವೆಡೆ ಕಾಡಾನೆ ಹಾವಳಿ ವಿರುದ್ಧ ಕ್ರಮಕ್ಕೆ ಮನವಿ Read More »

ಸುಳ್ಯ:ನವೋದಯ ಶಾಲೆಯ 2ನೇ ಸುತ್ತಿನ ಆಯ್ಕೆ ಪಟ್ಟಿ ಪ್ರಕಟ| ಬೆಳ್ಳಾರೆ ಜ್ಞಾನದೀಪ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಆಯ್ಕೆ

ಸಮಗ್ರ ನ್ಯೂಸ್:ಜವಾಹರ್ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಯ 2ನೇ ಸುತ್ತಿನ ಆಯ್ಕೆ ಪಟ್ಟಿಯಲ್ಲಿ ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಿಂದ ತರಬೇತಿ ಪಡೆದ ಮೂವರು ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. 2022-23ನೇ ಸಾಲಿನಲ್ಲಿ ಸಂಸ್ಥೆಯಿಂದ ಒಟ್ಟು 16 ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಬಪ್ಪಪುಂಡೇಲು ದಿನೇಶ್ ಕುಮಾರ್ ಬಿ. ಮತ್ತು ಪೂರ್ಣಿಮಾ ದಂಪತಿಗಳ ಪುತ್ರಿ ಪಾಪೆಮಜಲು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಆಕಾಂಕ್ಷ ಡಿ.ಪಿ., ಪುತ್ತೂರು ತಾಲೂಕು ಕೊಳ್ತಿಗೆ

ಸುಳ್ಯ:ನವೋದಯ ಶಾಲೆಯ 2ನೇ ಸುತ್ತಿನ ಆಯ್ಕೆ ಪಟ್ಟಿ ಪ್ರಕಟ| ಬೆಳ್ಳಾರೆ ಜ್ಞಾನದೀಪ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಆಯ್ಕೆ Read More »

ಸುಳ್ಯ:ಎಂ.ಆರ್.ಡಿ.ಎ. ಗೂನಡ್ಕ ಪೇರಡ್ಕ ನೂತನ ಆಡಳಿತ ಮಂಡಳಿ ಆಯ್ಕೆ

ಸಮಗ್ರ ನ್ಯೂಸ್:ಮೊಹಿಯದ್ದೀನ್ ರಿಫಾಯಿ ಧಫ್ ಎಸೋಶಿಯೇಶನ್ ಗೂನಡ್ಕ ಇದರ ಮಹಾಸಭೆ ಹಾಗೂ ನೂತನ ಆಡಳಿತ ಮಂಡಳಿಯ ಆಯ್ಕೆ ಸೆ. 28ರಂದು ಪೇರಡ್ಕದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಟಿ.ಎಂ.ಶಹೀದ್ ವಹಿಸಿದರು. ದವಾ ನೆರವೇರಿಸಿ ಮಾತನಾಡಿದ ಜಮಾಅತ್ ಖತೀಬರಾದ ರಿಯಾಝ್ ಫೈಝಿ ಎಮ್ಮೆಮಾಡು ಸಂಸ್ಥೆಯನ್ನು ಉತ್ತಮ ರೀತಿ ನಡೆಸಿಕೊಂಡು ಬರುವಂತೆ ಕರೆನೀಡಿದರು. ನೂತನ ಆಡಳಿತ ಸಮಿತಿ ರಚಿಸಿ ಅದ್ಯಕ್ಷರಾಗಿ ಜಿ.ಕೆ.ಹಮೀದ್, ಉಪಾದ್ಯಕ್ಷರಾಗಿ ಎನ್.ಹೆಚ್.ಆರಿಸ್ ಹಾಗೂ ಸಲೀಂ ಅಲ್ತಾಪ್ ಗೂನಡ್ಕ, ಪ್ರಧಾನ ಕಾರ್ಯದರ್ಶಿ ಕಾದರ್ ಮೊಟ್ಟೆಂಗಾರ್, ಕಾರ್ಯದರ್ಶಿ ಇರ್ಫಾನ್,

ಸುಳ್ಯ:ಎಂ.ಆರ್.ಡಿ.ಎ. ಗೂನಡ್ಕ ಪೇರಡ್ಕ ನೂತನ ಆಡಳಿತ ಮಂಡಳಿ ಆಯ್ಕೆ Read More »

ಕಡಬ: ಅಕ್ರಮ ಜಾನುವಾರು ಸಾಗಾಟ| ಜಾನುವಾರು ಸಹಿತ ಪಿಕಪ್ ಪೋಲಿಸ್ ವಶಕ್ಕೆ

ಸಮಗ್ರ ನ್ಯೂಸ್: ಅಕ್ರಮವಾಗಿ ಪಿಕಪ್ ವಾಹನದಲ್ಲಿ ಜಾನಾವಾರು ಸಾಗಾಟ ಮಾಡುತ್ತಿದ್ದ ಘಟನೆ ಕಡಬದ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕಡಬ ಪೋಲಿಸರು ದಾಳಿ ನಡೆಸಿ, ಜಾನುವಾರು ಹಾಗೂ ಸಾಗಾಟಕ್ಕೆ ಬಳಸಿದ ಪಿಕಪ್ ಕೆ.ಎ.21 ಬಿ.8361ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಡಬ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಕಡಬ: ಅಕ್ರಮ ಜಾನುವಾರು ಸಾಗಾಟ| ಜಾನುವಾರು ಸಹಿತ ಪಿಕಪ್ ಪೋಲಿಸ್ ವಶಕ್ಕೆ Read More »

ಸುಳ್ಯ: ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣ|ಡಾ.‌ರೇಣುಕಾಪ್ರಸಾದ್ ಸೇರಿದಂತೆ ಐವರಿಗೆ ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್:ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯ ದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣ ಸಂಬಂಧಿಸಿ ಅ.5 ರಂದು ಹೈಕೋರ್ಟ್ ತೀರ್ಪು ನೀಡಿದ್ದು ಡಾ.‌ರೇಣುಕಾಪ್ರಸಾದ್ ಸೇರಿದಂತೆ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ಕಳೆದ ವಾರವಷ್ಟೆ ರದ್ದುಗೊಳಿಸಿದ್ದ ಹೈಕೋರ್ಟ್ ಅವರು ದೋಷಿಗಳೆಂದು ತೀರ್ಪು ನೀಡಿತ್ತು. ಡಾ. ರೇಣುಕಾ ಪ್ರಸಾದ್ ಕೆ.ವಿ. ಸೇರಿದಂತೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ ಐದನೇ ಹೆಚ್ಚುವರಿ

ಸುಳ್ಯ: ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣ|ಡಾ.‌ರೇಣುಕಾಪ್ರಸಾದ್ ಸೇರಿದಂತೆ ಐವರಿಗೆ ಜೀವಾವಧಿ ಶಿಕ್ಷೆ Read More »