ಕರಾವಳಿ

ಸುಳ್ಯ: ಅ.7 ರಂದು ಸುಳ್ಯದ ಈ ಭಾಗಗಳಲ್ಲಿ ಕರೆಂಟಿಲ್ಲ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕೆಲವು ಭಾಗಗಳಲ್ಲಿ ನಿಯತಕಾಲಿಕ ನಿರ್ವಹಣಾ ಕೆಲಸ ಇರುವುದರಿಂದ ಅ.7 ರಂದು ಶನಿವಾರ ವಿದ್ಯುತ್ ಕಡಿತ ಆಗಲಿದೆ. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಕೇರ್ಪಳ, ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಞಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ರಿಂದ ಸಾಯಂಕಾಲ 6ರ ತನಕ ವಿದ್ಯುತ್ […]

ಸುಳ್ಯ: ಅ.7 ರಂದು ಸುಳ್ಯದ ಈ ಭಾಗಗಳಲ್ಲಿ ಕರೆಂಟಿಲ್ಲ Read More »

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕೆಲವು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಕಾರ್ಕಳದಲ್ಲಿ ಅ. 4ರಂದು ನಡೆದಿದೆ. ಐದು ದಿನಗಳ ಹಿಂದೆ ನಾಪತ್ತೆಯಾದ ಕಾರ್ಕಳದ ದುರ್ಗ ಗ್ರಾಮದ ನಿವಾಸಿ ಸಂದೇಶ್ ಶೆಟ್ಟಿ ಎಂಬವರ ಶವ ಕಾರ್ಕಳ ಪುರಸಭಾ ವ್ಯಾಪ್ತಿಯ ಕಾವೇರಡ್ಕ ಅಯೋಧ್ಯಾ ನಗರ ದುರ್ಗ ತೆಳ್ಳಾರು ಸಂಪರ್ಕ ಸೇತುವೆಯಡಿ ಪತ್ತೆಯಾಗಿದೆ. ಸಂದೇಶ್ ಶೆಟ್ಟಿಯವರು ನಾಪತ್ತೆಯಾದ ದಿನವೇ ಅವರು ದುರ್ಗ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿತ್ತು. ಭಾರೀ ಮಳೆಯ ಹಿನ್ನೆಲೆಯಲ್ಲಿ ಅವರ ಶವ ತೇಲಿಕೊಂಡು ಬಂದು ಕಾವೇರಡ್ಕ ಎಂಬಲ್ಲಿನ

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ Read More »

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪ್ರಸಿದ್ಧಿಯಾಗಿರುವ ಯಕ್ಷಗಾನ ಬಯಲಾಟವು ಮೊದಲ ಬಾರಿಗೆ ಭಾರತದ ಜಮ್ಮು ಕಾಶ್ಮೀರದಲ್ಲಿ ಪ್ರದರ್ಶನಗೊಂಡು ಮೈ ರೋಮಾಂಚನಗೊಳಿಸಿದೆ. ವಿಶೇಷವಾಗಿ ಪಾವಂಜೆ ಮೇಳದ ಕಲಾವಿದರು ದೇವಿ ಮಹಾತ್ಮೆ ಯಕ್ಷಗಾನವನ್ನು ಪ್ರಸ್ತುತಪಡಿಸಿದ್ದು, ಖುದ್ದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹ ಅವರೇ ಹಾಜರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು. ಅಕ್ಟೋಬರ್‌ 2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್‌-ಇ-ಕಾಶ್ಮೀರ್‌ ಇಂಟರ್‌ ನ್ಯಾಶನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳೂರಿನ

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಆತನ ಹತ್ಯೆ ಸಂಬಂಧ ಸಂಚಿನಲ್ಲಿ‌ ಆರೋಪಿಗಳು ಭಾಗಿಯಾದ ಆರೋಪವಿದೆ ಹೀಗಾಗಿ ಕೆ.ಇಸ್ಮಾಯಿಲ್‌ ಶಫಿ, (ಆರೋಪಿ 9), ಕೆ.ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಹಾಗೂ ಎಂ.ಶಾಹೀದ್‌ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ಮಲಬದ್ದತೆಯಿಂದ ಬಳಲುತ್ತಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ| ಮಂಗಳೂರು ಯುವ ವೈದ್ಯರ ಮಹತ್ಸಾಧನೆ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಕಾಣಸಿಕ್ಕಿರುವ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಮಂಗಳೂರಿನ ಯುವ ವೈದ್ಯರ ತಂಡವೊಂದು ಚಿಕಿತ್ಸೆ ನೀಡಿ ರಕ್ಷಿಸಿ ಮರಳಿ ಸುರಕ್ಷಿತವಾಗಿ ಬಿಟ್ಟಿದೆ. ಉರಗ ರಕ್ಷಕ ಧೀರಜ್ ನಾವೂರು ಅವರಿಗೆ‌ ಬಂಟ್ವಾಳದ ವಗ್ಗದಲ್ಲಿ ಈ ಹೆಬ್ಬಾವು ಅಸ್ವಸ್ಥ ಸ್ಥಿತಿಯಲ್ಲಿ ಕಾಣಸಿಕ್ಕಿದೆ. ಯಾರೋ ಹೊಡೆದಿದ್ದಾರೇನೋ ಅಂದುಕೊಂಡ ಅವರು ತಕ್ಷಣ ಮಂಗಳೂರಿನ ಪಶು ವೈದ್ಯೆ ಡಾ.ಯಶಸ್ವಿ ನಾರಾವಿ ಅವರಿಗೆ ಕರೆ ಮಾಡಿದ್ದಾರೆ‌. ಚಿಕಿತ್ಸೆ ನೀಡಲೆಂದು ಅವರು ಹೆಬ್ಬಾವನ್ನು ಕ್ಲಿನಿಕ್‌ಗೆ ಕರೆ ತರವಂತೆ ಸೂಚಿಸಿದ್ದಾರೆ.

ಮಲಬದ್ದತೆಯಿಂದ ಬಳಲುತ್ತಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ| ಮಂಗಳೂರು ಯುವ ವೈದ್ಯರ ಮಹತ್ಸಾಧನೆ Read More »

ವಿಟ್ಲ: ಲಾರಿ ಪಲ್ಟಿ ಪ್ರಕರಣ| ಓರ್ವ ಸಾವು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಗ್ರಾನೈಟ್ ಲಾರಿ ಪಲ್ಟಿಯಾಗಿ ಗಂಭೀರ ಗಾಯಗೊಂಡ ನಾಲ್ವರಲ್ಲಿ ಓರ್ವ ಸಾವನ್ನಪ್ಪಿದ ಬಗ್ಗೆ ತಿಳಿದುಬಂದಿದೆ. ಸಾವನ್ನಪ್ಪಿದ್ದ ವ್ಯಕ್ತಿಯನ್ನು ಉತ್ತರ ಭಾರತ ಮೂಲದ ಸುಭಾಶ್ವಂದ್ರ ಎಂದು ಗುರುತಿಸಲಾಗಿದೆ. ಹರ್ಷದ್‌ ಮತ್ತು ಪವನ್‌ ಹಾಗೂ ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಗಾಯಗೊಂಡವರಲ್ಲಿ ಇಬ್ಬರು ಉತ್ತರ ಭಾರತದ ಮೂಲದವರು ಮತ್ತು ಇಬ್ಬರು ಮಂಗಳೂರಿನವರು ಎಂದು ಗುರುತಿಸಲಾಗಿದೆ.

ವಿಟ್ಲ: ಲಾರಿ ಪಲ್ಟಿ ಪ್ರಕರಣ| ಓರ್ವ ಸಾವು Read More »

ಸುಳ್ಯ: ಪೆರುವಾಜೆಯ ಗ್ರಾಮ ಲೆಕ್ಕಾಧಿಕಾರಿ ಕಚೇರಿ ನಿರ್ಮಾಣಕ್ಕೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸ್ವಂತ ಸ್ಥಳದಲ್ಲಿ ಸುಮಾರು 30 ವರುಷಗಳ ಹಿಂದೆ ನಿರ್ಮಾಣವಾಗಿದ್ದು, ನಂತರ ಯಾವುದೇ ದುರಸ್ತಿಯು ನಡೆಯದೇ ಇದೀಗ ಬೀಳುವ ಪರಿಸ್ಥಿತಿಗೆ ಬಂದಿದೆ. ಗ್ರಾಮ ಲೆಕ್ಕಾಧಿಕಾರಿ ಪ್ರಭಾರ ಆಗಿದ್ದು ಗ್ರಾಮ ಸಹಾಯಕರು ಇಲ್ಲದೆ ಹಲವು ವರುಷ ಕಳೆದಿವೆ. ಆದರೆ ಕಂದಾಯ ಇಲಾಖೆಗೆ ಒಳಪಟ್ಟ ಈ ಕಟ್ಟಡದ ಬಗ್ಗೆಯೂ ಸಾರ್ವಜನಿಕರೇ ಮನವಿ ಮಾಡುವಂತಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ.ಈಗಿರುವ ಕಟ್ಟಡವನ್ನು ಕೆಡವಿ ಹೊಸತಾಗಿ

ಸುಳ್ಯ: ಪೆರುವಾಜೆಯ ಗ್ರಾಮ ಲೆಕ್ಕಾಧಿಕಾರಿ ಕಚೇರಿ ನಿರ್ಮಾಣಕ್ಕೆ ಮನವಿ Read More »

ವಿಟ್ಲ: ಲಾರಿ ಪಲ್ಟಿ| ನಾಲ್ಕು ಮಂದಿ ಗಂಭೀರ

ಸಮಗ್ರ ನ್ಯೂಸ್:ಮಾರ್ಬಲ್‌ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ಅ. 4ರಂದು ನಡೆದಿದೆ. ಲಾರಿ ಪಲ್ಟಿಯಾದ ಪರಿಣಾಮ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದೆ. ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ. ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು

ವಿಟ್ಲ: ಲಾರಿ ಪಲ್ಟಿ| ನಾಲ್ಕು ಮಂದಿ ಗಂಭೀರ Read More »

ಬಂಟ್ವಾಳ: ಒಂದೇ ತರಗತಿಯಲ್ಲಿ 5 ಜೋಡಿ ಅವಳಿ-ಜವಳಿ

ಸಮಗ್ರ ನ್ಯೂಸ್: ಅಪರೂಪದಲ್ಲಿ ಅಪರೂಪವಾಗಿರುವ ಅವಳಿ ಜವಳಿ ಮಕ್ಕಳನ್ನು ನೋಡುವುದೇ ಒಂದು ಖುಷಿ. ಅದರಲ್ಲೂ ಒಂದೇ ಕಡೆ ಐದು ಜೊತೆ ಅವಳಿ ಮಕ್ಕಳು ನೋಡ ಸಿಗುತ್ತಾರೆ ಎಂದರೆ ಆಶ್ಚರ್ಯವೇ ಸರಿ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಕಣ್ಣಾಗಿದ್ದಾರೆ. ಇಲ್ಲಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ

ಬಂಟ್ವಾಳ: ಒಂದೇ ತರಗತಿಯಲ್ಲಿ 5 ಜೋಡಿ ಅವಳಿ-ಜವಳಿ Read More »

ಬೆಳ್ಳಾರೆ: ವಿಷಕಾರಿ ಹಣ್ಣಿನ ಜ್ಯೂಸ್ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಕಾಡಿನಲ್ಲಿ ಸಿಗುವ ಯಾವುದೋ ಹಣ್ಣನ್ನು ಮೈರೋಲ್ ಎಂದು ಭಾವಿಸಿ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಶೇಣಿ‌ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೇಣಿ ಸಮೀಪದ ಕುಳ್ಳಾಜೆ ನಿವಾಸಿ ಲೀಲಾವತಿ(35) ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು , ತಿನ್ನಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಲೀಲಾವತಿ ಹಾಗೂ ಅವರ ತಂದೆ

ಬೆಳ್ಳಾರೆ: ವಿಷಕಾರಿ ಹಣ್ಣಿನ ಜ್ಯೂಸ್ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು Read More »