ಕರಾವಳಿ

ಪುತ್ತೂರು: ಈಜಲು ಹೋಗಿ ಕಣ್ಮರೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಸ್ನೇಹಿತರೊಂದಿಗೆ ಹೊಳೆಗೆ ಈಜಲು ಇಳಿದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಕೆಯ್ಯೂರು ಗ್ರಾಮದ ಎರಕ್ಕಲದ ಬಾಲಕನ ಮೃತದೇಹ ಇಂದು(ಅ16) ಬೆಳಗ್ಗೆ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಹಾಜಿ ಎಂಬವರ ಪುತ್ರ ತಸ್ಲೀಮ್ (17) ಮೃತ ಬಾಲಕ. ಇವರು ಸುಳ್ಯದ ಅರಂತೋಡಿನಲ್ಲಿರುವ ತನ್ನ ಅಜ್ಜಿ ಮನೆಯಲ್ಲಿದ್ದು, ಅಲ್ಲಿಂದ ಪಿಯು ಕಾಜೇಜಿಗೆ ಹೋಗುತ್ತಿದ್ದರು. ಕಾಲೇಜಿಗೆ ರಜೆ ಇದ್ದ ಕಾರಣ ಮನೆಗೆ ಬಂದಿದ್ದರು ಎನ್ನಲಾಗಿದೆ. ತಸ್ಲೀಮ್ ರವಿವಾರ ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು

ಪುತ್ತೂರು: ಈಜಲು ಹೋಗಿ ಕಣ್ಮರೆಯಾಗಿದ್ದ ಬಾಲಕ ಶವವಾಗಿ ಪತ್ತೆ Read More »

ಬಂಟ್ವಾಳ: ಉಡ ಬೇಟೆಯಾಡಿ ಪೌರುಷ ಮೆರೆದಾತನ ಬೇಟೆಗಿಳಿದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಭಾರತದ ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡಾವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದನ್ನು ಹಿಡಿದು ಫೋಟೊಗಳಿಗೆ ಫೋಸ್ ನೀಡಿ ವಿಜ್ರಂಭಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ. ಉಡಾವನ್ನು ಸಾಯಿಸಿದ ವ್ಯಕ್ತಿಯನ್ನು ವಗ್ಗದ ಸುಧಾಕರ ಎಂದು ಗುರುತ್ತಿಸಲಾಗಿದ್ದು ಆತನ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆ1972 ಅನ್ವಯ ಕೇಸ್ ದಾಖಲು ಮಾಡಿದ್ದಾರೆ. ಅಕ್ಟೋಬರ್ 11 ರಂದು ಘಟನೆ ಬೆಳಕಿಗೆ ಬಂದಿದ್ದು ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು ಸಾಯಿಸಿ ಬಳಿಕ

ಬಂಟ್ವಾಳ: ಉಡ ಬೇಟೆಯಾಡಿ ಪೌರುಷ ಮೆರೆದಾತನ ಬೇಟೆಗಿಳಿದ ಅರಣ್ಯ ಇಲಾಖೆ Read More »

ಸುಳ್ಯ:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ದಸರಾ ಗೊಂಬೆ ಉತ್ಸವ

ಸಮಗ್ರ ನ್ಯೂಸ್:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಅ.15ರಂದು ದಸರಾ ಪ್ರಯುಕ್ತ ಗೊಂಬೆ ಉತ್ಸವವನ್ನು ಏರ್ಪಡಿಸಲಾಗಿತ್ತು. ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾ ಕುಮಾರ್ ನಾಯರ್ ಕೆರೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸುಳ್ಯದಲ್ಲಿ ಪ್ರಪ್ರಥಮವಾಗಿ ಆಚರಿಸುತ್ತಿರುವ ಗೊಂಬೆ ಹಬ್ಬ ಹಾಗೂ ಶಾಲೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಇನ್ನೋರ್ವ ಅತಿಥಿ ಡಾ.ಸಾಯಿಗೀತಾ ಜ್ಞಾನೇಶ್ ಅವರು ದೇವಿಯ ಭಜನೆ ಹಾಡಿ ವಿಜಯದಶಮಿಯ ಬಗ್ಗೆ ತಿಳಿಸಿಕೊಟ್ಟರು. ಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ.ಜಿ ಅವರು ಗೊಂಬೆ ಹಬ್ಬದ ವಿಶೇಷ

ಸುಳ್ಯ:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ದಸರಾ ಗೊಂಬೆ ಉತ್ಸವ Read More »

ಸುರತ್ಕಲ್:ವೇತನ ತಾರತಮ್ಯ|ಎಂಆರ್ ಪಿಎಲ್ ವಿರುದ್ಧ ಪ್ರತಿಭಟನೆ

ಸಮಗ್ರ ನ್ಯೂಸ್: ಕೈಗಾರಿಕೆ ಸ್ಥಾಪನೆ ಸಂದರ್ಭದಲ್ಲಿ ಭೂಮಿ ಕಳೆದುಕೊಂಡಿದ್ದ 293 ಮಂದಿ ನಿರ್ವಸಿತರಿಗೆ ಓಎಂಪಿಎಲ್ ಕಂಪೆನಿ ಕೆಪಿಟಿಯಲ್ಲಿ ತರಬೇತಿ ಕೊಟ್ಟು ಕೆಲಸಕ್ಕೆ ನೇಮಿಸಿಕೊಂಡಿತ್ತು. ಆದರೆ ಈಗ ಕಂಪೆನಿಯು ಎಂಆರ್ ಪಿಎಲ್ ಜೊತೆಗೆ ವಿಲೀನಗೊಂಡಿದ್ದರೂ ತಮಗೆ ವೇತನ ಪಾವತಿಯಲ್ಲಿ ಅಧಿಕಾರಿಗಳು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾರ್ಮಿಕರು ಎಂಆರ್ ಪಿಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ಸುಧೀರ್ ಕುಮಾರ್ ನೇತೃತ್ವದಲ್ಲಿ ಎರಡು ದಿನಗಳ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾನ ಬಳಿ ಪ್ರತಿಭಟನೆ ನಡೆಸುತ್ತಿರುವ ಕಂಪೆನಿಯ ಕಾರ್ಮಿಕರು

ಸುರತ್ಕಲ್:ವೇತನ ತಾರತಮ್ಯ|ಎಂಆರ್ ಪಿಎಲ್ ವಿರುದ್ಧ ಪ್ರತಿಭಟನೆ Read More »

ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ| ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರದ ಭರವಸೆ

ಸಮಗ್ರ ನ್ಯೂಸ್: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಅ.15ರಂದು ಭೇಟಿ ನೀಡಿ, ಸೇವೆ ಸಲ್ಲಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ದಕ್ಷಿಣ ಕನ್ನಡದಲ್ಲಿ ಅಡಿಕೆ ಕೃಷಿಗೆ ಎದುರಾಗಿರುವ ಎಲೆ ಚುಕ್ಕಿ ರೋಗಕ್ಕೆ ಈ ಬಾರಿಯ ಬಜೆಟ್ ನಲ್ಲಿ ಪರಿಹಾರ ಧನ ಮೀಸಲಿಡುವ ಬಗ್ಗೆ ಗಮನ ಹರಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಮಾಜಿ ತಾ.ಪಂ

ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ| ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರದ ಭರವಸೆ Read More »

‘ವೀರೇಂದ್ರ ಹೆಗ್ಗಡೆ ಅಕ್ರಮಗಳನ್ನು ತನಿಖೆ ನಡೆಸಿ’| ಸತ್ಯಮೇವ ಜಯತೇ ಸಂಘಟನೆಯಿಂದ ಸರ್ಕಾರಕ್ಕೆ ಮನವಿ

ಸಮಗ್ರ ನ್ಯೂಸ್: ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಎಲ್ಲಾ ಅಕ್ರಮಗಳ ತನಿಖೆ ನಡೆಸಿ ಎಂದು ಸತ್ಯಮೇವ ಜಯತೇ ಸಂಘಟನೆಯಿಂದ ಕೃಷಿ ಸಚಿವರು ಹಾಗೂ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಲಾಗಿದೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ನಡೆಸಿರುವ 4ಸಾವಿರಕ್ಕೂ ಮಿಕ್ಕಿದ ಆಸ್ತಿ ಕಬಳಿಕೆ, ಮೈಕ್ರೋ ಫೈನಾನ್ಸ್ ,ಮೀಟರ್ ಬಡ್ಡಿ ದಂಧೆ. ಮಹಿಳಾ ದೌರ್ಜನ್ಯ. ದಲಿತರು ಮತ್ತು ಬಡವರ ಜಾಗದ ಕಬಳಿಕೆ, ದಲಿತ ಶೋಷಣೆ, ಹೀಗೆ ಇನ್ನೂ ಹಲವು ಬ್ರಹ್ಮಾಂಡ ಭ್ರಷ್ಟಾಚಾರಗಳ ಆರೋಪ ಹೊರಿಸಿ ತಕ್ಷಣದಿಂದಲೇ ವಿಸ್ತೃತವಾಗಿ ತನಿಖೆ ನಡೆಸಿ ಕೂಡಲೇ ಅವರ

‘ವೀರೇಂದ್ರ ಹೆಗ್ಗಡೆ ಅಕ್ರಮಗಳನ್ನು ತನಿಖೆ ನಡೆಸಿ’| ಸತ್ಯಮೇವ ಜಯತೇ ಸಂಘಟನೆಯಿಂದ ಸರ್ಕಾರಕ್ಕೆ ಮನವಿ Read More »

ಸುಳ್ಯ: ಏರ್‌ಲೈನ್ ಸಂಸ್ಥೆಯಲ್ಲಿ ಉದ್ಯೋಗ ನೀಡುವ ಭರವಸೆ

ಯುವತಿಗೆ 13 ಲಕ್ಷ ರೂಪಾಯಿ ವಂಚನೆ ಸಮಗ್ರ ನ್ಯೂಸ್: ಉದ್ಯೋಗ ನೀಡುವುದಾಗಿ ತಿಳಿಸಿ ಯುವತಿಯೋರ್ವಳಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯುವತಿ ಈ ಬಗ್ಗೆ ದೂರು ನೀಡಿದ್ದಾರೆ. ಕಳೆದ ಜು.15ರಂದು ಅಪರಿಚಿತ ವ್ಯಕ್ತಿಯಬ್ಬರು ಕರೆಮಾಡಿ ತಾನು ವಿಸ್ತಾರ ಏರ್‌ಲೈನ್ಸ್ ಸಿಂಗಪೂರ್ ಬ್ರಾಂಚ್ ನ ದೇವನಹಳ್ಳಿ ಬೆಂಗಳೂರಿನ ಸಂಸ್ಥೆಯಿಂದ ಕರೆಮಾಡುತ್ತಿರುವುದಾಗಿ ತಿಳಿಸಿ, ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು, ಈ ಉದ್ಯೋಗದಲ್ಲಿ ಹೆಚ್ಚಿನ ಸಂಬಳ ಹಾಗೂ ಇನ್ನಿತರ

ಸುಳ್ಯ: ಏರ್‌ಲೈನ್ ಸಂಸ್ಥೆಯಲ್ಲಿ ಉದ್ಯೋಗ ನೀಡುವ ಭರವಸೆ Read More »

ಮಂಗಳೂರು: ಪದವಿ ವಿದ್ಯಾರ್ಥಿಗಳಿಗೆ ದಸರಾ ರಜೆ ನೀಡುವಂತೆ ವೇದವ್ಯಾಸ್ ಕಾಮತ್ ಆಗ್ರಹ

ಸಮಗ್ರ ನ್ಯೂಸ್:ನಾಡ ಹಬ್ಬ ದಸರಾ ರಜೆಯನ್ನು ಪದವಿ ಕಾಲೇಜುಗಳಿಗೂ ನೀಡುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದ್ದಾರೆ. ದಸರಾವು ನಾಡಿನ ಅತ್ಯಂತ ಪ್ರಮುಖ

ಮಂಗಳೂರು: ಪದವಿ ವಿದ್ಯಾರ್ಥಿಗಳಿಗೆ ದಸರಾ ರಜೆ ನೀಡುವಂತೆ ವೇದವ್ಯಾಸ್ ಕಾಮತ್ ಆಗ್ರಹ Read More »

ಕರಾವಳಿಯಲ್ಲಿ ‌ಮತ್ತೆ ಧರ್ಮದಂಗಲ್ ಕಿಡಿ| ಮಂಗಳಾದೇವಿ ಜಾತ್ರೆಗೆ ಹಿಂದೂ ಧರ್ಮೀಯರಿಗಷ್ಟೇ ವ್ಯಾಪಾರಕ್ಕೆ ಅವಕಾಶ

ಸಮಗ್ರ ನ್ಯೂಸ್: ಧರ್ಮದಂಗಲ್ ಮತ್ತೆ ಕರಾವಳಿಯಲ್ಲಿ ಪ್ರಾರಂಭವಾಗುವ ಸಾದ್ಯತೆ ಕಾಣಿಸುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಇದೀಗ ಮಂಗಳಾದೇವಿ ಯಲ್ಲಿ ಅಕ್ಟೋಬರ್ 15ರಿಂದ 24ರವರೆಗೆ ನವರಾತ್ರಿ ಸಂಭ್ರಮ ನಡೆಯಲಿದ್ದು, ಸದ್ಯ ನವರಾತ್ರಿ ಸಿದ್ದತೆ ಹಿನ್ನೆಲೆಯಲ್ಲಿ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ಮುಗಿದಿದ್ದು, ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆಯಾಗಿದೆ. ಈ ನಡುವೆ ಶ್ರೀ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದಲ್ಲಿ ಸಂತೆ ಮಾರಾಟದ ಅಂಗಡಿಗಳನ್ನು ಹರಾಜು ಮಾಡುವ ವೇಳೆ ಸ್ಥಳೀಯ ಬಿಡ್ ದಾರರಿಗೆ ಹರಾಜು ಮಾಡದೆ ದೇವಸ್ಥಾನ

ಕರಾವಳಿಯಲ್ಲಿ ‌ಮತ್ತೆ ಧರ್ಮದಂಗಲ್ ಕಿಡಿ| ಮಂಗಳಾದೇವಿ ಜಾತ್ರೆಗೆ ಹಿಂದೂ ಧರ್ಮೀಯರಿಗಷ್ಟೇ ವ್ಯಾಪಾರಕ್ಕೆ ಅವಕಾಶ Read More »

ಬಂಟ್ವಾಳ: ಕಾರು ಡಿಕ್ಕಿ| ಯುವತಿ ಮೃತ್ಯು

ಸಮಗ್ರ ನ್ಯೂಸ್: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಮೃತಪಟ್ಟ ಘಟನೆ ಅ. 12ರಂದು ಸಂಜೆ ಸುಮಾರು 6.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 75ರ ಬಂಟ್ವಾಳದ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಬಿಸಿರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಬಿಟ್ಟು ದಾಸಕೋಡಿ ಎಂಬಲ್ಲಿ ಬಸ್ಸ್ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ವೇಗವಾಗಿ ಬಂದ

ಬಂಟ್ವಾಳ: ಕಾರು ಡಿಕ್ಕಿ| ಯುವತಿ ಮೃತ್ಯು Read More »