ಕರಾವಳಿ

ಸಾರ್ವಜನಿಕ ಸ್ಥಳಗಳಲ್ಲಿ ಸಲುಗೆಯಿಂದ ವರ್ತಿಸಿದ ಮುಸ್ಲಿಂ ಯುವಕರು, ಹಿಂದೂ ಯುವತಿ ಪೊಲೀಸ್‌ ವಶಕ್ಕೆ

ಸಮಗ್ರ ನ್ಯೂಸ್: ಸಾರ್ವಜನಿಕ ಸ್ಥಳಗಳಲ್ಲಿ ಸಲುಗೆಯಿಂದ ವರ್ತಿಸಿದ ಮುಸ್ಲಿಂ ಯುವಕರು, ಹಿಂದೂ ಯುವತಿಯನ್ನು ಸ್ಥಳೀಯರು ಪೊಲೀಸ್‌ ಗೆ ಒಪ್ಪಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಸಮೀಪ ನಡೆದಿದೆ. ಮೂವರು ಬಸ್ಸೊಂದರಲ್ಲಿ ಬಂದು ಕುದ್ದುಪದವಿನಲ್ಲಿ ಬಸ್ಸಿಂದ ಇಳಿದು ಅಲ್ಲೇ ಪಕ್ಕದಲ್ಲಿದ್ದ ಬಸ್ಸು ತಂಗುದಾಣದಲ್ಲಿ ಕುಳಿತಿದ್ದರು. ಈ ವೇಳೆ ಸ್ಥಳೀಯರು ಅವರನ್ನು ವಿಚಾರಿಸಿದಾಗ ಉಪ್ಪಳ ಕಡೆ ತೆರಳುವ ಇನ್ನೊಂದು ಬಸ್ಸಿನಲ್ಲಿ ಅಲ್ಲಿಂದ ತೆರಳಿದ್ದರು. ಆದರೇ ಪೆರುವಾಯಿಯಲ್ಲಿ ಬಸ್ಸಿಂದಿಳಿದು ಪಕ್ಕದಲ್ಲಿರುವ ಬಸ್ಸು ತಂಗುದಾಣದಾಣದಲ್ಲಿ ಕುಳಿತಿದ್ದರು. ಮೂವರು ತುಂಬಾ ಸಲುಗೆಯಿಂದ

ಸಾರ್ವಜನಿಕ ಸ್ಥಳಗಳಲ್ಲಿ ಸಲುಗೆಯಿಂದ ವರ್ತಿಸಿದ ಮುಸ್ಲಿಂ ಯುವಕರು, ಹಿಂದೂ ಯುವತಿ ಪೊಲೀಸ್‌ ವಶಕ್ಕೆ Read More »

ಕಡಬ ಕಾಂಗ್ರೆಸ್ ನಲ್ಲಿ ಗೊಂದಲ| ನಿನ್ನೆ ನೂತನ ಅಧ್ಯಕ್ಷರ ನೇಮಕ; ಇಂದು ತಡೆ!

ಸಮಗ್ರ ನ್ಯೂಸ್: ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ಅವರನ್ನು ಅ.10 ಆಯ್ಕೆ ಮಾಡಲಾಗಿದ್ದ ಆದೇಶಕ್ಕೆ ಕೆ.ಪಿ.ಸಿ.ಸಿ.ಅಧ್ಯಕ್ಷ ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅ.11ರಂದು ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಅಧ್ಯಕ್ಷರಾಗಿದ್ದ ಸುಧೀರ್ ಕುಮಾರ್ ಶೆಟ್ಟಿ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಕಡಬ ಬ್ಲಾಕ್ ಕಾಂಗ್ರೆಸ್ ನ ಸಾರಥ್ಯವನ್ನು ಮಾಜಿ. ಜಿ.ಪಂ ಸದಸ್ಯ ಸರ್ವೋತ್ತಮ ಗೌಡರಿಗೆ ವಹಿಸಲಾಗಿತ್ತು. ಈ ಕುರಿತಂತೆ ಅ.11ರಂದು ಆದೇಶ ಬಂದಿದ್ದು, ಅದರಂತೆ ಅಧಿಕಾರ ಹಸ್ತಾಂತರ ಕೂಡಾ ಮಾಡಲಾಗಿತ್ತು.

ಕಡಬ ಕಾಂಗ್ರೆಸ್ ನಲ್ಲಿ ಗೊಂದಲ| ನಿನ್ನೆ ನೂತನ ಅಧ್ಯಕ್ಷರ ನೇಮಕ; ಇಂದು ತಡೆ! Read More »

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಹಳಿಗೆ ಉರುಳಿದ ಕಾಂಕ್ರೀಟ್ ಮಿಕ್ಸರ್| ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರ ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆ ಸಮಯದಲ್ಲಿ ರೈಲು ಬರದೆ ಇದ್ದ ಕಾರಣ ಯಾವುದೇ ಅವಘಡಗಳು ಸಂಭವಿಸಿಲ್ಲ. ರೈಲು ಆಗಮಿಸುವ ಮೊದಲು ಯಂತ್ರವನ್ನು ತೆರವು ಗೊಳಿಸಬೇಕಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ನವರು ಕಾರ್ಯ ಪ್ರವೃತರಾಗಿ ತೆರವು ಕಾರ್ಯ ನಿರ್ವಹಿಸಿದರು.

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಹಳಿಗೆ ಉರುಳಿದ ಕಾಂಕ್ರೀಟ್ ಮಿಕ್ಸರ್| ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ Read More »

ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ, ರಂಗ ಕಲಾವಿದೆ ಸರೋಜಿನಿ ಶೆಟ್ಟಿ ನಾಮ ನಿರ್ದೇಶನ| ಅ.15ರಂದು ನಾಮ ನಿರ್ದೇಶನಕ್ಕೆ ಕೊನೆ ದಿನ

ಸಮಗ್ರ ನ್ಯೂಸ್: ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಸುಳ್ಯದ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಮತ್ತು ತುಳುನಾಡ ಸಿರಿ ಖ್ಯಾತಿಯ ಶ್ರೇಷ್ಠ ಅಭಿನೇತ್ರಿ ರಂಗ ಕಲಾವಿದೆ ಸರೋಜಿನಿ ಶೆಟ್ಟಿ ಅವರ ನಾಮ ನಿರ್ದೇಶನಕ್ಕೆ ಐಲೇಸಾ-ದಿವಾಯ್ಸ್ ಆಫ್ ಓಶನ್ ರಿ. ಸಂಸ್ಥೆ ಅಭಿಯಾನ ಕೈಗೊಂಡಿದೆ. ನಾಮ‌ನಿರ್ದೇಶನ ಪ್ರಕ್ರಿಯೆ ಅ.15ರಂದು ಕೊನೆಗೊಳ್ಳಲಿದ್ದು ಸಾಹಿತ್ಯ ಸಾಂಸ್ಕೃತಿಕ ಅಭಿಮಾನಿಗಳೆಲ್ಲರೂ ಈ ಇಬ್ಬರು ಅರ್ಹ ವ್ಯಕ್ತಿಗಳ ಆಯ್ಕೆಗಾಗಿ ಕರ್ನಾಟಕ ಸೇವಾ ಸಿಂಧು https://sevasindhu.karnataka.gov.inವೆಬ್ ಸೈಟಿನಲ್ಲಿ ಕ್ರಮವಾಗಿ ಸಾಹಿತ್ಯ ಮತ್ತು ಸಿನಿಮಾ, ರಂಗಭೂಮಿ

ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ, ರಂಗ ಕಲಾವಿದೆ ಸರೋಜಿನಿ ಶೆಟ್ಟಿ ನಾಮ ನಿರ್ದೇಶನ| ಅ.15ರಂದು ನಾಮ ನಿರ್ದೇಶನಕ್ಕೆ ಕೊನೆ ದಿನ Read More »

ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ| ಕೊಯ್ಯೂರು ಮೋರಿಯಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಆಕ್ಟೋಬರ್ 11 ರಂದು ಬೆಳಗ್ಗೆ ಮನೆಯ ಹತ್ತಿರದ ಮೋರಿಯಲ್ಲಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರಿಸಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅರಂತೊಟ್ಟು

ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ| ಕೊಯ್ಯೂರು ಮೋರಿಯಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ Read More »

ದೇವರಮನೆಗೆ ತೆರಳಿದ‌ ಬೆಳ್ತಂಗಡಿಯ ಯುವಕ ಕಾಣೆ

ಸಮಗ್ರ ನ್ಯೂಸ್: ಮೂಡಿಗೆರೆಯ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿಯ ಯುವಕನೊಬ್ಬ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನಿಂದ ನಾಲ್ಕು ಯುವಕರ ತಂಡ ದೇವರಮನೆಗೆ ಪ್ರವಾಸಕ್ಕೆ ತೆರಳಿದ್ದಾರೆ. ಈ ನಡುವೆ ಪ್ರವಾಸ ಮುಗಿಸಿ ಹಿಂದಿರುಗುವಾಗ ಗುಡ್ಡ ತೋಟ ಬಳಿ ಕಾರು ನಿಲ್ಲಿಸಿ ಯುವಕರು ಜಗಳವಾಡಿಕೊಂಡಿದ್ದಾರೆ. ಈ ವೇಳೆ ದೀಕ್ಷಿತ್ ಕಾರು ಹತ್ತದೆ ತೆರಳಿದ್ದು, ಯುವಕ ಕಣ್ಮರೆಯಾಗಿದ್ದಾನೆ. ಅ. 10ರ ಸಂಜೆ

ದೇವರಮನೆಗೆ ತೆರಳಿದ‌ ಬೆಳ್ತಂಗಡಿಯ ಯುವಕ ಕಾಣೆ Read More »

ಕಾಣಿಯೂರು: ಪ್ರಗತಿ ವಿದ್ಯದಸಂಸ್ಥೆ ವಿದ್ಯಾರ್ಥಿ ಮೋನಿಷ್ ತಂಟೆಪ್ಪಾಡಿ ಯೋಗಾಸನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ

ಸಮಗ್ರ ನ್ಯೂಸ್: ಅಮೃತ ಭಾರತೀ ವಿದ್ಯಾಲಯ ಹೆಬ್ರಿ ಯಲ್ಲಿ ನಡೆದ ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ನಾಲ್ಕನೇ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ. ಇವರು ಕಾಣಿಯೂರಿನ ಪ್ರಗತಿ ವಿದ್ಯಾಸಂಸ್ಥೆಯ ಆರನೇ ತರಗತಿ ವಿದ್ಯಾರ್ಥಿ. ಯೋಗ ಗುರು ಶಶಿಕಲಾ ಅವರ ಶಿಷ್ಯ.

ಕಾಣಿಯೂರು: ಪ್ರಗತಿ ವಿದ್ಯದಸಂಸ್ಥೆ ವಿದ್ಯಾರ್ಥಿ ಮೋನಿಷ್ ತಂಟೆಪ್ಪಾಡಿ ಯೋಗಾಸನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ Read More »

ಮಂಗಳೂರು: ಬೆಂಗ್ರೆ ಬಂದರಿನಲ್ಲಿ ಮೀನುಗಾರಿಕಾ ಬೋಟ್ ಬೆಂಕಿಗಾಹುತಿ

ಸಮಗ್ರ ನ್ಯೂಸ್: ಆಕಸ್ಮಿಕ ಬೆಂಕಿಗೆ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ಅ. 10ರಂದು ಮುಂಜಾನೆ 4.30ಕ್ಕೆ ಸಂಭವಿಸಿದೆ. ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಆವರಿಸಿ ಕೋಟ್ಯಾಂತರ ಮೌಲ್ಯದ ವಸ್ತು ನಾಶವಾಗಿದೆ. ಬೆಂಕಿ ಬಂದರಿನಲ್ಲಿ ಲಂಗರು ಹಾಕಿರುವ ಇನ್ನಷ್ಟು ಬೋಟ್ ಗಳಿಗೆ ಹರಡುವ ಮುನ್ಸೂಚನೆ ದೊರೆತ ಹಿನ್ನಲೆಯಲ್ಲಿ ಸ್ಥಳೀಯರು ಬೆಂಕಿ ತಗುಲಿದ ಬೋಟನ್ನು ಬಂದರಿನಿಂದ ನದಿ ಕಡೆಗೆ ಕೊಂಡೊಯ್ದಿದ್ದಾರೆ. ಸ್ಥಳೀಯರ ಮುನ್ನೆಚರಿಕೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಅರುಣ್

ಮಂಗಳೂರು: ಬೆಂಗ್ರೆ ಬಂದರಿನಲ್ಲಿ ಮೀನುಗಾರಿಕಾ ಬೋಟ್ ಬೆಂಕಿಗಾಹುತಿ Read More »

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉದ್ಯೋಗಿ ತನ್ನ ವಾಸದ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 9ರಂದು ವರದಿಯಾಗಿದೆ. ಮೃತ ಹನುಮಂತ (24) ಇವರು ಮೂಲತಃ ಬಾಗಲಕೋಟೆಯವರು ಎಂದು ತಿಳಿದುಬಂದಿದೆ. ಅವರು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿ ಕೂಡ ಆಗಿದ್ದಾರೆ. ಪ್ರಸ್ತುತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯ ಮೂಡಬಿದಿರೆ ಪೋಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ Read More »

ಮಂಗಳೂರು ವಿಮಾನ ನಿಲ್ದಾಣ ಅ. 31ರಿಂದ ಅದಾನಿ ಗ್ರೂಪ್ ಆಡಳಿತಕ್ಕೆ

ಸಮಗ್ರ ನ್ಯೂಸ್:ಮಂಗಳೂರು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಪೂರ್ಣ ನಿರ್ವಹಣೆಯನ್ನು ಅ. 31ರಿಂದ ಅದಾನಿ ಗ್ರೂಪ್ ಸಂಸ್ಥೆಗೆ ಕಾರ್ಯಾಚರಣೆ ಗುತ್ತಿಗೆ ಜವಾಬ್ದಾರಿ ಹೊತ್ತುಕೊಳ್ಳಲಿದೆ. ಮೂರು ವರ್ಷಗಳ ಹಿಂದೆ ಈ ಗುತ್ತಿಗೆ ಅದಾನಿ ಗ್ರೂಪ್ ಪಾಲಾಗಿತ್ತು. ಅಕ್ಟೋಬರ್ 31, 2020 ರಂದು, ಅದಾನಿ ಗ್ರೂಪ್ ದೇಶದ ಆರು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ವಹಿಸಿಕೊಂಡಿತ್ತು. ವಿಮಾನ ನಿಲ್ದಾಣಗಳ ಅಭಿವೃದ್ಧಿ ನಿಟ್ಟಿನಲ್ಲಿ ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರದ ನಿರ್ಧಾರವಾಗಿತ್ತು. ಅದಾನಿ ಗ್ರೂಪ್ ಮೊದಲು ನಗರದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತೆಗೆದುಕೊಂಡಿತು. ನಂತರ ಅದು

ಮಂಗಳೂರು ವಿಮಾನ ನಿಲ್ದಾಣ ಅ. 31ರಿಂದ ಅದಾನಿ ಗ್ರೂಪ್ ಆಡಳಿತಕ್ಕೆ Read More »