ಕರಾವಳಿ

ಸುಬ್ರಹ್ಮಣ್ಯ: ಮಹಿಳೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣೆ ವ್ಯಾಪ್ತಿಯ ಗುತ್ತಿಗಾರು ಗ್ರಾಮದ ವಳಲಂಬೆಯಲ್ಲಿ ಅ.02ರಂದು ನಡೆದಿದೆ. ಇಲ್ಲಿನ ನಿವಾಸಿ ಲಕ್ಷ್ಮಣ ಆಚಾರ್ಯ ಎಂಬವರ ಪತ್ನಿ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇಂದು ಮುಂಜಾನೆ ಮನೆಯಲ್ಲಿ ತನ್ನ ಮಗಳೊಂದಿಗೆ ಮುನಿಸಿಕೊಂಡ ಅವರು ಮನೆಬಿಟ್ಟು ಹೋಗಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಮೃತರು ಪತಿ ಹಾಗೂ ಮಕ್ಕಳನ್ನು ಅಗಲಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುಬ್ರಹ್ಮಣ್ಯ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಬ್ರಹ್ಮಣ್ಯ: ಮಹಿಳೆ ಆತ್ಮಹತ್ಯೆ Read More »

ಖ್ಯಾತ ನಟಿ ಅನುಷ್ಕಾ ಶೆಟ್ಟಿ ಮನೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸಂಗೀತ ನಿರ್ದೇಶಕ ಗುರುಕಿರಣ್ ಭೇಟಿ

ಸಮಗ್ರ ನ್ಯೂಸ್:ಟಾಲಿವುಡ್ ನ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರ ಮನೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಸಂಗೀತ ನಿರ್ದೇಶಕ ಗುರುಕಿರಣ್ ಭೇಟಿ ನೀಡಿದರು. ಬೆಂಗಳೂರಿನಲ್ಲಿ ಮೊತ್ತಮೊದಲನೇ ಬಾರಿಗೆ ನಡೆಯುವ ಕರಾವಳಿ ಕ್ರೀಡೆ ನಮ್ಮ ಕಂಬಳದ ನೇತೃತ್ವ ವಹಿಸಿರುವ ಅಶೋಕ್ ಕುಮಾರ್ ರೈ ಮತ್ತು ಸಂಗೀತ ನಿರ್ದೇಶಕ ಗುರುಕಿರಣ್ ಅ. 2ರಂದು ಟಾಲಿವುಡ್ ನ ಖ್ಯಾತ ನಟಿ ಅನುಷ್ಕಾ ಶೆಟ್ಟಿಯವರ ಇಂದಿರಾ ನಗರದ ನಿವಾಸಕ್ಕೆ ಭೇಟಿ ನೀಡಿದರು. ಅನುಷ್ಕಾ ಶೆಟ್ಟಿಯವರ ತಂದೆ ವಿಠ್ಠಲ್ ಶೆಟ್ಟಿ,

ಖ್ಯಾತ ನಟಿ ಅನುಷ್ಕಾ ಶೆಟ್ಟಿ ಮನೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸಂಗೀತ ನಿರ್ದೇಶಕ ಗುರುಕಿರಣ್ ಭೇಟಿ Read More »

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಗಾಂಧೀ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಸಮಗ್ರ ನ್ಯೂಸ್:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಅ.2 ರಂದು ಪೋಷಕರ ಸಮ್ಮುಖದಲ್ಲಿ ಗಾಂಧೀ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಲ್ಲಾ ಪೋಷಕರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಾಂಧೀಜಿಯವರ ಚರಿತ್ರೆ ಮತ್ತು ತತ್ವಗಳಾದ ಸತ್ಯ ಮತ್ತು ಅಹಿಂಸೆ ಬಗ್ಗೆ ಕಥೆಯ ಮುಖಾಂತರ ಸಂಸ್ಥೆಯ ಸಂಚಾಲಕಿ ಗೀತಾಂಜಲಿ ಅವರು ತಿಳಿಸಿಕೊಟ್ಟರು. ಮಕ್ಕಳು ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ವೇಷ ಭೂಷಣ ಧರಿಸಿ ಚರಿತ್ರೆಯ ಬಗ್ಗೆ ತಿಳಿದುಕೊಂಡರು. ಕೊನೆಯಲ್ಲಿ ಗಾಂಧೀಜಿಯವರ ಪ್ರಿಯವಾದ

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಗಾಂಧೀ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ Read More »

ಕಡಬ: ಸ್ಕೂಟರ್ ಡಿಕ್ಕಿ; ಪಾದಚಾರಿ ಮಹಿಳೆ ಸಾವು

ಸಮಗ್ರ ನ್ಯೂಸ್:- ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಆ .1 ರಂದು ರಾತ್ರಿ ನಡೆದಿದೆ. ಮೃತ ಮಹಿಳೆ ಮರ್ಧಾಳ ನಿವಾಸಿ ದಿವಂಗತ ಅಬೂಬಕ್ಕರ್ ಎಂಬವರ ಪತ್ನಿ ಅವ್ವಮ್ಮ ಎಂದು ತಿಳಿದಿದ್ದು, ಇವರು ಭಾನುವಾರ ರಾತ್ರಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಮಹಿಳೆಯನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ

ಕಡಬ: ಸ್ಕೂಟರ್ ಡಿಕ್ಕಿ; ಪಾದಚಾರಿ ಮಹಿಳೆ ಸಾವು Read More »

ಮಂಗಳೂರು: ಮಹೇಶ್ ಖಾಸಗಿ ಬಸ್ ಗಳ ಮಾಲೀಕ ಪ್ರಕಾಶ್ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಮಂಗಳೂರಿನ ಖಾಸಗಿ ಬಸ್ ಕ್ಷೇತ್ರದಲ್ಲಿ ಬಹಳಷ್ಟು ಹೆಸರುವಾಸಿಯಾದ ಮಹೇಶ್ ಬಸ್ ಮಾಲಕ ತಾನು ವಾಸಿಸುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಹೇಶ್ ಬಸ್ ಮಾಲೀಕ ಜಯರಾಮ ಶೇಖ ಎಂಬವರ ಪುತ್ರ ಪ್ರಕಾಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ಕ್ಷೇತ್ರದಲ್ಲಿ ತುಳುನಾಡಿನಲ್ಲಿ ಹೆಸರುವಾಸಿಯಾದ ಮಹೇಶ್ ಬಸ್ ನೂರಾರು ಬಸ್ ಗಳನ್ನು ಹೊಂದಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಮೊರಿಸ್ಕಾ ಅಪಾರ್ಟ್ ಮೆಂಟ್ ನಿಂದ ನೇಣು ಬಿಗಿದು ಆತ್ಮಹತ್ಯೆಗೈದುಕೊಂಡಿದ್ದಾರೆ.

ಮಂಗಳೂರು: ಮಹೇಶ್ ಖಾಸಗಿ ಬಸ್ ಗಳ ಮಾಲೀಕ ಪ್ರಕಾಶ್ ಆತ್ಮಹತ್ಯೆಗೆ ಶರಣು Read More »

ಮುಲ್ಕಿ: ಮೊಬೈಲ್ ಟವರ್ ಏರಿ ಕುಳಿತ ಭೂಪ

ಸಮಗ್ರ ನ್ಯೂಸ್: ಬಿಜಾಪುರದಲ್ಲಿ ರಸ್ತೆ ರಿಪೇರಿಗಾಗಿ ಬಂದಿದ್ದ ವಕ್ತಿಯೊಬ್ಬ ಮುಲ್ಕಿಯಲ್ಲಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಬಿಜಾಪುರ ಮೂಲದ ಸತೀಶ್ ತನ್ನ ಊರಿನ ರಸ್ತೆ ದುರಸ್ತಿಗಾಗಿ ಮುಲ್ಕಿಯ ಕೊಲ್ನಾಡಿನ ಕೈಗಾರಿಕಾ ಪ್ರದೇಶದಲ್ಲಿರುವ ಮೊಬೈಲ್ ಟವರ್ ಏರಿ ಕುಳಿತಿದ್ದಾನೆ. ಬೆಳಿಗ್ಗೆ 10 ಗಂಟೆಗೆ ಸತಿಶ್ ಮೊಬೈಲ್ ಟವರ್ ಏರಿದ್ದು, ಸುಮಾರು ನಾಲ್ಕು ಘಂಟೆಗಳ ಕಾಲ ಟವರ್ ನಲ್ಲಿ ಕುಳಿತಿದ್ದಾನೆ. ಆದರೆ, ಇದು ಸಾರ್ವಜನಿಕರ ಗಮನಕ್ಕೆ ಬಂದಿರಲಿಲ್ಲ. ಈ ನಡುವೆ ಸತೀಶ್ ನನ್ನು ಟವರ್ ನಲ್ಲಿ ನೋಡಿದ

ಮುಲ್ಕಿ: ಮೊಬೈಲ್ ಟವರ್ ಏರಿ ಕುಳಿತ ಭೂಪ Read More »

ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮ್ಮಿಲನ ಉದ್ಘಾಟನೆ

ಸಮಗ್ರ ನ್ಯೂಸ್:ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಕೇರ್ಪಳ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ ಅ.1ರಂದು ನಡೆದ ಗಾಣಿಗ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಸುಳ್ಯ ವಿಧಾನಸಭಾ ಶಾಸಕಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಸ್ಪೀಕರ್ ಸುದರ್ಶನ್ ಭಾಗಿಯಾದರು. ಬೆಂಗಳೂರು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಶ್ರೀ ಪೂರ್ಣಾನಂದ ಪುರಿ ಮಹಾಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಾದ ನಾಟಿವೈದ್ಯ ಮಾನ ಬಂಟ್ರಿಬೈಲ್, ಯಕ್ಷಗಾನ

ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮ್ಮಿಲನ ಉದ್ಘಾಟನೆ Read More »

ಸುಳ್ಯ: ಬಿಜೆಪಿ ಯುವ ಮೋರ್ಚಾ,ಸುಳ್ಯ ಮಂಡಲದ ವತಿಯಿಂದ ಐನೆಕಿದು ಬಸ್ ನಿಲ್ದಾಣದ ಪರಿಸರದಲ್ಲಿ ಸ್ಚಚ್ಚತಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲದ ವತಿಯಿಂದ ಸೇವಾ ಪಾಕ್ಷಿಕದ ಅಂಗವಾಗಿ ಸೆ. 01ರಂದು ಐನೆಕಿದು ಬಸ್ ನಿಲ್ದಾಣದ ಪರಿಸರದಲ್ಲಿ ಸ್ಚಚ್ಚತಾ ಕಾರ್ಯಕ್ರಮ ಯುವ ಮೋರ್ಚಾದ ಕಾರ್ಯಕರ್ತರಿಂದ ನಡೆಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾದ ಸುಳ್ಯ ಮಂಡಲದ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್., ಪ್ರಧಾನ ಕಾರ್ಯದರ್ಶಿ ಮನುದೇವ್ ಪರಮಲೆ, ಉಪಾಧ್ಯಕ್ಷ ದಿಲೀಪ್ ಉಪ್ಪಳಿಕೆ, ನಿಸರ್ಗ ಯುವಕ ಮಂಡಲ ಐನೆಕಿದು ಇದರ ಅಧ್ಯಕ್ಷ ಬುಕ್ಷಿತ್ ನೀರ್ಪಡಿ ಹಾಗೂ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸುಳ್ಯ: ಬಿಜೆಪಿ ಯುವ ಮೋರ್ಚಾ,ಸುಳ್ಯ ಮಂಡಲದ ವತಿಯಿಂದ ಐನೆಕಿದು ಬಸ್ ನಿಲ್ದಾಣದ ಪರಿಸರದಲ್ಲಿ ಸ್ಚಚ್ಚತಾ ಕಾರ್ಯಕ್ರಮ Read More »

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆಯು ಸೆ. 30ರಂದು ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 2023-24 ನೇ ಸಾಲಿನ ವಿದ್ಯಾರ್ಥಿ ಪರಿಷತ್ತನ್ನು ಕೇಶವ ಬಂಗೇರ, ಮಂಗಳೂರು ಕಾಲೇಜಿನ ಕನ್ನಡ ಉಪನ್ಯಾಸಕರು ನಾರಾಯಣಗುರು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ದೇವಳದ ಕಛೇರಿ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಶಿವಸುಬ್ರಹ್ಮಣ್ಯ ಭಟ್, ದೇವಳದ

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ Read More »

ಕೆಎಸ್ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯು ಸೆ. 13ರಂದು ನಡೆಯಿತು. ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುಹಾಸ್ ಎಂ.ಜಿ. (ತೃತೀಯ ಬಿ ಕಾಂ) ಉಪಾಧ್ಯಕ್ಷರಾಗಿ ಪೂಜಾ ಎಂ.(ತೃತೀಯ ಬಿ ಕಾಂ) ಕಾರ್ಯದರ್ಶಿಯಾಗಿ ಕೌಶಿಕ್ ಕೆ.ವಿ. (ದ್ವಿತೀಯ ಬಿ ಕಾಂ) ಇವರು ಆಯ್ಕೆಯಾದರು. ವಿದ್ಯಾರ್ಥಿ ಸಂಘದ ಅಧಿಕಾರಿ ಪ್ರಸಾದ್ ಎನ್. ಸಹಾಯಕ ಅಧಿಕಾರಿ ರಾಮ್ ಪ್ರಸಾದ್ ಮತ್ತು ಪ್ರಮೀಳಾ ಅವರು ಚುನಾವಣೆಯನ್ನು ನಡೆಸಿದರು. ಆಯ್ಕೆಯಾದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಅಭಿನಂದಿಸಿದರು.

ಕೆಎಸ್ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ Read More »