ಕರಾವಳಿ

ಸುಬ್ರಹ್ಮಣ್ಯ: ಕಾರಿನ ಗಾಜು ಹೊಡೆದು ಚಿನ್ನ, ದಾಖಲೆಗಳ ಬ್ಯಾಗ್ ಕಳವು

ಸುಬ್ರಹ್ಮಣ್ಯ: ಕ್ಷೇತ್ರ ಸಂದರ್ಶನಕ್ಕೆ ಬಂದಿದ್ದ ಕೇರಳದ ವ್ಯಕ್ತಿ ಯೊಬ್ಬರ ಕಾರಿನ ಗಾಜು ಹೊಡೆದು ಚಿನ್ನ, ದಾಖಲೆ ಇದ್ದ ಬ್ಯಾಗ್ ಕಳವು ಗೈದಿರುವ ಘಟನೆ ರವಿವಾರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಡೆದಿದೆ.ಕೇರಳದ ಕನ್ನೂರು ಜಿಲ್ಲೆಯ ಪಾಡೋಯೋಟು ಚಲ್ಲ್‌ ನಿವಾಸಿ ಸುಯಿಶ್‌ ಟಿ.ಸಿ. (34) ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ಅವರು ರವಿವಾರ ಸಂಜೆ ಕಾರಿನಲ್ಲಿ, ತನ್ನ ಚಿಕ್ಕಮ್ಮನೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ಬಂದಿದ್ದು, ರಥ ಬೀದಿಯ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ ಹೋಗಿದ್ದಾರೆ. ಬಳಿಕ

ಸುಬ್ರಹ್ಮಣ್ಯ: ಕಾರಿನ ಗಾಜು ಹೊಡೆದು ಚಿನ್ನ, ದಾಖಲೆಗಳ ಬ್ಯಾಗ್ ಕಳವು Read More »

ಪುತ್ತೂರು: ಅನಿತಾ ಬೀಡಿ ವರ್ಕ್ಸ್ ಕಂಪೆನಿ ಮಾಲೀಕರ‌ ಮನೆಗೆ ಐಟಿ ದಾಳಿ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಪ್ರತಿಷ್ಟಿತ ಬೀಡಿ ಕಂಪೆನಿ ಅನಿತಾ ಬೀಡಿ ವರ್ಕ್ ನ ಮಾಲೀಕರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿರುವ ಅನಿತಾ ಬೀಡಿ ವರ್ಕ್ಸ್ ಮಾಲೀಕರ ಮಹಮ್ಮದ್ ಆಲಿ ಯಾನೆ ಮಮ್ಮು ಅವರ ಮನೆ ಮೇಲೆ ಐಟಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಪೆರ್ನೆ ಸಮೀಪ ಇರುವ ಅವರ ಮನೆ ಬಳಿಯೇ ಅನಿತಾ ಬೀಡಿ ಕಂಪೆನಿ

ಪುತ್ತೂರು: ಅನಿತಾ ಬೀಡಿ ವರ್ಕ್ಸ್ ಕಂಪೆನಿ ಮಾಲೀಕರ‌ ಮನೆಗೆ ಐಟಿ ದಾಳಿ Read More »

ಬೆಳ್ತಂಗಡಿ: ಅರಣ್ಯಾಧಿಕಾರಿಗಳಿಂದ ಮನೆ ತೆರವಿಗೆ ಯತ್ನ| ಶಾಸಕರ ತಂಡದಿಂದ ತೀವ್ರ ತರಾಟೆ

ಸಮಗ್ರ ನ್ಯೂಸ್: ಹಲವಾರು ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ವಾಸವಿದ್ದ ಕುಟುಂಬವನ್ನು ಒಕ್ಕಲೆಬ್ಬಿಸಲು ಬಂದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ಪರಿಷತ್‌ ಸದಸ್ಯರು ಒಟ್ಟಾಗಿ ತರಾಟೆಗೆತ್ತಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಂಜದಲ್ಲಿ ನಡೆದಿದೆ. ಕಳಂಜ ಪ್ರದೇಶದಲ್ಲಿ ಹಲವಾರು ವರ್ಷಗಳಿಂದ ನೆಲೆಸಿರುವ ಧರ್ಮಣ್ಣ ಗೌಡ ಎಂಬವರಿಗೆ ಸೇರಿದ ಮನೆ ತೆರವಿಗೆ ಅಧಿಕಾರಿಗಳು ಸೋಮವಾರ ಬಂದಿದ್ದರು. ಈ ವೇಳೆ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಸುಳ್ಯ ಶಾಸಕಿ ಭಾಗೀರಥಿ

ಬೆಳ್ತಂಗಡಿ: ಅರಣ್ಯಾಧಿಕಾರಿಗಳಿಂದ ಮನೆ ತೆರವಿಗೆ ಯತ್ನ| ಶಾಸಕರ ತಂಡದಿಂದ ತೀವ್ರ ತರಾಟೆ Read More »

ಪುತ್ತೂರು: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿಯ ಪಡ್ಡು ಬಳಿ ಅ. 10ರಂದು ನಡೆದಿದೆ. ಮೃತರನ್ನು ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್(17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಪುತ್ತೂರು: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಇಸ್ರೇಲ್ ನಿಂದ ಮರಳಲು ನಿರಾಕರಿಸಿದ ಉಡುಪಿ ಮೂಲದ ನರ್ಸ್

ಸಮಗ್ರ ನ್ಯೂಸ್: ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಸಿದ್ಧತೆ ಭರದಿಂದ ಸಾಗಿದೆ. ಹಲವರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಈ ನಡುವೆ ಉಡುಪಿಯ ನರ್ಸ್‌ವೊಬ್ಬರು ದೇಶಕ್ಕೆ ಮರಳಲು ನಿರಾಕರಿಸಿದ್ದಾರೆ. ‘ಭಾರತ ನನಗೆ ಜನ್ಮ ನೀಡಿತು, ಇಸ್ರೇಲ್ ಜೀವ ನೀಡಿತು; ಕಷ್ಟದ ಸಮಯದಲ್ಲಿ ಅವರೊಂದಿಗೆ ನಿಲ್ಲುತ್ತೇನೆ’ ಎಂದು ಇಸ್ರೇಲ್‌ನ ಟೆಲ್ ಅವಿವ್-ಯಾಫೊದಲ್ಲಿದ್ದು, ನರ್ಸ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರಮೀಳಾ ಪ್ರಭು ಹೇಳಿದ್ದಾರೆ. ಅಕ್ಟೋಬರ್ 7 ರಂದು ಇಸ್ರೇಲ್‌ನಲ್ಲಿ ರಾತ್ರಿ 8.30ರ ಸುಮಾರಿಗೆ ದಾಳಿ ಆರಂಭವಾಗಿತ್ತು. ಸೈರನ್ ಮೊಳಗುವುದನ್ನು ಕೇಳಿದ ಅವರು, ತಮ್ಮ

ಇಸ್ರೇಲ್ ನಿಂದ ಮರಳಲು ನಿರಾಕರಿಸಿದ ಉಡುಪಿ ಮೂಲದ ನರ್ಸ್ Read More »

ಸುಳ್ಯ:ಬಸ್ ಹತ್ತಲು ಯತ್ನಿಸಿದ ಪ್ರಯಾಣಿಕ ಆಯತಪ್ಪಿ ಬಿದ್ದು ಚಿಕಿತ್ಸೆ ಫಲಿಸದೆ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ ಹತ್ತಲು ಯತ್ನಿಸಿ ವ್ಯಕ್ತಿಯೊಬ್ಬರು ರಸ್ತೆಗೆ ಎಸೆಯಲ್ಪಟ್ಡು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯ ಆಲೆಟ್ಟಿ ಕ್ರಾಸ್ ಬಳಿ ನಡೆದಿದೆ. ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಅವರು ಸುಳ್ಯ ಆಲೆಟ್ಟಿ ಕ್ರಾಸ್ ಬಳಿ ಖಾಸಗಿ ಬಸ್ ಹತ್ತಲು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಚಿಕಿತ್ಸೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆ ಬಳಿಕ ಮನೆಯಲ್ಲೇ ಮರುದಿನ ಮುಂಜಾನೆ ಸಮಸ್ಯೆ ಉಲ್ಬಣವಾದ

ಸುಳ್ಯ:ಬಸ್ ಹತ್ತಲು ಯತ್ನಿಸಿದ ಪ್ರಯಾಣಿಕ ಆಯತಪ್ಪಿ ಬಿದ್ದು ಚಿಕಿತ್ಸೆ ಫಲಿಸದೆ ಸಾವು Read More »

”ಚಪ್ಪಲಿಯಿಂದ ಪೆಟ್ಟು ತಿಂದವನ ಕೈಯಿಂದ ನಾನು ಬುದ್ದಿ ಕಲೀಬೇಕಿಲ್ಲ”| ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ವಿರುದ್ಧ ಗುಡುಗಿದ ತುಳು ವಾಗ್ಮಿ ತಮ್ಮಣ್ಣ ಶೆಟ್ಟಿ

ಸಮಗ್ರ ನ್ಯೂಸ್: ” ಒಬ್ಬ ಹೆಣ್ಣುಮಗಳಿಂದ ಚಪ್ಪಲಿಯಿಂದ ಪೆಟ್ಟು ತಿಂದು ಮರ್ಯಾದೆ ಕಳೆದುಕೊಂಡವನಿಂದ ನಾನು ಬುದ್ದಿ ಕಲಿಯಬೇಕಾದ ಅವಶ್ಯಕತೆ ಇಲ್ಲ. ನಿನ್ನ ಬಳಿ ನನ್ನ ಕುರಿತಾದ ದಾಖಲಿಗಳಿದ್ರೆ ನಿನ್ನ ಪೆಟ್ಟಿಗೆಯಲ್ಲಿ ಹಾಕಿ ತೋರಿಸು”. ಹೀಗೆ ಏಕವಚನದಲ್ಲೇ ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿಯ ಚಳಿ ಬಿಡಿಸಿದ್ದು ತುಳು ವಾಗ್ಮಿ ತಮ್ಮಣ್ಣ ಶೆಟ್ಟಿ. ಸುಳ್ಯದ ಐವರ್ನಾಡಿನಲ್ಲಿ ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ”ಒಬ್ಬ ಹೆಣ್ಣುಬಾಕ, ಪಿಂಪ್, ಟ್ರಾವೆಲ್

”ಚಪ್ಪಲಿಯಿಂದ ಪೆಟ್ಟು ತಿಂದವನ ಕೈಯಿಂದ ನಾನು ಬುದ್ದಿ ಕಲೀಬೇಕಿಲ್ಲ”| ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ವಿರುದ್ಧ ಗುಡುಗಿದ ತುಳು ವಾಗ್ಮಿ ತಮ್ಮಣ್ಣ ಶೆಟ್ಟಿ Read More »

ಕಟ್ಟಡ ಕಾರ್ಮಿಕರ ಸಂಘಟನೆ ವತಿಯಿಂದ ಅ. 9ರಂದು ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಹಲವು ಬದಲಾವಣೆಗಳು ಆಗುತ್ತಿದ್ದು ಸವಲತ್ತುಗಳನ್ನು ಕಡಿತಗೊಳಿಸುವ ಕಾರ್ಯಯೋಜನೆಯಾಗುತ್ತಿದೆ ಎಂದು ಮೂಲದಿಂದ ತಿಳಿದು ಬಂದಿದೆ. ಕಾರ್ಮಿಕರಿಗೆ ಅನ್ಯಾಯ ಎಸಗುವ ಸಕಲ ಯೋಜನೆಯು ಸಿದ್ಧವಾಗಿದೆ ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಅನ್ನು ಕೂಡ ತಡೆ ಹಿಡಿದಿದೆ. ಕಟ್ಟಡ ಕಾರ್ಮಿಕರ ಹಕ್ಕನ್ನು ಕಸಿದುಕೊಳ್ಳುವ ಸಕಲ ಸಿದ್ಧತೆಯೇ ನಡೆದಿದೆ. ಆದ್ದರಿಂದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಅ. 3ರಂದು ಬೆಳಿಗ್ಗೆ ಘಂಟೆ 9.00 ಕ್ಕೆ ಸುಳ್ಯ ಖಾಸಗಿ ಬಸ್ ನಿಲ್ದಾಣದ

ಕಟ್ಟಡ ಕಾರ್ಮಿಕರ ಸಂಘಟನೆ ವತಿಯಿಂದ ಅ. 9ರಂದು ಬೃಹತ್ ಪ್ರತಿಭಟನೆ Read More »

ಸುಳ್ಯ: ವಿದ್ಯುತ್ ಶಾಕ್ ಗೆ ಮಹಿಳೆ ಸಾವು

ಸಮಗ್ರ ನ್ಯೂಸ್: ವಿದ್ಯುತ್ ಶಾಕ್ ತಗುಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಸಮೀಪದ ಬೊಮ್ಮಾರು ಬಳಿ ಸಂಭವಿಸಿದೆ. ಇಲ್ಲಿನ‌‌ ನೆಲ್ಲೂರು ಕೇಮ್ರಾಜೆ ಗ್ರಾಮದ ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ಪ್ರಾಯ) ಎಂಬವರೇ ಮೃತ ದುರ್ದೈವಿ. ಲಲಿತಾ ರವರು ದಿನಂಪ್ರತಿ ಮಲಗುವ ಸಮಯದಲ್ಲಿ‌ ಇನ್ವರ್ಟರ್ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್ ನ್ನು ತೆಗೆದು ಮಲಗುತ್ತಿದ್ದರೆನ್ನಲಾಗಿದ್ದು, ನಿನ್ನೆ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ.

ಸುಳ್ಯ: ವಿದ್ಯುತ್ ಶಾಕ್ ಗೆ ಮಹಿಳೆ ಸಾವು Read More »

ನಾಳೆ(ಅ.08) ಸುಳ್ಯದ ಐವರ್ನಾಡಿನಲ್ಲಿ ಸೌಜನ್ಯ ಪರ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆ

ಸಮಗ್ರ ನ್ಯೂಸ್: ಸೌಜನ್ಯ ಪರ ಹೋರಾಟ ಸಮಿತಿ ಐವರ್ನಾಡು ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ನಾಳೆ(ಅ.08) ಐವರ್ನಾಡಿನ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ, ತುಳು ಜಾನಪದ ವಾಗ್ಮಿ ತಮ್ಮಣ್ಣ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಪ್ರಸನ್ನ ರವಿ, ಸೌಜನ್ಯಳ ತಾಯಿ ಕುಸುಮಾವತಿ, ನಿವೃತ್ತ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟನವರ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ. ನ್ಯಾಯಕ್ಕಾಗಿ ಸೌಜನ್ಯ ಹೋರಾಟ ಸಮಿತಿಯ ಸುಳ್ಯ

ನಾಳೆ(ಅ.08) ಸುಳ್ಯದ ಐವರ್ನಾಡಿನಲ್ಲಿ ಸೌಜನ್ಯ ಪರ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆ Read More »