ಕರಾವಳಿ

ಮಂಗಳೂರು:ಜಿಎಸ್‌ಟಿ ಮಾಹಿತಿ ಕಾರ್ಯಾಗಾರ| ಸಂಪನ್ನ ರಾಷ್ಟ್ರ ನಿರ್ಮಾಣ ಸಹಕಾರ ಭಾರತಿ ಧ್ಯೇಯ- ಕೊಂಕೋಡಿ

ಸಮಗ್ರ ನ್ಯೂಸ್: ಪಾರದರ್ಶಿತ್ವದ ಜತೆ ಪ್ರಾಮಾಣಿಕ ಜನರ ಬಲದಿಂದ ಸಹಕಾರಿ ರಂಗವನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ಕಾರ್ಯತತ್ಪರ ನಿಸ್ವಾರ್ಥ ಸಂಘಟನೆ ಸಹಕಾರ ಭಾರತಿ. ಸಹಕಾರಿ ಕ್ಷೇತ್ರದ ಸದೃಢತೆ ಮುಖೇನ ಸಂಪನ್ನ ರಾಷ್ಟ್ರ ನಿರ್ಮಾಣ ಸಹಕಾರ ಭಾರತಿಯ ಪ್ರಧಾನ ಧ್ಯೇಯ ಎಂದು ಕ್ಯಾಂಪ್ಕೋ ಮಾಜಿ ಅಧ್ಯಕ್ಷ, ಸಹಕಾರ ಭಾರತಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಕೊಂಕೋಡಿ ಪದ್ಮನಾಭ ಹೇಳಿದರು. ಸಹಕಾರಿ ಭಾರತಿ ಮಹಾನಗರ ಜಿಲ್ಲೆ ಮಂಗಳೂರು ವತಿಯಿಂದ, ಅ.2ರಂದು ನಗರದ ಶರವು ಶ್ರೀ ಮಹಾಗಣಪತಿ ದೇಗುಲ ಬಳಿಯ ಬಾಲಂಭಟ್ ಸಭಾಂಗಣದಲ್ಲಿ ಸಂಪನ್ನಗೊಂಡ,

ಮಂಗಳೂರು:ಜಿಎಸ್‌ಟಿ ಮಾಹಿತಿ ಕಾರ್ಯಾಗಾರ| ಸಂಪನ್ನ ರಾಷ್ಟ್ರ ನಿರ್ಮಾಣ ಸಹಕಾರ ಭಾರತಿ ಧ್ಯೇಯ- ಕೊಂಕೋಡಿ Read More »

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಲಾರಿ

ಸಮಗ್ರ ನ್ಯೂಸ್: ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಘಟನೆ ಅ. 7ರಂದು ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ನಾವೂರಿನ ಹಂಚಿಕಟ್ಟೆ ಎಂಬಲ್ಲಿ ನಡೆದಿದೆ. ಲಾರಿಯು ಬಂಟ್ವಾಳ ಕಡೆಯಿಂದ ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಕೆಳಕ್ಕೆ ಕಮರಿಗೆ ಮಗುಚಿ ಬಿದ್ದಿದೆ. ಪಕ್ಕದಲ್ಲೇ ವಿದ್ಯುತ್ ತಂತಿ ಹಾದು ಹೋಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸದೇ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಲಾರಿ Read More »

ಚೂಂತಾರು ವೇ.ಮೂ. ಲಕ್ಷ್ಮೀನಾರಾಯಣ ಭಟ್ಟರ ಸ್ಮರಣಾರ್ಥ ವೆಂಕಟ್ರಮಣ ಭಟ್ ಮತ್ತು ಪದ್ಮನಾಭ ಭಟ್ಟರಿಗೆ ವೈದಿಕರಿಗೆ ಪುರಸ್ಕಾರ

ಸಮಗ್ರ ನ್ಯೂಸ್:ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ ಚೂಂತಾರುರವರ ಸ್ಮರಣಾರ್ಥ ವೈದಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅವರ ಪುಣ್ಯತಿಥಿಯ ದಿನವಾದ ಅ. 3ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಆಶ್ರಯದಲ್ಲಿ ಚೂಂತಾರು ಉಪಾಸನಾದಲ್ಲಿ ನಡೆಯಿತು. ಪ್ರಥಮ ವರ್ಷದ ಪುರಸ್ಕಾರವನ್ನು ಕೊಳ್ತಿಗೆ ಗ್ರಾಮದ ಚೌರ್ಕಾಡು ಮನೆತನದವರಾದ ದರ್ಭೆ ವೆಂಕಟ್ರಮಣ ಭಟ್ ಮತ್ತು ಐವರ್ನಾಡು ದೇವಸ್ಥಾನದ ಅರ್ಚಕ ಪರಕ್ಕಜೆ ಮೂಲದ ಪದ್ಮನಾಭ ಭಟ್ ರಿಗೆ ನೀಡಲಾಯಿತು.ವಂದಿಸಿದರು. ಪ್ರಶಸ್ತಿಯನ್ನು ರೂ. 5000/- ಮೊತ್ತದೊಂದಿಗೆ, ಸನ್ಮಾನಪತ್ರವನ್ನು ನೀಡಲಾಯಿತು. ನೀರಬಿದಿರೆ ಶಂಕರ ಭಟ್

ಚೂಂತಾರು ವೇ.ಮೂ. ಲಕ್ಷ್ಮೀನಾರಾಯಣ ಭಟ್ಟರ ಸ್ಮರಣಾರ್ಥ ವೆಂಕಟ್ರಮಣ ಭಟ್ ಮತ್ತು ಪದ್ಮನಾಭ ಭಟ್ಟರಿಗೆ ವೈದಿಕರಿಗೆ ಪುರಸ್ಕಾರ Read More »

ಪ್ರಚೋದನಕಾರಿ ಹೇಳಿಕೆ| ಶಿವಮೊಗ್ಗದಲ್ಲಿ ಅರುಣ್ ಪುತ್ತಿಲ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ನಿನ್ನೆ ಶಿವಮೊಗ್ಗದ ರಾಗಿಗುಡ್ಡದ ಗಲಭೆ ಪೀಡಿತ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದರು. ಈ ವೇಳೆ‌ ಅಲ್ಲಿನ ಜನರೊಂದಿಗೆ ಮಾತನಾಡುತ್ತಾ ಮನೆಯಲ್ಲಿದ್ದ ಆಯುಧಗಳಿಗೆ ಪೂಜೆ ಮಾಡಿ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿಕೆ ನೀಡಿದ್ದರು. ರಾಗಿಗುಡ್ಡ ಗಲಭೆ ಪೀಡಿತ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಯಿದ್ದು ನಿಷೇಧಾಜ್ಞೆ ಇದ್ದರೂ ಇದರ ನಡುವೆ ಅರುಣ್ ಕುಮಾರ್ ಪುತ್ತಿಲ ಪ್ರಚೋದನಾಕಾರಿ‌

ಪ್ರಚೋದನಕಾರಿ ಹೇಳಿಕೆ| ಶಿವಮೊಗ್ಗದಲ್ಲಿ ಅರುಣ್ ಪುತ್ತಿಲ ವಿರುದ್ದ ದೂರು ದಾಖಲು Read More »

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನಾಳೆ ಸುಬ್ರಹ್ಮಣ್ಯಕ್ಕೆ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀ ಹೆಚ್ ಡಿ ದೇವೇಗೌಡರು ನಾಳೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಮಧ್ಯಾಹ್ನ ಪತ್ನಿ ಸಮೇತರಾಗಿ ಬೆಂಗಳೂರಿನಿಂದ ಹೆಲಿಕಾಪ್ಟರ್‍ನಲ್ಲಿ ಹೊರಡಲಿರುವ ದೇವೇಗೌಡರು, ಬಿಳಿನೆಲೆ ಗೋಪಾಲಕೃಷ್ಣ ಫ್ರೌಡಶಾಲೆ ಮೈದಾನದಲ್ಲಿ ಇಳಿದು ನಂತರ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ. ನಾಳೆ ಸಂಜೆ 6.00 ಗಂಟೆಗೆ ಸುಬ್ರಹ್ಮಣ್ಯ ದೇಗುಲದಲ್ಲಿ ಪೂಜೆ ಸಲ್ಲಿಸಲಿರುವ ದೇವೇಗೌಡರು, ರಾತ್ರಿ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರದಂದು ಬೆಳಿಗ್ಗೆ ಪೂಜೆ ಸಲ್ಲಿಸಿ, ನಂತರ ಬೆಂಗಳೂರಿಗೆ ತೆರಳಲಿದ್ದಾರೆ.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನಾಳೆ ಸುಬ್ರಹ್ಮಣ್ಯಕ್ಕೆ Read More »

ಸುಳ್ಯ: ವಿದ್ಯಾಮಾತಾ ಅಕಾಡಮಿಯಲ್ಲಿ ಉಚಿತ ತರಬೇತಿ ಕಾರ್ಯಗಾರ ನೋಂದಣಿ ಪ್ರಾರಂಭ

ಸಮಗ್ರ ನ್ಯೂಸ್: ವಿದ್ಯಾಭ್ಯಾಸದ ನಂತರ ನಾವೇನು ಮಾಡಬೇಕು? ಎಂಬುದಕ್ಕೆ ಉತ್ತರವಾಗಿ ಇದೇ ಬರುವ ದಿನಾಂಕ ಸೆ. 15ರ ಭಾನುವಾರದಂದು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 3:30ರ ವರೆಗೆ ಐಎಎಸ್, ಕೆಎಎಸ್, ಬ್ಯಾಂಕಿಂಗ್, ಎಸ್.ಡಿ .ಎ ಮತ್ತು ಎಫ್.ಡಿ.ಎ ಇತ್ಯಾದಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಮಾಡುವುದು ಹೇಗೆ ಮತ್ತು ನೇಮಕಾತಿಗಳ ವಿವರ, ಪ್ರಶ್ನೆಪತ್ರಿಕೆಗಳ ಸ್ವರೂಪ – ಪರೀಕ್ಷೆಗಳು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳ ಮೂಲಕ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ತನ್ನ

ಸುಳ್ಯ: ವಿದ್ಯಾಮಾತಾ ಅಕಾಡಮಿಯಲ್ಲಿ ಉಚಿತ ತರಬೇತಿ ಕಾರ್ಯಗಾರ ನೋಂದಣಿ ಪ್ರಾರಂಭ Read More »

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಮೇಲೆ ಅಕ್ರಮ ದಾಳಿ; ದೂರು ದಾಖಲು

ಸಮಗ್ರ ನ್ಯೂಸ್: ಸುಳ್ಯದ ಕುರುಂಜಿಭಾಗ್‌ನಲ್ಲಿರುವ ಪಾಲಿಟೆಕ್ನಿಕ್‌‌ ಕಾಲೇಜಿಗೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ| ಜ್ಯೋತಿ ಆರ್‌‌ ಪ್ರಸಾದ್‌‌ (52) ಎಂಬವರು ನೀಡಿದ ದೂರಿನಂತೆ ಐಪಿಸಿ ಕಲಂ 448, 506 ಜೊತೆಗೆ 34 ಯಂತೆ ಪ್ರಕರಣ ದಾಖಲಾಗಿದೆ. ದೂರುದಾರರ ಬಾವ ಡಾ |ಚಿದಾನಂದ, ಅವರ ಹೆಂಡತಿ ಶೋಭ ಚಿದಾನಂದ, ಮಗ ಅಕ್ಷಯ್‌‌ ಕೆ ಸಿ, ಮಗಳು

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಮೇಲೆ ಅಕ್ರಮ ದಾಳಿ; ದೂರು ದಾಖಲು Read More »

ಕಾಸರಗೋಡು: ರೈಲು ಬಡಿದು ಮಹಿಳೆ ಮೃತ್ಯು..!

ಸಮಗ್ರ ನ್ಯೂಸ್: ರೈಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೆ. 6ರಂದು ಸಂಜೆ ಕಾಸರಗೋಡಿನ ಕುಂಬಳೆ ಸಮೀಪದ ಪೆರುವಾಡ್ ಎಂಬಲ್ಲಿ ನಡೆದಿದೆ. ಮೃತಪಟ್ಟ ಶಂಶೀನಾ (36) ಅವರು ಪೇಟೆಗೆ ಬಂದು ಸಾಮಾಗ್ರಿ ಖರೀದಿಸಿ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

ಕಾಸರಗೋಡು: ರೈಲು ಬಡಿದು ಮಹಿಳೆ ಮೃತ್ಯು..! Read More »

ಧರ್ಮಸ್ಥಳ: ರೈಸ್ ಆಯಿಲ್ ಪ್ಲೋರ್ ಮಿಲ್ಸ್ ನ ಕಾರ್ಮಿಕ ಶವವಾಗಿ ಪತ್ತೆ| ತಿಂಗಳ ಹಿಂದೆ ನಡೆದ ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಧರ್ಮಸ್ಥಳದ ರೈಸ್ ಆಯಿಲ್ ಫ್ಲೋರ್ ಮಿಲ್ಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣಪ್ಪ ಸಫಲ್ಯ (60ವ) ಎಂಬವರ ಮೃತದೇಹ ಅ.3 ರಂದು ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿಸಿಟ್ಟಿರುವ ದೊಡ್ಡ ಗಾತ್ರದ ಸ್ಟೀಲ್ ಪಾತ್ರೆಯ ಒಳಗೆ ನೀರಿನಲ್ಲಿ ಕವುಚಿ ತೇಲಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮೃತರ ಪುತ್ರ ವಿನಯ್ ಕುಮಾರ್ ರವರ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಕೃಷ್ಣಪ್ಪ ಸಫಲ್ಯ ರವರು ರೈಸ್

ಧರ್ಮಸ್ಥಳ: ರೈಸ್ ಆಯಿಲ್ ಪ್ಲೋರ್ ಮಿಲ್ಸ್ ನ ಕಾರ್ಮಿಕ ಶವವಾಗಿ ಪತ್ತೆ| ತಿಂಗಳ ಹಿಂದೆ ನಡೆದ ಸಾವಿನ ಸುತ್ತ ಅನುಮಾನದ ಹುತ್ತ Read More »

ಕಡಬ: ದೈವಾರಾಧನೆಯ ನರ್ತನ ಪ್ರದರ್ಶನ ಮೆರವಣಿಗೆಗಳಲ್ಲಿ ಪ್ರದರ್ಶಿಸಿಸುವುದು ತರವಲ್ಲ: ಕಿಟ್ಟು ಕಲ್ಲುಗುಡ್ಡೆ

ಸಮಗ್ರ ನ್ಯೂಸ್:ನಮ್ಮ ಧಾರ್ಮಿಕ ಆಚರಣೆಯ ಮೆರವಣಿಗೆಗಳಲ್ಲಿ ದೈವಾರಾಧನೆಯ ನರ್ತನ ಪ್ರದರ್ಶನ ಮಾಡುವುದು ಸರಿಯಲ್ಲ ಇದರ ಬಗ್ಗೆ ಜನರಿಗೆ ತಿಳವಳಿಕೆ ಮೂಡಿಸುವ ಕಾರ್ಯ ಆಗಬೇಕಿದೆ ಎಂದು ಕಡಬ ತಾಲೂಕಿನ ನಲಿಕೆ ಸಮಾಜ ಸೇವಾ ಸಂಘದ ದೈವಾರಾಧನ ಸಮಿತಿಯ ಅಧ್ಯಕ್ಷ ಕಿಟ್ಟು ಕಲ್ಲುಗುಡ್ಡೆ ಹೇಳಿದರು. ಅ.5 ರಂದು ಕಡಬದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದೈವಗಳ ನರ್ತನವು ದೈವದ ಕೊಡಿಮರದಡಿಯಲ್ಲೇ ನಡೆಯಬೇಕು ಹೊರತು ಹಾದಿಬೀದಿಯಲ್ಲಿ ನಡೆಯಬಾರದು ಎಂದರು. ತುಳುನಾಡಿನಲ್ಲಿ ದೈವಾರಧನೆ ಮಾಡುವಾಗ ಅದಕ್ಕೆ 16 ಕಟ್ಟಲೆ ಎನ್ನುವ ನಿಯಮವಿದೆ, ಸಿಕ್ಕಸಿಕ್ಕವರು ದೈವ ನರ್ತನ

ಕಡಬ: ದೈವಾರಾಧನೆಯ ನರ್ತನ ಪ್ರದರ್ಶನ ಮೆರವಣಿಗೆಗಳಲ್ಲಿ ಪ್ರದರ್ಶಿಸಿಸುವುದು ತರವಲ್ಲ: ಕಿಟ್ಟು ಕಲ್ಲುಗುಡ್ಡೆ Read More »