ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಅರಣ್ಯ ಸಚಿವರ ಭೇಟಿ| ಕಡಬ ತಾಲೂಕಿನ ಹಲವೆಡೆ ಕಾಡಾನೆ ಹಾವಳಿ ವಿರುದ್ಧ ಕ್ರಮಕ್ಕೆ ಮನವಿ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು, ಕೊಣಾಜೆ, ಸುಬ್ರಹ್ಮಣ್ಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಮರಳಿಸುವಂತೆ ಮತ್ತು ನಾಡಿಗೆ ಬಾರದಂತೆ ಕ್ರಮ ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸುಳ್ಯ ಶಾಸಕರಿಗೆ ಭರವಸೆ ನೀಡಿದ್ದಾರೆ. ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಮನವಿ ಸ್ವೀಕರಿಸಿದ ಸಚಿವರು, ಈ ವರ್ಷ










