ಕರಾವಳಿ

ವಿಟ್ಲ: ಲಾರಿ ಪಲ್ಟಿ ಪ್ರಕರಣ| ಓರ್ವ ಸಾವು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಗ್ರಾನೈಟ್ ಲಾರಿ ಪಲ್ಟಿಯಾಗಿ ಗಂಭೀರ ಗಾಯಗೊಂಡ ನಾಲ್ವರಲ್ಲಿ ಓರ್ವ ಸಾವನ್ನಪ್ಪಿದ ಬಗ್ಗೆ ತಿಳಿದುಬಂದಿದೆ. ಸಾವನ್ನಪ್ಪಿದ್ದ ವ್ಯಕ್ತಿಯನ್ನು ಉತ್ತರ ಭಾರತ ಮೂಲದ ಸುಭಾಶ್ವಂದ್ರ ಎಂದು ಗುರುತಿಸಲಾಗಿದೆ. ಹರ್ಷದ್‌ ಮತ್ತು ಪವನ್‌ ಹಾಗೂ ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಗಾಯಗೊಂಡವರಲ್ಲಿ ಇಬ್ಬರು ಉತ್ತರ ಭಾರತದ ಮೂಲದವರು ಮತ್ತು ಇಬ್ಬರು ಮಂಗಳೂರಿನವರು ಎಂದು ಗುರುತಿಸಲಾಗಿದೆ.

ವಿಟ್ಲ: ಲಾರಿ ಪಲ್ಟಿ ಪ್ರಕರಣ| ಓರ್ವ ಸಾವು Read More »

ಸುಳ್ಯ: ಪೆರುವಾಜೆಯ ಗ್ರಾಮ ಲೆಕ್ಕಾಧಿಕಾರಿ ಕಚೇರಿ ನಿರ್ಮಾಣಕ್ಕೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸ್ವಂತ ಸ್ಥಳದಲ್ಲಿ ಸುಮಾರು 30 ವರುಷಗಳ ಹಿಂದೆ ನಿರ್ಮಾಣವಾಗಿದ್ದು, ನಂತರ ಯಾವುದೇ ದುರಸ್ತಿಯು ನಡೆಯದೇ ಇದೀಗ ಬೀಳುವ ಪರಿಸ್ಥಿತಿಗೆ ಬಂದಿದೆ. ಗ್ರಾಮ ಲೆಕ್ಕಾಧಿಕಾರಿ ಪ್ರಭಾರ ಆಗಿದ್ದು ಗ್ರಾಮ ಸಹಾಯಕರು ಇಲ್ಲದೆ ಹಲವು ವರುಷ ಕಳೆದಿವೆ. ಆದರೆ ಕಂದಾಯ ಇಲಾಖೆಗೆ ಒಳಪಟ್ಟ ಈ ಕಟ್ಟಡದ ಬಗ್ಗೆಯೂ ಸಾರ್ವಜನಿಕರೇ ಮನವಿ ಮಾಡುವಂತಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ.ಈಗಿರುವ ಕಟ್ಟಡವನ್ನು ಕೆಡವಿ ಹೊಸತಾಗಿ

ಸುಳ್ಯ: ಪೆರುವಾಜೆಯ ಗ್ರಾಮ ಲೆಕ್ಕಾಧಿಕಾರಿ ಕಚೇರಿ ನಿರ್ಮಾಣಕ್ಕೆ ಮನವಿ Read More »

ವಿಟ್ಲ: ಲಾರಿ ಪಲ್ಟಿ| ನಾಲ್ಕು ಮಂದಿ ಗಂಭೀರ

ಸಮಗ್ರ ನ್ಯೂಸ್:ಮಾರ್ಬಲ್‌ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ಅ. 4ರಂದು ನಡೆದಿದೆ. ಲಾರಿ ಪಲ್ಟಿಯಾದ ಪರಿಣಾಮ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದೆ. ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ. ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು

ವಿಟ್ಲ: ಲಾರಿ ಪಲ್ಟಿ| ನಾಲ್ಕು ಮಂದಿ ಗಂಭೀರ Read More »

ಬಂಟ್ವಾಳ: ಒಂದೇ ತರಗತಿಯಲ್ಲಿ 5 ಜೋಡಿ ಅವಳಿ-ಜವಳಿ

ಸಮಗ್ರ ನ್ಯೂಸ್: ಅಪರೂಪದಲ್ಲಿ ಅಪರೂಪವಾಗಿರುವ ಅವಳಿ ಜವಳಿ ಮಕ್ಕಳನ್ನು ನೋಡುವುದೇ ಒಂದು ಖುಷಿ. ಅದರಲ್ಲೂ ಒಂದೇ ಕಡೆ ಐದು ಜೊತೆ ಅವಳಿ ಮಕ್ಕಳು ನೋಡ ಸಿಗುತ್ತಾರೆ ಎಂದರೆ ಆಶ್ಚರ್ಯವೇ ಸರಿ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಕಣ್ಣಾಗಿದ್ದಾರೆ. ಇಲ್ಲಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ

ಬಂಟ್ವಾಳ: ಒಂದೇ ತರಗತಿಯಲ್ಲಿ 5 ಜೋಡಿ ಅವಳಿ-ಜವಳಿ Read More »

ಬೆಳ್ಳಾರೆ: ವಿಷಕಾರಿ ಹಣ್ಣಿನ ಜ್ಯೂಸ್ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಕಾಡಿನಲ್ಲಿ ಸಿಗುವ ಯಾವುದೋ ಹಣ್ಣನ್ನು ಮೈರೋಲ್ ಎಂದು ಭಾವಿಸಿ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಶೇಣಿ‌ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೇಣಿ ಸಮೀಪದ ಕುಳ್ಳಾಜೆ ನಿವಾಸಿ ಲೀಲಾವತಿ(35) ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು , ತಿನ್ನಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಲೀಲಾವತಿ ಹಾಗೂ ಅವರ ತಂದೆ

ಬೆಳ್ಳಾರೆ: ವಿಷಕಾರಿ ಹಣ್ಣಿನ ಜ್ಯೂಸ್ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು Read More »

ಸುಳ್ಯ: ಸೌಜನ್ಯ ಹೋರಾಟದ ಬ್ಯಾನರ್‌ ತೆರವು ಪ್ರಕರಣ| ನ.ಪಂ ಅಧಿಕಾರಿಗಳ ನಡೆ ಹೀಗೇಕೆ?

ಸಮಗ್ರ ನ್ಯೂಸ್:‌ ಸುಳ್ಯ ನಗರದ ಜ್ಯೋತಿ ಸರ್ಕಲ್‌ ಬಳಿ ಸೌಜನ್ಯ ಪರ ಹಾಕಲಾಗಿದ್ದ ಬ್ಯಾನರ್‌ ತೆರವುಗೊಳಿಸಿ ಬಳಿಕ ಅದೇ ಸ್ಥಳದಲ್ಲಿ ಅಳವಡಿಸಲಾಗಿದ್ದು, ನಗರ ಪಂಚಾಯತ್‌ ನಡೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಅ.8 ರಂದು ಸೌಜನ್ಯಳಿಗೆ ನ್ಯಾಯ ಕೊಡಿಸಲು ಬೃಹತ್‌ ಪ್ರತಿಭಟನಾ ಸಭೆಯನ್ನು ತಾಲೂಕಿನ ಐವರ್ನಾಡು ಗ್ರಾಮಸ್ಥರು ಹಮ್ಮಿಕೊಂಡಿದ್ದರು. ಈ ಕುರಿತು ಸುಳ್ಯದ ಜ್ಯೋತಿ ಸರ್ಕಲ್‌ ಸೇರಿದಂತೆ ಹಲವೆಡೆ ನಗರ ಪಂಚಾಯತ್‌ ನಿಂದ ಅ.8ರ ತನಕ ಪರವಾನಿಗೆ ಪಡೆದು ಬ್ಯಾನರ್‌ ಅಳವಡಿಸಲಾಗಿತ್ತು. ಆದರೆ ಅ.03 ಗಾಂಧಿಸ್ಮೃತಿ, ಬೃಹತ್‌ ಜನಜಾಗೃತಿ

ಸುಳ್ಯ: ಸೌಜನ್ಯ ಹೋರಾಟದ ಬ್ಯಾನರ್‌ ತೆರವು ಪ್ರಕರಣ| ನ.ಪಂ ಅಧಿಕಾರಿಗಳ ನಡೆ ಹೀಗೇಕೆ? Read More »

ಸುಳ್ಯ: ಅನುಮತಿ ಇದ್ದರೂ ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಿದ ಪ್ರಕರಣ| ಎಸ್.ಪಿ ಗೆ ದೂರು ನೀಡಿದ ಜಿಲ್ಲಾ ಒಕ್ಕಲಿಗರ ಹೋರಾಟ‌ ಸಮಿತಿ| ಕ್ರಮದ ಭರವಸೆ ನೀಡಿದ ಎಸ್ಪಿ ರಿಷ್ಯಂತ್ ಸಿ.ಬಿ

ಸಮಗ್ರ ನ್ಯೂಸ್: ಸುಳ್ಯ ನಗರದಲ್ಲಿ ಸೌಜನ್ಯ ಪ್ರಕರಣದ ಅನುಮತಿ ಪಡೆದು ಅಳವಡಿಸಿರುವ ಫ್ಲೆಕ್ಸ್ ಅನ್ನು ತೆರವುಗೊಳಿಸಿದ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬ್ಯಾನರ್ ತೆರವಿಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಪೊಲೀಸರೇ ಇದನ್ನು ಮುಂದೆ ನಿಂತು ಮಾಡಿಸಿದ್ದಾರೆ. ಅಂತಹ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಸೌಜನ್ಯ ಪ್ರಕರಣ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಜಿಲ್ಲಾ ಪೊಲೀಸ್ ಅಧಿಕಾರಿ (ಎಸ್‌ಪಿ) ಸಿಬಿ ರಿಷ್ಯಂತ್ ಗೆ ಮನವಿ ಸಲ್ಲಿಸಲಾಗಿದೆ. ಈ ಕುರಿತು ಲಿಖಿತ ದೂರು ನೀಡಿರುವ ಜಿಲ್ಲಾ ಒಕ್ಕಲಿಗರ ಹೋರಾಟ

ಸುಳ್ಯ: ಅನುಮತಿ ಇದ್ದರೂ ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಿದ ಪ್ರಕರಣ| ಎಸ್.ಪಿ ಗೆ ದೂರು ನೀಡಿದ ಜಿಲ್ಲಾ ಒಕ್ಕಲಿಗರ ಹೋರಾಟ‌ ಸಮಿತಿ| ಕ್ರಮದ ಭರವಸೆ ನೀಡಿದ ಎಸ್ಪಿ ರಿಷ್ಯಂತ್ ಸಿ.ಬಿ Read More »

ಸುಳ್ಯ: ತೆರವುಗೊಳಿಸಿದ್ದ ಬ್ಯಾನರ್ ಮತ್ತದೇ ಸ್ಥಳದಲ್ಲಿ ಅಳವಡಿಕೆ|

ಸಮಗ್ರ ನ್ಯೂಸ್: ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಐವರ್ನಾಡಿನಲ್ಲಿ ಅ. 8 ರಂದು ನಡೆಯಲಿರುವ ಪ್ರತಿಭಟನಾ ಸಭೆಯ ಕುರಿತು ಸುಳ್ಯ ಜ್ಯೋತಿ ವೃತ್ತದ ಬಳಿ ಅಳವಡಿಸಲಾಗಿದ್ದ ಒಂದು ಫ್ಲೆಕ್ಸನ್ನು ಇಂದು ಬೆಳಿಗ್ಗೆ ನಗರ ಪಂಚಾಯತ್‌ನವರು ತೆರವುಗೊಳಿಸಿದ್ದು, ಇದೀಗ ಆ ಫ್ಲೆಕ್ಸನ್ನು ಸಂಘಟಕರು ನ.ಪಂ.ನಿಂದ ವಾಪಾಸ್ ಪಡೆದು ಅದೇ ಸ್ಥಳದಲ್ಲಿ ಅಳವಡಿಸಿದ್ದಾರೆ. ಸೆ. 26ರಂದು ನಗರ ಪಂಚಾಯತ್‌ನ ಅನುಮತಿ ಪಡೆದು ಈ ಫ್ಲೆಕ್ಸನ್ನು ಸೌಜನ್ಯ ಪರ ಹೋರಾಟ ಸಮಿತಿಯ ಅಧ್ಯಕ್ಷ ನಂದಕುಮಾರ್ ಬಾರೆತ್ತಡ್ಕ, ಕಾರ್ಯದರ್ಶಿ ರಾಜೇಶ್ ನೆಕ್ರೆಪ್ಪಾಡಿ ಮತ್ತು

ಸುಳ್ಯ: ತೆರವುಗೊಳಿಸಿದ್ದ ಬ್ಯಾನರ್ ಮತ್ತದೇ ಸ್ಥಳದಲ್ಲಿ ಅಳವಡಿಕೆ| Read More »

ಸುಳ್ಯ: ಅನುಮತಿ ಇದ್ದರೂ ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಿದ ನ.ಪಂ| ಅಧಿಕಾರಿಗಳ ನಡೆಗೆ ವ್ಯಾಪಕ ಆಕ್ರೋಶ

ಸಮಗ್ರ ನ್ಯೂಸ್: ನಗರ ಪಂಚಾಯತ್ ನಿಂದ ಸುಳ್ಯದಲ್ಲಿ ಅಳವಡಿಸಲಾಗಿದ್ದ ಸೌಜನ್ಯ ಪರ ಬ್ಯಾನರ್ ಗಳನ್ನು ತೆರವುಗೊಳಿಸಿದ್ದನ್ನು ಖಂಡಿಸಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸುಳ್ಯದಲ್ಲಿ ಇಂದು ಗಾಂಧಿಸ್ಮೃತಿ ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುಳ್ಯ ನಗರದಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಆಗ್ರಹಿಸಿ ವಿವಿಧ ಸಂಘಟನೆಗಳು ಬ್ಯಾನರ್ ಅಳವಡಿಸಿದ್ದರು. ಇದರಲ್ಲಿ ಕೆಲವು ಬ್ಯಾನರ್ ಗಳು ಪರವಾನಗಿ ಪಡೆಯದೆ ಹಾಕಲಾಗಿತ್ತು ಎನ್ನಲಾಗಿದ್ದು, ನ.ಪಂ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬ್ಯಾನರ್ ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಈ

ಸುಳ್ಯ: ಅನುಮತಿ ಇದ್ದರೂ ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಿದ ನ.ಪಂ| ಅಧಿಕಾರಿಗಳ ನಡೆಗೆ ವ್ಯಾಪಕ ಆಕ್ರೋಶ Read More »

ಮಂಗಳೂರು: ಮುಸ್ಲಿಂ ಯುವಕನ ಮೇಲೆ ಆವಾಹನೆಯಾದ ದೈವ

ಸಮಗ್ರ ನ್ಯೂಸ್: ಮಂಗಳೂರಿನ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ 18 ವರ್ಷದ ಮುಸ್ಲಿಂ ಯುವಕನ ಮೈ ಮೇಲೆ ದೈವ ಆವಾಹನೆಯಾದ ಘಟನೆ ನಡೆದಿದೆ. ಮೂವತ್ತು ವರ್ಷಗಳ ಹಿಂದೆ ಪ್ರತಿಷ್ಠಿತ ಕಂಪನಿಯೊಂದು ಮಂಗಳೂರಿನ ಬಜ್ಪೆ ಸಮೀಪದ ಪೆರ್ಮುದೆ ವ್ಯಾಪ್ತಿಯಲ್ಲಿ ಭೂಸ್ವಾಧೀನ ಮಾಡಿಕೊಂಡು ಉದ್ಯಮ ಆರಂಭಿಸಿತ್ತು. ಭೂಸ್ವಾಧೀನದಲ್ಲಿ ಪಿಲಿಚಾಮುಂಡಿ ದೈವದ ಗಡುವಾಡು ಸ್ಥಳ ಕಂಪನಿಯ ಪಾಲಾಗಿತ್ತು. ಇದರ ನಡುವೆ, ಇಲ್ಲಿನ ಭಕ್ತರು ದೈವವನ್ನು ಪೆರ್ಮುದೆಯ ಸೋಮನಾಥಧಾಮಕ್ಕೆ ಸ್ಥಳಾಂತರ ಮಾಡಿದ್ದರು ಎನ್ನಲಾಗಿದೆ. ಸ್ಥಳಾಂತರದ ಬಳಿಕ ಗಡು ಸ್ಥಳದಲ್ಲಿ ಹದಿನೆಂಟು ವರ್ಷಗಳಿಂದ ಆರಾಧನೆ ನಿಂತು

ಮಂಗಳೂರು: ಮುಸ್ಲಿಂ ಯುವಕನ ಮೇಲೆ ಆವಾಹನೆಯಾದ ದೈವ Read More »