ಕರಾವಳಿ

ಕಡಬ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಬಿದ್ದು ಮೃತ್ಯು

ಸಮಗ್ರ ನ್ಯೂಸ್:‌ ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಓರ್ವ ಸಾವನ್ನಪ್ಪಿ ಮತ್ತೋರ್ವರಿಗೆ ಗಾಯವಾದ ಘಟನೆ ಭಾನುವಾರ ಸಂಜೆ ಕಡಬದಲ್ಲಿ ಸಂಭವಿಸಿದೆ. ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಮೃತ ದುರ್ದೈವಿ. ಮೃತರು ಭಾನುವಾರ ಸಂಜೆ ಹಾಲು ಡಿಪೋ ಗೆ ಬಂದು ಕಡಬ ಮುಖ್ಯ ಪೇಟೆಯಿಂದ ಕಾಲೇಜು ರಸ್ತೆಯ ಸಮೀಪ ತಲುಪುವ ವೇಳೆ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ ವೇಳೆ ಅಚ್ಚುತ ಗೌಡ ಹಾಗೂ ಬಲ್ಯ […]

ಕಡಬ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಬಿದ್ದು ಮೃತ್ಯು Read More »

ನೆರೆಯ ಗ್ರಾಮದ ಯುವಕನ ಚಿಕಿತ್ಸೆಗಾಗಿ ಮಿಡಿದ ಯುವಕರ ತಂಡಕ್ಕೆ ಕೈ ಜೋಡಿಸಿದ ಮಡಪ್ಪಾಡಿ ಗ್ರಾಮಸ್ಥರು

ಸಮಗ್ರ ನ್ಯೂಸ್:‌ ಕೊಲ್ಲಮೊಗ್ರ ಗ್ರಾಮದ ಸಚಿತ್ ಶಿವಾಲ‌ ಎಂಬ ಯುವಕ‌ ಕಳೆದ ಎರಡು ವರುಷಗಳಿಂದ IGA Nephropathy ಎಂಬ Chronic Kidney Disease ಎಂಬ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆ ಖಾಯಿಲೆ ಉಲ್ಬಣಗೊಂಡು ಸುಮಾರು 80% ಕಿಡ್ನಿ ನಿಷ್ಕ್ರಿಯಗೊಂಡಿತ್ತು, ತನ್ನ‌ ತಂದೆಯ ಕಿಡ್ನಿ ಕಸಿ ಮಾಡಲು ಸುಮಾರು 15 ಲಕ್ಷಗಳಷ್ಟು ಹಣದ ಅವಶ್ಯಕತೆ ಇರುವುದನ್ನು ಗಮನಿಸಿದ ಚೈತನ್ಯ ಗೆಳೆಯರ ಬಳಗ ತಂಡದ ಸದಸ್ಯರು ಬದುಕು ನಾಲ್ಕು ದಿನ ಅದರ ಮದ್ಯದಲ್ಲಿ ಇನ್ನೊಬ್ಬರ ಜೀವನದಲ್ಲೂ

ನೆರೆಯ ಗ್ರಾಮದ ಯುವಕನ ಚಿಕಿತ್ಸೆಗಾಗಿ ಮಿಡಿದ ಯುವಕರ ತಂಡಕ್ಕೆ ಕೈ ಜೋಡಿಸಿದ ಮಡಪ್ಪಾಡಿ ಗ್ರಾಮಸ್ಥರು Read More »

ಸುಳ್ಯದ 6 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

ಸಮಗ್ರ ನ್ಯೂಸ್: ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ್ ಹಾಗೂ ನಾಡಿನ ಸಮಾಚಾರ ದಿನಪತ್ರಿಕೆ ವತಿಯಿಂದ ನಡೆದ ಗುರುವಂದನಾ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ, ಸಾವಿತ್ರಿ ಬಾಯಿ ಪುಲೆ ರಾಷ್ಟೀಯ ಪ್ರಶಸ್ತಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸಾಧಕ ರತ್ನ ರಾಷ್ಟೀಯ ಪ್ರಶಸ್ತಿ ಸಮಾರಂಭವು ಸೆ.24 ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯಿತು. ಶಿಕ್ಷಕ ದಿನಾಚರಣೆಯ ನಿಮಿತ್ಯ ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸಿ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ

ಸುಳ್ಯದ 6 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ Read More »

ಲೋಕಸಭಾ ಚುನಾವಣೆ| ದ. ಕನ್ನಡ ಕ್ಷೇತ್ರದಿಂದ ಒಕ್ಕಲಿಗ ಯುವಕನಿಗೆ ಕಾಂಗ್ರೆಸ್ ಮಣೆ!? ಸುಳ್ಯ ಮೂಲದ ಯುವಕನಾಗ್ತಾರಾ ಕಾಂಗ್ರೆಸ್ ಅಭ್ಯರ್ಥಿ?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಂಗ್ರೆಸ್ , ಬಿಜೆಪಿ ನಡುವೆ ಕದನ ಕುತೂಹಲ ಮೂಡಿಸುತ್ತಿದೆ. ದ.ಕನ್ನಡ ಕ್ಷೇತ್ರಕ್ಕೆ ಬಿಜೆಪಿಯಿಂದ ಮತ್ತೆ ನಳಿನ್ ಕುಮಾರ್ ಗೆ ಟಿಕೆಟ್ ನೀಡುವ ಸಾಧ್ಯತೆ ಇದ್ದು, ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಗೊಂದಲ ಇನ್ನು ಬಗೆಹರಿದಿಲ್ಲ. ಈ ನಡುವೆ ಕಾಂಗ್ರೆಸ್ ನ ಒಂದು ಮೂಲಗಳ ಪ್ರಕಾರ ಸುಳ್ಯ ಮೂಲದ ಶೈಕ್ಷಣಿಕ, ಸಾಮಾಜಿಕ ಹಿನ್ನೆಲೆ ಇರುವ ಪ್ರಬಲವಾಗಿರುವ ಒಕ್ಕಲಿಗ ಯುವ ಅಭ್ಯರ್ಥಿಯನ್ನು ಪಕ್ಷದಿಂದ ಅಭ್ಯರ್ಥಿಯಾಗಲು ಕಾಂಗ್ರೆಸ್ ರಣತಂತ್ರ ರೂಪಿಸಲು

ಲೋಕಸಭಾ ಚುನಾವಣೆ| ದ. ಕನ್ನಡ ಕ್ಷೇತ್ರದಿಂದ ಒಕ್ಕಲಿಗ ಯುವಕನಿಗೆ ಕಾಂಗ್ರೆಸ್ ಮಣೆ!? ಸುಳ್ಯ ಮೂಲದ ಯುವಕನಾಗ್ತಾರಾ ಕಾಂಗ್ರೆಸ್ ಅಭ್ಯರ್ಥಿ? Read More »

ಸುಳ್ಯ: ಉಪನ್ಯಾಸಕಿ ಡಾ.ಅನುರಾಧಾ ಕುರುಂಜಿ ಅವರಿಗೆ ಪ್ರತಿಷ್ಠಿತ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023 ಪ್ರದಾನ

ಸಮಗ್ರ ನ್ಯೂಸ್: ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ.ಅನುರಾಧಾ ಕುರುಂಜಿ ಅವರಿಗೆನಾಡಿನ ಸಮಾಚಾರ ಸೇವಾ ಸಂಘ, ಗೋಕಾಕ, ಬೆಳಗಾವಿ ಇವರಿಂದ ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ “ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಪ್ರದಾನ ಮಾಡಲಾಯಿತು. ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಕೊಡಮಾಡಿದ ಈ ಪ್ರಶಸ್ತಿಯನ್ನು ಸೆ. 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆದ ‘ಗುರುವಂದನಾ’ ಕಾರ್ಯಕ್ರಮದಲ್ಲಿ

ಸುಳ್ಯ: ಉಪನ್ಯಾಸಕಿ ಡಾ.ಅನುರಾಧಾ ಕುರುಂಜಿ ಅವರಿಗೆ ಪ್ರತಿಷ್ಠಿತ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023 ಪ್ರದಾನ Read More »

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 24ರಂದು ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಕೀರ್ತಿಕಾ(19) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಕೆ.ಎಸ್.ಎಸ್. ಕಾಲೇಜಿನ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳು ನಿಪುಣ್ ಪರೀಕ್ಷೆಯಲ್ಲಿ ತೇರ್ಗಡೆ| ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

ಸಮಗ್ರ ನ್ಯೂಸ್:ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ನಡೆಸಿದ 2022-23 ನೇ ಸಾಲಿನ ನಿಪುಣ್ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸೆ. 24ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ಪ್ರಮಾಣ ಪತ್ರ ಪ್ರಧಾನ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನಿಪುಣ್ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅಭಿನಂದಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ರೋವರ್ಸ್ ವಿದ್ಯಾರ್ಥಿಗಳಾದ ಧನುಷ್ ಮುತ್ಲಾಜೆ, ಶಕೀಲ್ ಕೆ.ಎಲ್., ಪುನೀತ್ ಎ.ಕೆ., ಶರತ್ ಎಂ.ಆರ್. ಹಾಗೂ ರೇಂಜರ್ಸ್

ಕೆ.ಎಸ್.ಎಸ್. ಕಾಲೇಜಿನ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳು ನಿಪುಣ್ ಪರೀಕ್ಷೆಯಲ್ಲಿ ತೇರ್ಗಡೆ| ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ Read More »

ಬೆಳ್ತಂಗಡಿ: ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆ ದಾಳಿ| ಗಿಡಗಳು ಸಂಪೂರ್ಣ ನಾಶ

ಸಮಗ್ರ ನ್ಯೂಸ್: ಬೆಳ್ತಂಗಡಿಯ ಮುಂಡಾಜೆಯ ಕಾಪುವಿನಲ್ಲಿರುವ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿದ ಘಟನೆ ಕಂಡುಬಂದಿದೆ. ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು, ಬಿದಿರು, ಗಾಳಿ, ಹೆಬ್ಬಲಸು, ಬಲಿಂದ್ರ ಪಾಲೆ ಜಾತಿಯ ಸುಮಾರು 3,200ಕ್ಕಿಂತ ಅಧಿಕ ಗಿಡಗಳನ್ನು ಆನೆಗಳು ತುಳಿದು ಸಂಪೂರ್ಣ ಧ್ವಂಸಗೊಳಿಸಿವೆ. ಇನ್ನು ಒಂದು ಮರಿಯಾನೆ ಸಹಿತ ಎರಡು ಆನೆಗಳು ದಾಳಿ ಮಾಡಿರುವ ಬಗ್ಗೆ ಶಂಕಿಸಲಾಗಿದೆ. ಕೆಲವು ದಿನಗಳ ಹಿಂದೆ ಧರ್ಮಸ್ಥಳದ ನೇರ್ತನೆಯಲ್ಲಿ ಕಂಡುಬಂದಿದ್ದ

ಬೆಳ್ತಂಗಡಿ: ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆ ದಾಳಿ| ಗಿಡಗಳು ಸಂಪೂರ್ಣ ನಾಶ Read More »

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಬಾಲಕಿ ಸಾವು

ಸಮಗ್ರ ನ್ಯೂಸ್: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಸೆ. 24ರಂದು ಮುಂಜಾನೆ ಮೃತಪಟ್ಟ ಘಟನೆ ನಡೆದಿದೆ. ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ಅವರ ಪುತ್ರಿ ಜಮೀಲಾ ಸನಿಕ (4) ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನಲ್ಲಿ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದರು. ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಬಾಲಕಿ ಸಾವು Read More »

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಸೆ.28 ರಂದು ಸುಳ್ಯದಲ್ಲಿ ಶುಭಾರಂಭ

ಸಮಗ್ರ ನ್ಯೂಸ್: ಭಾರತ ಸರಕಾರದ ಮಾನ್ಯತೆ ಪಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆಯಾಗಿರುವ, ಪುತ್ತೂರಿನಲ್ಲಿ ಹೆಸರುವಾಸಿಯಾಗಿರುವ “ವಿದ್ಯಾಮಾತಾ ಅಕಾಡೆಮಿ”ಯ ಶಾಖಾ ಕಛೇರಿ ಇದೇ ಬರುವ ದಿನಾಂಕ 28 ಸೆಪ್ಟೆಂಬರ್ 2023 ರಿಂದ ಸುಳ್ಯದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೆ.23 ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸೆ.28 ಗುರುವಾರದಂದು ಬೆಳಿಗ್ಗೆ 10:00ಕ್ಕೆ ಸರಿಯಾಗಿ ಶುಭರಂಭಗೊಳ್ಳಲಿದ್ದು, ವಿದ್ಯಾಮಾತಾ ಅಕಾಡೆಮಿಯ ಮಾತೃ ಸಂಸ್ಥೆಯಾಗಿರುವ ವಿದ್ಯಾಮಾತಾ ಫೌಂಡೇಶನ್ ಈಗಾಗಲೇ

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಸೆ.28 ರಂದು ಸುಳ್ಯದಲ್ಲಿ ಶುಭಾರಂಭ Read More »