ಕರಾವಳಿ

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಅತ್ಮ ನಿರ್ಭರ್ ನಿಧಿ, ಪಿ.ಎಮ್. ಸ್ವ-ನಿಧಿ ಯೋಜನೆಯ ಸೌಲಭ್ಯ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಪ್ರಕಟಣೆ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳು ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಅತ್ಮ ನಿರ್ಭರ್ ನಿಧಿ, ಪಿ.ಎಮ್. ಸ್ವ-ನಿಧಿ ಯೋಜನೆಯ ಸೌಲಭ್ಯ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಸೂಚಿಸಿದ್ದಾರೆ. ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ, ಪಿ.ಎಮ್ ಸ್ವ-ನಿಧಿ ಯೋಜನೆಯಡಿ ಈ ವರೆಗೆ ಸಾಲ ಪಡೆಯದೇ ಇರುವ ಬೀದಿ ಬದಿ ವ್ಯಾಪಾರಿಗಳು ಕಿರು ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಪ್ರಥಮ ಹಂತದಲ್ಲಿ 10,000ರೂ., ನಂತರ ನಿಗದಿತ […]

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಅತ್ಮ ನಿರ್ಭರ್ ನಿಧಿ, ಪಿ.ಎಮ್. ಸ್ವ-ನಿಧಿ ಯೋಜನೆಯ ಸೌಲಭ್ಯ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಪ್ರಕಟಣೆ Read More »

ಕಾಣಿಯೂರು: ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ ಹೆಸರು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಪುಟದಲ್ಲಿ

ಸಮಗ್ರ ನ್ಯೂಸ್: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಏಳನೇ ತರಗತಿ ವಿದ್ಯಾರ್ಥಿ ಮೋನಿಷ್ ಟಿ. ಅವರ ಹೆಸರು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಪುಟದಲ್ಲಿ ದಾಖಲು. ಪೂರ್ಣ ಉಷ್ಟ್ರಸನಾದಲ್ಲಿ ಇಪ್ಪತೈದು ನಿಮಿಷ ಹದಿನೇಳು ಸೆಕುಂಡುಗಳ ಕಾಲ ಒಂದೇ ಸ್ಥಿತಿಯಲ್ಲಿ ಇರುವುದರ ಮೂಲಕ ತನ್ನ ಹೆಸರನ್ನು ದಾಖಲೆ ಬರೆಸಿಕೊಂಡಿದ್ದಾರೆ. ಮೋನಿಷ್ ಟಿ. ಅವರು ವಿಶ್ವನಾಥ ತಂಟೆಪ್ಪಾಡಿ ಮತ್ತು ದಯಾಮಣಿ ದಂಪತಿಗಳ ಪುತ್ರ. ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಇಂಡಿಯಾ ಬುಕ್ ಆಫ್ ರೆಕಾರ್ಡ್, ಮತ್ತು ನೊಬೆಲ್

ಕಾಣಿಯೂರು: ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ ಹೆಸರು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಪುಟದಲ್ಲಿ Read More »

ವಿಟ್ಲ: 52 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ|ಧಾರ್ಮಿಕ ಸಭೆಯಲ್ಲಿ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭಾಷಣ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರೇರಣೆಯಿಂದ ಕಳೆದ 51 ವರ್ಷಗಳಿಂದ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿ ಈ ಬಾರಿ 52 ನೇ ವರ್ಷದ ಶ್ರೀ ಮಹಾಗಣೇಶೋತ್ಸವ ಬಹಳ ಅದ್ದೂರಿಯಾಗಿ ಜರಗುತ್ತಿದೆ. 52ನೇ ವರ್ಷದ ಶ್ರೀ ಮಹಾ ಗಣೇಶೋತ್ಸವದ ಎರಡನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾರತ ಎನ್ನುವ ಕಲ್ಪನೆಯನ್ನು ಕಣ್ಣ ಮುಂದೆ ಇಟ್ಟುಕೊಂಡಿರುವ ಬೆಂಗಳೂರಿನ ಯುವವಾಗ್ಮಿ ಹಾರಿಕಾ ಮಂಜುನಾಥ್ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು

ವಿಟ್ಲ: 52 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ|ಧಾರ್ಮಿಕ ಸಭೆಯಲ್ಲಿ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭಾಷಣ Read More »

“ನನ್ನ ಮಗಳ ಅತ್ಯಾಚಾರ ಪ್ರಕರಣ ಮರುತನಿಖೆ ನಡೆಸಿ ನ್ಯಾಯ ಕೊಡಿಸಿ”| ಸೌಜನ್ಯ ತಾಯಿಯಿಂದ ಉಸ್ತುವಾರಿ ಸಚಿವರಿಗೆ ಮನವಿ

ಸಮಗ್ರ ನ್ಯೂಸ್: ‘ನನ್ನ ಮಗಳು ಸೌಜನ್ಯಾ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ನಡೆಸಿದ ಪ್ರಕರಣವನ್ನು ನ್ಯಾಯಾಂಗದ ಸುಪರ್ದಿಯಲ್ಲಿ ಮರು ತನಿಖೆ ನಡೆಸಬೇಕು. ನೈಜ ಆರೋಪಿಗಳ ಪತ್ತೆಗೆ ಅಗತ್ಯ ಕಾನೂನುಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಸೌಜನ್ಯಾಳ ತಾಯಿ ಕುಸುಮಾವತಿ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು. ‘ಈ ಪ್ರಕರಣದ ಸಾಕ್ಷ್ಯಗಳನ್ನು ನಾಶ ಮಾಡುವ ಮೂಲಕ ನೈಜ ಆರೋಪಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಪೊಲೀಸ್‌ ಅಧಿಕಾರಿಗಳು ಹಾಗೂ ವೈದ್ಯರು ಸಹಕರಿಸಿದ್ದಾರೆ. ಅವರ ವಿರುದ್ಧವೂ

“ನನ್ನ ಮಗಳ ಅತ್ಯಾಚಾರ ಪ್ರಕರಣ ಮರುತನಿಖೆ ನಡೆಸಿ ನ್ಯಾಯ ಕೊಡಿಸಿ”| ಸೌಜನ್ಯ ತಾಯಿಯಿಂದ ಉಸ್ತುವಾರಿ ಸಚಿವರಿಗೆ ಮನವಿ Read More »

ಕಾರ್ಕಳ: ಸೌಜನ್ಯ ಪರ ಹೋರಾಟಕ್ಕೆ ಅನುಮತಿ ನೀಡದಂತೆ ಮನವಿ ಕೊಟ್ಟ ಜೈನ ಸಂಘಟನಾ‌ ಮುಖಂಡರು| ಉಡುಪಿ ಎಸ್.ಪಿ ಖಡಕ್ ವಾರ್ನಿಂಗ್

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು‌ ಹತ್ಯೆ ಪ್ರಕರಣದ ನೈಜ‌ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ನಡೆಯಲಿರುವ ಪ್ರತಿಭಟನಾ ಸಭೆಗೆ ಅನುಮತಿ ನೀಡದಂತೆ ಕೆಲವು ಜೈನ ಸಂಘಟನೆಗಳ ಮುಖಂಡರಿಗೆ ಉಡುಪಿ ಎಸ್.ಪಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಸೆ.20ರಂದು ಎಸ್.ಪಿ ಕಚೇರಿಗೆ ಆಗಮಿಸಿದ ಮುಖಂಡರ ಜೊತೆಗೆ ಮಾತನಾಡಿದ ಎಸ್.ಪಿ ಡಾ. ಅರುಣ್ ಕೆ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಹಕ್ಕಿದೆ. ಅದನ್ನು ನಿರಾಕರಿಸಲಾಗದು. ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯುಂಟಾಗದಂತೆ ಸಭೆ ನಡೆಸಲು ಅನುಮತಿ ನೀಡಿದ್ದೇವೆ.

ಕಾರ್ಕಳ: ಸೌಜನ್ಯ ಪರ ಹೋರಾಟಕ್ಕೆ ಅನುಮತಿ ನೀಡದಂತೆ ಮನವಿ ಕೊಟ್ಟ ಜೈನ ಸಂಘಟನಾ‌ ಮುಖಂಡರು| ಉಡುಪಿ ಎಸ್.ಪಿ ಖಡಕ್ ವಾರ್ನಿಂಗ್ Read More »

ಗೆಳೆಯರ ಬಳಗ ಸುರತ್ಕಲ್ 14ನೇ ವರ್ಷದ ಶಾರದಾ ಹುಲಿವೇಷದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಮಗ್ರನ್ಯೂಸ್: ಹಿಂದುತ್ವಕ್ಕಾಗಿ ಜೀವನವನ್ನು ಮುಡಿಪಾಗಿಟ್ಟ ಹಿಂದೂ ಕಣ್ಮಣಿ ದಿವಂಗತ ಮಂಜುನಾಥ್ ಮಂಗಳೂರು ಇವರ ಸವಿನೆನಪಿಗಾಗಿ, ಗೆಳೆಯರ ಬಳಗ ಸುರತ್ಕಲ್ ವತಿಯಿಂದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ದಸರಾ ಮಹೋತ್ಸವಕ್ಕೆ 14ನೇ ವರ್ಷದ ಶಾರದಾ ಹುಲಿವೇಷದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಗಣ್ಯರ ಸಮ್ಮುಖದಲ್ಲಿ ದೀಪ ಪ್ರಜ್ವಲನೆ ಮುಖಾಂತರ ಪೆರ್ಮುದೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಎಂ.ಎಸ್.ಇ.ಝಡ್ ಕಾಲೋನಿ ಕೋಡಿಕೆರೆ ಕುಳಾಯಿ ಇಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ

ಗೆಳೆಯರ ಬಳಗ ಸುರತ್ಕಲ್ 14ನೇ ವರ್ಷದ ಶಾರದಾ ಹುಲಿವೇಷದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

1840ರ ಸುಬ್ರಹ್ಮಣ್ಯದ ಕಥೆ ಹೇಳುವ “ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ”

ಸಮಗ್ರ ನ್ಯೂಸ್ : ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹೊರತಂದಿರುವ, ಮಿಷನರಿಗಳಾದ ರೆ. ಹರ್ಮನ್ ಮ್ಯೋಗ್ಲಿಂಗ್ ಮತ್ತು ರೆ. ಗಾಟ್ ಫ್ರೈಡ್ ವೈಗಲ್ ವರದಿಯ ಅನುವಾದಿತ ‘ಮಿಷನರಿ ಪ್ರವಾಸ – ಮಂಗಳೂರಿನಿಂದ‌ ಸುಬ್ರಹ್ಮಣ್ಯಕ್ಕೆ’ ಕೃತಿ 1840ರ ಸುಬ್ರಹ್ಮಣ್ಯದ‌ ಕಥೆಯನ್ನು ಹೇಳುತ್ತದೆ. 1840ರ ನವೆಂಬರ್ 18 ರಂದು ಮಂಗಳೂರಿನಿಂದ ಹೊರಡುವ ಮ್ಯೋಗ್ಲಿಂಗ್ ಮತ್ತು ವೈಗಲ್ ಫರಂಗಿಪೇಟೆ, ಬಂಟ್ವಾಳ, ಕಾರಿಂಜ, ಗುರುವಾಯನಕೆರೆ, ಧರ್ಮಸ್ಥಳ, ಕೊಕ್ಕಡ, ಕುಲ್ಕುಂದ ಮಾರ್ಗವಾಗಿ ಸುಬ್ರಹ್ಮಣ್ಯ ತಲುಪುತ್ತಾರೆ. ನಂತರ ಸುಳ್ಯ, ಅಡೂರು, ಕಾಸರಗೋಡು ಮಾರ್ಗವಾಗಿ ಮಂಗಳೂರು ತಲುಪುತ್ತಾರೆ.

1840ರ ಸುಬ್ರಹ್ಮಣ್ಯದ ಕಥೆ ಹೇಳುವ “ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ” Read More »

ಬಂಟ್ವಾಳ: ಇಲೆಕ್ಟ್ರಾನಿಕ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಸೆ. 19ರಂದು ಮಧ್ಯಾಹ್ನ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳದ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಆಕಸ್ಮಿಕ ಅಗ್ನಿಗೆ ಹಲವು ಸೊತ್ತುಗಳು ಸುಟ್ಟುಹೋಗಿವೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳೀಯರೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಗಡಿಯಲ್ಲಿದ್ದ ಸುಮಾರು ‌ಲಕ್ಷಾಂತರ ರೂ. ಬೆಲೆಬಾಳುವ ಟಿ.ವಿ.ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳನ್ನು ಸುಟ್ಟು ಹೋಗಿದೆ. ಸ್ಥಳಕ್ಕೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ: ಇಲೆಕ್ಟ್ರಾನಿಕ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ Read More »

ಸುಳ್ಯ: ಬಾಡಿಗೆ ಆಟೋ ಸೋಗಿನಲ್ಲಿ ಪ್ರಯಾಣಿಕನ ದರೋಡೆ| 3.5 ಲಕ್ಷ ನಗದು, ಮೊಬೈಲ್ ಕಳವು

ಸಮಗ್ರ ನ್ಯೂಸ್: ಬಾಡಿಗೆ ಆಟೋದ ಸೋಗಿನಲ್ಲಿ ದರೋಡೆಕೋರರು ಪ್ರಯಾಣಿಕನನ್ನು ದರೋಡೆಗೈದ ಘಟನೆ ಸುಳ್ಯದ ಹಳೆಗೇಟು ಬಳಿ‌ ಸೆ. 18ರ ತಡರಾತ್ರಿ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾರುಗುಂದ ಗ್ರಾಮದ ನಿವಾಸಿ ದರ್ಶನ್‌ ‌(27ವ)ವಂಚನೆಗೆ ಒಳಗಾದವರು. ಇವರು ವೈಯಕ್ತಿಕ ಕೆಲಸದ ನಿಮಿತ್ತ ಸೆ 18 ರಂದು ಸುಳ್ಯಕ್ಕೆ ಬಂದಿದ್ದರು. ಅದೇ ದಿನ ರಾತ್ರಿ 11.15ರ ಸುಮಾರಿಗೆ ಸುಳ್ಯ ಬಸ್ಸು ನಿಲ್ದಾಣಕ್ಕೆ ತೆರಳುವ ಉದ್ದೇಶದಿಂದ ಸುಳ್ಯ ಕಸಬಾ ಗ್ರಾಮದ ಹಳೆಗೇಟು ಎಂಬಲ್ಲಿ ರಸ್ತೆ ಬದಿ ಬಾಡಿಗೆ ವಾಹನಕ್ಕೆ ಕಾಯುತ್ತಿದ್ದರು.

ಸುಳ್ಯ: ಬಾಡಿಗೆ ಆಟೋ ಸೋಗಿನಲ್ಲಿ ಪ್ರಯಾಣಿಕನ ದರೋಡೆ| 3.5 ಲಕ್ಷ ನಗದು, ಮೊಬೈಲ್ ಕಳವು Read More »

ಬಂಟ್ವಾಳ:ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತ ಮೃತ್ಯು

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಪ್ರಕಾಶ್ ಬೆಳ್ಳೂರು(43) ಅವರು ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಔಷಧಿಗೆಂದು ಸೆ.18ರಂದು ಬೆಳಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು. ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕಾಶ್ ಅವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ

ಬಂಟ್ವಾಳ:ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತ ಮೃತ್ಯು Read More »