ಕರಾವಳಿ

ಸುಳ್ಯ: ಕರೆಂಟ್ ಕಂಬಕ್ಕೆ ಕಾರ್ ಡಿಕ್ಕಿ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಆಲ್ಟೋ ಕಾರ್ ಡಿಕ್ಕಿಯಾದ ಘಟನೆ ಸೆ. 18ರಂದು ಸುಳ್ಯ ತಾಲೂಕಿನ ಕಳಂಜ ಗ್ರಾಮದಲ್ಲಿ ವಿಷ್ಣು ನಗರ ಬಳಿ ನಡೆದಿದೆ. ನಿಯಂತ್ರಣ ತಪ್ಪಿ ಡಿಕ್ಕಿಯಾದ ರಭಸಕ್ಕೆ ಕಾರ್ ಜಖಂಗೊಂಡು ವಿದ್ಯುತ್ ಕಂಬ ತುಂಡಾಗಿದೆ.

ಸುಳ್ಯ: ಕರೆಂಟ್ ಕಂಬಕ್ಕೆ ಕಾರ್ ಡಿಕ್ಕಿ Read More »

ಸುಳ್ಯ; ಯುವಕ ನೇಣಿಗೆ ಶರಣು

ಸಮಗ್ರ ನ್ಯೂಸ್: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಐವರ್ನಾಡು ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಬೈಕ್ ಶೋರೂಂ ಒಂದರಲ್ಲಿ ಕೆಲವು ವರ್ಷಗಳಿಂದ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಕೆಲವು ಸಮಯಗಳಿಂದ ಈತ ಐವರ್ನಾಡಿನ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ ಮಾಡುತ್ತಿದ್ದ.ಇದೀಗ ಅದೇ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಸುಳ್ಯ; ಯುವಕ ನೇಣಿಗೆ ಶರಣು Read More »

ಸುಳ್ಯ: ವಿದೇಶದಿಂದಲೇ ತಲಾಖ್ ನೀಡಿದ ಗಂಡ; ಠಾಣೆ ಮೆಟ್ಟಿಲೇರಿದ ಪತ್ನಿ

ಸಮಗ್ರ ನ್ಯೂಸ್: ಮುಸ್ಲಿಂ ಮಹಿಳೆಯೋರ್ವರಿಗೆ ಆಕೆಯ ಗಂಡ ವಿದೇಶದಿಂದಲೇ ವಾಟ್ಸಾಪ್ ಮೂಲಕ ತಲಾಖ್ ನೀಡಿದ್ದು, ಇದನ್ನು ಪ್ರಶ್ನಿಸಿ ಮಹಿಳೆ ಠಾಣೆ ಮೆಟ್ಟಿಲೇರಿದ ಘಟನೆ ಸುಳ್ಯದ ಜಯನಗರ ಎಂಬಲ್ಲಿಂದ ವರದಿಯಾಗಿದೆ. ಜಯನಗರದ ಮಿಸ್ರಿಯಾ ಎಂಬ ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ಘಟನೆ ವರದಿಯಾಗಿದೆ. ಕೇರಳ ತ್ರಿಶೂರ್ ಮೂಲದ ಅಬ್ದುಲ್ ರಾಶಿದ್ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಮಿಸ್ರಿಯ ಎಂಬ ಯುವತಿಯನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ಆಕೆಯನ್ನು ಉತ್ತಮವಾಗಿ ನೋಡಿಕೊಂಡಿದ್ದು

ಸುಳ್ಯ: ವಿದೇಶದಿಂದಲೇ ತಲಾಖ್ ನೀಡಿದ ಗಂಡ; ಠಾಣೆ ಮೆಟ್ಟಿಲೇರಿದ ಪತ್ನಿ Read More »

ಉಡುಪಿ: ಬಾಲ ಮಂದಿರದಿಂದ ಬಾಲಕ ನಾಪತ್ತೆ ‌

ಸಮಗ್ರ ನ್ಯೂಸ್: ಬಾಲ ಮಂದಿರದಲ್ಲಿ ವಾಸವಿದ್ದ ಸುಮಾರು 14-16 ವರ್ಷದ ಶಬೀರ್ ಎಂಬ ಬಾಲಕನು ಸೆ. 1 ರಿಂದ ನಾಪತ್ತೆಯಾದ ಬಗ್ಗೆ ದೂರು ನೀಡಲಾಗಿದೆ. ಬಾಲಕ ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಹಿಂದಿ ಬಾಷೆ ಮಾತನಾಡುತ್ತಾನೆ. ಇವನ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪಿ.ಐ ಮೊ.ನಂ: 9480805458, ಪಿ.ಎಸ್.ಐ ಮೊ.ನಂ: 8277988949, ಮಹಿಳಾ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2525599 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಬಾಲ ಮಂದಿರದಿಂದ ಬಾಲಕ ನಾಪತ್ತೆ ‌ Read More »

ಸುಳ್ಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಬೈಕ್‌ ಕಳ್ಳನ ಬಂಧನ

ಸಮಗ್ರ ನ್ಯೂಸ್:‌ ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಸಿದಂತೆ ಸುಳ್ಯ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿಯಾದ ಆರೋಪಿ ಸುಬ್ರಮಣಿ (26) ಪ್ರಕರಣದ ಆರೋಪಿ. ಈತನ ವಿರುದ್ಧ ಸುಳ್ಯ ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ ಬೈಕ್‌ ಕಳ್ಳತನದ ಕುರಿತು ಸೆ.16ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಸುಳ್ಯ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಸುಳ್ಯದ ಆಲೆಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ

ಸುಳ್ಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಬೈಕ್‌ ಕಳ್ಳನ ಬಂಧನ Read More »

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಗ್ರಾಂಡ್ ಪೇರೆಂಟ್ಸ್ ಡೇ ಆಚರಣೆ

ಸಮಗ್ರ ನ್ಯೂಸ್: ಪ್ರತಿಯೊಂದು ಮನೆಯಲ್ಲಿ ಹಿರಿಯರಿದ್ದರೆ ಆ ಮನೆಯ ಸೊಬಗೇ ಚಂದ.ನಮ್ಮ ಸಂಸ್ಕೃತಿಯಲ್ಲಿ ಈ ಹಿರಿಯರ ಸ್ಥಾನವನ್ನು ತುಂಬುವವರು ಅಜ್ಜ ಅಜ್ಜಿ.ಸಂಸಾರದ ದೋಣಿಯನ್ನು ದಡ ಮುಟ್ಟಿಸಿ,ಕುಟುಂಬದ ಜೊತೆ ಕಾಲ ಕಳೆಯುತ್ತಾ ಅವರಿಗೆ ಸರಿಯಾದ ಮಾರ್ಗದರ್ಶನ ಮಾಡುವ ಅಜ್ಜ ಅಜ್ಜಿಯರು ಪ್ರತಿಯೊಂದು ಮನೆಯ ನಿಜವಾದ ಆಸ್ತಿ. ಅಂತಹ ಅರ್ತಗರ್ಭಿತವಾದ ಆಚರಣೆಯನ್ನು ಸೆ. 16ರಂದು ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಹಿರಿಯರಾದ ಚಂದ್ರಶೇಖರ್ ಅವರು ಭಾಗವಹಿಸಿದ್ದರು. ಅದೇ ರೀತಿ ಸಂಸ್ಥೆಯ ಪುಟಾಣಿ ಮಕ್ಕಳ ಅಜ್ಜ

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಗ್ರಾಂಡ್ ಪೇರೆಂಟ್ಸ್ ಡೇ ಆಚರಣೆ Read More »

ಗಣೇಶ ಚತುರ್ಥಿ ಹಿನ್ನಲೆ| ಕರಾವಳಿ ಜಿಲ್ಲೆಗಳಿಗೆ ಸೆ.19 ರಂದು ರಜೆ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ

ಸಮಗ್ರ ನ್ಯೂಸ್: ಗಣೇಶ ಚತುರ್ಥಿಯ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಒತ್ತಡ ಹಾಕಲಾಗಿದ್ದು, ಈ ಬಗ್ಗೆ ಜನಪ್ರತಿನಿಧಿಗಳು ಕೂಡಾ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆ.19ರಂದು ರಜೆ ನೀಡಲು ಪತ್ರ

ಗಣೇಶ ಚತುರ್ಥಿ ಹಿನ್ನಲೆ| ಕರಾವಳಿ ಜಿಲ್ಲೆಗಳಿಗೆ ಸೆ.19 ರಂದು ರಜೆ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ Read More »

ಮಲ್ಪೆ‌ ಕಡಲ ತಡಿಯಲ್ಲಿ ಸೌಜನ್ಯ ಪರ ಸಿಂಹ ಘರ್ಜನೆ| ಕತ್ತಲಾದರೂ ನಿಲ್ಲದ ಹೋರಾಟ|

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.15 ರಂದು ಮಲ್ಪೆಯಲ್ಲಿ ಸೌಜನ್ಯ ಹೋರಟ ನಡೆದಿದ್ದು. ಇದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಯವರು ಹಾಗೂ ಸೌಜನ್ಯ ತಾಯಿ ಕುಸುಮಾವತಿಯವರು ಸಹ ಭಾಗಿಯಾಗಿದ್ದರು ಕಡಲ ತಡಿಯಲ್ಲಿ ಸೌಜನ್ಯ ಹೋರಾಟ ಮತ್ತೆ ಘರ್ಜನೆ ಅಬ್ಬರಿಸಿದೆ. ಸಂಜೆ ಶುರುವಾದ ಸೌಜನ್ಯ ಹೋರಾಟ ಕತ್ತಲಾದರೂ ಕರಗಲಿಲ್ಲ. ಜನರು ಯಾವುದಕ್ಕೂ ಮಿಸುಕದೆ ಕುಳಿತಲ್ಲೇ ಕುಳಿತು ಭಾಷಣ ಕೇಳಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ. ಮಲ್ಪೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಹರಿದು ಬಂದಿದ್ದು ಮಹೇಶ್ ಶೆಟ್ಟಿ ತಿಮರೋಡಿ ಅವರ

ಮಲ್ಪೆ‌ ಕಡಲ ತಡಿಯಲ್ಲಿ ಸೌಜನ್ಯ ಪರ ಸಿಂಹ ಘರ್ಜನೆ| ಕತ್ತಲಾದರೂ ನಿಲ್ಲದ ಹೋರಾಟ| Read More »

ಮಂಗಳೂರು: ನಾಗರ ಹಾವಿಗೆ ಡೀಸೆಲ್ ಎರಚಿದ ವ್ಯಕ್ತಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ನಾಗರಹಾವಿಗೆ ಡೀಸೆಲ್‌ ಎರಚಿದಾತ ಅಸ್ವಸ್ಥಗೊಂಡು ತಾನೂ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ನಡೆದಿದೆ. ಕಿನ್ನಿಗೋಳಿ ಬಹುಮಹಡಿ ಕಟ್ಟಡದ ಸಮೀಪ ಕಳೆದ ವಾರ ನಾಗರ ಹಾವೊಂದು ಕಂಡುಬಂದಿದ್ದು, ಇದನ್ನು ಕಂಡ ಕಟ್ಟಡದ ಕಾವಲುಗಾರ ಉತ್ತರ ಕರ್ನಾಟಕ ಮೂಲದ ವ್ಯಕ್ತಿ ನಾಗರ ಹಾವಿಗೆ ಡೀಸೆಲ್‌ ಎರಚಿದ್ದ. ಉರಿಯಿಂದ ನಾಗರ ಹಾವು ಒದ್ದಾಡಿತ್ತು. ಸ್ಥಳೀಯರು ಇದನ್ನು ಕಂಡು ಉರಗ ರಕ್ಷಕ ಯತೀಶ್‌ ಕಟೀಲು ಅವರಿಗೆ ತಿಳಿಸಿದ್ದು, ಅವರು ಸ್ಥಳಕ್ಕೆ ಆಗಮಿಸಿ ಹಾವನ್ನು ರಕ್ಷಣೆ ಮಾಡಿ

ಮಂಗಳೂರು: ನಾಗರ ಹಾವಿಗೆ ಡೀಸೆಲ್ ಎರಚಿದ ವ್ಯಕ್ತಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು Read More »

ಕದ್ರಿ ಮಂಜುನಾಥ ದೇವಾಲಯ ಟಾರ್ಗೆಟ್ ಮಾಡಿದ್ದ ಉಗ್ರ| ಎನ್ಐಎ ಬಲೆಗೆ ಬಿದ್ದ ಅರಾಫತ್ ಅಲಿ ಬಳಿ ಸ್ಪೋಟಕ ಮಾಹಿತಿ

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ಐಎಸ್ ಐಎಸ್ ನಿಂದ ಟ್ರಯಲ್ ಬ್ಲಾಸ್ಟ್ ಪ್ರಕರಣ, ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದ ಕಿಂಗ್ ಪಿನ್ ಅರಾಫತ್ ಅಲಿಯನ್ನು ಗುರುವಾರ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್ ಐಎ ಪೊಲೀಸರು ಬಂಧಿಸಿದ್ದಾರೆ‌ ಅರಾಫತ್ ಅಲಿಯನ್ನು ತನಿಖೆಗೊಳಪಡಿಸುವ ವೇಳೆ ಸ್ಪೋಟಕ ಮಾಹಿತಿಯೊಂದು ಬಯಲಾಗಿದ್ದು, ಬೆಚ್ಚಿ ಬೀಳಿಸುವಂತಿದೆ. ಕದ್ರಿ ಮಂಜುನಾಥನ ದೇವಾಲಯವೇ ಉಗ್ರ ಅರಾಫತ್ ಅಲಿಯ ಟಾರ್ಗೆಟ್ ಆಗಿತ್ತು ಎಂಬ ಸ್ಪೋಟಕ ಸತ್ಯ ಬಯಲಾಗಿದೆ. ಆರೋಪಿಗಳು ಮಂಗಳೂರಿನಲ್ಲಿರುವ ಕದ್ರಿ ಮಂಜುನಾಥನ ದೇವಾಲಯವನ್ನು ಸ್ಪೋಟಿಸುವ ಗುರಿ

ಕದ್ರಿ ಮಂಜುನಾಥ ದೇವಾಲಯ ಟಾರ್ಗೆಟ್ ಮಾಡಿದ್ದ ಉಗ್ರ| ಎನ್ಐಎ ಬಲೆಗೆ ಬಿದ್ದ ಅರಾಫತ್ ಅಲಿ ಬಳಿ ಸ್ಪೋಟಕ ಮಾಹಿತಿ Read More »