ಕರಾವಳಿ

ಮೂಡುಬಿದಿರೆ: ಅ.6 ಮತ್ತು 7 ರಂದು ‘ಆಳ್ವಾಸ್ ಪ್ರಗತಿ -2023’ ಉದ್ಯೋಗ ಮೇಳ| ಪ್ರತಿಭಾನ್ವಿತರಿಗೆ ಸಿಗಲಿದೆ ಹಲವು ಉದ್ಯೋಗ

ಸಮಗ್ರ ನ್ಯೂಸ್: ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಅಕ್ಟೋಬರ್‌ 6 ಮತ್ತು 7ರಂದು ‘ಆಳ್ವಾಸ್‌ ಪ್ರಗತಿ 2023’ ಉದ್ಯೋಗ ಮೇಳ ಮೂಡಬಿದಿರೆಯ ವಿದ್ಯಾಗಿರಿಯಲ್ಲಿರುವ ಆಳ್ವಾಸ್ ಕಾಲೇಜಿನಲ್ಲಿ ನಡೆಯಲಿದೆ. ‌ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಈ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲ ಕುರಿಯನ್‌, ‘ಗ್ರಾಮೀಣ ಭಾಗದ ಪ್ರತಿಭಾನ್ವಿತ ಯುವಕರಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುವ ಉದ್ದೇಶದಿಂದ ಪ್ರತಿಷ್ಠಾನವು ಉದ್ಯೋಗ ಮೇಳ ಆಯೋಜಿಸುತ್ತಾ ಬಂದಿದೆ.ಈ ವರ್ಷ 13ನೇ ಆವೃತ್ತಿಯ ಮೇಳ ನಡೆಯಲಿದೆ’ ಎಂದು ತಿಳಿಸಿದರು. ‘ಐಟಿ, ತಯಾರಿಕೆ, ಮಾರಾಟ, ಚಿಲ್ಲರೆ ವ್ಯಾಪಾರ, […]

ಮೂಡುಬಿದಿರೆ: ಅ.6 ಮತ್ತು 7 ರಂದು ‘ಆಳ್ವಾಸ್ ಪ್ರಗತಿ -2023’ ಉದ್ಯೋಗ ಮೇಳ| ಪ್ರತಿಭಾನ್ವಿತರಿಗೆ ಸಿಗಲಿದೆ ಹಲವು ಉದ್ಯೋಗ Read More »

ದ.ಕ ಜಿಲ್ಲೆಯಾದ್ಯಂತ ಸೆ.19ಕ್ಕೆ ಗಣೇಶ ಚತುರ್ಥಿ ರಜೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಸೆ.18ರ ಬದಲು ಸೆ.19ರಂದು ರಜೆ ಘೋಷಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಎಂಎಲ್ಸಿ ಕೆ.ಪ್ರತಾಪಸಿಂಹ ನಾಯಕ್ ಅವರ ಪತ್ರದೊಂದಿಗೆ ಮುಖ್ಯ ಕಾರ್ಯದರ್ಶಿಗೆ ಕಳುಹಿಸಿದ ಟಿಪ್ಪಣಿಯಲ್ಲಿ, ಮಂಗಳವಾರ ರಜೆ ಘೋಷಿಸುವುದರಿಂದ ಈ ಪ್ರದೇಶವು ಹಬ್ಬವನ್ನು ಆಚರಿಸಲು ಸಹಾಯ ಮಾಡುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದ.ಕ. ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ

ದ.ಕ ಜಿಲ್ಲೆಯಾದ್ಯಂತ ಸೆ.19ಕ್ಕೆ ಗಣೇಶ ಚತುರ್ಥಿ ರಜೆ Read More »

ಮಂಗಳೂರು: ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್

ಸಮಗ್ರ ನ್ಯೂಸ್: .ಮಂಗಳೂರು ನಗರ ಪೊಲೀಸ್ ಸೇವೆಯಲ್ಲಿದ್ದ ಉತ್ತರ ಕರ್ನಾಟಕದ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವದತ್ತಿಯ ಮಹೇಶ್ (31) ಜೀವಾಂತ್ಯ ಮಾಡಿಕೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ನಗರದ ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಕೌಟುಂಬಿಕ ಕಲಹವೇ ಮಹೇಶ್ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಒಂದುವರೆ ತಿಂಗಳ ಹಿಂದೆಯಷ್ಟೇ ಮಹೇಶ್ ವಿವಾಹವಾಗಿದ್ದರು ಎನ್ನಲಾಗಿದ್ದು ಕಪಿತಾನಿಯೋ ಬಳಿಯ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್ Read More »

ಮಂಗಳೂರು: ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ; ಮತ್ತಿಬ್ಬರು ಗಂಭೀರ

ಸಮಗ್ರ ನ್ಯೂಸ್: ಬೈಕ್ ಅಪಘಾತದಿಂದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರ ವಲಯದ ಪಡೀಲ್ ಅಂಡರ್ ಪಾಸ್‌ ಬಳಿ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು ಮತ್ತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ, ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಓದುತ್ತಿದ್ದ ಭವಿನ್ ರಾಜ್(20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ಗಾಯಗೊಂಡಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭವಿನ್‌

ಮಂಗಳೂರು: ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ; ಮತ್ತಿಬ್ಬರು ಗಂಭೀರ Read More »

ಧರ್ಮಸ್ಥಳ: ಹಾಡಹಗಲೇ ಪ್ರತ್ಯಕ್ಷಗೊಂಡ ಕಾಡಾನೆ ಹಿಂಡು

ಸಮಗ್ರ ನ್ಯೂಸ್: ಧರ್ಮಸ್ಥಳದ ನೇರ್ತನೆ ಪ್ರದೇಶದಲ್ಲಿ ಗುರುವಾರ ಹಗಲು ಹೊತ್ತಿನಲ್ಲಿಯೇ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು ನಾಗರಿಕರಲ್ಲಿ ಭಯ ಮೂಡಿಸಿದೆ. ಒಂದು ಮರಿಯಾನೆ ಹಾಗೂ ಎರಡು ದೊಡ್ಡ ಆನೆಗಳು ಈ ಗುಂಪಿನಲ್ಲಿ ಇದ್ದು ನೇರ್ತನೆ ಅರಣ್ಯದಿಂದ ಹೊರ ಬಂದು ಜನವಸತಿ ಪ್ರದೇಶಗಳ ಮೂಲಕ ಒಂದೆರಡು ಕಿ.ಮೀ ಕೃಷಿಗಳನ್ನು ನಾಶಮಾಡುತ್ತಾ ಮುಂದುವರಿದಿದೆ. ಪೊಸಳಿಕೆ ಸಮೀಪ ಕೃಷಿಯಿಲ್ಲದೆ ಕಾಡು ಬೆಳೆದಿರುವ ಖಾಸಗಿ ಜಾಗದಲ್ಲಿ ಬುಧವಾರ ಆನೆಗಳು ಕಾಣಿಸಿಕೊಂಡಿದೆ. ಅದೇ ಪರಿಸರದಲ್ಲಿ ಆನೆಗಳು ತಿರುಗಾಟ ನಡಸುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕಳೆದ ಎರಡು ಮೂರು

ಧರ್ಮಸ್ಥಳ: ಹಾಡಹಗಲೇ ಪ್ರತ್ಯಕ್ಷಗೊಂಡ ಕಾಡಾನೆ ಹಿಂಡು Read More »

ಸುಬ್ರಹ್ಮಣ್ಯ:ಆತ್ಮಹತ್ಯೆಯಿಂದ ಹೊರಬರಲು ಒತ್ತಡ ರಹಿತ ಜೀವನವನ್ನು ರೂಡಿಸಿಕೊಳ್ಳಿ: ಡಾ.ಅವಿನ್.ಡಿ.ಪಿ.

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಾ ಕೋಶ, ಆಂಗ್ಲ ಭಾಷಾ ವಿಭಾಗ ಮತ್ತು ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ ಆತ್ಮಹತ್ಯೆ ತಡೆ ದಿನದ ಪ್ರಯುಕ್ತ ಸೆ. 11 ರಂದು ಹಮ್ಮಿಕೊಳ್ಳಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಬಾತ್ರಾ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ದೆಹಲಿ ಇಲ್ಲಿನ ಸರ್ಜನ್ ಡಾ. ಅವಿನ್ ಡಿ.ಪಿ.ಅವರು ಆಧುನಿಕ ಜಂಜಾಟದ ಬದುಕಿನಲ್ಲಿ ಪ್ರತಿಯೊಬ್ಬರು ಒತ್ತಡ ರಹಿತವಾದ ಜೀವನವನ್ನು ರೂಢಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಪ್ರಭಾರ ಪ್ರಾಂಶುಪಾಲರಾದ ದಿನೇಶ್.ಕೆ

ಸುಬ್ರಹ್ಮಣ್ಯ:ಆತ್ಮಹತ್ಯೆಯಿಂದ ಹೊರಬರಲು ಒತ್ತಡ ರಹಿತ ಜೀವನವನ್ನು ರೂಡಿಸಿಕೊಳ್ಳಿ: ಡಾ.ಅವಿನ್.ಡಿ.ಪಿ. Read More »

ಕುಕ್ಕೇ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ

ಸಮಗ್ರ ನ್ಯೂಸ್: ಕುಕ್ಕೇ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಹಿಂದಿ ವಿಭಾಗ ಹಾಗೂ IQAC ಯ ಸಹಯೋಗದೊಂದಿಗೆ ಸೆ. 14ರಂದು ಹಿಂದಿ ದಿವಸ್ ಆಚರಿಸಲಾಯಿತು. ದೀಪಾ ಕಟೇರ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಹಿಂದಿ ದಿವಸದ ಮಹತ್ವ ಹಾಗೂ ಆಚರಣೆಯ ಬಗ್ಗೆ ಮಾತನಾಡಿದರು. ವಿಧ್ಯಾರ್ಥಿಗಳಿಗೆ ಹಿಂದಿ ಭಾಷಣ ಸ್ಪರ್ಧೆ, ಹಿಂದಿ ರಸಪ್ರಶ್ನೆ, ಹಿಂದಿ ದೇಶಭಕ್ತಿ ಗೀತೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ (ಪ್ರಭಾರ) ಡಾ.ದಿನೇಶ್ ಕೆ ಅವರು ಕಾರ್ಯಕ್ರಮದ ಅಧ್ಯ್ಷತೆಯನ್ನು ವಹಿಸಿದರು ಮಾತನಾಡಿದರು. ಈ

ಕುಕ್ಕೇ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ Read More »

ಸುಳ್ಯ: ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ 2 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ, ಸನ್ಮಾನ

ಸಮಗ್ರ ನ್ಯೂಸ್:ಸುಳ್ಯದ ಜಯನಗರ ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ, ಶ್ರೀ ಗುಳಿಗ ದೈವ, ಸ್ವಾಮಿ ಶ್ರೀ ಕೊರಗತನಿಯ ದೈವಸ್ಥಾನ ಮತ್ತು ವ್ಯವಸ್ಥಾಪನಾ ಆಡಳಿತ ಕಾರ್ಯ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆದ 2 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ, ಶ್ರೀ ಕೃಷ್ಣ ಲೀಲೋತ್ಸವ ಕಾರ್ಯಕ್ರಮ ಸೆ. 10ರಂದು ನಡೆಯಿತು. ಸಮಾಜ ಸೇವಕಿ ಮಹಾಲಕ್ಷ್ಮೀ ಕೊರಂಬಡ್ಕ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ದೀಪ ಬೆಳಗಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಕೇಶವ ಸಿ.ಎ, ಪ್ರಧಾನ ಕಾರ್ಯದರ್ಶಿ

ಸುಳ್ಯ: ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ 2 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ, ಸನ್ಮಾನ Read More »

ಹವಾಮಾನ ವರದಿ| ಸೆ.20ರವರೆಗೂ ಕರಾವಳಿಯಲ್ಲಿ ಉತ್ತಮ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ 20ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬುಧವಾರ ಚನ್ನಪಟ್ಟಣ, ಧರ್ಮಸ್ಥಳ, ಗೇರುಸೊಪ್ಪ, ಸಕಲೇಶಪುರ, ಮದ್ದೂರು, ಮಡಿಕೇರಿ, ಮಂಗಳೂರು, ಮಾಣಿ, ಪುತ್ತೂರು,

ಹವಾಮಾನ ವರದಿ| ಸೆ.20ರವರೆಗೂ ಕರಾವಳಿಯಲ್ಲಿ ಉತ್ತಮ ಮಳೆ ಸಾಧ್ಯತೆ Read More »

ಕರಾವಳಿಯಲ್ಲಿ ಗಣೇಶ ಚತುರ್ಥಿ ರಜೆ ಯಾವಾಗ? ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಸಮಗ್ರ ನ್ಯೂಸ್: ಸೆಪ್ಟೆಂಬರ್‌ 19ರಿಂದ ದೇಶಾದ್ಯಂತ ಗಣೇಶ ಚತುರ್ಥಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಸೆಪ್ಟೆಂಬರ್‌ 19ರಂದು ಸರ್ಕಾರಿ ರಜೆ ಘೋಷಣೆ ಮಾಡಬೇಕೆನ್ನುವ ಕೂಗುಗಳು ಎದ್ದಿದೆ. ಅದೇ ರೀತಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಅದೇ ಬೇಡಿಕೆಗಳು ಕೇಳಿಬಂದಿವೆ. ಗಣೇಶೋತ್ಸವ ಹಿನ್ನೆಲೆ ಸೆಪ್ಟೆಂಬರ್‌ 19ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ ಮಾಡಿ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದರು. ಇದೀಗ

ಕರಾವಳಿಯಲ್ಲಿ ಗಣೇಶ ಚತುರ್ಥಿ ರಜೆ ಯಾವಾಗ? ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು? Read More »