ಕರಾವಳಿ

ಪುತ್ತೂರು: ಗೃಹರಕ್ಷಕರ ಘಟಕ ಕಛೇರಿ ಸ್ಥಳಾಂತರ

ಸಮಗ್ರ ನ್ಯೂಸ್: ಸೆ. 13ರಂದು ಪುತ್ತೂರು ಘಟಕ ಕಛೇರಿಯನ್ನು ಪುತ್ತೂರು ಹಳೆಯ ಪೊಲೀಸ್ ಠಾಣೆಯ ಎದುರು ಭಾಗದಲ್ಲಿರುವ ಮಹಾಲಿಂಗೇಶ್ವರ ವೆಂಚರ್ಸ್ ಕಟ್ಟಡಕ್ಕೆ (ಹಳೆಯ ಬೋನಂತಾಯ ಆಸ್ಪತ್ರೆ) ಸ್ಥಳಾಂತರ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸುರೇಶ್ ಬಲ್ನಾಡು ಅವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಗೃಹರಕ್ಷಕರು ಒಳ್ಳೆಯ ರೀತಿಯಲ್ಲಿ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ. ಅವರಿಗೆ ಜನರು ಹೆಚ್ಚಿನ ಸಹಕಾರವನ್ನು ಕೊಡಬೇಕು ಹಾಗೂ ಪ್ರೋತ್ಸಾಹ ಕೊಡಬೇಕು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕರು ಬಹಳ ಅಗತ್ಯ ಅವರ ಸಮಸ್ಯೆಗಳಿಗೆ ಸರಕಾರ ಹೆಚ್ಚಿನ […]

ಪುತ್ತೂರು: ಗೃಹರಕ್ಷಕರ ಘಟಕ ಕಛೇರಿ ಸ್ಥಳಾಂತರ Read More »

ಸುಳ್ಯ: ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ವಾಷ್ಠರ್ ಭಕ್ತಿ ಗಾನಮಂಜರಿ ಕಾರ್ಯಕ್ರಮ

ಸಮಗ್ರ ನ್ಯೂಸ್:‌ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ವಾಷ್ಠರ್ ಭಕ್ತಿ ಗಾನಮಂಜರಿ ಕಾರ್ಯಕ್ರಮವು ಜರುಗಿತು. ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆಯೋಜಿಸಲಾಗಿದ್ದ ಈ ಭಕ್ತಿಗೀತೆಗಳ ರಸಮಂಜರಿ ಕಾರ್ಯಕ್ರಮವನ್ನು ಸಮಾಜಸೇವಕ ಮಂಜು ಮೇಸ್ತ್ರಿ ಬಳ್ಳಾರಿ ಉದ್ಘಾಟಿಸಿದರು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಮತ್ತು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ ಮತ್ತು ಜ್ಯೋತಿಷಿಯಾದ ಎಚ್. ಭೀಮರಾವ್ ವಾಷ್ಟರ್ ರವರು ವಾಷ್ಠರ್ ಭಕ್ತಿ ಗಾನ

ಸುಳ್ಯ: ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ವಾಷ್ಠರ್ ಭಕ್ತಿ ಗಾನಮಂಜರಿ ಕಾರ್ಯಕ್ರಮ Read More »

ಚೈತ್ರಾ ಕುಂದಾಪುರಗೆ ನಾನು ಆಶ್ರಯ ನೀಡಿರಲಿಲ್ಲ: ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಸ್ಪಷ್ಟನೆ

ಸಮಗ್ರ ನ್ಯೂಸ್: ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮೊದಲು ಚೈತ್ರಾ ಕುಂದಾಪುರ, ಕಾಂಗ್ರೆಸ್​ ಮುಖಂಡೆ ಮನೆಯಲ್ಲಿ ಅವಿತುಕೊಂಡಿದ್ದರು ಎನ್ನಲಾಗಿತ್ತು. ಸದ್ಯ ಈ ಕುರಿತು ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಆಶ್ರಯ ನೀಡಿದ್ದರೆ ಪೊಲೀಸರು ವಿಚಾರಣೆಗೆ ಕರೆಯಬೇಕಿತ್ತಲ್ಲವೇ ಎಂದು ಪ್ರಶ್ನಿಸಿದರು. ಸಿಸಿಬಿ ಪೊಲೀಸರಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ. ಚೈತ್ರಾ ಕುಂದಾಪುರ ಭೇಟಿಯಾಗಿ ಒಂದು ವರ್ಷ

ಚೈತ್ರಾ ಕುಂದಾಪುರಗೆ ನಾನು ಆಶ್ರಯ ನೀಡಿರಲಿಲ್ಲ: ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಸ್ಪಷ್ಟನೆ Read More »

ಬಹುಕೋಟಿ ವಂಚನೆ ಪ್ರಕರಣ| ಚೈತ್ರಾ ಕುಂದಾಪುರ ಗ್ಯಾಂಗ್ ಸಿಸಿಬಿ ಕಸ್ಟಡಿಗೆ

ಸಮಗ್ರ ನ್ಯೂಸ್: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ

ಬಹುಕೋಟಿ ವಂಚನೆ ಪ್ರಕರಣ| ಚೈತ್ರಾ ಕುಂದಾಪುರ ಗ್ಯಾಂಗ್ ಸಿಸಿಬಿ ಕಸ್ಟಡಿಗೆ Read More »

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಂದನ ಸಾಹಿತ್ಯ ವೇದಿಕೆಯಿಂದ ಚಂದನ ಕವಿಗೋಷ್ಠಿ

ಸಮಗ್ರ ನ್ಯೂಸ್: ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಚಂದನ ಕವಿಗೋಷ್ಠಿ ಜರುಗಿತು. ನಿವೃತ್ತ ಕೃಷಿ ಅಧಿಕಾರಿ ಮೋಹನ್ ನಂಗಾರು ಅವರು ಶ್ರೀಕೃಷ್ಣ ಪ್ರತಿಮೆಗೆ ಮಂಗಳಾರತಿ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ ಮತ್ತು ಜ್ಯೋತಿಷಿಯಾದ ಎಚ್. ಭೀಮರಾವ್ ವಾಷ್ಟರ್ ರವರು ಕವಿಗೋಷ್ಠಿ ಸಮಾರಂಭದ ಅಧ್ಯಕ್ಷತೆ ವಹಿಸಿ ನಿರೂಪಿಸಿದರು. ಖ್ಯಾತ ಹಿರಿಯ ಸಾಹಿತಿಗಳಾದ ಪುತ್ತೂರಿನ ಗೋಪಾಲ

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಂದನ ಸಾಹಿತ್ಯ ವೇದಿಕೆಯಿಂದ ಚಂದನ ಕವಿಗೋಷ್ಠಿ Read More »

ಆಶ್ಲೇಷಾ ನಕ್ಷತ್ರ ಶುಭ ಮಂಗಳವಾರ| ಸೆ. 12ರಂದು ಕುಕ್ಕೆಗೆ ಹರಿದು ಬಂದ ಭಕ್ತರ ದಂಡು

ಸಮಗ್ರ ನ್ಯೂಸ್: ಆಶ್ಲೇಷಾ ನಕ್ಷತ್ರ ಶುಭ ದಿನವಾದ ಮಂಗಳವಾರ(ಸೆ ೧೨) ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದರು. ಈ ವರ್ಷದ ದಾಖಲೆ ಪ್ರಮಾಣದಲ್ಲಿ ಆಶ್ಲೇಷ ಬಲಿ ಸೇವೆ ನಡೆದಿದೆ. ಮಂಗಳವಾರ ಬೆಳಿಗ್ಗೆ 1,719 ಆಶ್ಲೇಷ ಬಲಿ ಹಾಗೂ ಸಂಜೆ ಸುಮಾರು 190 ಆಶ್ಲೇಷ ಬಲಿ ಸೇವೆಗಳು ನಡೆದಿವೆ. ಇದು ಈ ವರ್ಷದ ದಾಖಲೆಯಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ. ಕ್ಷೇತ್ರದ ರಥಬೀದಿ ಮತ್ತು ಹೋರಾಂಗಣ ಭಕ್ತರಿಂದ ತುಂಬಿತ್ತು. ಪೇಟೆಯಲ್ಲಿ ವಾಹನಗಳ ಓಡಾಟವೂ

ಆಶ್ಲೇಷಾ ನಕ್ಷತ್ರ ಶುಭ ಮಂಗಳವಾರ| ಸೆ. 12ರಂದು ಕುಕ್ಕೆಗೆ ಹರಿದು ಬಂದ ಭಕ್ತರ ದಂಡು Read More »

BREAKING NEWS|ಸುಳ್ಯ: ರಸ್ತೆ ದಾಟುತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್

ಸಮಗ್ರ ನ್ಯೂಸ್: ಶಾಲೆ ಮುಗಿಸಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಆಂಬ್ಯುಲೆನ್ಸ್ ಗುದ್ದಿ ಗಂಭೀರ ಗಾಯಗೊಂಡಿರುವ ಘಟನೆ ಸುಳ್ಯದ ಜಾಲ್ಸೂರಿನಲ್ಲಿ ಇಂದು ಸಂಜೆ (ಸೆ. 12) ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಸುಳ್ಯದ ಆಸ್ಪತ್ರೆಗೆ ಕರೆ ತರಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನು ನಿರೀಕ್ಷಿಸಬೇಕಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

BREAKING NEWS|ಸುಳ್ಯ: ರಸ್ತೆ ದಾಟುತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್ Read More »

BREAKING NEWS|ಸುಳ್ಯ: ಬೈಕ್- ಬೈಕ್ ನಡುವೆ ಅಪಘಾತ

ಸಮಗ್ರ ನ್ಯೂಸ್: ಬೈಕ್ ಗಳ ನಡುವೆ ಅಪಘಾತಗೊಂಡು ಸವಾರರಿಬ್ಬರು ಗಾಯಗೊಂಡ ಘಟನೆ ಸುಳ್ಯದ ಜ್ಯೋತಿ ಸರ್ಕಲ್ ಬಳಿ ಇಂದು ಸಂಜೆ (ಸೆ. 12) ಸಂಭವಿಸಿದೆ. ಅಪಘಾತದ ರಭಸಕ್ಕೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಓಮಿನಿ ಕಾರ್ ಹಿಂಭಾಗ ಜಖಂಗೊಂಡಿದೆ.

BREAKING NEWS|ಸುಳ್ಯ: ಬೈಕ್- ಬೈಕ್ ನಡುವೆ ಅಪಘಾತ Read More »

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸಮಗ್ರ ನ್ಯೂಸ್:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಸೆ. 12ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಯನ್ನು ಆಚರಿಸಲಾಯಿತು.ಈ ಪ್ರಯುಕ್ತ ಪುಟಾಣಿಗಳಿಗೆ ಮುದ್ದು ಕೃಷ್ಣ, ಬಾಲಾ ಕೃಷ್ಣ ಹಾಗೂ ಯಶೋಧಾ ಕೃಷ್ಣ ಸ್ಪರ್ಧೆ ಏರ್ಪಡಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷೆ ರೂಪ ಜೆ. ರೈ ಅವರು ಮಾಡಿ, ತೇಜಸ್ವಿನಿ ಕಿರಣ್ ಲಯನ್ಸ್ ಸಂಸ್ಥೆಯ ಅಧ್ಯಕ್ಷೆ ಹಾಗೂ ಖಜಾಂಜಿ ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಶಿಶು ಕೃಷ್ಣನ ತೊಟ್ಟಿಲನ್ನು ತೂಗುವ ಮೂಲಕ ನೆರವೇರಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಶುಭಕರ

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಪೋಷಕರಿಂದ ಶಿಕ್ಷಕರ ದಿನಾಚರಣೆ

ಸಮಗ್ರ ನ್ಯೂಸ್: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಪೋಷಕರಿಂದ ಸೆ. 5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಅಥಿತಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯ, ಹಿರಿಯ ಶಿಕ್ಷಕ ಬಿ.ಪುಂಗವ ಗೌಡ ಸುಬ್ರಹ್ಮಣ್ಯ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ. ಗಂಗಮ್ಮ ಅರಂತೋಡು ಅವರು ಭಾಗವಹಿಸಿ ಶಿಕ್ಷಕ್ಷರ ದಿನಾಚರಣೆ ಮಹತ್ವದ ಬಗ್ಗೆ ಮಾತನಾಡಿದರು. ಇವರಿಗೆ ಸಂಸ್ಥೆಯ ಪರವಾಗಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಪೋಷಕರು ಒಡಗೂಡಿ ಶಾಲೆಯ ಸಂಚಾಲಕಿ ಗೀತಾಂಜಲಿ ಟಿ.ಜಿ ಹಾಗೂ ಶಾಲಾ ಶಿಕ್ಷಕಿ ನಿರ್ಮಲ ಹಾಗೂ

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಪೋಷಕರಿಂದ ಶಿಕ್ಷಕರ ದಿನಾಚರಣೆ Read More »