ಕರಾವಳಿ

ಗೆಳೆಯರ ಬಳಗ ಸುರತ್ಕಲ್ 14ನೇ ವರ್ಷದ ಶಾರದಾ ಹುಲಿವೇಷದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಮಗ್ರನ್ಯೂಸ್: ಹಿಂದುತ್ವಕ್ಕಾಗಿ ಜೀವನವನ್ನು ಮುಡಿಪಾಗಿಟ್ಟ ಹಿಂದೂ ಕಣ್ಮಣಿ ದಿವಂಗತ ಮಂಜುನಾಥ್ ಮಂಗಳೂರು ಇವರ ಸವಿನೆನಪಿಗಾಗಿ, ಗೆಳೆಯರ ಬಳಗ ಸುರತ್ಕಲ್ ವತಿಯಿಂದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ದಸರಾ ಮಹೋತ್ಸವಕ್ಕೆ 14ನೇ ವರ್ಷದ ಶಾರದಾ ಹುಲಿವೇಷದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಗಣ್ಯರ ಸಮ್ಮುಖದಲ್ಲಿ ದೀಪ ಪ್ರಜ್ವಲನೆ ಮುಖಾಂತರ ಪೆರ್ಮುದೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಎಂ.ಎಸ್.ಇ.ಝಡ್ ಕಾಲೋನಿ ಕೋಡಿಕೆರೆ ಕುಳಾಯಿ ಇಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ

ಗೆಳೆಯರ ಬಳಗ ಸುರತ್ಕಲ್ 14ನೇ ವರ್ಷದ ಶಾರದಾ ಹುಲಿವೇಷದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

1840ರ ಸುಬ್ರಹ್ಮಣ್ಯದ ಕಥೆ ಹೇಳುವ “ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ”

ಸಮಗ್ರ ನ್ಯೂಸ್ : ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹೊರತಂದಿರುವ, ಮಿಷನರಿಗಳಾದ ರೆ. ಹರ್ಮನ್ ಮ್ಯೋಗ್ಲಿಂಗ್ ಮತ್ತು ರೆ. ಗಾಟ್ ಫ್ರೈಡ್ ವೈಗಲ್ ವರದಿಯ ಅನುವಾದಿತ ‘ಮಿಷನರಿ ಪ್ರವಾಸ – ಮಂಗಳೂರಿನಿಂದ‌ ಸುಬ್ರಹ್ಮಣ್ಯಕ್ಕೆ’ ಕೃತಿ 1840ರ ಸುಬ್ರಹ್ಮಣ್ಯದ‌ ಕಥೆಯನ್ನು ಹೇಳುತ್ತದೆ. 1840ರ ನವೆಂಬರ್ 18 ರಂದು ಮಂಗಳೂರಿನಿಂದ ಹೊರಡುವ ಮ್ಯೋಗ್ಲಿಂಗ್ ಮತ್ತು ವೈಗಲ್ ಫರಂಗಿಪೇಟೆ, ಬಂಟ್ವಾಳ, ಕಾರಿಂಜ, ಗುರುವಾಯನಕೆರೆ, ಧರ್ಮಸ್ಥಳ, ಕೊಕ್ಕಡ, ಕುಲ್ಕುಂದ ಮಾರ್ಗವಾಗಿ ಸುಬ್ರಹ್ಮಣ್ಯ ತಲುಪುತ್ತಾರೆ. ನಂತರ ಸುಳ್ಯ, ಅಡೂರು, ಕಾಸರಗೋಡು ಮಾರ್ಗವಾಗಿ ಮಂಗಳೂರು ತಲುಪುತ್ತಾರೆ.

1840ರ ಸುಬ್ರಹ್ಮಣ್ಯದ ಕಥೆ ಹೇಳುವ “ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ” Read More »

ಬಂಟ್ವಾಳ: ಇಲೆಕ್ಟ್ರಾನಿಕ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಸೆ. 19ರಂದು ಮಧ್ಯಾಹ್ನ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳದ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಆಕಸ್ಮಿಕ ಅಗ್ನಿಗೆ ಹಲವು ಸೊತ್ತುಗಳು ಸುಟ್ಟುಹೋಗಿವೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳೀಯರೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಗಡಿಯಲ್ಲಿದ್ದ ಸುಮಾರು ‌ಲಕ್ಷಾಂತರ ರೂ. ಬೆಲೆಬಾಳುವ ಟಿ.ವಿ.ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳನ್ನು ಸುಟ್ಟು ಹೋಗಿದೆ. ಸ್ಥಳಕ್ಕೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ: ಇಲೆಕ್ಟ್ರಾನಿಕ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ Read More »

ಸುಳ್ಯ: ಬಾಡಿಗೆ ಆಟೋ ಸೋಗಿನಲ್ಲಿ ಪ್ರಯಾಣಿಕನ ದರೋಡೆ| 3.5 ಲಕ್ಷ ನಗದು, ಮೊಬೈಲ್ ಕಳವು

ಸಮಗ್ರ ನ್ಯೂಸ್: ಬಾಡಿಗೆ ಆಟೋದ ಸೋಗಿನಲ್ಲಿ ದರೋಡೆಕೋರರು ಪ್ರಯಾಣಿಕನನ್ನು ದರೋಡೆಗೈದ ಘಟನೆ ಸುಳ್ಯದ ಹಳೆಗೇಟು ಬಳಿ‌ ಸೆ. 18ರ ತಡರಾತ್ರಿ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾರುಗುಂದ ಗ್ರಾಮದ ನಿವಾಸಿ ದರ್ಶನ್‌ ‌(27ವ)ವಂಚನೆಗೆ ಒಳಗಾದವರು. ಇವರು ವೈಯಕ್ತಿಕ ಕೆಲಸದ ನಿಮಿತ್ತ ಸೆ 18 ರಂದು ಸುಳ್ಯಕ್ಕೆ ಬಂದಿದ್ದರು. ಅದೇ ದಿನ ರಾತ್ರಿ 11.15ರ ಸುಮಾರಿಗೆ ಸುಳ್ಯ ಬಸ್ಸು ನಿಲ್ದಾಣಕ್ಕೆ ತೆರಳುವ ಉದ್ದೇಶದಿಂದ ಸುಳ್ಯ ಕಸಬಾ ಗ್ರಾಮದ ಹಳೆಗೇಟು ಎಂಬಲ್ಲಿ ರಸ್ತೆ ಬದಿ ಬಾಡಿಗೆ ವಾಹನಕ್ಕೆ ಕಾಯುತ್ತಿದ್ದರು.

ಸುಳ್ಯ: ಬಾಡಿಗೆ ಆಟೋ ಸೋಗಿನಲ್ಲಿ ಪ್ರಯಾಣಿಕನ ದರೋಡೆ| 3.5 ಲಕ್ಷ ನಗದು, ಮೊಬೈಲ್ ಕಳವು Read More »

ಬಂಟ್ವಾಳ:ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತ ಮೃತ್ಯು

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಪ್ರಕಾಶ್ ಬೆಳ್ಳೂರು(43) ಅವರು ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಔಷಧಿಗೆಂದು ಸೆ.18ರಂದು ಬೆಳಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು. ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕಾಶ್ ಅವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ

ಬಂಟ್ವಾಳ:ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತ ಮೃತ್ಯು Read More »

ಸುಳ್ಯ: ಕರೆಂಟ್ ಕಂಬಕ್ಕೆ ಕಾರ್ ಡಿಕ್ಕಿ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಆಲ್ಟೋ ಕಾರ್ ಡಿಕ್ಕಿಯಾದ ಘಟನೆ ಸೆ. 18ರಂದು ಸುಳ್ಯ ತಾಲೂಕಿನ ಕಳಂಜ ಗ್ರಾಮದಲ್ಲಿ ವಿಷ್ಣು ನಗರ ಬಳಿ ನಡೆದಿದೆ. ನಿಯಂತ್ರಣ ತಪ್ಪಿ ಡಿಕ್ಕಿಯಾದ ರಭಸಕ್ಕೆ ಕಾರ್ ಜಖಂಗೊಂಡು ವಿದ್ಯುತ್ ಕಂಬ ತುಂಡಾಗಿದೆ.

ಸುಳ್ಯ: ಕರೆಂಟ್ ಕಂಬಕ್ಕೆ ಕಾರ್ ಡಿಕ್ಕಿ Read More »

ಸುಳ್ಯ; ಯುವಕ ನೇಣಿಗೆ ಶರಣು

ಸಮಗ್ರ ನ್ಯೂಸ್: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಐವರ್ನಾಡು ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಬೈಕ್ ಶೋರೂಂ ಒಂದರಲ್ಲಿ ಕೆಲವು ವರ್ಷಗಳಿಂದ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಕೆಲವು ಸಮಯಗಳಿಂದ ಈತ ಐವರ್ನಾಡಿನ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ ಮಾಡುತ್ತಿದ್ದ.ಇದೀಗ ಅದೇ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಸುಳ್ಯ; ಯುವಕ ನೇಣಿಗೆ ಶರಣು Read More »

ಸುಳ್ಯ: ವಿದೇಶದಿಂದಲೇ ತಲಾಖ್ ನೀಡಿದ ಗಂಡ; ಠಾಣೆ ಮೆಟ್ಟಿಲೇರಿದ ಪತ್ನಿ

ಸಮಗ್ರ ನ್ಯೂಸ್: ಮುಸ್ಲಿಂ ಮಹಿಳೆಯೋರ್ವರಿಗೆ ಆಕೆಯ ಗಂಡ ವಿದೇಶದಿಂದಲೇ ವಾಟ್ಸಾಪ್ ಮೂಲಕ ತಲಾಖ್ ನೀಡಿದ್ದು, ಇದನ್ನು ಪ್ರಶ್ನಿಸಿ ಮಹಿಳೆ ಠಾಣೆ ಮೆಟ್ಟಿಲೇರಿದ ಘಟನೆ ಸುಳ್ಯದ ಜಯನಗರ ಎಂಬಲ್ಲಿಂದ ವರದಿಯಾಗಿದೆ. ಜಯನಗರದ ಮಿಸ್ರಿಯಾ ಎಂಬ ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ಘಟನೆ ವರದಿಯಾಗಿದೆ. ಕೇರಳ ತ್ರಿಶೂರ್ ಮೂಲದ ಅಬ್ದುಲ್ ರಾಶಿದ್ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಮಿಸ್ರಿಯ ಎಂಬ ಯುವತಿಯನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ಆಕೆಯನ್ನು ಉತ್ತಮವಾಗಿ ನೋಡಿಕೊಂಡಿದ್ದು

ಸುಳ್ಯ: ವಿದೇಶದಿಂದಲೇ ತಲಾಖ್ ನೀಡಿದ ಗಂಡ; ಠಾಣೆ ಮೆಟ್ಟಿಲೇರಿದ ಪತ್ನಿ Read More »

ಉಡುಪಿ: ಬಾಲ ಮಂದಿರದಿಂದ ಬಾಲಕ ನಾಪತ್ತೆ ‌

ಸಮಗ್ರ ನ್ಯೂಸ್: ಬಾಲ ಮಂದಿರದಲ್ಲಿ ವಾಸವಿದ್ದ ಸುಮಾರು 14-16 ವರ್ಷದ ಶಬೀರ್ ಎಂಬ ಬಾಲಕನು ಸೆ. 1 ರಿಂದ ನಾಪತ್ತೆಯಾದ ಬಗ್ಗೆ ದೂರು ನೀಡಲಾಗಿದೆ. ಬಾಲಕ ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಹಿಂದಿ ಬಾಷೆ ಮಾತನಾಡುತ್ತಾನೆ. ಇವನ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪಿ.ಐ ಮೊ.ನಂ: 9480805458, ಪಿ.ಎಸ್.ಐ ಮೊ.ನಂ: 8277988949, ಮಹಿಳಾ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2525599 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಬಾಲ ಮಂದಿರದಿಂದ ಬಾಲಕ ನಾಪತ್ತೆ ‌ Read More »

ಸುಳ್ಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಬೈಕ್‌ ಕಳ್ಳನ ಬಂಧನ

ಸಮಗ್ರ ನ್ಯೂಸ್:‌ ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಸಿದಂತೆ ಸುಳ್ಯ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿಯಾದ ಆರೋಪಿ ಸುಬ್ರಮಣಿ (26) ಪ್ರಕರಣದ ಆರೋಪಿ. ಈತನ ವಿರುದ್ಧ ಸುಳ್ಯ ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ ಬೈಕ್‌ ಕಳ್ಳತನದ ಕುರಿತು ಸೆ.16ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಸುಳ್ಯ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಸುಳ್ಯದ ಆಲೆಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ

ಸುಳ್ಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಬೈಕ್‌ ಕಳ್ಳನ ಬಂಧನ Read More »