ಕರಾವಳಿ

ಸುಳ್ಯ: ಮಸೂದ್ ಕೊಲೆ ಪ್ರಕರಣ; ಮತ್ತೆ ಮೂವರಿಗೆ ಜಾಮೀನು

ಸಮಗ್ರ ನ್ಯೂಸ್: ಕಳೆದ ವರ್ಷ ಸುಳ್ಯದ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂರು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು‌. ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ […]

ಸುಳ್ಯ: ಮಸೂದ್ ಕೊಲೆ ಪ್ರಕರಣ; ಮತ್ತೆ ಮೂವರಿಗೆ ಜಾಮೀನು Read More »

ಪುತ್ತೂರು:ಗ್ರಾ.ಪಂನ ಮಾಜಿ ಸದಸ್ಯನ ಮನೆಗೆ ನುಗ್ಗಿದ ದರೋಡೆಕೋರರ ಗುಂಪು

ಸಮಗ್ರ ನ್ಯೂಸ್:‌ ದರೋಡೆಕೋರರ ಗುಂಪು ಬಡಗನ್ನೂರು ಗ್ರಾ.ಪಂ ನ ಮಾಜಿ ಸದಸ್ಯ ಗುರುಪ್ರಸಾದ್‌ ರೈ ಕುಡ್ಕಾಡಿ ಅವರ ಮನೆಗೆ ನುಗ್ಗಿ ಚಿನ್ನ ಮತ್ತು ನಗದು ಹಣ ದೋಚಿ ಪರಾರಿಯಾದ ಘಟನೆ ಸೆ.5ರ ತಡರಾತ್ರಿ ನಡೆದಿದೆ. ತೋಟದ ನಡುವೆ ಒಂಟಿಯಾಗಿರುವ ಮನೆಯಲ್ಲಿ ಗುರುಪ್ರಸಾದ್ ರೈ ಮತ್ತು ಅವರ ತಾಯಿ ಕಸ್ತೂರಿ ರೈ ಮಾತ್ರವಿದ್ದು 7 ರಿಂದ 8 ಜನರಿದ್ದ ದರೋಡೆಕೋರರ ಗುಂಪು ಕೈಯಲ್ಲಿ ತಲವಾರು ಮತ್ತು ರಾಡ್ ನಂತಹ ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಿ, ಜೀವಬೆದರಿಕೆಯೊಡ್ಡಿ ತಾಯಿ ಮಗನನ್ನು

ಪುತ್ತೂರು:ಗ್ರಾ.ಪಂನ ಮಾಜಿ ಸದಸ್ಯನ ಮನೆಗೆ ನುಗ್ಗಿದ ದರೋಡೆಕೋರರ ಗುಂಪು Read More »

ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು

ಸಮಗ್ರ ನ್ಯೂಸ್: ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಆತಂಕಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ತುಳಸಿ (15) ನಿವೇದಿತ (14) ಎಂಬ ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ. ಇವರನ್ನು ತಕ್ಷಣವೇ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ರವಾನಿಸಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಓವರ್ ಸ್ಪೀಡ್ ನಿಂದ

ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು Read More »

ಸುಳ್ಯ: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಆರಂಬೂರು ಘಟಕ ಸಮಿತಿ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ

ಸಮಗ್ರ ನ್ಯೂಸ್: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಳ್ಯ ಸಂಪಾಜೆ ವಲಯ ಆರಂಬೂರು ಘಟಕ ಸಮಿತಿ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ ಮತ್ತು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಸೆ.6 ಬುಧವಾರದಂದು ಶ್ರೀ ಮೂಕಾಂಬಿಕಾ ಸಭಾ ಭವನದಲ್ಲಿ ನಡೆಯಿತು. ರತ್ನಕರ ರೈ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್ ಉರ್ವ, ಪಿ.ಆರ್.ಒ.ಸಯ್ಯದ್, ಚಂದ್ರಶೇಖರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಆರಂಬೂರ್ ಒಕ್ಕೂಟ, ಘಟಕ ಸಮಿತಿ ಅಧ್ಯಕ್ಷರು

ಸುಳ್ಯ: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಆರಂಬೂರು ಘಟಕ ಸಮಿತಿ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ Read More »

ಅಪಘಾತದಲ್ಲಿ ಪಾದಾಚಾರಿ‌ ಸಾವನ್ನಪ್ಪಿದ ಪ್ರಕರಣ| ಸುಳ್ಯದಲ್ಲೇ ನಡೆಯಿತು ಉ.ಕರ್ನಾಟಕ ಕಾರ್ಮಿಕನ ಅಂತ್ಯಸಂಸ್ಕಾರ

ಸಮಗ್ರ ನ್ಯೂಸ್: ಅಡ್ಕಾರಿನಲ್ಲಿ ಪಾದಾಚಾರಿಗೆ ಕಾರು ಗುದ್ದಿದ ಪ್ರಕರಣದಲ್ಲಿ ಸಾವಿಗೀಡಾಗಿದ್ದ ಕೂಲಿ ಕಾರ್ಮಿಕನ ಮೃತದೇಹವನ್ನು ಸುಳ್ಯದಲ್ಲಿಯೇ ಅಂತಿಮ ಸಂಸ್ಕಾರ ನಡೆಸಲಾಯಿತು. ಮಂಗಳವಾರ ರಾತ್ರಿ 37 ವರ್ಷದ ಅಣ್ಣಪ್ಪ ಅನ್ನುವ ವ್ಯಕ್ತಿ ಊಟ ಮುಗಿಸಿಕೊಂಡು ಹಿಂತಿರುಗಿ ಹೋಗುತ್ತಿದ್ದ ವೇಳೆ ಸ್ಕಾರ್ಫಿಯೋ ಕಾರೊಂದು ರಭಸದಿಂದ ಬಂದು ಡಿಕ್ಕಿಯಾಯಿತು. ಡಿಕ್ಕಿಯಾದ ರಭಸಕ್ಕೆ ಅಣ್ಣಪ್ಪ ಸ್ಥಳದಲ್ಲೇ ಧಾರವಾಡದ ಹೊನ್ನೇನಹಳ್ಳಿ ಮೂಲದ ಕಾರ್ಮಿಕ ಸಾವನ್ನಪ್ಪಿದರು. ಮೃತದೇಹವನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ತಂದು ಶವ ಪರೀಕ್ಷೆ ನಡೆಸಲಾಗಿತ್ತು. ಮೃತ ಕಾರ್ಮಿಕನ ಕುಟುಂಬಸ್ಥರು ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ಅಪಘಾತದಲ್ಲಿ ಪಾದಾಚಾರಿ‌ ಸಾವನ್ನಪ್ಪಿದ ಪ್ರಕರಣ| ಸುಳ್ಯದಲ್ಲೇ ನಡೆಯಿತು ಉ.ಕರ್ನಾಟಕ ಕಾರ್ಮಿಕನ ಅಂತ್ಯಸಂಸ್ಕಾರ Read More »

ಸೆ.6 ರಿಂದ 9ರವರೆಗೆ ದ.ಕ‌ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ. ಹಾಗಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಸೆ.6 ರಿಂದ 9ರವರೆಗೆ ದ.ಕ‌ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ Read More »

ಸುಳ್ಯ:ಎನ್ಎಂಸಿಯಲ್ಲಿ ಎನ್ ಸಿ ಸಿ ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ

ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಸಾಧಕ ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸೆ. 5ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೈಸೂರು ಮುಕ್ತ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ.ಮಮತಾ ಕೆ. ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ.ಅನುರಾಧಾ ಕುರುಂಜಿ ಅವರನ್ನು ಸನ್ಮಾನಿಸಲಾಯಿತು.ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕ ಯುಗದಲ್ಲಿ ಶಿಕ್ಷಕರು ದಿನದಿಂದ ದಿನಕ್ಕೆ ಹೊಸತನಕ್ಕೆ ತೆರೆದುಕೊಳ್ಳಬೇಕು.

ಸುಳ್ಯ:ಎನ್ಎಂಸಿಯಲ್ಲಿ ಎನ್ ಸಿ ಸಿ ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ Read More »

ಎನ್ನೆಂಸಿಯಲ್ಲಿ ಶಿಕ್ಷಕರ ದಿನಾಚರಣೆ| ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು-ಕೆ.ಆರ್.ಗೋಪಾಲಕೃಷ್ಣ

ಸಮಗ್ರ ನ್ಯೂಸ್: ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತಾರೆ. ಶಿಕ್ಷಕ ಇಡೀ ಸಮಾಜದ ಪರಿವರ್ತಕ, ನಿರ್ಮಾತ್ರ. ಶಿಕ್ಷಕರು ಮಕ್ಕಳಲ್ಲಿ ಅಜ್ಞಾನದ ಕತ್ತಲೆಯನ್ನು ಕಳೆದು ಸುಜ್ಞಾನದೆಡೆ ಕರೆದುಕೊಂಡು ಹೋಗುವ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು ಎಂದು ಸೀತಾ ರಾಘವ ಪದವಿಪೂರ್ವ ಕಾಲೇಜು, ಪೆರ್ನಾಜೆ ಇಲ್ಲಿಯ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್.ಗೋಪಾಲಕೃಷ್ಣ ಅವರು ಹೇಳಿದರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ. 5ರಂದು ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಮತ್ತು ಆಂತರಿಕ ಗುಣಮಟ್ಟ ಖಾತರಿ

ಎನ್ನೆಂಸಿಯಲ್ಲಿ ಶಿಕ್ಷಕರ ದಿನಾಚರಣೆ| ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು-ಕೆ.ಆರ್.ಗೋಪಾಲಕೃಷ್ಣ Read More »

ಧರ್ಮಸ್ಥಳ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೌಜನ್ಯ ಮನೆಗೆ ಭೇಟಿ

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸೆ.5 ರಂದು ಸೌಜನ್ಯ ಮನೆಗೆ ಭೇಟಿ ನೀಡಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗನಗೌಡ ಅವರು ಇಂದು ಮಧ್ಯಾಹ್ನ 3.30-3.45 ರ ವೇಳೆಗೆ ಸೌಜನ್ಯ ಅವರ ಮನೆಗೆ ಹಾಗೂ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಂತರ ಬೆಳ್ತಂಗಡಿ ಐಬಿ ಗೆ ತೆರಳಿದ್ದಾರೆ.

ಧರ್ಮಸ್ಥಳ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೌಜನ್ಯ ಮನೆಗೆ ಭೇಟಿ Read More »

ಸುಳ್ಯ: ಭಾರತ್ ಜೋಡೋ ಯಾತ್ರೆಯ ವರ್ಷದ ನೆನಪಿಗಾಗಿ ಕೆಪಿಸಿಸಿ ಜಿಲ್ಲಾ ಮಟ್ಟದ ಪಾದಯಾತ್ರೆ ನಡೆಸುವಂತೆ ಜಿಲ್ಲಾ ಕಾಂಗ್ರೆಸ್ ಗೆ ಆಗ್ರಹ

ಸಮಗ್ರ ನ್ಯೂಸ್: ರಾಹುಲ್ ಗಾಂಧಿಯವರ ಐತಿಹಾಸಿಕ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಗಿ 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ರಾಮನಗರದಲ್ಲಿ ಸೆ.7ರಂದು ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ. ಅದರ ನಂತರ ಸೆ.11ರ ಮುಂಚಿತವಾಗಿ ಪ್ರತಿ ಜಿಲ್ಲೆಯಲ್ಲಿ 1 ಗಂಟೆ ಪಾದಯಾತ್ರೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ದ.ಕ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ನಡೆಸಬೇಕು. ಪ್ರತೀ ಬಾರಿ ಜಿಲ್ಲಾ ಕೇಂದ್ರದಲ್ಲಿ ನಡೆಸುವುದರಿಂದ ಸುಳ್ಯದಂತ ಹಿಂದುಳಿದ ಪ್ರದೇಶದಲ್ಲಿ ಪಕ್ಷ ಸಂಘಟನೆಗೆ ತೊಡಕಾಗುತ್ತದೆ. ಸುಳ್ಯದಲ್ಲಿ ಸುಳ್ಯ

ಸುಳ್ಯ: ಭಾರತ್ ಜೋಡೋ ಯಾತ್ರೆಯ ವರ್ಷದ ನೆನಪಿಗಾಗಿ ಕೆಪಿಸಿಸಿ ಜಿಲ್ಲಾ ಮಟ್ಟದ ಪಾದಯಾತ್ರೆ ನಡೆಸುವಂತೆ ಜಿಲ್ಲಾ ಕಾಂಗ್ರೆಸ್ ಗೆ ಆಗ್ರಹ Read More »