ಕರಾವಳಿ

ಕೃಷ್ಣಂ ವಂದೇ ಜಗದ್ಗುರುಂ| ಕೃಷ್ಣನ ಜೀವನ ದರ್ಶನವೇ ಪ್ರತಿದಿನದ ಹಬ್ಬ

ಸಮಗ್ರ ವಿಶೇಷ: ಜೀವನವನ್ನು ಪರಿಪೂರ್ಣವಾಗಿ ಕಾಣಿಸಿದವನು ಶ್ರೀಕೃಷ್ಣ. ಇದನ್ನು ನಾವು ಅವನು ಹಾಡಿನಲ್ಲಿ, ಎಂದರೆ ‘ಭಗವದ್ಗೀತೆ’ಯಲ್ಲಿ ಕಾಣಬಹುದು. ಜೀವನದ ಸಾಕ್ಷಾತ್ಕಾರದ ಹಾದಿಯಲ್ಲಿ ಎರಡು ಧರ್ಮಗಳು ಒದಗುತ್ತವೆ; ಒಂದು: ಪ್ರವೃತ್ತಿಧರ್ಮ; ಇನ್ನೊಂದು: ನಿವೃತ್ತಿಧರ್ಮ. ಪ್ರವೃತ್ತಿಧರ್ಮದ ಗತಿಯೇ ಕ್ರಿಯಾಶೀಲತೆ; ಕರ್ಮಮಾರ್ಗ. ನಿವೃತ್ತಿಧರ್ಮದ ಗತಿ ಎಂದರೆ ಕರ್ಮಸನ್ಯಾಸ; ಅದುವೇ ತ್ಯಾಗಮಾರ್ಗ. ಈ ಎರಡರ ಸಮನ್ವಯವನ್ನು ನಾವು ಭಗವದ್ಗೀತೆಯಲ್ಲಿ ಕಾಣುತ್ತೇವೆ. ಇದನ್ನು ಶಂಕರಾಚಾರ್ಯರು ಗೀತಾಭಾಷ್ಯದ ಆರಂಭದಲ್ಲಿಯೇ ಧ್ವನಿಸಿದ್ದಾರೆ ಕೂಡ. ಸಂಸಾರಿಯಾದವನು ಹೇಗಿರಬೇಕು ಎಂಬುದಕ್ಕೂ ಗೀತೆಯಲ್ಲಿ ಮಾರ್ಗದರ್ಶನ ಸಿಗುತ್ತದೆ; ಸನ್ಯಾಸಿಗಳಿಗೂ ಉಪದೇಶ ದೊರೆಯುತ್ತದೆ. ಹೀಗಾಗಿ […]

ಕೃಷ್ಣಂ ವಂದೇ ಜಗದ್ಗುರುಂ| ಕೃಷ್ಣನ ಜೀವನ ದರ್ಶನವೇ ಪ್ರತಿದಿನದ ಹಬ್ಬ Read More »

ಸುಳ್ಯ:ಕೊಲ್ಲಮೊಗ್ರದ ಸಚಿತ್ ಶಿವಾಲ ಅವರಿಗೆ ಸಹಾಯ ಹಸ್ತ ನೀಡಬೇಕಿದೆ

ಸಮಗ್ರ ನ್ಯೂಸ್: ಕೊಲ್ಲಮೊಗ್ರ ಗ್ರಾಮದ ಸಚಿತ್ ಶಿವಾಲ ಎಂಬ ಯುವಕ ಸುಮಾರು ಎರಡು ವರುಷಗಳಿಂದ IGA nephropathy ಎಂಬ chronic ಕಿಡ್ನಿ ವೈಫಲ್ಯದಿಂದ ಬಲಳುತಿದ್ದು ಅವರಿಗೆ ಸಹಾಯ ಹಸ್ತ ನೀಡಬೇಕಿದೆ. ಈಗಾಗಲೇ 2 ಕಿಡ್ನಿಗಳು ಸುಮಾರು 80% ಅಷ್ಟು ನಿಷ್ಕ್ರಿಯಗೊಂಡಿದ್ದು, ದೂರದ ಕೊಯಿಕ್ಕೋಡ್ ಆಸ್ಟೆರ್ ಮಿಮ್ಸ್ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಡಯಾಲಿಸಿಸ್ ಪಡೆಯುತ್ತಿದ್ದಾರೆ. ಅತೀ ಶೀಘ್ರದಲ್ಲಿ ಕಿಡ್ನಿ ಟ್ರಾನ್ಸಪ್ಲಾಂಟ್ ಮಾಡುವುದು ಅನಿವಾರ್ಯವಾಗಿದೆ. ಡಾಕ್ಟರ್ ಸಲಹೆಯಂತೆಯೇ ಅವರ ತಂದೆಯವರ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಮಾಡಲು ಸುಮಾರು 16ಲಕ್ಷ ಅಂದಾಜು

ಸುಳ್ಯ:ಕೊಲ್ಲಮೊಗ್ರದ ಸಚಿತ್ ಶಿವಾಲ ಅವರಿಗೆ ಸಹಾಯ ಹಸ್ತ ನೀಡಬೇಕಿದೆ Read More »

ಸುಳ್ಯ: ಅಸೌಖ್ಯದಿಂದ ಶಾಲಾ ಬಾಲಕ ಸಾವು

ಸಮಗ್ರ ನ್ಯೂಸ್: ಅಸೌಖ್ಯದಿಂದ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಇಂದು ತಾಲೂಕಿನ ದೇವಚಳ್ಳ ಗ್ರಾಮದಿಂದ ವರದಿಯಾಗಿದೆ. ಇಲ್ಲಿನ ತಳೂರು ನಿವಾಸಿ ಚಂದ್ರಶೇಖರ ಎಂಬವರ ಪುತ್ರ ಸ ಹಿ ಪ್ರಾ ಶಾಲೆ ದೇವಚಳ್ಳ ಶಾಲೆಯಲ್ಲಿ ೧ ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿಲಾಸ್ ಟಿ. ಮೃತಪಟ್ಟ ಬಾಲಕ. ವಿಲಾಸ್ ಟಿ. ಇಂದು ಬೆಳಗ್ಗೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಮಂಗಳೂರಿನ ಎ. ಜೆ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಆತ ಮೃತಪಟ್ಟಿದ್ದಾನೆ. ಮೃತ ವಿಲಾಸ್ ತಂದೆ, ತಾಯಿ ಮೋಹಿನಿ ಚಂದ್ರಶೇಖರ ತಳೂರು,

ಸುಳ್ಯ: ಅಸೌಖ್ಯದಿಂದ ಶಾಲಾ ಬಾಲಕ ಸಾವು Read More »

ಸುಳ್ಯ: ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟನೆ

ಸಮಗ್ರ ನ್ಯೂಸ್: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆಯ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಸುಳ್ಯ ತಾಲೂಕು ಮಟ್ಟದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಜನ್ಮದಿನೋತ್ಸವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಇಂದು ಬೆಳಗ್ಗೆ ಸುಳ್ಯದ ಪರಿವಾರಕಾನ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಿತು. ಸುಳ್ಯ

ಸುಳ್ಯ: ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟನೆ Read More »

ಪೆರಾಜೆ: ಪತಿ ಮೃತಪಟ್ಟ 28 ದಿನದಲ್ಲಿ ಪತ್ನಿ ಆತ್ಮಹತ್ಯೆ

ಸಮಗ್ರ ನ್ಯೂಸ್:‌ ಪತಿ ಮೃತಪಟ್ಟ 28 ದಿನದಲ್ಲಿ ಪತ್ನಿ ಆತ್ಮಹತ್ಯೆ ಶರಣಾದ ಘಟನೆ ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದ ಹೊದ್ದೆಟ್ಟಿಯಲ್ಲಿ ಸೆ.4ರಂದು ನಡೆದಿದೆ. ಮೃತ ಮಹಿಳೆಯನ್ನು ರೂಪಾ(30) ಎಂದು ಗುರುತಿಸಲಾಗಿದೆ. ಈಕೆ ಮೂಲತಃ ಕೊಡಗು ಜಿಲ್ಲೆಯ ಪೆರಾಜೆಯವರಾಗಿದ್ದು ಎರಡು ವರ್ಷಗಳ ಹಿಂದೆ ಅವರನ್ನು ಸವಣೂರಿನ ಪೆರಿಯಡ್ಕ ದಿನೇಶ ಎಂಬರಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಪತಿ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಬಳಿಕ ರೂಪಾ ತವರು ಮನೆ ಪೆರಾಜೆಗೆ ಬಂದಿದ್ದರು. ಇದೀಗ ಈಕೆ ಗಂಡ ಮೃತಪಟ್ಟ ಕಾರಣ

ಪೆರಾಜೆ: ಪತಿ ಮೃತಪಟ್ಟ 28 ದಿನದಲ್ಲಿ ಪತ್ನಿ ಆತ್ಮಹತ್ಯೆ Read More »

ಮಂಗಳೂರು:‌ ಯುವಕನಿಗೆ ಚೂರಿ ಇರಿತ| ಮೂವರು ಪೊಲೀಸ್ ವಶಕ್ಕೆ| ಏನಿದು ಪ್ರಕರಣ..!

ಸಮಗ್ರ ನ್ಯೂಸ್: ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಕಳವಾರು ಬೆಂಕಿನಾಥೇಶ್ವರ ದೇವಸ್ಥಾನ ಬಳಿಯ ನಿವಾಸಿ ಪ್ರಶಾಂತ್‌ ಯಾನೆ ಪಚ್ಚು(28), ಕಳವಾರು ಆಶ್ರಯಕಾಲನಿ ನಿವಾಸಿ ಧನರಾಜ್(23) ಮತ್ತು ಕಳವಾರು ಚರ್ಚ್‌ ಗುಡ್ಡೆ ಸೈಟ್‌ ನಿವಾಸಿ ಯಜ್ಞೇಶ್‌(22) ಎಂದು ಗುರುತಿಸಲಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವು ಆರೋಪಿಗಳಿದ್ದು, ಉಳಿದವರಿಗಾಗಿ ಸುರತ್ಕಲ್‌ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ತಿಳಿದು

ಮಂಗಳೂರು:‌ ಯುವಕನಿಗೆ ಚೂರಿ ಇರಿತ| ಮೂವರು ಪೊಲೀಸ್ ವಶಕ್ಕೆ| ಏನಿದು ಪ್ರಕರಣ..! Read More »

ಕುಕ್ಕೆ ಸುಬ್ರಹ್ಮಣ್ಯ: ಯಾತ್ರಿಕರ ಕರಿಮಣಿ ಸರಕ್ಕೆ ಕನ್ನ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹಿಂದಿರುಗುವಾಗ ಬಸ್‌ ಹತ್ತುವ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಯಾತ್ರಿಕರೊಬ್ಬರ ಕರಿಮಣಿ ಸರ ಕಳ್ಳತನವಾದ ಘಟನೆ ನಡೆದಿದೆ. ಸೋಮವಾರಪೇಟೆ ನಿವಾಸಿ ಲೀಲಾ (55) ಸೆ. 3ರಂದು ಬೆಳಗ್ಗೆ ಕುಕ್ಕೆ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಮಾಡಿಕೊಂಡು, ಊರಿಗೆ ಹೋಗಲು ಮಧ್ಯಾಹ್ನ ಹಾಸನ-ಬೆಂಗಳೂರು ಬಸ್‌ಗೆ ಹತ್ತುವಾಗ ನೂಕು ನುಗ್ಗಲಿದ್ದು, ಸೀಟಿನಲ್ಲಿ ಕೂತು ನೋಡಿದಾಗ 25 ಗ್ರಾಂ ತೂಕದ 87,000 ರೂ. ಮೌಲ್ಯದ ಸರವನ್ನು ಕಳ್ಳತನ ಮಾಡಿರುವುದಾಗಿ ಸುಬ್ರಹ್ಮಣ್ಯ ಠಾಣೆಗೆ ದೂರಿನಲ್ಲಿ

ಕುಕ್ಕೆ ಸುಬ್ರಹ್ಮಣ್ಯ: ಯಾತ್ರಿಕರ ಕರಿಮಣಿ ಸರಕ್ಕೆ ಕನ್ನ Read More »

ಸುಳ್ಯ: ಸೆ. 5ರಂದು ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ| ದ.ಕ ಜಿಲ್ಲೆಯ 21 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ 21 ಮಂದಿ ಶಿಕ್ಷಕರು 2023-24ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೆ. 5ರಂದು ಬೆಳಗ್ಗೆ 10ಕ್ಕೆ ಸುಳ್ಯ ಪರಿವಾರಕಾನದ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಜರಗುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ. ಕಿರಿಯ ಪ್ರಾಥಮಿಕ ವಿಭಾಗ

ಸುಳ್ಯ: ಸೆ. 5ರಂದು ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ| ದ.ಕ ಜಿಲ್ಲೆಯ 21 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ Read More »

ಮಂಗಳೂರು: ಬಜ್ಪೆಯಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಕೇಸು ದಾಖಲು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನಿಗೆ ಅನ್ಯಕೋಮಿನ ಯುವಕರ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಕರಂಬಾರು ಎಂಬಲ್ಲಿ ನಡೆದಿದೆ. ಕರಂಬಾರು ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಮಾರಣಾಂತಿಕ ಹಲ್ಲೆಗೊಳಗಾದ ಯುವಕ. ರವಿವಾರ ರಾತ್ರಿ ಅಬ್ದುಲ್ ಸಫ್ವಾನ್ ತನ್ನ ಸ್ನೇಹಿತ ಮುಹಮ್ಮದ್ ಸಫ್ವಾನ್‌ನೊಂದಿಗೆ ಕರಂಬಾರಿನಿಂದ ಬಜ್ಜೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಗುಂಪೊಂದು ಅವರ ಮೇಲೆ ದಾಳಿ ಮಾಡಿದ್ದು, ಅಬ್ದುಲ್ ಸಫ್ವಾನ್ ಅವರ ಕೈ ಮತ್ತು ಕುತ್ತಿಗೆಗೆ ಚುಚ್ಚಿದ

ಮಂಗಳೂರು: ಬಜ್ಪೆಯಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಕೇಸು ದಾಖಲು Read More »

ಬೆಳ್ತಂಗಡಿ: ‘ಪ್ರಕರಣವನ್ನು ಮರುತನಿಖೆ ನಡೆಸದಿದ್ದರೆ ಮುಂದೆ ವಿಧಾನಸೌಧಕ್ಕೂ ಮುತ್ತಿಗೆ’| ಅಬ್ಬರಿಸಿದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

ಸಮಗ್ರ ನ್ಯೂಸ್: ಸೌಜನ್ಯಾ ಕುಟುಂಬದ ಹೋರಾಟಕ್ಕೆ ಬೆಂಬಲವಾಗಿ ನಿಂತಿರುವ ಮಹೇಶ ಶೆಟ್ಟಿ ತಿಮರೋಡಿ, ‘ಸೌಜನ್ಯಾಗೆ ನ್ಯಾಯ ಕೊಡಿಸಲು ಶುರುವಾದ ಹೋರಾಟ ಸಂಗ್ರಾಮದ ರೂಪವನ್ನು ಪಡೆದಿದೆ. ಈ ಹೋರಾಟವನ್ನು ಹತ್ತಿಕ್ಕಲು ಮುಂದಾದರೆ ಸರ್ಕಾರಕ್ಕೆ ಶಾಪ ತಟ್ಟುತ್ತದೆ. ಜನರು ದಂಗೆ ಎದ್ದರೆ ಅದಕ್ಕೆ ಆಡಳಿತ ಮತ್ತು ರಾಜಕೀಯ ವ್ಯಕ್ತಿಗಳೇ ನೇರ ಹೊಣೆ. ಮರು ತನಿಖೆ ಆಗದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೂ ಮುತ್ತಿಗೆ ಹಾಕುತ್ತೇವೆ’ ಎಂದು ಎಚ್ಚರಿಸಿದರು. ಬೆಳ್ತಂಗಡಿಯಲ್ಲಿ ಸೆ.3ರಂದು ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಅಧ್ಯಕ್ಷ ಸ್ಥಾನ

ಬೆಳ್ತಂಗಡಿ: ‘ಪ್ರಕರಣವನ್ನು ಮರುತನಿಖೆ ನಡೆಸದಿದ್ದರೆ ಮುಂದೆ ವಿಧಾನಸೌಧಕ್ಕೂ ಮುತ್ತಿಗೆ’| ಅಬ್ಬರಿಸಿದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ Read More »