ಕರಾವಳಿ

ಆಶ್ಲೇಷಾ ನಕ್ಷತ್ರ ಶುಭ ಮಂಗಳವಾರ| ಸೆ. 12ರಂದು ಕುಕ್ಕೆಗೆ ಹರಿದು ಬಂದ ಭಕ್ತರ ದಂಡು

ಸಮಗ್ರ ನ್ಯೂಸ್: ಆಶ್ಲೇಷಾ ನಕ್ಷತ್ರ ಶುಭ ದಿನವಾದ ಮಂಗಳವಾರ(ಸೆ ೧೨) ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದರು. ಈ ವರ್ಷದ ದಾಖಲೆ ಪ್ರಮಾಣದಲ್ಲಿ ಆಶ್ಲೇಷ ಬಲಿ ಸೇವೆ ನಡೆದಿದೆ. ಮಂಗಳವಾರ ಬೆಳಿಗ್ಗೆ 1,719 ಆಶ್ಲೇಷ ಬಲಿ ಹಾಗೂ ಸಂಜೆ ಸುಮಾರು 190 ಆಶ್ಲೇಷ ಬಲಿ ಸೇವೆಗಳು ನಡೆದಿವೆ. ಇದು ಈ ವರ್ಷದ ದಾಖಲೆಯಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ. ಕ್ಷೇತ್ರದ ರಥಬೀದಿ ಮತ್ತು ಹೋರಾಂಗಣ ಭಕ್ತರಿಂದ ತುಂಬಿತ್ತು. ಪೇಟೆಯಲ್ಲಿ ವಾಹನಗಳ ಓಡಾಟವೂ

ಆಶ್ಲೇಷಾ ನಕ್ಷತ್ರ ಶುಭ ಮಂಗಳವಾರ| ಸೆ. 12ರಂದು ಕುಕ್ಕೆಗೆ ಹರಿದು ಬಂದ ಭಕ್ತರ ದಂಡು Read More »

BREAKING NEWS|ಸುಳ್ಯ: ರಸ್ತೆ ದಾಟುತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್

ಸಮಗ್ರ ನ್ಯೂಸ್: ಶಾಲೆ ಮುಗಿಸಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಆಂಬ್ಯುಲೆನ್ಸ್ ಗುದ್ದಿ ಗಂಭೀರ ಗಾಯಗೊಂಡಿರುವ ಘಟನೆ ಸುಳ್ಯದ ಜಾಲ್ಸೂರಿನಲ್ಲಿ ಇಂದು ಸಂಜೆ (ಸೆ. 12) ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಸುಳ್ಯದ ಆಸ್ಪತ್ರೆಗೆ ಕರೆ ತರಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನು ನಿರೀಕ್ಷಿಸಬೇಕಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

BREAKING NEWS|ಸುಳ್ಯ: ರಸ್ತೆ ದಾಟುತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್ Read More »

BREAKING NEWS|ಸುಳ್ಯ: ಬೈಕ್- ಬೈಕ್ ನಡುವೆ ಅಪಘಾತ

ಸಮಗ್ರ ನ್ಯೂಸ್: ಬೈಕ್ ಗಳ ನಡುವೆ ಅಪಘಾತಗೊಂಡು ಸವಾರರಿಬ್ಬರು ಗಾಯಗೊಂಡ ಘಟನೆ ಸುಳ್ಯದ ಜ್ಯೋತಿ ಸರ್ಕಲ್ ಬಳಿ ಇಂದು ಸಂಜೆ (ಸೆ. 12) ಸಂಭವಿಸಿದೆ. ಅಪಘಾತದ ರಭಸಕ್ಕೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಓಮಿನಿ ಕಾರ್ ಹಿಂಭಾಗ ಜಖಂಗೊಂಡಿದೆ.

BREAKING NEWS|ಸುಳ್ಯ: ಬೈಕ್- ಬೈಕ್ ನಡುವೆ ಅಪಘಾತ Read More »

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸಮಗ್ರ ನ್ಯೂಸ್:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಸೆ. 12ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಯನ್ನು ಆಚರಿಸಲಾಯಿತು.ಈ ಪ್ರಯುಕ್ತ ಪುಟಾಣಿಗಳಿಗೆ ಮುದ್ದು ಕೃಷ್ಣ, ಬಾಲಾ ಕೃಷ್ಣ ಹಾಗೂ ಯಶೋಧಾ ಕೃಷ್ಣ ಸ್ಪರ್ಧೆ ಏರ್ಪಡಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷೆ ರೂಪ ಜೆ. ರೈ ಅವರು ಮಾಡಿ, ತೇಜಸ್ವಿನಿ ಕಿರಣ್ ಲಯನ್ಸ್ ಸಂಸ್ಥೆಯ ಅಧ್ಯಕ್ಷೆ ಹಾಗೂ ಖಜಾಂಜಿ ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಶಿಶು ಕೃಷ್ಣನ ತೊಟ್ಟಿಲನ್ನು ತೂಗುವ ಮೂಲಕ ನೆರವೇರಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಶುಭಕರ

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಪೋಷಕರಿಂದ ಶಿಕ್ಷಕರ ದಿನಾಚರಣೆ

ಸಮಗ್ರ ನ್ಯೂಸ್: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಪೋಷಕರಿಂದ ಸೆ. 5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಅಥಿತಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯ, ಹಿರಿಯ ಶಿಕ್ಷಕ ಬಿ.ಪುಂಗವ ಗೌಡ ಸುಬ್ರಹ್ಮಣ್ಯ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ. ಗಂಗಮ್ಮ ಅರಂತೋಡು ಅವರು ಭಾಗವಹಿಸಿ ಶಿಕ್ಷಕ್ಷರ ದಿನಾಚರಣೆ ಮಹತ್ವದ ಬಗ್ಗೆ ಮಾತನಾಡಿದರು. ಇವರಿಗೆ ಸಂಸ್ಥೆಯ ಪರವಾಗಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಪೋಷಕರು ಒಡಗೂಡಿ ಶಾಲೆಯ ಸಂಚಾಲಕಿ ಗೀತಾಂಜಲಿ ಟಿ.ಜಿ ಹಾಗೂ ಶಾಲಾ ಶಿಕ್ಷಕಿ ನಿರ್ಮಲ ಹಾಗೂ

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಪೋಷಕರಿಂದ ಶಿಕ್ಷಕರ ದಿನಾಚರಣೆ Read More »

ಬೆಳ್ತಂಗಡಿ: ಮಹೇಶ್ ಶೆಟ್ಟಿ ಅರೆಸ್ಟ್ ಯಾಕಿಲ್ಲ? ದ.ಕ ಎಸ್ಪಿ ಗೆ ಕಾರಣ ಕೇಳಿದ ಹೈಕೋರ್ಟ್

ಸಮಗ್ರ ನ್ಯೂಸ್: ಭಾಸ್ಕರ್ ನಾಯ್ಕ್ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಟ್ರಾಸಿಟಿ ಕೇಸ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸಂಗಡಿಗರನ್ನು ಯಾಕೆ ಬಂಧಿಸಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಹೈಕೋರ್ಟ್ ಪ್ರಶ್ನೆ ಮಾಡಿದೆ. ಮಹೇಶ್ ಶೆಟ್ಟಿ ತಿಮರೋಡಿಯ ಮಾಜಿ ಆಪ್ತ ಬಾಸ್ಕರ್ ನಾಯ್ಕ್ ಸಪ್ಟೆಂಬರ್ ೩ ರಂದು ಸಂಜೆ ಮಂಗಳೂರಿನಲ್ಲಿ ಯೂಟ್ಯೂಬ್ ಚಾನಲ್ ಗೆ ಸಂದರ್ಶನ ನೀಡಿ ವಾಪಸ್ ಬರುವಾಗ ಮಹೇಶ್ ಶೆಟ್ಟಿ ತಿಮರೋಡಿ ,ಮೋಹನ್ ಶೆಟ್ಟಿ , ಮುಖೇಶ್

ಬೆಳ್ತಂಗಡಿ: ಮಹೇಶ್ ಶೆಟ್ಟಿ ಅರೆಸ್ಟ್ ಯಾಕಿಲ್ಲ? ದ.ಕ ಎಸ್ಪಿ ಗೆ ಕಾರಣ ಕೇಳಿದ ಹೈಕೋರ್ಟ್ Read More »

ಸುಳ್ಯ: ಹಾಡುಹಗಲೇ ಮನೆ ದರೋಡೆ| ಚಿನ್ನಾಭರಣ, ನಗದು ಹೊತ್ತೊಯ್ದ ಕಳ್ಳರ‌ ಗ್ಯಾಂಗ್

ಸಮಗ್ರ ನ್ಯೂಸ್: ಹಾಡುಹಗಲೇ ಮನೆಯ ಹಿಂಬದಿಯ ಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ಕಳವುಗೈದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕದಿಕಡ್ಕ ಎಂಬಲ್ಲಿ ಸೆ.12ರ ಮಧ್ಯಾಹ್ನ ವರದಿಯಾಗಿದೆ. ಕದಿಕಡ್ಕದ ವಸಂತ ರೈ ಎಂಬವರ ಮನೆಯಿಂದ ಚಿನ್ನಾಭರಣ ಹಾಗೂ ನಗದು ಕಳವಾಗಿದ್ದು, ವಸಂತ ಅವರ ಪತ್ನಿ ಹಾಗೂ ಮಕ್ಕಳು ಕೆಲಸದ ನಿಮಿತ್ತ ಬೆಳಿಗ್ಗೆ ಮನೆಗೆ ಬಾಗಿಲು ಹಾಕಿ ತೆರಳಿದ್ದರು. ಮಧ್ಯಾಹ್ನ 12.30ರ ವೇಳೆಗೆ ಮನೆಗೆ ಊಟಕ್ಕೆ ಬಂದ ಸಂದರ್ಭದಲ್ಲಿ ಮನೆಯ ಹಿಂಬದಿಯಿಂದ ಬಾಗಿಲು ಮುರಿದಿರುವುದು ಬೆಳಕಿಗೆ ಬಂದಿದೆ.

ಸುಳ್ಯ: ಹಾಡುಹಗಲೇ ಮನೆ ದರೋಡೆ| ಚಿನ್ನಾಭರಣ, ನಗದು ಹೊತ್ತೊಯ್ದ ಕಳ್ಳರ‌ ಗ್ಯಾಂಗ್ Read More »

ಸುಳ್ಯ: ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ

ಸಮಗ್ರ ನ್ಯೂಸ್: ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಸೆ. 10ರಂದು ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃಷ್ಣವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಸಮಾಜ ಬಾಂಧವರು ಆಸಕ್ತಿಯಿಂದ ಭಾಗವಹಿಸಿದ್ದರು. ಸುಳ್ಯ ವಿಧಾನ ಸಭಾ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಮಾಜದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ನಡೆಯಿತು. 2022-23ನೇ ಶೈಕ್ಷಣಿಕ ವರ್ಷದಲ್ಲಿ ಎಸ್

ಸುಳ್ಯ: ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ Read More »

ಮಂಗಳೂರು: ಮೈತ್ರಿ ಮುಟ್ಟಿನ ಕಪ್ ಯೋಜನೆಗೆ ಚಾಲನೆ| ಸಪ್ತಮಿ‌ ಗೌಡ ಬ್ರಾಂಡ್ ಅಂಬಾಸಿಡರ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮೈತ್ರಿ ಮುಟ್ಟಿನ ಕಪ್ ಯೋಜನೆ ವಿತರಣಾ ಬೃಹತ್ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಚಾಲನೆ ನೀಡಿದರು. ರಾಜ್ಯ ಸರ್ಕಾರ ಆರಂಭಿಸಿರುವ ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ಕನ್ನಡ ಚಿತ್ರರಂಗದ ಕಾಂತಾರ ಚಿತ್ರ ಖ್ಯಾತಿಯ ನಟಿ ಸಪ್ತಮಿ ಗೌಡ ರಾಯಭಾರಿ ಆಗಿದ್ದಾರೆ. ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗಿಯಾದ ಸಪ್ತಮಿ ಗೌಡ ಮುಟ್ಟಿನ ಕಪ್ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ‘ತಾನು ಸ್ವಿಮ್ಮಿಂಗ್ ನಲ್ಲಿ

ಮಂಗಳೂರು: ಮೈತ್ರಿ ಮುಟ್ಟಿನ ಕಪ್ ಯೋಜನೆಗೆ ಚಾಲನೆ| ಸಪ್ತಮಿ‌ ಗೌಡ ಬ್ರಾಂಡ್ ಅಂಬಾಸಿಡರ್ Read More »

ಸುಳ್ಯ: ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

ಸಮಗ್ರ ನ್ಯೂಸ್: ಬಿಜೆಪಿ ರೈತ ಮೋರ್ಚಾ ಕರ್ನಾಟಕ, ಸುಳ್ಯ ಬಿಜೆಪಿ ಮಂಡಲದ ವತಿಯಿಂದ ರಾಜ್ಯ ಸರಕಾರ ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ಸರಕಾರದ ನಡೆ ಖಂಡಿಸಿ ಸುಳ್ಯ ತಾಲೂಕು ಕಛೇರಿ ಬಳಿ ಸೋಮವಾರ ಪ್ರತಿಭಟನಾ ಸಭೆ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಸರಕಾರದ ಜನ-ವಿರೋಧಿ ನೀತಿಯಿಂದ ಸರಕಾರದ ವಿರುದ್ಧ ಬೀದಿಗಿಳಿದು ಹೋರಾಡುವ ಪರಿಸ್ಥಿತಿ ಬಂದಿದೆ. ಸರಕಾರ ರೈತ ಪರ ಎಂದು ಪ್ರಚಾರ ಮಾಡಿ ಇಂದು ರೈತ ವಿರೋಧಿ ನೀತಿ ಅನುಸರಿಸಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸುವ

ಸುಳ್ಯ: ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ Read More »