ಕರಾವಳಿ

ಸೌಜನ್ಯ ಪ್ರಕರಣ| ಬೆಂಗಳೂರು ವಿ.ವಿ ವಿದ್ಯಾರ್ಥಿ ಒಕ್ಕೂಟದಿಂದ ಬಂದ್ ಗೆ ಚಿಂತನೆ

ಸಮಗ್ರ ನ್ಯೂಸ್: ಧರ್ಮಸ್ಥಳದ ಮಣ್ಣಸಂಕ ಬಳಿ ಅತ್ಯಾಚಾರ ನಡೆಸಿ ಕೊಲೆಗೈಯಲಾದ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದ ಬೆಂಗಳೂರಿನಲ್ಲಿ ಪ್ರತಿಭಟನೆಯ ಜ್ವಾಲೆ ಹತ್ತಿಕೊಂಡಿದೆ. ಈಗಾಗಲೇ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಒಂದು ದಿನದ ಸಾಂಕೇತಿಕ ಪ್ರತಿಭಟನೆ ‌ನಡೆಸಿದ್ದು, ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ ಮಾಡಿದ್ದಾರೆ. ಸಂತ್ರಸ್ತೆ ಸೌಜನ್ಯ ಹಾಗೂ ಆಕೆಯ ಕುಟುಂಬಸ್ಥರಿಗೆ ನ್ಯಾಯ ದೊರಕಿಸುವಂತೆ ವಿದ್ಯಾರ್ಥಿ ಸಂಘ ಒತ್ತಾಯ ಮಾಡಿದ್ದು ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಸೌಜನ್ಯಳ ನ್ಯಾಯಕ್ಕಾಗಿ ಮುಂದೆ ಬೃಹತ್

ಸೌಜನ್ಯ ಪ್ರಕರಣ| ಬೆಂಗಳೂರು ವಿ.ವಿ ವಿದ್ಯಾರ್ಥಿ ಒಕ್ಕೂಟದಿಂದ ಬಂದ್ ಗೆ ಚಿಂತನೆ Read More »

ಮಂಗಳೂರು: ಹೊಟೇಲ್ ನಲ್ಲಿ ತಂಗಿದ್ದ ಬ್ಯಾಂಕ್ ಅಧಿಕಾರಿ ನಿಗೂಢ ಸಾವು

ಸಮಗ್ರ ನ್ಯೂಸ್: ಹೋಟೆಲ್‍ನಲ್ಲಿ ತಂಗಿದ್ದ ಕೇರಳ ಮೂಲದ ಬ್ಯಾಂಕ್ ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಮೋತಿ ಮಹಲ್ ಹೋಟೆಲ್ ನ ಸ್ವಿಮ್ಮಿಂಗದ ಪೂಲ್‍ನಲ್ಲಿ ಕೇರಳದ ತಿರುವನಂತಪುರಂ ನಿವಾಸಿ ಯೂನಿಯನ್ ಬ್ಯಾಂಕ್‍ನ ಅಧಿಕಾರಿ ಗೋಪು ಆರ್ ನಾಯರ್ ಮೃತದೇಹ ಪತ್ತೆಯಾಗಿದೆ. ನಿನ್ನೆ ಮಂಗಳೂರಿಗೆ ಬಂದಿದ್ದ ಅವರು ಮೋತಿ ಮಹಲ್ ಹೊಟೇಲ್‍ನಲ್ಲಿ ಉಳಿದು ಕೊಂಡಿದ್ದರು ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಬಂದು ಸ್ವಿಮ್ಮಿಂಗ್ ಪೂಲ್ ಬಳಿ ವಿಹರಿಸಿದ್ದರು, ಆದರೆ

ಮಂಗಳೂರು: ಹೊಟೇಲ್ ನಲ್ಲಿ ತಂಗಿದ್ದ ಬ್ಯಾಂಕ್ ಅಧಿಕಾರಿ ನಿಗೂಢ ಸಾವು Read More »

ಬಂಟ್ವಾಳ: ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಹಲ್ಲೆ…!!

ಸಮಗ್ರ ನ್ಯೂಸ್: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಹಲ್ಲೆಗೊಳಗಾದವರನ್ನು ಮೈಂದಾಳ ನಿವಾಸಿ ನಿಸಾರ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ನಿಸಾರ್ ರಸ್ತೆ ಬದಿ ನಡೆದುಕೊಂಡು ಮೈಂದಾಳ ಸೇತುವೆ ಬಳಿಯ ಗುರಿಮಜಲು ಎಂಬಲ್ಲಿ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದಾರೆ. ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ ಪೈಕಿ ಓರ್ವ

ಬಂಟ್ವಾಳ: ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಹಲ್ಲೆ…!! Read More »

ಸೆ.19ರಂದು ಗಣೇಶ ಚತುರ್ಥಿ ಸಾರ್ವತ್ರಿಕ ರಜೆ ಇಲ್ಲ!

ಸಮಗ್ರ ನ್ಯೂಸ್: ಈ ಬಾರಿ ಶ್ರೀ ಗಣೇಶ ಚತುರ್ಥಿ ಆಚರಿಸುವ ಸೆ.19ರಂದು ಸಾರ್ವತ್ರಿಕ ರಜೆ ಇಲ್ಲ; ಬದಲಾಗಿ ಒಂದು ದಿನ ಮೊದಲೇ ರಜೆ ಇರುತ್ತದೆ! ಸೆ. 19ರಂದು ಗಣೇಶ ಹಬ್ಬದ ದಿನಕ್ಕೆ ಇರಬೇಕಾದ ರಜೆ ಸೆ.18ರಂದು ಎಂದು ಸರಕಾರದ ಕ್ಯಾಲೆಂಡರ್‌ನಲ್ಲಿ ಉಲ್ಲೇಖವಾಗಿದೆ. ಹೀಗಾಗಿ, ಕರ್ತವ್ಯದ ದಿನದಲ್ಲೇ ಹಬ್ಬ ಆಚರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕರಾವಳಿ ಭಾಗದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ. ರಾಜ್ಯ ಸರಕಾರ ಪ್ರಕಟಿಸಿದ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಸೆ.18ರಂದು ವರಸಿದ್ಧಿವಿನಾಯಕ ವೃತ ರಜೆ ಎಂದಿದೆ. ಪಂಚಾಂಗ ಪ್ರಕಾರ

ಸೆ.19ರಂದು ಗಣೇಶ ಚತುರ್ಥಿ ಸಾರ್ವತ್ರಿಕ ರಜೆ ಇಲ್ಲ! Read More »

ಸುಳ್ಯ: ಬೆಳ್ಳಾರೆಯ ಜುಮ್ಮಾ ಮಸೀದಿ ಆಡಳಿತ ಮಂಡಳಿ ಚುನಾವಣೆಯ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬೆಳ್ಳಾರೆ ಝಕರಿಯ ಜುಮ್ಮಾ ಮಸೀದಿ ಆಡಳಿತ ಮಂಡಳಿಯ 11 ಮಂದಿ ನಿರ್ದೇಶಕ ಸ್ಥಾನಕ್ಕೆ ಸೆ.9ರಂದು ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟವಾಗಿದೆ. ಚುನಾವಣೆಗೆ 22 ಮಂದಿ ನಾಮಪತ್ರ ಸಲ್ಲಿಸಿದ್ದು ಒಂದು ತಂಡದಿಂದ ಅಬ್ದುಲ್ ಖಾದರ್ ಬಾಯಂಬಾಡಿ, ಅಬ್ದುಲ್ ನಾಸೀರ್ ಯು.ಎ, ಅಬ್ದುಲ್ ರಹಿಮಾನ್, ಕೆ,ಅಬ್ದುಲ್ ರಶೀದ್ ಟಿ,ಅಬೂಭಕ್ಕರ್ ಯು ಹೆಚ್(ಮಂಗಳ)ಅಜರುದ್ದೀನ್ ಯು,ಹಮೀದ್ ಹೆಚ್ ಎಂ,ಹನೀಫ್ ಎನ್,ಹಸೈನಾರ್ ಬಿ,ಹುಸೈನ್ ಸಾಹೇಬ್, ಇಸ್ಮಾಯಿಲ್ ಬಿ ಯವರು ಇನ್ನೊಂದು ತಂಡದಿಂದ ಅಬ್ದುಲ್ ಬಶೀರ್,

ಸುಳ್ಯ: ಬೆಳ್ಳಾರೆಯ ಜುಮ್ಮಾ ಮಸೀದಿ ಆಡಳಿತ ಮಂಡಳಿ ಚುನಾವಣೆಯ ಫಲಿತಾಂಶ ಪ್ರಕಟ Read More »

ಸುರತ್ಕಲ್: ದೇಗುಲ ಪ್ರದಕ್ಷಿಣೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಭಕ್ತ ಸಾವು

ಸಮಗ್ರ ನ್ಯೂಸ್: ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಬರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುರತ್ಕಲ್ ನ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ನಡೆದಿದೆ. 52 ವರ್ಷದ ಕೃಷ್ಣ ಭಟ್​ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಮುಲ್ಕಿಯ ನಿವಾಸಿಯಾಗಿದ್ದರು. ಇಂದು ಬೆಳಗ್ಗೆ ದೇವಸ್ಥಾನದಲ್ಲಿ ಪ್ರದಕ್ಷಿಣೆ ಬರುತ್ತಿದ್ದ ಕೃಷ್ಣಭಟ್ ಅವರು ನಡೆದುಕೊಂಡು ಬರುತ್ತಿರುವಾಗಲೇ ಹಠಾತ್ ಹೃದಯಾಘಾತ ಸಂಭವಿಸಿದೆ. ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಕೃಷ್ಣ ಭಟ್ ಕುಸಿದು ಬಿದ್ದ ದೃಶ್ಯ ಸೆರೆಯಾಗಿದ್ದು, ದೇವಸ್ಥಾನ ಆವರಣದಲ್ಲಿ ಪ್ರಾದಕ್ಷಿಣೆ ಹಾಕುತ್ತಿದ್ದ ಅವರಿಗೆ ಏಕಾಏಕಿ ಹೃದಯಾಘಾತ

ಸುರತ್ಕಲ್: ದೇಗುಲ ಪ್ರದಕ್ಷಿಣೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಭಕ್ತ ಸಾವು Read More »

ಸುಳ್ಯ: ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀಕೃಷ್ಣ ಎನ್. ನೀರಮೂಲೆ ಅವರಿಗೆ ಗೌರವ ಸನ್ಮಾನ

ಸಮಗ್ರ ನ್ಯೂಸ್: ಮಂಗಳೂರು ಹವ್ಯಕ ಮಂಡಲ, ದ.ಕ. ಕಾಸರಗೋಡು ಹವ್ಯಕ ಮಹಾಜನ ಸಭಾ, ಮಂಗಳೂರು ಹವ್ಯಕ ಸಭಾ, ಶ್ರೀ ಭಾರತೀ ಸೌಹಾರ್ದ ಸಹಕಾರಿ ನಿಯಮಿತ ಮತ್ತು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಸೇವಾ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಶಂಕರಶ್ರೀ ಸಭಾಭವನದಲ್ಲಿ ಶತರುದ್ರಾಭಿಷೇಕ, ಮಾತೆಯರಿಂದ ಕುಂಕುಮಾರ್ಚನೆ ಮತ್ತು ದ.ಕ.ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀಕೃಷ್ಣ ಎನ್. ನೀರಮೂಲೆ ಮತ್ತು ಕವಿತಾ ದಂಪತಿಯನ್ನು ಗೌರವಿಸಿ, ಸಮ್ಮಾನಿಸಲಾಯಿತು. ಮಂಗಳೂರು ಹವ್ಯಕ ಮಂಡಲ ಅಧ್ಯಕ್ಷ ಗಣೇಶಮೋಹನ ಕಾಶಿಮಠ ಅಧ್ಯಕ್ಷತೆ

ಸುಳ್ಯ: ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀಕೃಷ್ಣ ಎನ್. ನೀರಮೂಲೆ ಅವರಿಗೆ ಗೌರವ ಸನ್ಮಾನ Read More »

ಸುಳ್ಯ:ನವೋದಯ ಪ್ರೇರಕರ ಪ್ರಗತಿ ಪರಿಶೀಲನಾ ಸಭೆ

ಸಮಗ್ರ ನ್ಯೂಸ್: ಸೆ 8ರಂದು ಸುಳ್ಯದ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಸುಳ್ಯ ತಾಲೂಕು ನವೋದಯ ಸ್ವ-ಸಹಾಯ ಸಂಘಗಳ ಪ್ರೇರಕರ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಈ ಪರಿಶೀಲನಾ ಸಭೆಯನ್ನು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್, ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ನಡೆಸಿ ನವೋದಯ ಗುಂಪುಗಳ ಗುಣಮಟ್ಟ ಕಾಯ್ದುಕೊಂಡು ಗುಂಪುಗಳನ್ನು ಪರಿಣಾಮಕಾರಿಯಾಗಿ ಪ್ರೇರಕರು ಉತ್ತಮ ಸೇವೆಯ ಮೂಲಕ ನಿರ್ವಹಣೆ ಮಾಡುವುದರ ಬಗ್ಗೆ ಮಾಹಿತಿ ನೀಡಿದರು. ಈ ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನ ಸ್ವ-ಸಹಾಯ ಸಂಘಗಳ

ಸುಳ್ಯ:ನವೋದಯ ಪ್ರೇರಕರ ಪ್ರಗತಿ ಪರಿಶೀಲನಾ ಸಭೆ Read More »

ಉಳ್ಳಾಲ: ಸರಣಿ ಅಪಘಾತ| ಮೂರು ವಾಹನಗಳು ಜಖಂ

ಸಮಗ್ರ ನ್ಯೂಸ್: ಮಿನಿ ಲಾರಿ, ಕಾರು, ಬಸ್ಸಿನ ನಡುವೆ ಸರಣಿ ಅಪಘಾತವಾದ ಸಂಭವಿಸಿದ ಘಟನೆ ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ನಡೆದಿದೆ. ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ಹಠಾತ್ ಬ್ರೇಕ್ ಹಾಕಿದ ಕಾರಿಗೆ ಕೇರಳ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಮುಂದೆ ಇದ್ದ ಮಿನಿ ಲಾರಿ ನಡುವೆ ಕಾರು ಅಪ್ಪಚ್ಚಿಯಾಗಿದೆ. ಇನ್ನು ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ ದಿನೇಶ್ ಕಾರಿನಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಲಾರಿ ಹಾಗೂ ಬಸ್

ಉಳ್ಳಾಲ: ಸರಣಿ ಅಪಘಾತ| ಮೂರು ವಾಹನಗಳು ಜಖಂ Read More »

ಮಂಗಳೂರು ವಿ‌ ವಿ ಯಲ್ಲಿ ಡಾ. ಸಂಶುಲ್ ಇಸ್ಲಾಂ ಉಪನ್ಯಾಸಕ್ಕೆ ವಿರೋಧ| ಎಬಿವಿಪಿ ಯಿಂದ ಭಾರೀ ಪ್ರತಿಭಟನೆ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಸದಿಲ್ಲಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ನಿವೃತ್ತ ಸಹ ಪ್ರಾಧ್ಯಾಪಕ, ಸಂಶೋಧಕ, ಲೇಖಕ ಹಾಗೂ ಜನಕಲಾ ಸಂಘಟಕ ಡಾ.ಶಂಸುಲ್ ಇಸ್ಲಾಂ ಅವರು ‘ಮೊದಲ ಸ್ವಾತಂತ್ರ್ಯ ಸಂಗ್ರಾಮ, 1857 – ಜಂಟಿ ಬಲಿದಾನಗಳು, ಜಂಟಿ ವಾರಿಸುದಾರಿಕೆ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಲು ಆಗಮಿಸಿದ್ದು, ಎಬಿವಿಪಿ ಕಾರ್ಯಕರ್ತರು ‘ಗೋಬ್ಯಾಕ್ ಶಂಸುಲ್’ ಎಂದು‌ ವಿರೋಧ ವ್ಯಕ್ತಪಡಿಸಿದ್ದಾರೆ. ಶಂಸುಲ್ ಇಸ್ಲಾಂ ಉಪನ್ಯಾಸ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಲು

ಮಂಗಳೂರು ವಿ‌ ವಿ ಯಲ್ಲಿ ಡಾ. ಸಂಶುಲ್ ಇಸ್ಲಾಂ ಉಪನ್ಯಾಸಕ್ಕೆ ವಿರೋಧ| ಎಬಿವಿಪಿ ಯಿಂದ ಭಾರೀ ಪ್ರತಿಭಟನೆ Read More »