ಕರಾವಳಿ

ದ.ಕ. ಜಿಲ್ಲೆಯಲ್ಲಿ ಸೆ. ನಿಂದ ಶನಿವಾರ ಪೂರ್ತಿ ತರಗತಿ ನಡೆಸಲು ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಗೆ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಸೆಪ್ಟೆಂಬರ್ ನಿಂದ ಶನಿವಾರ ಪೂರ್ಣ ತರಗತಿ ನಡೆಸಲು ಶಿಕ್ಷಣ ಇಲಾಖೆ ಸೂಚಿಸಿದೆ. ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರ ಇಡೀ ದಿನ ಶಾಲೆ ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಜುಲೈನಲ್ಲಿ ಸುರಿದ ಅತೀ ಹೆಚ್ಚು ಮಳೆಗೆ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಯ ನಿರ್ದೇಶನದಂತೆ ಏಳು ದಿನ ರಜೆ ಸಾರಲಾಗಿತ್ತು. ಅಂದಿನ ರಜೆಗಳನ್ನು ಭರ್ತಿ […]

ದ.ಕ. ಜಿಲ್ಲೆಯಲ್ಲಿ ಸೆ. ನಿಂದ ಶನಿವಾರ ಪೂರ್ತಿ ತರಗತಿ ನಡೆಸಲು ಸೂಚನೆ Read More »

ಪುತ್ತೂರು: ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಹಕ್ಕೊತ್ತಾಯ| ತನಿಖೆಯ ದಿಕ್ಕು ತಪ್ಪಿಸಿದವರಿಗೂ ಶಿಕ್ಷೆಯಾಗಲಿ – ತಿಮರೋಡಿ

ಸಮಗ್ರ ನ್ಯೂಸ್: ವಿದ್ಯಾರ್ಥಿನಿ ಸೌಜನ್ಯ ಕೊಲೆ, ಅತ್ಯಾಚಾರ ಪ್ರಕತಣದ ಮರು ತನಿಖೆಗೆ ಪುತ್ತೂರಿನಲ್ಲಿ ಒತ್ತಾಯಿಸಲಾಗಿದೆ. ಅಭಿನವ ಮಿತ್ರ ಮಂಡಳಿ, ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ನೇತೃತ್ವದಲ್ಲಿ ಪುತ್ತೂರಿನಲ್ಲಿ ಪ್ರತಿಭಟನಾ ಜಾಥಾ ನಡೆದಿದೆ. ಪುತ್ತೂರಿನ ಬೊಳುವಾರು ವೃತ್ತದಿಂದ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದವರೆಗೆ ನಡೆದ ಜಾಥಾದಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಪ್ರಸಾದ್ ಅತ್ತಾವರ, ಪ್ರವೀಣ್ ವಾಲ್ಕೆ ಮೊದಲಾದವರು ಭಾಗಿಯಾಗಿದ್ದಾರೆ‌. ಸೌಜನ್ಯ ಕೊಲೆ ಅತ್ಯಾಚಾರದ ಹೋರಾಟಗಾರರು ನ್ಯಾಯಾಲಯದಲ್ಲಿ ಮರು ತನಿಖೆಗೆ ಅರ್ಜಿ ಸಲ್ಲಿಸಬೇಕು ಎನ್ನುವ ಗೃಹಸಚಿವ ಜಿ‌.

ಪುತ್ತೂರು: ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಹಕ್ಕೊತ್ತಾಯ| ತನಿಖೆಯ ದಿಕ್ಕು ತಪ್ಪಿಸಿದವರಿಗೂ ಶಿಕ್ಷೆಯಾಗಲಿ – ತಿಮರೋಡಿ Read More »

ಕೊಲ್ಲಮೊಗ್ರು: ಹಣ ಪಣಕ್ಕಿಟ್ಟು ಲೂಡ ಆಟ| ಸುಬ್ರಹ್ಮಣ್ಯ ಪೊಲೀಸರ ದಾಳಿ|ಒರ್ವ ವಶಕ್ಕೆ

ಸಮಗ್ರ ನ್ಯೂಸ್: ಹಣವನ್ನು ಪಣಕ್ಕಿಟ್ಟು ಲೂಡದ ದಾಳವನ್ನು ಉಪಯೋಗಿಸಿ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದು, ಮೂವರು ಪರಾರಿಯಾದ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರುನಲ್ಲಿ ಆ.26ರಂದು ನಡೆದಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಕೊಲ್ಲಮೊಗ್ರು ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಅದೃಷ್ಟ ಆಟವಾದ ಲೂಡ ದಾಳವನ್ನು ಉಪಯೋಗಿಸಿ ಜೂಜಾಟ ಆಟ ಆಡುತ್ತಿರುತ್ತಿರುವ ಖಚಿತ ಮಾಹಿತಿ ಮೇರೆಗೆ ಸುಬ್ರಹ್ಮಣ್ಯ ಠಾಣಾ ಎಸೈ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ. ಕಿರಣ್‌

ಕೊಲ್ಲಮೊಗ್ರು: ಹಣ ಪಣಕ್ಕಿಟ್ಟು ಲೂಡ ಆಟ| ಸುಬ್ರಹ್ಮಣ್ಯ ಪೊಲೀಸರ ದಾಳಿ|ಒರ್ವ ವಶಕ್ಕೆ Read More »

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ| ಗಾನ ಮತ್ತು ನೃತ್ಯ ಒಂದೇ ನಾಣ್ಯದ ಎರಡು ಮುಖಗಳು – ಕೇಶವ ಪ್ರಸಾದ್ ಮುಳಿಯ

ಸಮಗ್ರ ನ್ಯೂಸ್: ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್‌ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್‌ ಫಿನಾಲೆಯು ಇನ್ನರ್‌ವೀಲ್‌ ಕ್ಲಬ್‌ನ ಸಹಯೋಗದಲ್ಲಿ ಆ. 26ರಂದು ಪುತ್ತೂರಿನ ಜೈನ ಭವನದಲ್ಲಿ, ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ನೃತ್ಯೋಪಾಸನಾ ಕಲಾ ಕೇಂದ್ರದ ನಿರ್ದೇಶಕಿ ಶಾಲಿನಿ ಆತ್ಮಭೂಷಣ್ ಮಾತನಾಡಿ, ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಮುಳಿಯ ಜ್ಯುವೆಲ್ಸ್‌ ಗ್ರಾಮೀಣ ಪ್ರತಭೆಗಳನ್ನು ಹುಡುಕಿ ಅವರಿಗೆ ವೇದಿಕೆ ಒದಗಿಸುವ ಮಹತ್ತರವಾದ ಕಾರ್ಯ ಮಾಡಿರುವುದು

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ| ಗಾನ ಮತ್ತು ನೃತ್ಯ ಒಂದೇ ನಾಣ್ಯದ ಎರಡು ಮುಖಗಳು – ಕೇಶವ ಪ್ರಸಾದ್ ಮುಳಿಯ Read More »

“ನಾವು ಹೇಳಿದ ವ್ಯಕ್ತಿಗಳನ್ನು ಮಾಧ್ಯಮ ಸಮಕ್ಷಮ ಮಂಪರು ಪರೀಕ್ಷೆ ಮಾಡಿಸಿ”| ಬೆಳ್ತಂಗಡಿ ಚಲೋ ಧರಣಿಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಆಗ್ರಹ

ಸಮಗ್ರ ನ್ಯೂಸ್: ‘ಆರೋಪಿಗಳೆಂದು ನಾವು ಹೇಳುವ ವ್ಯಕ್ತಿಗಳಿಗೆ ಮಾಧ್ಯಮಗಳ ವಿಡಿಯೋ ಚಿತ್ರೀಕರಣ ಮುಖಾಂತರ ಮಂಪರು ಪರೀಕ್ಷೆ ಮಾಡಿಸಿ, ಆ ಮೂಲಕ ನನ್ನ ಮಗಳ ಸಾವಿಗೆ ನ್ಯಾಯ ದೊರಕಿಸಿ ಕೊಡಿ’ ಎಂದು ಸೌಜನ್ಯ ತಾಯಿ ಕುಸುಮಾವತಿ ಆಗ್ರಹ ವ್ಯಕ್ತಪಡಿಸಿದ್ದಾರೆ. ಅವರು ಇಂದು(ಆ. 28) ಬೆಳ್ತಂಗಡಿಯ ತಾಲೂಕು ಕಚೇರಿ ಮುಂಭಾಗ ನಡೆದ ‘ಬೆಳ್ತಂಗಡಿ ಚಲೋ’ ಮಹಾಧರಣಿಯಲ್ಲಿ ಮಾತನಾಡಿದರು. ‘ನನ್ನ ಮಗಳನ್ನು ಒಂದೇ ರಾತ್ರಿಯಲ್ಲಿ ಹರಿದು ಮುಕ್ಕಿದ್ದಾರೆ. ಇದೀಗ ಸಂತ್ರಸ್ತರಾದ ನಮ್ಮನ್ನೇ ಆರೋಪಿಗಳಂತೆ ಬಿಂಬಿಸಲಾಗುತ್ತಿದೆ. ನಾವು ಮಾಡಿದ ಅನ್ಯಾಯವಾದರೂ ಏನು? ನ್ಯಾಯ

“ನಾವು ಹೇಳಿದ ವ್ಯಕ್ತಿಗಳನ್ನು ಮಾಧ್ಯಮ ಸಮಕ್ಷಮ ಮಂಪರು ಪರೀಕ್ಷೆ ಮಾಡಿಸಿ”| ಬೆಳ್ತಂಗಡಿ ಚಲೋ ಧರಣಿಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಆಗ್ರಹ Read More »

ಶಾಸಕ, ಮಾಜಿ ಸಚಿವ, ಸಂಸದರಾಗಿರುವ ಬಿಜೆಪಿಗರು ನನಗೆ ರಕ್ಷಣೆ ನೀಡಬೇಕೆ? ಮೊದಲು ಮೋದಿ ಬಳಿ ಮಾತನಾಡಿ ಸೌಜನ್ಯಗೆ ನ್ಯಾಯ ಕೊಡಿಸಿ| ಬೆಳ್ತಂಗಡಿ ಚಲೋ ಧರಣಿಯಲ್ಲಿ ಬಿಜೆಪಿಗರ ಕಿವಿಹಿಂಡಿದ ವಸಂತ ಬಂಗೇರ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕರಾದ ಪೂಂಜಾರವರು 5 ವರ್ಷ ಕಳೆದು 6 ನೇ ವರ್ಷಕ್ಕೆ ಶಾಸಕರಾಗಿ ಪಾದಾರ್ಪಣೆ ಗೊಂಡಿದ್ದೀರಿ ಇಲ್ಲಿಯವರೆಗೆ ಸೌಜನ್ಯ ನ ನ್ಯಾಯದ ಪರ ಒಂದು ಶಬ್ದ ಎತ್ತಲಿಲ್ಲ ನೀವು..ಬರೀ 40% ಕಮಿಷನ್ ನನ್ನು ಕೊಳ್ಳೆ ಹೊಡೆದಿದ್ದೀರಿ, ಇಡೀ ಕರ್ನಾಟಕದಲ್ಲಿ ಕೊಳ್ಳೆ ಹೊಡೆದ ಶಾಸಕರೆಂದರೆ ಹರೀಶ್ ಪೂಂಜಾ. ಇನ್ನು ಹದಿನೈದು ವರ್ಷದಿಂದ ಸಂಸದರಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಇದುವರೆಗೆ ಧ್ವನಿ ಎತ್ತದೇ ಆದಿತ್ಯವಾರ ಬಂದು ಬೊಬ್ಬೆ ಹಾಕುವ ಅನಿವಾರ್ಯತೆ ಏನಿತ್ತು? ಮಾಜಿ ಮಂತ್ರಿ ಹಾಗೂ

ಶಾಸಕ, ಮಾಜಿ ಸಚಿವ, ಸಂಸದರಾಗಿರುವ ಬಿಜೆಪಿಗರು ನನಗೆ ರಕ್ಷಣೆ ನೀಡಬೇಕೆ? ಮೊದಲು ಮೋದಿ ಬಳಿ ಮಾತನಾಡಿ ಸೌಜನ್ಯಗೆ ನ್ಯಾಯ ಕೊಡಿಸಿ| ಬೆಳ್ತಂಗಡಿ ಚಲೋ ಧರಣಿಯಲ್ಲಿ ಬಿಜೆಪಿಗರ ಕಿವಿಹಿಂಡಿದ ವಸಂತ ಬಂಗೇರ Read More »

ಸೌಜನ್ಯ ಪ್ರಕರಣ ಮರುತನಿಖೆ ನಡೆಸುವಂತೆ ಹೆಗ್ಗಡೆ ಕುಟುಂಬ ಹೈಕೋರ್ಟ್ ಗೆ ಮೊರೆ

ಸಮಗ್ರ ನ್ಯೂಸ್: ‘ವಿದ್ಯಾರ್ಥಿನಿ ಸೌಜನ್ಯ ಸಾವು ಮತ್ತು ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರನ್ನು ಸ್ಥಾಪಿತ ಹಿತಾಸಕ್ತಿಗಳು ಅವಹೇಳನ ಮಾಡುತ್ತಿರುವ ಬೆಳವಣಿಗೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಒದಗಿಸಲು ಮತ್ತೆ ಯಾವುದಾದರೂ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಡಾ.ಹೆಗ್ಗಡೆ ಕುಟುಂಬದವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ. ನ್ಯಾಯಾಲಯದ ಆದೇಶಗಳನ್ನು ತಿರುಚಿ ಸತ್ಯ ಮರೆಮಾಚುತ್ತಿರುವ,

ಸೌಜನ್ಯ ಪ್ರಕರಣ ಮರುತನಿಖೆ ನಡೆಸುವಂತೆ ಹೆಗ್ಗಡೆ ಕುಟುಂಬ ಹೈಕೋರ್ಟ್ ಗೆ ಮೊರೆ Read More »

ಸುಳ್ಯ: ಐವರ್ನಾಡು ಯುವಶಕ್ತಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸಮಗ್ರ ನ್ಯೂಸ್: ಐವರ್ನಾಡು ಯುವಶಕ್ತಿ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿಯ ಆಯ್ಕೆ ಆ. 27 ಮಾಡಲಾಯಿತು. ಅಧ್ಯಕ್ಷ ರಾಗಿ ಜಯಪ್ರಕಾಶ್ ನೆಕ್ರೆಪ್ಪಾಡಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ನಾಟಿಕೇರಿ ಅವರು ಅಧಿಕಾರ ಸ್ವೀಕಾರ ಮಾಡಿದರು. ಈ ಸಂಧರ್ಭದಲ್ಲಿ ಕೃಷ್ಣಪ್ಪ ಗೌಡ ನೆಕ್ರಪ್ಪಾಡಿ, ಶಿವರಾಮ ನೆಕ್ರಪ್ಪಾಡಿ, ಬೆಳ್ಯಪ್ಪ ಮಡ್ತಿಲ, ಕರುಣಾಕರ ಮಡ್ತಿಲ, ವಿಜಯ್ ಮಡ್ತಿಲ, ಬಾಲಕೃಷ್ಣ ಮಡ್ತಿಲ, ದಿನೇಶ್ ಮಡ್ತಿಲ ಮೊದಲಾದವರು ಉಪಸ್ಥಿತರಿದ್ದರು.

ಸುಳ್ಯ: ಐವರ್ನಾಡು ಯುವಶಕ್ತಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ Read More »

ಸೌಜನ್ಯಳ ನ್ಯಾಯಕ್ಕಾಗಿ ಆ.31ರಂದು ಕುಕ್ಕೆಯಲ್ಲಿ ಮೌನ ಮೆರವಣಿಗೆ| ಸುಬ್ರಹ್ಮಣ್ಯನ ಪುರದತ್ತ ಮಹೇಶ್ ತಿಮರೋಡಿ, ಸೌಜನ್ಯ ತಾಯಿ‌ ಕುಸುಮಾವತಿ

ಸಮಗ್ರ ನ್ಯೂಸ್: ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ಮರು ತನಿಖೆಗೆ ಒತ್ತಾಯಿಸಿ ಆ.31ರಂದು ಸುಬ್ರಹ್ಮಣ್ಯದ ಕುಮಾರಧಾರ ಬಳಿಯಿಂದ ದೇವಸ್ಥಾನದ ವರೆಗೆ ಮೌನ ಮೆರವಣಿಗೆ ನಡೆಯಲಿದೆ ಎಂದು ಸುಬ್ರಹ್ಮಣ್ಯ ಸೌಜನ್ಯಳ ನ್ಯಾಯಕ್ಕಾಗಿ ಹೂರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಿಂದ ನಡೆಯಲಿದೆ ಎಂದು ಸಮಿತಿಯ ಡಾl ರವಿ ಕಕ್ಕೆಪದವು ತಿಳಿಸಿದ್ದಾರೆ. ಅವರು ಆ.27 ರಂದು ಸುಬ್ರಹ್ಮಣ್ಯದಲ್ಲಿ ಮಾತನಾಡಿದ ಅವರು ಪಾದಯಾತ್ರೆಯು ದೇವಸ್ಥಾನದವರೆಗೆ ಸಾಗಿ ಅಲ್ಲಿ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಗುವುದು.

ಸೌಜನ್ಯಳ ನ್ಯಾಯಕ್ಕಾಗಿ ಆ.31ರಂದು ಕುಕ್ಕೆಯಲ್ಲಿ ಮೌನ ಮೆರವಣಿಗೆ| ಸುಬ್ರಹ್ಮಣ್ಯನ ಪುರದತ್ತ ಮಹೇಶ್ ತಿಮರೋಡಿ, ಸೌಜನ್ಯ ತಾಯಿ‌ ಕುಸುಮಾವತಿ Read More »

ಸಮಾಜದ ದೃಷ್ಟಿಕೋನ ಬದಲಾಗಬೇಕು: ತೇಜಕುಮಾರ್ ಬಡ್ಡಡ್ಕ

ಸಮಗ್ರ ನ್ಯೂಸ್: ಕಲಾವಿದರು ಮುಂದೆ ಬಂದು ಅವಕಾಶವನ್ನು ಬೆಳೆಸಿಕೊಳ್ಳಬೇಕು. ಅವಕಾಶ ಎನ್ನುವುದು ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಇರುತ್ತದೆ. ತಮ್ಮ ಪ್ರತಿಭೆಯ ತೋರಿಸಿಕೊಂಡಾಗ ಒಂದಷ್ಟು ಜನರಿಗೆ ಪರಿಚಯವಾಗಲು ಸಾಧ್ಯ ಹಾಗೆಯೇ ಸಮಾಜದ ದೃಷ್ಟಿಕೋನ ಬದಲಾಗಬೇಕು ಎಂದರೆ ಹದಿಯರೆಯ ವಿದ್ಯಾರ್ಥಿಗಳು ಪ್ರೇಮ ವೈಕಾಲ್ಯಕ್ಕೆ ಹಿಡಿತದಲ್ಲಿರಬೇಕು ಎಂದು ತೇಜಕುಮಾರ್ ಬಡ್ಡಡ್ಕ ಹೇಳಿದರು. ಇವರು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಲವ್ ಮೈನಸ್ 18 ಕಿರು ಚಿತ್ರದ ಪ್ರೀಮಿಯರ್ ಶೋ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿ ಮಾತನಾಡಿದರು. ಸುಳ್ಯದಲ್ಲಿ ಕಲಾವಿದರು ಹೆಚ್ಚಿನ ಟಿವಿ

ಸಮಾಜದ ದೃಷ್ಟಿಕೋನ ಬದಲಾಗಬೇಕು: ತೇಜಕುಮಾರ್ ಬಡ್ಡಡ್ಕ Read More »