ಕರಾವಳಿ

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ವಿಪತ್ತು ನಿರ್ವಹಣಾ ಕಾರ್ಯಾಗಾರ

ಸಮಗ್ರ ನ್ಯೂಸ್: ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಆಶ್ರಯದಲ್ಲಿ ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿಪತ್ತು ನಿರ್ವಹಣಾ ಕಾರ್ಯಾಗಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಾಗಾರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನ ಜಿಲ್ಲಾ ಉಪಾಧ್ಯಕ್ಷೆ ಡಾ.ಅನುರಾಧಾ ಕುರುಂಜಿ ವೈಜ್ಞಾನಿಕ ಸಂಶೋಧನಾ ಪರಿಷತ್ […]

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ವಿಪತ್ತು ನಿರ್ವಹಣಾ ಕಾರ್ಯಾಗಾರ Read More »

ಸೌಜನ್ಯಳ ನ್ಯಾಯಕ್ಕಾಗಿ ನಾಳೆ(ಆ.28) ವಸಂತ ಬಂಗೇರ ನೇತೃತ್ವದಲ್ಲಿ ಬೃಹತ್ ಹೋರಾಟ| ಬೆಳ್ತಂಗಡಿ ತಾ.ಕಚೇರಿ ಎದುರು ಮಹಾಧರಣಿ

ಸಮಗ್ರ ನ್ಯೂಸ್: ‘ಸೌಜನ್ಯಾಳ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳ ಪತ್ತೆಗೆ ಆಗ್ರಹಿಸಿ ಜನಪರ ಸಂಘಟನೆಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಆ.28ರಂದು ಬೆಳ್ತಂಗಡಿ ತಾಲ್ಲೂಕು ಕಚೇರಿ ಎದುರು ಮಹಾಧರಣಿ ನಡೆಯಲಿದ್ದು, ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ಅನ್ಯಾಯದ ವಿರುದ್ಧ ನಮ್ಮ ಹೋರಾಟ’ ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಸೌಜನ್ಯಾ ಹತ್ಯೆಯಾದ ಸಂದರ್ಭ ಮುಖ್ಯಮಂತ್ರಿಯಾಗಿದ್ದ ಡಿ.ವಿ.ಸದಾನಂದ ಗೌಡ ಅವರ ನೇತೃತ್ವದ ಸರ್ಕಾರ ಸಿಐಡಿ ತನಿಖೆ

ಸೌಜನ್ಯಳ ನ್ಯಾಯಕ್ಕಾಗಿ ನಾಳೆ(ಆ.28) ವಸಂತ ಬಂಗೇರ ನೇತೃತ್ವದಲ್ಲಿ ಬೃಹತ್ ಹೋರಾಟ| ಬೆಳ್ತಂಗಡಿ ತಾ.ಕಚೇರಿ ಎದುರು ಮಹಾಧರಣಿ Read More »

ಪುತ್ತೂರು: 1 ಲಕ್ಷ ಮೌಲ್ಯದ ಅಡಿಕೆ ಕಳವು

ಸಮಗ್ರ ನ್ಯೂಸ್: ಮನೆಯೊಳಗೆ ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ₹1ಲಕ್ಷ ಮೌಲ್ಯದ ಅಡಿಕೆ ಮತ್ತು ₹10ಸಾವಿರ ನಗದು ಹಣ ಕಳವಾದ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಸಮೀಪದ ನೆಕ್ಕರೆ ಡಿವೈನ್ ಮರ್ಸಿ ಮನೆಯ ಕಾರ್ಮಿನ್‌ ಮಿರಾಂದ ಅವರ ಮನೆಯಿಂದ ಅಡಿಕೆ ಕಳವಾಗಿದೆ.ಈ ಬಗ್ಗೆ ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ‘ಪತಿ ಸುನಿಲ್ ಮಿರಾಂದ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಾಯಿ ಅವರು ಅವರ ಮನೆಯಲ್ಲಿ ಅಡಿಕೆ ಒಣಗಿಸಲು ಜಾಗ

ಪುತ್ತೂರು: 1 ಲಕ್ಷ ಮೌಲ್ಯದ ಅಡಿಕೆ ಕಳವು Read More »

ಧರ್ಮಸ್ಥಳದ ಅಣ್ಣಪ್ಪ ಸನ್ನಿಧಿ ಎದುರು ನಡೆದದ್ದು ಪ್ರಮಾಣವೇ?| ನಿಜಕ್ಕೂ ಅಲ್ಲಿ ನಡೆದದ್ದೇನು?

ಸಮಗ್ರ ನ್ಯೂಸ್: ಧರ್ಮಸ್ಥಳದ ಮಣ್ಣಸಂಕ‌ ಬಳಿ ನಡೆದ ಸೌಜನ್ಯ ಅತ್ಯಾ‌ಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ತಾಯಿ ಕುಸುಮಾವತಿ ಹೆಸರಿಸಿದ್ದ ಧೀರಜ್ ಕೆಲ್ಲ, ಉದಯ್ ಜೈನ್, ಮಲಿಕ್ ಜೈನ್ ಅಣ್ಣಪ್ಪ ಬೆಟ್ಟದಲ್ಲಿ ಪ್ರಾರ್ಥನೆ ಮಾಡಿದ್ದು ಇದರ ಬಗ್ಗೆ ಇದೀಗ ಜಿಜ್ಞಾಸೆ ಮೂಡಿದೆ. ಇಂದು(ಆ.26) ವಿಹಿಂಪ ಹಾಗೂ ಭಜರಂಗದಳದ ನೇತೃತ್ವದಲ್ಲಿ ನೇತ್ರಾವತಿಯಿಂದ ಅಣ್ಣಪ್ಪ‌ ಬೆಟ್ಟಕ್ಕೆ ಪಾದಯಾತ್ರೆ ನಡೆದಿತ್ತು. ಈ ಪಾದಯಾತ್ರೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಕೂಡಾ ಭಾಗವಹಿಸಿದ್ದರು. ಪಾದಯಾತ್ರೆಯಲ್ಲಿ ಅಣ್ಣಪ್ಪ ಬೆಟ್ಟಕ್ಕೆ ತೆರಳಿದ ಪ್ರತಿಭಟನಾಕಾರರ ಎದುರು ಧೀರಜ್

ಧರ್ಮಸ್ಥಳದ ಅಣ್ಣಪ್ಪ ಸನ್ನಿಧಿ ಎದುರು ನಡೆದದ್ದು ಪ್ರಮಾಣವೇ?| ನಿಜಕ್ಕೂ ಅಲ್ಲಿ ನಡೆದದ್ದೇನು? Read More »

ಧರ್ಮಸ್ಥಳ: ಕುಸುಮಾವತಿಯವರಿಗಾಗಿ ನಾವು ಅಣ್ಣಪ್ಪ ಬೆಟ್ಟದಲ್ಲಿ ಕಾಯುತ್ತಿರುತ್ತೇವೆ| ಉದಯ್ ಜೈನ್, ಮಲ್ಲಿಕ್ ಜೈನ್, ಧೀರಜ್ ಕೆಲ್ಲ ವಾಟ್ಸಪ್ ಸಂದೇಶ ವೈರಲ್

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಧರ್ಮಸ್ಥಳದ ಬಳಿಯ ಮಣ್ಣಸಂಕ ಎಂಬಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯ ಮರು ತನಿಖೆಗೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದೆ. ಅದೀಗ ರಾಜ್ಯದ ಎಲ್ಲೆಯನ್ನು ದಾಟಿ ಮುನ್ನುಗುತ್ತಿದೆ. ಕಳೆದ 3- 4 ದಿನಗಳಿಂದ ಈ ಹೋರಾಟ ವೇಗವನ್ನು ಹೆಚ್ಚಿಸಿಕೊಂಡಿದ್ದು ಮುಂದಿನ ಒಂದು ವಾರಗಳ ಕಾಲ ಬೆಳ್ತಂಗಡಿಯನ್ನು ಕೇಂದ್ರಿಕರಿಸಿ ಹಲವು ಹೋರಾಟಗಳು ನಡೆಯುತ್ತಿವೆ. ಆ 27 ರಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ ಧರ್ಮಸ್ಥಳಕ್ಕೆ ಪಾದಯಾತ್ರೆಯೊಂದನ್ನು ಆಯೋಜಿಸಿದೆ. ಇದರಲ್ಲಿ ಸೌಜನ್ಯ ತಾಯಿ

ಧರ್ಮಸ್ಥಳ: ಕುಸುಮಾವತಿಯವರಿಗಾಗಿ ನಾವು ಅಣ್ಣಪ್ಪ ಬೆಟ್ಟದಲ್ಲಿ ಕಾಯುತ್ತಿರುತ್ತೇವೆ| ಉದಯ್ ಜೈನ್, ಮಲ್ಲಿಕ್ ಜೈನ್, ಧೀರಜ್ ಕೆಲ್ಲ ವಾಟ್ಸಪ್ ಸಂದೇಶ ವೈರಲ್ Read More »

ಮಂಗಳೂರು: ಅಪಘಾತಕ್ಕೆ ಬಾಲಕ ಬಲಿ

ಸಮಗ್ರ ನ್ಯೂಸ್: ವಾಹನ ಅಪಘಾತದಲ್ಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ವ್ಯಾಪ್ತಿಯ ಅಡ್ಯಾರ್ ಎಂಬಲ್ಲಿ ಇದೀಗ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಅಡ್ಯಾರ್ ಪದವು ನಿವಾಸಿ ಶರಪುದ್ದಿನ್ (16) ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದಾಗ ಅಡ್ಯಾರ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು ಹಿಂಬದಿಯಲ್ಲಿದ್ದ ಶರಪುದ್ದಿನ್ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಚಾಲಕನಿಗೂ ಕೂಡ ಅಪಘಾತದಲ್ಲಿ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಂಗಳೂರು: ಅಪಘಾತಕ್ಕೆ ಬಾಲಕ ಬಲಿ Read More »

ತಾಯಿಗೆ ಮಿಗಿಲಾದ ದೇವರಿಲ್ಲ| ಕೆಲಸದ ನಡುವೆ ಟಿಪ್ಪರ್‌ಗೆ ಬಟ್ಟೆ ಕಟ್ಟಿ ಜೋಗುಳ ತೂಗಿದ ತಾಯಿ

ಸಮಗ್ರ ನ್ಯೂಸ್: ತಾಯಿ ಪ್ರೀತಿಯನ್ನು ಜಗತ್ತಿನ ಯಾವುದೇ ಪ್ರೀತಿಗೂ ಹೋಲಿಸಲಾಗದು. ಎಷ್ಟೇ ಕಷ್ಟ ಎದುರಾದರೂ ಅದನ್ನೆಲ್ಲ ನುಂಗಿ ಮಕ್ಕಳ ಏಳಿಗೆಗಾಗಿ ಶ್ರಮಿಸುವವಳು ತಾಯಿ. ತನ್ನ ಕರುಳ ಕುಡಿಯನ್ನು ಕೆಲಸದ ಮಧ್ಯೆಯೂ ಪೋಷಿಸುವ ತಾಯಿಯ ವಿಡಿಯೋ ವೈರಲ್ ಆಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಸೆರೆಯಾದ ವೀಡಿಯೋ ಈಗ ವೈರಲ್ ಆಗುತ್ತಿದೆ. ಮಂಗಳೂರು – ಬೆಂಗಳೂರು ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಡಿವೈಡರ್ ನಲ್ಲಿ ಗಿಡ ನೆಡಲಾಗುತ್ತಿದೆ. ಸದ್ಯ ತಾಯಿಯ ಮಮತೆ ಸಾರುವ

ತಾಯಿಗೆ ಮಿಗಿಲಾದ ದೇವರಿಲ್ಲ| ಕೆಲಸದ ನಡುವೆ ಟಿಪ್ಪರ್‌ಗೆ ಬಟ್ಟೆ ಕಟ್ಟಿ ಜೋಗುಳ ತೂಗಿದ ತಾಯಿ Read More »

ಸುಳ್ಯ:ಹಾಡುಹಗಲೇ ಹಣದ ಬೇಡಿಕೆ ಇಟ್ಟ ಅಪರಿಚಿತ ವ್ಯಕ್ತಿ

ಸಮಗ್ರ ನ್ಯೂಸ್: ಸುಳ್ಯದ ರಾಜಶ್ರೀ ಕಾಂಪ್ಲೆಕ್ಸ್ ನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿ ಬ್ಯಾಂಕಿಂದ ಹಣ ತೆಗೆದುಕೊಡುದಾಗಿ ಹೇಳಿ ವಂಚಿಸಲು ಯತ್ನಿಸಿರುವ ಬಗ್ಗೆ ಆ. 26 ರಂದು ನಡೆದಿದೆ. ಟೈಲರ್ ವೃತ್ತಿ ನಡೆಸುತ್ತಿದ್ದ ಅಪ್ಪಯ್ಯ ನೀರಬಿದಿರೆ ಎಂಬವರಿಗೆ ಇಂದು(ಆ. 26) ಬೆಳಗ್ಗೆ ಮಲೆಯಾಳಂ ಮಾತನಾಡುವ ಅಪರಿಚಿತರೊಬ್ಬರು ಬಂದು ನನಗೆ ನಿಮ್ಮ ಪರಿಚಯವಿದೆ. ನಾನು ನಿಮ್ಮ ಬಳಿ ಹಿಂದೆಯೂ ಬಂದು ಮಾತನಾಡಿಸಿದ್ದೇನೆ. ನಿಮ್ಮ ಮಗಳನ್ನು ಮದುವೆ ಮಾಡಿಕೊಟ್ಟ ಕಡೆಯವರು ನನಗೆ ಸಂಬಧಿಕರು ಎಂದು ಹೇಳಿ, ಇವತ್ತು

ಸುಳ್ಯ:ಹಾಡುಹಗಲೇ ಹಣದ ಬೇಡಿಕೆ ಇಟ್ಟ ಅಪರಿಚಿತ ವ್ಯಕ್ತಿ Read More »

ಸಾಹಿತಿ ಮತ್ತು ಜ್ಯೋತಿಷಿ ಹೆಚ್. ಭೀಮರಾವ್ ವಾಷ್ಠರ್ ಅವರಿಗೆ ಕಲಾ ರತ್ನ ಪ್ರಶಸ್ತಿ

ಸಮಗ್ರ ನ್ಯೂಸ್: ಸುಳ್ಯದ ಖ್ಯಾತ ಜ್ಯೋತಿಷಿ, ಸಾಹಿತಿ ಗಾಯಕ ಸಂಘಟಕ ಹಾಗೂ ಚಿತ್ರ ನಿರ್ದೇಶಕರಾದ ಎಚ್.ಭೀಮರಾವ್ ವಾಷ್ಠರ್ ಅವರಿಗೆ ಕಲಾ ರತ್ನ ಪ್ರಶಸ್ತಿ. ಮಂಗಳೂರಿನ ಆಕ್ಸಿಸ್ ಬ್ಯಾಂಕ್ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪನಿ ವತಿಯಿಂದ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸುಳ್ಯದ ಖ್ಯಾತ ಜ್ಯೋತಿಷಿ, ಸಾಹಿತಿ ಗಾಯಕ ಸಂಘಟಕ ಹಾಗೂ ಚಿತ್ರ ನಿರ್ದೇಶಕರಾದ ಎಚ್.ಭೀಮರಾವ್ ವಾಷ್ಠರ್ ರಿಗೆ ಅವರು ಹಲವಾರು ವರ್ಷಗಳಿಂದ ಮಾಡಿದಂತಹ ವಿವಿಧ ಸಾಧನೆಗಳನ್ನು ಪರಿಗಣಿಸಿ ಕಲಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಆಕ್ಸಿಸ್ ಬ್ಯಾಂಕ್

ಸಾಹಿತಿ ಮತ್ತು ಜ್ಯೋತಿಷಿ ಹೆಚ್. ಭೀಮರಾವ್ ವಾಷ್ಠರ್ ಅವರಿಗೆ ಕಲಾ ರತ್ನ ಪ್ರಶಸ್ತಿ Read More »

ಸೌಜನ್ಯ ಪ್ರಕರಣಕ್ಕೆ ತಾರ್ಕಿಕ ಅಂತ್ಯದ ನಿರೀಕ್ಷೆ – ತಿಮರೋಡಿನನ್ನ ಮಗಳಿಗೆ ನ್ಯಾಯ ಕೊಡಿ ಎಂದು ಸೆರಗೊಡ್ಡಿ ಬೇಡಿದ ಕುಸುಮಾವತಿ| ಕುಂದಾಪುರದಲ್ಲಿ ಏನೇನು ನಡೀತು?

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಂದು ತಾರ್ಕಿಕ ಅಂತ್ಯ ಕೊಡುತ್ತದೆ ಎನ್ನುವ ವಿಶ್ವಾಸವಿದೆ. ಹೀಗಾಗಿ ಈ ಬಗ್ಗೆ ಯಾರ ವೈಯಕ್ತಿಕ ಅಭಿಪ್ರಾಯಗಳಿಗೂ ಪ್ರತಿಕ್ರಿಯೆ ನೀಡಲ್ಲ ಎಂದು ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ. ಕುಂದಾಪುರದಲ್ಲಿ ನಡೆದ ಜನಾಗ್ರಹ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರಕಾರ ಮಾಡಿರುವ ತಪ್ಪನ್ನು ಈಗಿನ ಸರ್ಕಾರ ಮಾಡಲ್ಲ ಎನ್ನುವ ಭರವಸೆ ಇದೆ. ಅಧಿಕಾರಿಗಳು ಹಾಗೂ ಕಾನೂನು ಹಂತದಲ್ಲಿ ಆಗಿರುವ ತಪ್ಪುಗಳಿಗೆ ಕಾರಣರು ಯಾರು?

ಸೌಜನ್ಯ ಪ್ರಕರಣಕ್ಕೆ ತಾರ್ಕಿಕ ಅಂತ್ಯದ ನಿರೀಕ್ಷೆ – ತಿಮರೋಡಿನನ್ನ ಮಗಳಿಗೆ ನ್ಯಾಯ ಕೊಡಿ ಎಂದು ಸೆರಗೊಡ್ಡಿ ಬೇಡಿದ ಕುಸುಮಾವತಿ| ಕುಂದಾಪುರದಲ್ಲಿ ಏನೇನು ನಡೀತು? Read More »