ಕರಾವಳಿ

ಸುಳ್ಯದಲ್ಲಿ ನೂತನವಾಗಿ ಭಾರತ್ ಲಾಂಡ್ರಿ ಶುಭಾರಂಭ

ಸಮಗ್ರ ನ್ಯೂಸ್: ಭಾರತ್ ಲಾಂಡ್ರಿ ನೂತನವಾಗಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗ ಸೆಂಟರ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಆ. 20ರಂದು ನೂತನವಾಗಿ ಶುಭಾರಂಭಗೊಂಡಿದೆ. ಇಲ್ಲಿ ಐರನ್, ಸ್ಟೀಮ್ ಐರನ್, ಲಾಂಡ್ರಿ ಹಾಗೂ ಡ್ರೈ ವಾಶ್ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಮಾಲಕ ಪ್ರಮೋದ್ ಐವರ್ನಾಡು ತಿಳಿಸಿದ್ದಾರೆ.

ಸುಳ್ಯದಲ್ಲಿ ನೂತನವಾಗಿ ಭಾರತ್ ಲಾಂಡ್ರಿ ಶುಭಾರಂಭ Read More »

ಸುಳ್ಯ: ಪೆರುವಾಜೆ ಬಿಜೆಪಿ ಕಾರ್ಯಕರ್ತರಿಂದ ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆ

ಸಮಗ್ರ ನ್ಯೂಸ್: ಸುಳ್ಯದ ಪೆರುವಾಜೆ ಬಿಜೆಪಿ ಕಾರ್ಯಕರ್ತರಿಂದ ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆಯನ್ನು ಪಟಾಕಿ ಹೊಡೆದು ಸಿಹಿ ಹಂಚಿ ಸಂಭ್ರಮಾಚರಿಸಿದರು. ಯುವ ಮುಖಂಡ ಶಿವಪ್ರಸಾದ್ ಪೆರುವಾಜೆ ಯವರು ಇಸ್ರೋ ಸಂಸ್ಥೆಗೆ ಹಾಗೂ ಬೆಂಬಲಿಸಿದ ಕೇಂದ್ರ ಸರ್ಕಾರಕ್ಕೆ ಅಭಿನಂದನಾ ಮಾತುಗಳನ್ನಾಡಿದರು. ಈ ಸಂಭ್ರಮಾಚರಣೆಯಲ್ಲಿ ಭಾರತೀಯ ಜನತಾ ಪಕ್ಷದ ವಿವಿಧ ಪಧಾಧಿಕಾರಿಗಳು ಮತ್ತು ಕಾರ್ಯಕರ್ತ ಮಿತ್ರರೂ ಉಪಸ್ಥಿತರಿದ್ದರು. ನವೀನ್ ಆಚಾರ್ಯ ಪೆರುವಾಜೆಯವರು ಎಲ್ಲರಿಗೂ ಸಿಹಿ ತಿಂಡಿಯನ್ನು ನೀಡಿದರು.

ಸುಳ್ಯ: ಪೆರುವಾಜೆ ಬಿಜೆಪಿ ಕಾರ್ಯಕರ್ತರಿಂದ ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆ Read More »

ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆ

ಸಮಗ್ರ ನ್ಯೂಸ್:ಸುಳ್ಯ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿಗಳ ಕಾರ್ಯಕ್ಷೇತ್ರದ ಪ್ರಗತಿ ಪರಿಶೀಲನೆ ಕಾರ್ಯಕ್ರಮವು ಆ. 23ರಂದು ಸುಳ್ಯ ಯೋಜನಾ ಕಚೇರಿ ಸಭಾ ಭವನ ನಡೆಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ತಾಲೂಕಿನ ಪ್ರತಿ ಗ್ರಾಮಕ್ಕೆ ಯೋಜನೆಯಿಂದ ಸಿಗುವ ಸೌಲಭ್ಯಗಳ ವಿತರಣೆ ಮಾಡುವ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿದರು. ಯೋಜನಾಧಿಕಾರಿಯಾದ ನಾಗೇಶ್ ರವರು ಕಾರ್ಯಕ್ರಮ ಉದ್ದೇಶಿಸಿ ಪ್ರಾಸ್ತಾವಿಕ ಮಾತನಾಡಿದರು. ಸಭೆಯಲ್ಲಿ ವಲಯದ ಮೇಲ್ವಿಚಾರಕರು ಹಾಗೂ ಕಾರ್ಯಕ್ಷೇತ್ರ ಸೇವಾಪ್ರತಿನಿಧಿಗಳು

ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆ Read More »

ಪುತ್ತೂರು: ಲೈವ್ ವೀಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಯತ್ನ

ಸಮಗ್ರನ್ಯೂಸ್: ಲೈವ್ ವೀಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದ.ಕ. ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಬ್ಯಾರಿ‌ ಭಾಷೆಯಲ್ಲಿ ಲೈವ್ ವೀಡಿಯೋ ಮಾಡಿ ನೇಣಿಗೆ ಶರಣಾಗುತ್ತೇನೆ ಎಂದಿದ್ದ ನಾಸಿರ್ ಬಳಿಕ ನೇಣಿಗೆ ಶರಣಾಗದೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಲೈವ್ ವೀಡಿಯೋ ಮಾಡಿ ಕೃತ್ಯಕ್ಕೆ ಕಾರಣ ಹೇಳಿರುವ ನಾಸಿರ್ ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದೆ, ಅಲ್ಲಿನ ಕುಟುಂಬದ ಹುಡುಗಿಯೊಂದಿಗೆ ಸಂಬಂಧ ಇದೆಯೆಂದು

ಪುತ್ತೂರು: ಲೈವ್ ವೀಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಯತ್ನ Read More »

ಮಂಗಳೂರು:ಇ-ಸಿಗರೇಟ್ ಮಾರಾಟ|ಸುಳ್ಯದ ಯುವತಿ ಸೇರಿ ನಾಲ್ವರ ಬಂಧನ

ಸಮಗ್ರ ನ್ಯೂಸ್: ಮಂಗಳೂರು ನಗರದ ಲಾಲ್‌ಬಾಗ್‌ನನಲ್ಲಿ ಅಕ್ರಮವಾಗಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ನಾಲ್ವರರನ್ನು ಬರ್ಕೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಮೂಲತಃ ಸುಳ್ಯದ ಸ್ವಾತಿ, ಮಣ್ಣಗುಡ್ಡೆಯ ಶಿವಕುಮಾರ್, ಕುತ್ತಾರ್ ಸಮೀಪದ ಹಸನ್ ಶರೀಫ್ ಮತ್ತು ರಹಮತುಲ್ಲಾ ಎಂಬವರ ವಿರುದ್ಧ ಇ-ಸಿಗರೇಟ್ ನಿರ್ಬಂಧ ಹಾಗೂ ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತರ ಪೈಕಿ ಇಬ್ಬರಿಗೆ ಠಾಣೆಯಲ್ಲೇ ಜಾಮೀನು ಲಭಿಸಿದ್ದರೆ, ಇನ್ನಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾಹಿತಿ ನೀಡಿದ್ದಾರೆ. ಲಾಲ್‌ಬಾಗ್‌ನ ಸಾಯಿಬಿನ್

ಮಂಗಳೂರು:ಇ-ಸಿಗರೇಟ್ ಮಾರಾಟ|ಸುಳ್ಯದ ಯುವತಿ ಸೇರಿ ನಾಲ್ವರ ಬಂಧನ Read More »

ಮಂಗಳೂರು: ಮುಸ್ಲಿಂ ಯುವಕನ ಮೇಲೆ ತಲವಾರು ದಾಳಿ | ಹಿಂದೂ ಯುವಕರ ಬಂಧನ

ಸಮಗ್ರ ನ್ಯೂಸ್:ಅನ್ಯಕೋಮಿನ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿದ ಪ್ರಕರಣ ಆ.20 ರಂದು ನಡೆದಿದೆ. ಕೃತ್ಯ ನಡೆದ 24 ಗಂಟೆಯೊಳಗಡೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪಂಜಿಮೊಗರು ನಿವಾಸಿ ಚರಣ್ ರಾಜ್ (23), ಸುಮಂತ್‌ ಬರ್ಮನ್‌ (24), ಅವಿನಾಶ್ (24) ಬಂಧಿತರು ಆ ರೋಪಿಗಳ ಬಳಿಯಿಂದ ಕೃತ್ಯಕ್ಕೆ ಬಳಸಿದ ತಲವಾರು ಹಾಗೂ ದ್ವಿಚಕ್ರವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಹೊರವಲಯದ ಕಾವೂರು ಎಂ.ವಿ.ಶೆಟ್ಟಿ ಕಾಲೇಜು ಬಳಿ ಕೃತ್ಯ ನಡೆದಿತ್ತು. ಸ್ಕೂಟಿಯಲ್ಲಿ ಬಂದ ದುಷ್ಕರ್ಮಿಗಳ ತಂಡ ಅನ್ಯ

ಮಂಗಳೂರು: ಮುಸ್ಲಿಂ ಯುವಕನ ಮೇಲೆ ತಲವಾರು ದಾಳಿ | ಹಿಂದೂ ಯುವಕರ ಬಂಧನ Read More »

ಸುಳ್ಯ:ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ.ಜಾವಕಿ ವೆಂಕಟರಮಣ ಗೌಡರ 11ನೇ ಪುಣ್ಯಸ್ಮರಣೆ

ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ದಿ. ಡಾ ಕುರುಂಜಿ ವೆಂಕಟರಮಣ ಗೌಡರ ಧರ್ಮಪತ್ನಿ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ 11 ನೇ ಪುಣ್ಯಸ್ಮರಣೆ ಪ್ರಯುಕ್ತ ನುಡಿನಮನ ಕಾರ್ಯಕ್ರಮ ಆಗಸ್ಟ್ 22 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ.ಎಂ. ದಿ.ಜಾವಕಿ ವೆಂಕಟರಮಣ ಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಸುಳ್ಯ:ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ.ಜಾವಕಿ ವೆಂಕಟರಮಣ ಗೌಡರ 11ನೇ ಪುಣ್ಯಸ್ಮರಣೆ Read More »

ಧರ್ಮಸ್ಥಳ:ಸ್ನಾನಕ್ಕೆಂದು ಬಂದ ಮಹಿಳೆಯ ಜೊತೆ ಯುವಕನ ಅಸಭ್ಯ ವರ್ತನೆ

ಸಮಗ್ರ ನ್ಯೂಸ್: ಸ್ನಾನಕ್ಕೆ ತೆರಳಿದ್ದ ಮಹಿಳೆಯ ಜೊತೆ ಯುವಕನೋರ್ವ ಅಸಭ್ಯ ವರ್ತಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮನೋಜ್ ಓ.ಆರ್. ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಸ್ನಾನ ಮಾಡಲೆಂದು ಬಚ್ಚಲು ಮನೆಗೆ ಹೋದಾಗ ನೆರೆ ಮನೆಯ ಯುವಕ ಬಚ್ಚಲು ಮನೆಗೆ ಪ್ರವೇಶ ಮಾಡಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಮಹಿಳೆ ಜೋರಾಗಿ ಬೊಬ್ಬೆ ಹಾಕಿದಾಗ ಆರೋಪಿಯು ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಕೆ ನಡೆಸುತ್ತಿದ್ದಾರೆ.

ಧರ್ಮಸ್ಥಳ:ಸ್ನಾನಕ್ಕೆಂದು ಬಂದ ಮಹಿಳೆಯ ಜೊತೆ ಯುವಕನ ಅಸಭ್ಯ ವರ್ತನೆ Read More »

ಉಪ್ಪಿನಂಗಡಿ: ಅನಾರೋಗ್ಯದಿಂದ ವಿದ್ಯಾರ್ಥಿ ಮೃತ್ಯು

ಸಮಗ್ರ ನ್ಯೂಸ್: ಉಪ್ಪಿನಂಗಡಿ ಸಮೀಪದ ಪೆದಮಲೆಯ ವಿದ್ಯಾರ್ಥಿಯೋರ್ವ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟ ಘಟನೆ ಆ. 21ರಂದು ರಾತ್ರಿ ವರದಿಯಾಗಿದೆ. ಪೆದಮಲೆ ನಿವಾಸಿ ಸಮದ್ ಹಾಜಿ ರವರ ಪುತ್ರ ಅಹ್ಮದ್ ಸಹದ್(15) ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್ ನ SSLC ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸಹದ್ ಕಳೆದ ಹಲವು ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಳಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಾಲಾ ಚಟುವಟಿಕೆಗಳಲ್ಲಿ ಬಹಳ ಚುರುಕಿನ ಮತ್ತು ಪ್ರತಿಭಾವಂತ ವಿದ್ಯಾರ್ಥಿಯನ್ನು ಕಳೆದುಕೊಂಡಂತಾಗಿದೆ. ಇನ್ನು ಸಂತಾಪ ಸೂಚಕವಾಗಿ

ಉಪ್ಪಿನಂಗಡಿ: ಅನಾರೋಗ್ಯದಿಂದ ವಿದ್ಯಾರ್ಥಿ ಮೃತ್ಯು Read More »

ಸುಳ್ಯ: ತಮಿಳುನಾಡು ಮೂಲದ ದಂಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ತಮಿಳುನಾಡು ಮೂಲದ ರಬ್ಬರ್ ಕಾರ್ಮಿಕ ದಂಪತಿ ತಾಲೂಕಿನ ದೇವಚಳ್ಳ ಗ್ರಾಮದ ಎಲಿಮಲೆಯ‌ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ವರದಿಯಾಗಿದೆ. ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ‌ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ. ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು, ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಇಬ್ಬರು ಪುತ್ರಿಯರು,

ಸುಳ್ಯ: ತಮಿಳುನಾಡು ಮೂಲದ ದಂಪತಿ ಆತ್ಮಹತ್ಯೆ Read More »