ಕರಾವಳಿ

ಸುಳ್ಯ: ಜೀವಬಲಿಗಾಗಿ ಕಾಯುತ್ತಿದೆ ಕಾಲೇಜು ಕಾಂಪೌಂಡ್| ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಗ್ಯಾರಂಟಿ

ಸಮಗ್ರ ನ್ಯೂಸ್: ಒಂದೆಡೆ ರಸ್ತೆಗೆ ವಾಲಿದ ಕಾಲೇಜು ಕಾಂಪೌಂಡ್, ಅದರ ಪಕ್ಕದಲ್ಲೇ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನ ಓಡಾಡುವ ದೃಶ್ಯ. ಈ ಸನ್ನಿವೇಶ ಕಂಡುಬರುತ್ತಿರುವುದು ಸುಳ್ಯದ ಸ.ಪ.ಪೂ ಕಾಲೇಜು ಬಳಿ. ಇಲ್ಲಿನ ಕಾಲೇಜು ಕಾಂಪೌಂಡ್ ಕುಸಿಯುವ ಭೀತಿಯಲ್ಲಿದ್ದು, ದಿಢೀರ್ ಉರುಳುವ ಲಕ್ಷಣ ಕಂಡುಬರುತ್ತಿದೆ. ಇದರ ಸುತ್ತಮುತ್ತ ನೂರಾರು ಜನ, ವಾಹನಗಳು ಸಂಚರಿಸುತ್ತಿದ್ದು, ಒಂದು ವೇಳೆ ಗೋಡೆ ಕುಸಿದಲ್ಲಿ ಭಾರೀ ಅನಾಹುತ ಸಂಭವಿಸುವ ಲಕ್ಷಣಗಳಿದೆ. ಆದ್ದರಿಂದ ಸಂಬಂಧಪಟ್ಟವರು ಈ ಕುರಿತಂತೆ ಕ್ರಮ ಕೈಗೊಂಡು ಸಂಭಾವ್ಯ ಅಪಾಯವನ್ನು

ಸುಳ್ಯ: ಜೀವಬಲಿಗಾಗಿ ಕಾಯುತ್ತಿದೆ ಕಾಲೇಜು ಕಾಂಪೌಂಡ್| ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಗ್ಯಾರಂಟಿ Read More »

ಸುಳ್ಯ: ಉರುಳಿಗೆ ಬಿದ್ದ ಚಿರತೆ ಸಾವು; ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಸುಮಾರು ಒಂದೂವರೆ ವರ್ಷದ ಚಿರತೆ ಮರಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲಾದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿಂದ ವರದಿಯಾಗಿದೆ. ಬಂಧಿತರನ್ನು ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಎಂದು ಗುರುತಿಸಲಾಗಿದೆ. ಮಂಗಳವಾರದಂದು ಮಧ್ಯಾಹ್ನದ ವೇಳೆಗೆ ಚಿರತೆ ಉರುಳಿಗೆ ಬಿದ್ದಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ದೊರೆತ ಮಾಹಿತಿಯಂತೆ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಚಿರತೆ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

ಸುಳ್ಯ: ಉರುಳಿಗೆ ಬಿದ್ದ ಚಿರತೆ ಸಾವು; ಇಬ್ಬರು ಅರೆಸ್ಟ್ Read More »

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಗೆ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023”

ಸಮಗ್ರ ನ್ಯೂಸ್: ವ್ಯಕ್ತಿತ್ವ ವಿಕಸನ ತರಬೇತುದಾರೆ, ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರುನಾಡಿನ ಸಮಾಚಾರ ಸೇವಾ ಸಂಘ (ರಿ), ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಪ್ರತೀ ವರ್ಷ ಅತ್ಯುತ್ತಮ ಶಿಕ್ಷಕರ ಸಾಧನೆಗಾಗಿ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಸೆಪ್ಟೆಂಬರ್ 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯುವ ‘ಗುರುವಂದನಾ’

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಗೆ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023” Read More »

ಸುಳ್ಯ:ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ| ಸ್ಥಳಕ್ಕೆ ಕಾಂಗ್ರೆಸ್ ಮುಖಂಡರಿಂದ ಭೇಟಿ ಪರಿಶೀಲನೆ

ಸಮಗ್ರ ನ್ಯೂಸ್:ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸರಕಾರದ ಮಹಾತ್ವಕಾಂಕ್ಷಿ ಮಹಿಳಾ ಸಬಳೀಕರಣ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಆ. 30ರಂದು ರಾಜ್ಯಾದ್ಯಂತ ನಡೆಯಲಿದೆ. ಎಐಸಿಸಿ ನಾಯಕರು, ಮುಖ್ಯಮಂತ್ರಿಗಳು, ಉಪ-ಮುಖ್ಯಮಂತ್ರಿ ಹಾಗೂ ಸಚಿವರುಗಳ ನೇತೃತ್ವದಲ್ಲಿ ಉದ್ಘಾಟನೆಗೊಳ್ಳಲಿದೆ. ಈ ಕಾರ್ಯಕ್ರಮವು ರಾಜ್ಯದಾದ್ಯಂತ ಸುಮಾರು 11 ಸಾವಿರ ಕಡೆಗಳಲ್ಲಿ ಏಕ ಕಾಲದಲ್ಲಿ ನೇರಪ್ರಸಾರಗೊಳ್ಳಲಿದೆ. ಸುಳ್ಯ ನಗರಪಂಚಾಯತ್ ವ್ಯಾಪ್ತಿಯ ಮುಖ್ಯ ಕಾರ್ಯಕ್ರಮ ಸುಳ್ಯದ ಲಯನ್ಸ್ ಸಭಾಭವನದಲ್ಲಿ ನಡೆಯಲಿದೆ. ಸುಳ್ಯದ ನಗರ ಪಂಚಾಯತ್ ಕಚೇರಿಯಲ್ಲಿ ಆ. 29ರಂದು ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ನಡೆಯುವ

ಸುಳ್ಯ:ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ| ಸ್ಥಳಕ್ಕೆ ಕಾಂಗ್ರೆಸ್ ಮುಖಂಡರಿಂದ ಭೇಟಿ ಪರಿಶೀಲನೆ Read More »

ಬಂಟ್ವಾಳ: ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್| ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್: ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವಿಡಿಯೋ ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಪ್ರಕರಣ ಬಂಟ್ವಾಳದಲ್ಲಿ ವರದಿಯಾಗಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಜಕ್ರಿಬೆಟ್ಟು ಎಂಬಲ್ಲಿನ‌ ಮನೆಯಲ್ಲಿ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ ವ್ಯಕ್ತಿಯೋರ್ವ ಗೋಡೆಯ ಸಂದಿ ಮಧ್ಯೆ ಮೊಬೈಲ್ ನಲ್ಲಿ ಚಿತ್ರಿಕರಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಕಂಡ ಯುವತಿ ಜೋರಾಗಿ ಬೊಬ್ಬೆ ಹಾಕಿದ್ದಾಳೆ, ಈ ಸಂದರ್ಭ

ಬಂಟ್ವಾಳ: ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್| ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು Read More »

ದ.ಕ. ಜಿಲ್ಲೆಯಲ್ಲಿ ಸೆ. ನಿಂದ ಶನಿವಾರ ಪೂರ್ತಿ ತರಗತಿ ನಡೆಸಲು ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಗೆ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಸೆಪ್ಟೆಂಬರ್ ನಿಂದ ಶನಿವಾರ ಪೂರ್ಣ ತರಗತಿ ನಡೆಸಲು ಶಿಕ್ಷಣ ಇಲಾಖೆ ಸೂಚಿಸಿದೆ. ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರ ಇಡೀ ದಿನ ಶಾಲೆ ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಜುಲೈನಲ್ಲಿ ಸುರಿದ ಅತೀ ಹೆಚ್ಚು ಮಳೆಗೆ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಯ ನಿರ್ದೇಶನದಂತೆ ಏಳು ದಿನ ರಜೆ ಸಾರಲಾಗಿತ್ತು. ಅಂದಿನ ರಜೆಗಳನ್ನು ಭರ್ತಿ

ದ.ಕ. ಜಿಲ್ಲೆಯಲ್ಲಿ ಸೆ. ನಿಂದ ಶನಿವಾರ ಪೂರ್ತಿ ತರಗತಿ ನಡೆಸಲು ಸೂಚನೆ Read More »

ಪುತ್ತೂರು: ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಹಕ್ಕೊತ್ತಾಯ| ತನಿಖೆಯ ದಿಕ್ಕು ತಪ್ಪಿಸಿದವರಿಗೂ ಶಿಕ್ಷೆಯಾಗಲಿ – ತಿಮರೋಡಿ

ಸಮಗ್ರ ನ್ಯೂಸ್: ವಿದ್ಯಾರ್ಥಿನಿ ಸೌಜನ್ಯ ಕೊಲೆ, ಅತ್ಯಾಚಾರ ಪ್ರಕತಣದ ಮರು ತನಿಖೆಗೆ ಪುತ್ತೂರಿನಲ್ಲಿ ಒತ್ತಾಯಿಸಲಾಗಿದೆ. ಅಭಿನವ ಮಿತ್ರ ಮಂಡಳಿ, ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ನೇತೃತ್ವದಲ್ಲಿ ಪುತ್ತೂರಿನಲ್ಲಿ ಪ್ರತಿಭಟನಾ ಜಾಥಾ ನಡೆದಿದೆ. ಪುತ್ತೂರಿನ ಬೊಳುವಾರು ವೃತ್ತದಿಂದ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದವರೆಗೆ ನಡೆದ ಜಾಥಾದಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಪ್ರಸಾದ್ ಅತ್ತಾವರ, ಪ್ರವೀಣ್ ವಾಲ್ಕೆ ಮೊದಲಾದವರು ಭಾಗಿಯಾಗಿದ್ದಾರೆ‌. ಸೌಜನ್ಯ ಕೊಲೆ ಅತ್ಯಾಚಾರದ ಹೋರಾಟಗಾರರು ನ್ಯಾಯಾಲಯದಲ್ಲಿ ಮರು ತನಿಖೆಗೆ ಅರ್ಜಿ ಸಲ್ಲಿಸಬೇಕು ಎನ್ನುವ ಗೃಹಸಚಿವ ಜಿ‌.

ಪುತ್ತೂರು: ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಹಕ್ಕೊತ್ತಾಯ| ತನಿಖೆಯ ದಿಕ್ಕು ತಪ್ಪಿಸಿದವರಿಗೂ ಶಿಕ್ಷೆಯಾಗಲಿ – ತಿಮರೋಡಿ Read More »

ಕೊಲ್ಲಮೊಗ್ರು: ಹಣ ಪಣಕ್ಕಿಟ್ಟು ಲೂಡ ಆಟ| ಸುಬ್ರಹ್ಮಣ್ಯ ಪೊಲೀಸರ ದಾಳಿ|ಒರ್ವ ವಶಕ್ಕೆ

ಸಮಗ್ರ ನ್ಯೂಸ್: ಹಣವನ್ನು ಪಣಕ್ಕಿಟ್ಟು ಲೂಡದ ದಾಳವನ್ನು ಉಪಯೋಗಿಸಿ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದು, ಮೂವರು ಪರಾರಿಯಾದ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರುನಲ್ಲಿ ಆ.26ರಂದು ನಡೆದಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಕೊಲ್ಲಮೊಗ್ರು ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಅದೃಷ್ಟ ಆಟವಾದ ಲೂಡ ದಾಳವನ್ನು ಉಪಯೋಗಿಸಿ ಜೂಜಾಟ ಆಟ ಆಡುತ್ತಿರುತ್ತಿರುವ ಖಚಿತ ಮಾಹಿತಿ ಮೇರೆಗೆ ಸುಬ್ರಹ್ಮಣ್ಯ ಠಾಣಾ ಎಸೈ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ. ಕಿರಣ್‌

ಕೊಲ್ಲಮೊಗ್ರು: ಹಣ ಪಣಕ್ಕಿಟ್ಟು ಲೂಡ ಆಟ| ಸುಬ್ರಹ್ಮಣ್ಯ ಪೊಲೀಸರ ದಾಳಿ|ಒರ್ವ ವಶಕ್ಕೆ Read More »

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ| ಗಾನ ಮತ್ತು ನೃತ್ಯ ಒಂದೇ ನಾಣ್ಯದ ಎರಡು ಮುಖಗಳು – ಕೇಶವ ಪ್ರಸಾದ್ ಮುಳಿಯ

ಸಮಗ್ರ ನ್ಯೂಸ್: ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್‌ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್‌ ಫಿನಾಲೆಯು ಇನ್ನರ್‌ವೀಲ್‌ ಕ್ಲಬ್‌ನ ಸಹಯೋಗದಲ್ಲಿ ಆ. 26ರಂದು ಪುತ್ತೂರಿನ ಜೈನ ಭವನದಲ್ಲಿ, ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ನೃತ್ಯೋಪಾಸನಾ ಕಲಾ ಕೇಂದ್ರದ ನಿರ್ದೇಶಕಿ ಶಾಲಿನಿ ಆತ್ಮಭೂಷಣ್ ಮಾತನಾಡಿ, ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಮುಳಿಯ ಜ್ಯುವೆಲ್ಸ್‌ ಗ್ರಾಮೀಣ ಪ್ರತಭೆಗಳನ್ನು ಹುಡುಕಿ ಅವರಿಗೆ ವೇದಿಕೆ ಒದಗಿಸುವ ಮಹತ್ತರವಾದ ಕಾರ್ಯ ಮಾಡಿರುವುದು

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ| ಗಾನ ಮತ್ತು ನೃತ್ಯ ಒಂದೇ ನಾಣ್ಯದ ಎರಡು ಮುಖಗಳು – ಕೇಶವ ಪ್ರಸಾದ್ ಮುಳಿಯ Read More »

“ನಾವು ಹೇಳಿದ ವ್ಯಕ್ತಿಗಳನ್ನು ಮಾಧ್ಯಮ ಸಮಕ್ಷಮ ಮಂಪರು ಪರೀಕ್ಷೆ ಮಾಡಿಸಿ”| ಬೆಳ್ತಂಗಡಿ ಚಲೋ ಧರಣಿಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಆಗ್ರಹ

ಸಮಗ್ರ ನ್ಯೂಸ್: ‘ಆರೋಪಿಗಳೆಂದು ನಾವು ಹೇಳುವ ವ್ಯಕ್ತಿಗಳಿಗೆ ಮಾಧ್ಯಮಗಳ ವಿಡಿಯೋ ಚಿತ್ರೀಕರಣ ಮುಖಾಂತರ ಮಂಪರು ಪರೀಕ್ಷೆ ಮಾಡಿಸಿ, ಆ ಮೂಲಕ ನನ್ನ ಮಗಳ ಸಾವಿಗೆ ನ್ಯಾಯ ದೊರಕಿಸಿ ಕೊಡಿ’ ಎಂದು ಸೌಜನ್ಯ ತಾಯಿ ಕುಸುಮಾವತಿ ಆಗ್ರಹ ವ್ಯಕ್ತಪಡಿಸಿದ್ದಾರೆ. ಅವರು ಇಂದು(ಆ. 28) ಬೆಳ್ತಂಗಡಿಯ ತಾಲೂಕು ಕಚೇರಿ ಮುಂಭಾಗ ನಡೆದ ‘ಬೆಳ್ತಂಗಡಿ ಚಲೋ’ ಮಹಾಧರಣಿಯಲ್ಲಿ ಮಾತನಾಡಿದರು. ‘ನನ್ನ ಮಗಳನ್ನು ಒಂದೇ ರಾತ್ರಿಯಲ್ಲಿ ಹರಿದು ಮುಕ್ಕಿದ್ದಾರೆ. ಇದೀಗ ಸಂತ್ರಸ್ತರಾದ ನಮ್ಮನ್ನೇ ಆರೋಪಿಗಳಂತೆ ಬಿಂಬಿಸಲಾಗುತ್ತಿದೆ. ನಾವು ಮಾಡಿದ ಅನ್ಯಾಯವಾದರೂ ಏನು? ನ್ಯಾಯ

“ನಾವು ಹೇಳಿದ ವ್ಯಕ್ತಿಗಳನ್ನು ಮಾಧ್ಯಮ ಸಮಕ್ಷಮ ಮಂಪರು ಪರೀಕ್ಷೆ ಮಾಡಿಸಿ”| ಬೆಳ್ತಂಗಡಿ ಚಲೋ ಧರಣಿಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಆಗ್ರಹ Read More »