ಕರಾವಳಿ

ಪುತ್ತೂರು: ಬಾವಿಗೆ ಬಿದ್ದು ಕಾಡುಕೋಣ ಸಾವು

ಸಮಗ್ರ ನ್ಯೂಸ್: ನಾಡಿಗೆ ಬಂದಿದ್ದ‌ ಕಾಡುಕೋಣವೊಂದು ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲ್ಲೂಕಿನ ನರಿಮೊಗರು ಗ್ರಾಮದ ಐಟಿಐ ಮೈದಾನದ ಬಳಿ‌ ನಡೆದಿದೆ. ನರಿಮೊಗರು ಐಟಿಐ ಸಮೀಪದ ನಿವಾಸಿ ಪ್ರಕಾಶ್ ಎಂಬುವರ ಜಾಗದಲ್ಲಿರುವ ಬಾವಿಯಲ್ಲಿ ಸುಮಾರು 5 ವರ್ಷದ ಕಾಡುಕೋಣದ ಕಳೇಬರ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ್ದು, ಕ್ರೇನ್ ಬಳಸಿ ಕಳೇಬರ ಮೇಲೆತ್ತಲಾಗಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪುತ್ತೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, […]

ಪುತ್ತೂರು: ಬಾವಿಗೆ ಬಿದ್ದು ಕಾಡುಕೋಣ ಸಾವು Read More »

ನಾಗರ ಪಂಚಮಿಗೆ ರಜೆ ಘೋಷಿಸಿ| ಜಿಲ್ಲಾಧಿಕಾರಿಗೆ ಶಾಸಕ‌ ಸುನಿಲ್ ಮನವಿ

ಸಮಗ್ರ ನ್ಯೂಸ್: ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 21 ರಂದು ರಜೆ ಘೋಷಿಸುವಂತೆ ಕಾರ್ಕಳ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಅವರು ಶನಿವಾರ ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ‘ನಾಗರ ಪಂಚಮಿಯು ದಕ್ಷಿಣ ಕನ್ನಡ ಮತ್ತು ಉಡುಪಿಯ ಅವಳಿ ಜಿಲ್ಲೆಗಳನ್ನು ಒಳಗೊಂಡಿರುವ ತುಳುನಾಡಿನಲ್ಲಿ ಹಿಂದೂಗಳು ಮತ್ತು ಜೈನರು ಆಚರಿಸುವ ನಾಗ ಪಂಚಮಿ ಪ್ರಮುಖ ಸಾಂಪ್ರದಾಯಿಕ ಹಬ್ಬವಾಗಿದ್ದು, ದೈವ ದೇವರುಗಳ ಆರಧಾನೆಯಲ್ಲಿ ನಾಗರಾಧನೆಯು ಪ್ರಮುಖವಾಗಿದೆ. ಹೀಗಾಗಿ ಉಭಯ ಜಿಲ್ಲೆಗಳಲ್ಲಿ ನಾಗರ ಪಂಚಮಿಯಂದು ರಜೆ ಘೋಷಿಸುವಂತೆ

ನಾಗರ ಪಂಚಮಿಗೆ ರಜೆ ಘೋಷಿಸಿ| ಜಿಲ್ಲಾಧಿಕಾರಿಗೆ ಶಾಸಕ‌ ಸುನಿಲ್ ಮನವಿ Read More »

ಸುಳ್ಯ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ‌ ಲೆಕ್ಕಾಧಿಕಾರಿ

ಸಮಗ್ರ ನ್ಯೂಸ್: ಹಕ್ಕು ಖುಲಾಸೆಗೆ ಸಂಬಂಧಿಸಿ ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದಾಗ ಅರಂತೋಡು ಗ್ರಾಮ ಆಡಳಿತಾಧಿಕಾರಿಯು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ಅರಂತೋಡಿನ ಅಡ್ತಲೆ ಹರಿಪ್ರಸಾದ್‌ ಅವರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಕಡತ ವಿಲೇಗಾಗಿ ಅರಂತೋಡು ಗ್ರಾಮ ಲೆಕ್ಕಾಧಿಕಾರಿಯಾಗಿರುವ ಮಿಯಾಸಾಬ್ ಮುಲ್ಲಾ ೮ ಸಾವಿರದ ಬೇಡಿಕೆ ಇಟ್ಟರೆಂದೂ ತಿಳಿದಿದೆ. ಇಂದು ಹಣ ಸ್ವೀಕರಿಸುತ್ತಿದ್ದಾಗ ಅವರು ಲೋಕಾಯುಕ್ತ ದಾಳಿ ನಡೆದಿದ್ದು, ಸಿಕ್ಕಿ ಬಿದ್ದಿರುವುದಾಗಿ ತಿಳಿದುಬಂದಿದೆ.

ಸುಳ್ಯ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ‌ ಲೆಕ್ಕಾಧಿಕಾರಿ Read More »

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ| ಇನ್ನೆರಡು ದಿನ ಉತ್ತಮ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕ ಕರಾವಳಿಯ ಹಲವೆಡೆ ಶುಕ್ರವಾರ (ಆಗಸ್ಟ್ 18) ಸಂಜೆಯ ಬಳಿಕ ಗುಡುಗು ಸಹಿತ ಮಳೆಯಾಗಿದ್ದು, ಮತ್ತೆ ಬಿರುಸಿನ ಮಳೆ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ. ಶುಕ್ರವಾರ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಳೆಯ ಮುನ್ಸೂಚನೆಯನ್ನೂ ನೀಡಿತ್ತು. ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡು ವ್ಯಾಪ್ತಿಯಲ್ಲಿ ಅಲ್ಲಲ್ಲಿ ಇಂದು ಶನಿವಾರ ಮತ್ತು ನಾಳೆ ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಸಮುದ್ರದಲ್ಲೂ

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ| ಇನ್ನೆರಡು ದಿನ ಉತ್ತಮ ಮಳೆ ಮುನ್ಸೂಚನೆ Read More »

ಮಂಗಳೂರು: ಈರುಳ್ಳಿ ದರದಲ್ಲಿ ದಿಢೀರ್ ಏರಿಕೆ| ಗ್ರಾಹಕರ ಕಣ್ಣಲ್ಲಿ ಕಣ್ಣೀರು

ಸಮಗ್ರ ನ್ಯೂಸ್: ಟೊಮೆಟೊ ದರ ಕ್ರಮೇಣ ಇಳಿಮುಖವಾಗುತ್ತಿದ್ದಂತೆ ಇದೀಗ ಈರುಳ್ಳಿ ದರ ಗಗನಮುಖಿಯಾಗತೊಡಗಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈರುಳ್ಳಿ ಬೆಲೆ ಗಣನೀಯವಾಗಿ ಹೆಚ್ಚಳವಾಗಿದೆ. ದೇಶದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದಿಂದ ಪೂರೈಕೆ ಕಳೆದ ಎರಡು ವಾರಗಳಿಂದ ಕಡಿಮೆಯಾಗಿದೆ. ಹೀಗಾಗಿ ಈರುಳ್ಳಿ ಬೆಲೆ ಏರುಗತಿಯಲ್ಲಿ ಸಾಗಿದೆ ಎಂದು ಮೂಲಗಳು ತಿಳಿಸಿವೆ. ಮಂಗಳೂರಿನಲ್ಲಿ ಕಳೆದ ಎರಡು ವಾರಗಳಿಂದ ಈರುಳ್ಳಿ ಬೆಲೆ ನಿರಂತರವಾಗಿ ಏರಿಕೆಯಾಗಿದೆ. ಕಳೆದ ವಾರ ಕ್ವಿಂಟಲ್‌ಗೆ 2000 ರೂ.ಗೆ ತಲುಪಿತ್ತು. ಇದೀಗ 2900

ಮಂಗಳೂರು: ಈರುಳ್ಳಿ ದರದಲ್ಲಿ ದಿಢೀರ್ ಏರಿಕೆ| ಗ್ರಾಹಕರ ಕಣ್ಣಲ್ಲಿ ಕಣ್ಣೀರು Read More »

ಸೌಜನ್ಯ ಪ್ರಕರಣ ಮರುತನಿಖೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ, ಕಾನೂನಾತ್ಮಕವಾಗಿ ಮುಗಿದ ಅಧ್ಯಾಯ| ಸಂಚಲನ ಸೃಷ್ಟಿಸಿದ ಗೃಹಸಚಿವ ಪರಮೇಶ್ವರ್ ಹೇಳಿಕೆ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ಸಂಭವಿಸಿದ ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣವನ್ನು ಮರು ತನಿಖೆಗೊಳಪಡಿಸಲು ತೀವ್ರ ಹೋರಾಟ ನಡೆಯುತ್ತಿರುವಾಗಲೇ ಸರಕಾರ ಮರು ತನಿಖೆ ಅಸಾಧ್ಯ ಎಂದು ಹೇಳಿದೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಜಿ. ಪರಮೇಶ್ವರ, ಈ ಪ್ರಕರಣ ಕಾನೂನಾತ್ಮಕವಾಗಿ ಮುಗಿದು ಹೋಗಿದೆ. ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸೌಜನ್ಯಾ ಹತ್ಯೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ವಿವಿಧ ವೇದಿಕೆಗಳಲ್ಲಿ ಹರಡುತ್ತಿರುವ ಎಲ್ಲ

ಸೌಜನ್ಯ ಪ್ರಕರಣ ಮರುತನಿಖೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ, ಕಾನೂನಾತ್ಮಕವಾಗಿ ಮುಗಿದ ಅಧ್ಯಾಯ| ಸಂಚಲನ ಸೃಷ್ಟಿಸಿದ ಗೃಹಸಚಿವ ಪರಮೇಶ್ವರ್ ಹೇಳಿಕೆ Read More »

ಸೌಜನ್ಯ ಪ್ರಕರಣಕ್ಕೆ ಮಾನವ ಹಕ್ಕುಗಳ ಆಯೋಗ ಎಂಟ್ರಿ| ಕೇಸು ದಾಖಲಿಸಿಕೊಂಡ ಆಯೋಗ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಾಳ ಅತ್ಯಾಚಾರ ಹಾಗೂ ಹತ್ಯಾ ಪ್ರಕರಣದಲ್ಲಿ ಸೌಜನ್ಯಾಳ ಕುಟುಂಬ ಹಾಗೂ ನಿರಪರಾಧಿಯಾದರೂ ಶಿಕ್ಷೆಗೊಳಗಾಗಿದ್ದ ಸಂತೋಷ್‌ ರಾವ್ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಪ್ರಜಾಪ್ರಭುತ್ವ ಉಳಿಸಿ ಆಂದೋಲನ ವೇದಿಕೆಯ ಮುಖಂಡ ನಾಗೇಶ್ ಅಂಗೀರಸ ಬರೆದ ಪತ್ರದ ಆಧಾರದಲ್ಲಿ ರಾಜ್ಯ ಮಾನವ ಹಕ್ಕು ಆಯೋಗ ಕೇಸು ದಾಖಲಿಸಿಕೊಂಡಿದೆ. ಸೌಜನ್ಯಾಳ ಪ್ರಕರಣದ ಕುರಿತು ನೀಡಿದ ದೂರಿನ ಕುರಿತಂತೆ ಕೇಸು ನಂ. 2675/10/19/2023ನ್ನು ದಾಖಲಿಸಿಕೊಳ್ಳ ಲಾಗಿದೆ ಎಂದು ಕರ್ನಾಟಕ

ಸೌಜನ್ಯ ಪ್ರಕರಣಕ್ಕೆ ಮಾನವ ಹಕ್ಕುಗಳ ಆಯೋಗ ಎಂಟ್ರಿ| ಕೇಸು ದಾಖಲಿಸಿಕೊಂಡ ಆಯೋಗ Read More »

ಬಂಟ್ವಾಳ: ಕೋಟಿ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ..! | ಅಧಿಕಾರಿಗಳಿಂದ ತನಿಕೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಡಿತರ ಚೀಟಿದಾರರಿಗೆ ವಿತರಣೆಯಾಗುವ ಭಾರತೀಯ ಆಹಾರ ಇಲಾಖೆ ನೀಡುವ ಅಕ್ಕಿಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಗೋಲ್ ಮಾಲ್. ಈ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಸುಮಾರು 1,32,36,000ರೂ ಮೌಲ್ಯದ 3892.95.450 ಕ್ವಿಂಟಾಲ್ ಅಕ್ಕಿಯ ಕೊರತೆ ಕಂಡು ಬಂದಿದ್ದು, ಇಲ್ಲಿ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮ(Karnataka Food and Supplies Corporation)ದ ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ಹಾಂಡ ಬಂಟ್ವಾಳ

ಬಂಟ್ವಾಳ: ಕೋಟಿ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ..! | ಅಧಿಕಾರಿಗಳಿಂದ ತನಿಕೆ Read More »

ಭೂಮಿ ಮೋಹಕ್ಕೆ ಸೌಜನ್ಯಳ ಕೊಲೆಯಾಗಿದೆ‌| ಸ್ಪೋಟಕ ಹೇಳಿಕೆ ನೀಡಿದ ವಸಂತ ಬಂಗೇರ

ಸಮಗ್ರ ನ್ಯೂಸ್: ಉಜಿರೆಯ ಎಸ್ ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆಗೆ ಭೂಮಿ(ಜಮೀನು) ಮೋಹ ಕಾರಣ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಧರ್ಮಸ್ಥಳ ಹೆಗಡೆ ಪರಿವಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಹೆಗಡೆ ಪರಿವಾರದಂತಹ ಜಮೀನ್ದಾರರು ಹುಟ್ಟಲೇಬಾರದು, ತಾಲೂಕಿನ ಎಲ್ಲಾ ಜಮೀನುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ನನ್ನ ತಂದೆಯೂ ಜಮೀನ್ದಾರ ಆಗಿದ್ದರು, ಆದರೆ ಯಾರ್ಯಾರ ಜಮೀನನ್ನು ವಶಪಡಿಸಿಕೊಳ್ಳಲು ನಾನು ಬಿಡಲಿಲ್ಲ. ಆ

ಭೂಮಿ ಮೋಹಕ್ಕೆ ಸೌಜನ್ಯಳ ಕೊಲೆಯಾಗಿದೆ‌| ಸ್ಪೋಟಕ ಹೇಳಿಕೆ ನೀಡಿದ ವಸಂತ ಬಂಗೇರ Read More »

ಸುಳ್ಯ:ಎಂ.ಬಿ. ಫೌಂಡೇಶನ್ ಸ್ಥಾಪಕಾಧ್ಯಕ್ಷಎಂ.ಬಿ.ಸದಾಶಿವ ರವರಿಗೆ ಮಾತೃ ವಿಯೋಗ ಸುಳ್ಯ ಎಸ್‌ಡಿಪಿಐ ಸಂತಾಪ

ಸಮಗ್ರ ನ್ಯೂಸ್:ಸುಳ್ಯದ ಹಿರಿಯ ಉದ್ಯಮಿ ಎಂ.ಬಿ. ಬಾಲಕೃಷ್ಣರವರ ಪತ್ನಿ ಎಂ.ಬಿ. ದೇವಕಿ ವಿಧಿವಶ. ದೇವಕಿ ಅವರ ಅಗಲಿಕೆಯು ನೋವನ್ನುಂಟು ಮಾಡಿದೆ. ಅವರ ಕುಟುಂಬದ ಸದಸ್ಯರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಸೃಷ್ಟಿಕರ್ತನು ನೀಡಲಿ ಎಂದು ಆಶಿಸುವುದರೊಂದಿಗೆ, ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪವನ್ನು ಸೂಚಿಸುತ್ತದೆ.

ಸುಳ್ಯ:ಎಂ.ಬಿ. ಫೌಂಡೇಶನ್ ಸ್ಥಾಪಕಾಧ್ಯಕ್ಷಎಂ.ಬಿ.ಸದಾಶಿವ ರವರಿಗೆ ಮಾತೃ ವಿಯೋಗ ಸುಳ್ಯ ಎಸ್‌ಡಿಪಿಐ ಸಂತಾಪ Read More »