ಪುತ್ತೂರು: ಬಾವಿಗೆ ಬಿದ್ದು ಕಾಡುಕೋಣ ಸಾವು
ಸಮಗ್ರ ನ್ಯೂಸ್: ನಾಡಿಗೆ ಬಂದಿದ್ದ ಕಾಡುಕೋಣವೊಂದು ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲ್ಲೂಕಿನ ನರಿಮೊಗರು ಗ್ರಾಮದ ಐಟಿಐ ಮೈದಾನದ ಬಳಿ ನಡೆದಿದೆ. ನರಿಮೊಗರು ಐಟಿಐ ಸಮೀಪದ ನಿವಾಸಿ ಪ್ರಕಾಶ್ ಎಂಬುವರ ಜಾಗದಲ್ಲಿರುವ ಬಾವಿಯಲ್ಲಿ ಸುಮಾರು 5 ವರ್ಷದ ಕಾಡುಕೋಣದ ಕಳೇಬರ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ್ದು, ಕ್ರೇನ್ ಬಳಸಿ ಕಳೇಬರ ಮೇಲೆತ್ತಲಾಗಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪುತ್ತೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, […]
ಪುತ್ತೂರು: ಬಾವಿಗೆ ಬಿದ್ದು ಕಾಡುಕೋಣ ಸಾವು Read More »










