ಕರಾವಳಿ

ಸೌಜನ್ಯ ಪರ ಹೋರಾಟಗಾರ ತಿಮರೋಡಿಗೆ ಗನ್ ಮ್ಯಾನ್| ಅಧಿಕೃತ ಆದೇಶ ಹೊರಡಿಸಿದ ಹೋಮ್ ಮಿನಿಸ್ಟರ್

ಸಮಗ್ರ ನ್ಯೂಸ್: ಕಳೆದ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಮುಂದಾಳತ್ವವನ್ನು ವಹಿಸಿಕೊಂಡಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಜೀವಕ್ಕೆ ಅಪಾಯ ಅಗುವ ಸಾಧ್ಯತೆ ಇರುವ ಕಾರಣ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರಾರ ಮನವಿ ಮೇರೆಗೆ ಕರ್ನಾಟಕ ರಾಜ್ಯ ಸರಕಾರವು ಇಬ್ಬರು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ. ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಆಗಸ್ಟ್ 17 ರಂದು […]

ಸೌಜನ್ಯ ಪರ ಹೋರಾಟಗಾರ ತಿಮರೋಡಿಗೆ ಗನ್ ಮ್ಯಾನ್| ಅಧಿಕೃತ ಆದೇಶ ಹೊರಡಿಸಿದ ಹೋಮ್ ಮಿನಿಸ್ಟರ್ Read More »

ಕಾಣಿಯೂರು: ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ. ಪುತ್ತೂರು ಮತ್ತು ಕಡಬದ ಜಂಟಿ ಆಶ್ರಯದಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದು, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಯೋಗಗುರು ಶಶಿಕಲಾ ಅವರ ವಿದ್ಯಾರ್ಥಿ.

ಕಾಣಿಯೂರು: ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಪಲ್ಟಿ| ಚಾಲಕ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ಕಡೆಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಆ. 18 ರಂದು ನಡೆದಿದೆ. ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿದ್ದ ಟೂಫಾನ್ ಆಂಬುಲೆನ್ಸ್ ಬಂಟ್ವಾಳದ ವಗ್ಗ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಮಡಂತ್ಯಾರ್ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಪಲ್ಟಿ| ಚಾಲಕ ಸಾವು Read More »

ಸುಬ್ರಹ್ಮಣ್ಯ:ಟವರ್ ನಿರ್ಮಾಣದ ಆಮೀಷವೊಡ್ಡಿ ವಂಚನೆ ಆರೋಪ

ಸಮಗ್ರ ನ್ಯೂಸ್: ಖಾಸಗಿ ಕಂಪೆನಿಯ ಟವರ್ ನಿರ್ಮಿಸಲು ಸ್ವಂತ ಜಾಗದಲ್ಲಿ ಅವಕಾಶ ನೀಡುವಂತೆ ಕೋರಿ ವಂಚಿಸಲಾದ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐವತ್ತೊಕ್ಲು ಗ್ರಾಮದ ನಾರಾಯಣ ಎನ್. ಎಂಬವರಿಗೆ ಖಾಸಗಿ ಕಂಪೆನಿಯವರೆಂದು ಪರಿಚಯಿಸಿಕೊಂಡು ಪೋನ್ ಕರೆ ಮಾಡಿರುವ ಅಪರಿಚಿತರು ಟವರ್ ನಿರ್ಮಾಣಕ್ಕೆ ಸ್ವಂತ ಜಾಗದಲ್ಲಿ ಸ್ಥಳಾವಕಾಶ ಕೋರಿದ್ದು, ಈ ಬಗ್ಗೆ ನಾರಾಯಣ ಅವರಿಂದ ದಾಖಲೆಯನ್ನು ವಾಟ್ಸಪ್ ಮೂಲಕ ಪಡೆದಿದ್ದಾರೆ. ಆ. 12 ಮತ್ತು ಆ.14ರ ಅವಧಿಯಲ್ಲಿ ಒಟ್ಟು 52 ಸಾವಿರ ರೂಪಾಯಿಗಳನ್ನು ಬೇರೆ ಬೇರೆ ಖಾತೆಗಳಿಗೆ

ಸುಬ್ರಹ್ಮಣ್ಯ:ಟವರ್ ನಿರ್ಮಾಣದ ಆಮೀಷವೊಡ್ಡಿ ವಂಚನೆ ಆರೋಪ Read More »

ಕುಕ್ಕೆ ಸುಬ್ರಹ್ಮಣ್ಯ: ಅಕ್ರಮ ಗೋ ಸಾಗಾಟ ಪೊಲೀಸ್ ವಶ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಭಾಗದಿಂದ ಅರಕಲಗೋಡು ಭಾಗಕ್ಕೆ ಕೃಷಿ ಉದ್ದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ದನ ಹಾಗೂ ಒಂದು ಕರುವನ್ನು ಸುಬ್ರಹ್ಮಣ್ಯ ಪೊಲೀಸರು ಆ. 17ರಂದು ಮಧ್ಯಾಹ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಮಧ್ಯಾಹ್ನ ಪೊಲೀಸ್ ತಪಾಸಣೆ ವೇಳೆ ಯಾವುದೇ ಅಗತ್ಯ ದಾಖಲೆಗಳಿಲ್ಲದೆ ಗೋವುಗಳನ್ನು ಸುಬ್ರಹ್ಮಣ್ಯ ಭಾಗದಿಂದ ಅರಕಲಗೋಡು ಭಾಗಕ್ಕೆ ಸಾಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ವಾಹನವನ್ನು ತಡೆದು ನಿಲ್ಲಿಸಲಾದರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಎರಡು ದನ, ಒಂದು ಕರುವನ್ನು ಮತ್ತು KA44 8819 ಸಂಖ್ಯೆಯ ವಾಹನವನ್ನು ವಶಕ್ಕೆ ಪಡೆಯಲಾದ ವಾಹನದಲ್ಲಿ

ಕುಕ್ಕೆ ಸುಬ್ರಹ್ಮಣ್ಯ: ಅಕ್ರಮ ಗೋ ಸಾಗಾಟ ಪೊಲೀಸ್ ವಶ Read More »

ಉಪ್ಪಿನಂಗಡಿ: ಹೆತ್ತ ಮಗಳಿಗೇ ಗರ್ಭದಾನ ಮಾಡಿದ ಕಾಮುಕ ತಂದೆ!!

ಸಮಗ್ರ ನ್ಯೂಸ್: ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಕೃತ್ಯ ಉಪ್ಪಿನಂಗಡಿ ಸಮೀಪದ ಗೋಳಿತ್ತೂಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದ್ದು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರವೆಸಗಿದ್ದು, ಮಗಳ ಆರೋಗ್ಯದ ಮೇಲೆ ವ್ಯತ್ಯಾಸಗಳಾಗಿದ್ದು ತಾಯಿ ಮಗಳನ್ನು ಆ.16ರಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಗಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಸಂತ್ರಸ್ತೆ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿ ತಂದೆಯನ್ನು

ಉಪ್ಪಿನಂಗಡಿ: ಹೆತ್ತ ಮಗಳಿಗೇ ಗರ್ಭದಾನ ಮಾಡಿದ ಕಾಮುಕ ತಂದೆ!! Read More »

ಮಂಗಳೂರು: ಪ್ರತಿಷ್ಠಿತ ಆಸ್ಪತ್ರೆಯ ಬೆಡ್ ಮೇಲೆಯೇ ಒಳರೋಗಿಯಿಂದ ಭಿನ್ನ ಸಾಮರ್ಥ್ಯದ ಬಾಲಕಿ ಮೇಲೆ ಅತ್ಯಾಚಾರ| ಸೆಕ್ಸ್ ಮಾಡಿದ್ದನ್ನು ನೋಡಿದ್ದೇ ಕೃತ್ಯಕ್ಕೆ ಕಾರಣ!!

ಸಮಗ್ರ ನ್ಯೂಸ್: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಭಿನ್ನ ಸಾಮರ್ಥ್ಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಕುರಿತು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃತ್ಯವೆಸಗಿದ ಆರೋಪಿಯನ್ನು ಹಾಗೂ ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ನಿವಾಸಿಯಾಗಿರುವ ಬಿಹಾರದ ಅಬ್ದುಲ್ ಹಲೀಂ (37) ಹಾಗೂ ಕುಲಶೇಖರ ನಿವಾಸಿ ಶಮೀನಾ ಬಾನು (22) ಬಂಧಿತ ಆರೋಪಿಗಳು. ನಗರಕ್ಕೆ ಬಂದಿದ್ದ ಅಬ್ದುಲ್ ಹಲೀಂ ಗೆಳೆಯನ ಜೊತೆ ಆ.10 ರಂದು ಬೈಕಿನಲ್ಲಿ ಕಾಸರಗೋಡಿಗೆ ಹೋಗಿ ಮರಳುತ್ತಿದ್ದಾಗ ಮಂಜೇಶ್ವರ ಹಾಗೂ

ಮಂಗಳೂರು: ಪ್ರತಿಷ್ಠಿತ ಆಸ್ಪತ್ರೆಯ ಬೆಡ್ ಮೇಲೆಯೇ ಒಳರೋಗಿಯಿಂದ ಭಿನ್ನ ಸಾಮರ್ಥ್ಯದ ಬಾಲಕಿ ಮೇಲೆ ಅತ್ಯಾಚಾರ| ಸೆಕ್ಸ್ ಮಾಡಿದ್ದನ್ನು ನೋಡಿದ್ದೇ ಕೃತ್ಯಕ್ಕೆ ಕಾರಣ!! Read More »

ಹ್ಯಾಕರ್ ಗಳ ಜಾಲಕ್ಕೆ ಬಲಿಯಾದ ಕಡಬ ಮೂಲದ ವ್ಯಕ್ತಿ| ವಿದೇಶದಲ್ಲಿ ಮಾಡದ ತಪ್ಪಿಗೆ ಜೈಲುಪಾಲು

ಸಮಗ್ರ ನ್ಯೂಸ್: ಉದ್ಯೋಗಕ್ಕೆ ತೆರಳಿದ ವೇಳೆ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಿನಾ ಕಾರಣ ವಂಚನೆ ಆರೋಪಕ್ಕೆ ಒಳಗಾಗಿ ದ.ಕ. ಮೂಲದ ವ್ಯಕ್ತಿಯೊಬ್ಬರು ವಿದೇಶದಲ್ಲಿ ಬಂಧಿಯಾಗಿದ್ದಾರೆ. ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಎಂಬವರೇ ತನ್ನದಲ್ಲದ ತಪ್ಪಿಗೆ ರಿಯಾದ್‌ನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇವರ ಬಿಡುಗಡೆಗಾಗಿ ಕುಟುಂಬಸ್ಥರು ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಇಲಾಖೆಯ ಕದತಟ್ಟುತ್ತಿದ್ದಾರೆ. ಈ ಬಗ್ಗೆ ಚಂದ್ರಶೇಖರ್‌ ಕುಟುಂಬದ ಪರವಾಗಿ ನಿಕಟವರ್ತಿಗಳಾದ ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ

ಹ್ಯಾಕರ್ ಗಳ ಜಾಲಕ್ಕೆ ಬಲಿಯಾದ ಕಡಬ ಮೂಲದ ವ್ಯಕ್ತಿ| ವಿದೇಶದಲ್ಲಿ ಮಾಡದ ತಪ್ಪಿಗೆ ಜೈಲುಪಾಲು Read More »

ಬಂಟ್ವಾಳ: ಶೌಚಾಲಯದ ತ್ಯಾಜ್ಯ ತಂದು ವಿಟ್ಲದಲ್ಲಿ ಸುರಿದ ಚಾಲಕ- ವಾಹನ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಸಮಗ್ರ ನ್ಯೂಸ್: ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ಕಲ್ಲಡ್ಕ- ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು, ವಿಟ್ಲದ ಕೇಪು ಚೆಲ್ಲಡ್ಕದಲ್ಲಿ ಪರಿಸರದಲ್ಲಿ ಸುರಿದು ರಾದ್ಧಾಂತಕ್ಕೆ ಕಾರಣವಾಗಿತ್ತು. ಈ ವೇಳೆ ಸಾರ್ವಜನಿಕರು ವಾಹನವನ್ನ ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು. ಕೆಲವೇ ದಿನಗಳಲ್ಲಿ ವಾಹನವನ್ನು ಬಿಡಿಸಿಕೊಂಡು ಬಂದು ಇದೀಗ ಮತ್ತೆ ದುಷ್ಕೃತ್ಯ ಎಸೆಯಲಾಗಿತ್ತಿದೆ. ಇದೀಗ ಅದೇ ಟ್ಯಾಂಕರ್ ಚಾಲಕ ಉಕ್ಕುಡದಲ್ಲಿ ತ್ಯಾಜ್ಯವನ್ನು ಸುರಿಯಲು ಯತ್ನ ಮಾಡಿದ್ದಾನೆ. ಸಾರಡ್ಕ

ಬಂಟ್ವಾಳ: ಶೌಚಾಲಯದ ತ್ಯಾಜ್ಯ ತಂದು ವಿಟ್ಲದಲ್ಲಿ ಸುರಿದ ಚಾಲಕ- ವಾಹನ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು Read More »

ಕಡಬ: ನೆಲ್ಯಾಡಿಯ ಹಾರ್ಡ್ ವೇರ್ ಮಳಿಗೆಯಲ್ಲಿ ದರೋಡೆ| ನಗದು, ಸ್ಟಾಕ್ ದೋಚಿದ ಕಳ್ಳರು

ಸಮಗ್ರ ನ್ಯೂಸ್: ಕಡಬ ತಾಲೂಕಿನ ನೆಲ್ಯಾಡಿಯ ಕೆಜೆಕೆ ಟವರ್ಸ್ ನಲ್ಲಿರುವ ಜಗದಾಂಬಾ ಏಜೆನ್ಸಿಸ್ ಎಲೆಕ್ಟಿಕಲ್ ಅಂಡ್ ಪ್ಲಂಬಿಂಗ್ ಹಾರ್ಡವೇರ್ ಮಳಿಗೆಯಲ್ಲಿ ಆ. 17ರಂದು ರಾತ್ರಿ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿದ ಘಟನೆ ವರದಿಯಾಗಿದೆ. ಮನೋಹರ್ ಸಿಂಗ್ ಎಂಬವರ ಅಂಗಡಿಯಲ್ಲಿ ಸುಮಾರು 2ಲಕ್ಷ ಮೌಲ್ಯದ ಹಣ ಹಾಗೂ ಅಂದಾಜು 15 ಲಕ್ಷದ ವಸ್ತುಗಳು ಕಳವಾಗಿರುವ ಬಗ್ಗೆ ಶಂಕಿಸಲಾಗಿದೆ. ಅಂಗಡಿಯಲ್ಲಿ ಅಳವಡಿಸಿದ ಸಿಸಿ ಕ್ಯಾಮೆರಾದ ಡಿವಿಯರ್ ಬಾಕ್ಸ್ ಅನ್ನು ಕಳ್ಳರು ತೆಗೆದುಕೊಂಡು ಹೋಗಿದ್ದಾರೆ ಎಂಬ ಬಗ್ಗೆ ತಿಳಿದು

ಕಡಬ: ನೆಲ್ಯಾಡಿಯ ಹಾರ್ಡ್ ವೇರ್ ಮಳಿಗೆಯಲ್ಲಿ ದರೋಡೆ| ನಗದು, ಸ್ಟಾಕ್ ದೋಚಿದ ಕಳ್ಳರು Read More »