ಕರಾವಳಿ

ಮಂಗಳೂರು: ಮುಸ್ಲಿಂ ಯುವಕನ ಮೇಲೆ ತಲವಾರು ದಾಳಿ | ಹಿಂದೂ ಯುವಕರ ಬಂಧನ

ಸಮಗ್ರ ನ್ಯೂಸ್:ಅನ್ಯಕೋಮಿನ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿದ ಪ್ರಕರಣ ಆ.20 ರಂದು ನಡೆದಿದೆ. ಕೃತ್ಯ ನಡೆದ 24 ಗಂಟೆಯೊಳಗಡೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪಂಜಿಮೊಗರು ನಿವಾಸಿ ಚರಣ್ ರಾಜ್ (23), ಸುಮಂತ್‌ ಬರ್ಮನ್‌ (24), ಅವಿನಾಶ್ (24) ಬಂಧಿತರು ಆ ರೋಪಿಗಳ ಬಳಿಯಿಂದ ಕೃತ್ಯಕ್ಕೆ ಬಳಸಿದ ತಲವಾರು ಹಾಗೂ ದ್ವಿಚಕ್ರವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಹೊರವಲಯದ ಕಾವೂರು ಎಂ.ವಿ.ಶೆಟ್ಟಿ ಕಾಲೇಜು ಬಳಿ ಕೃತ್ಯ ನಡೆದಿತ್ತು. ಸ್ಕೂಟಿಯಲ್ಲಿ ಬಂದ ದುಷ್ಕರ್ಮಿಗಳ ತಂಡ ಅನ್ಯ

ಮಂಗಳೂರು: ಮುಸ್ಲಿಂ ಯುವಕನ ಮೇಲೆ ತಲವಾರು ದಾಳಿ | ಹಿಂದೂ ಯುವಕರ ಬಂಧನ Read More »

ಸುಳ್ಯ:ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ.ಜಾವಕಿ ವೆಂಕಟರಮಣ ಗೌಡರ 11ನೇ ಪುಣ್ಯಸ್ಮರಣೆ

ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ದಿ. ಡಾ ಕುರುಂಜಿ ವೆಂಕಟರಮಣ ಗೌಡರ ಧರ್ಮಪತ್ನಿ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ 11 ನೇ ಪುಣ್ಯಸ್ಮರಣೆ ಪ್ರಯುಕ್ತ ನುಡಿನಮನ ಕಾರ್ಯಕ್ರಮ ಆಗಸ್ಟ್ 22 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ.ಎಂ. ದಿ.ಜಾವಕಿ ವೆಂಕಟರಮಣ ಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಸುಳ್ಯ:ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ.ಜಾವಕಿ ವೆಂಕಟರಮಣ ಗೌಡರ 11ನೇ ಪುಣ್ಯಸ್ಮರಣೆ Read More »

ಧರ್ಮಸ್ಥಳ:ಸ್ನಾನಕ್ಕೆಂದು ಬಂದ ಮಹಿಳೆಯ ಜೊತೆ ಯುವಕನ ಅಸಭ್ಯ ವರ್ತನೆ

ಸಮಗ್ರ ನ್ಯೂಸ್: ಸ್ನಾನಕ್ಕೆ ತೆರಳಿದ್ದ ಮಹಿಳೆಯ ಜೊತೆ ಯುವಕನೋರ್ವ ಅಸಭ್ಯ ವರ್ತಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮನೋಜ್ ಓ.ಆರ್. ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಸ್ನಾನ ಮಾಡಲೆಂದು ಬಚ್ಚಲು ಮನೆಗೆ ಹೋದಾಗ ನೆರೆ ಮನೆಯ ಯುವಕ ಬಚ್ಚಲು ಮನೆಗೆ ಪ್ರವೇಶ ಮಾಡಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಮಹಿಳೆ ಜೋರಾಗಿ ಬೊಬ್ಬೆ ಹಾಕಿದಾಗ ಆರೋಪಿಯು ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಕೆ ನಡೆಸುತ್ತಿದ್ದಾರೆ.

ಧರ್ಮಸ್ಥಳ:ಸ್ನಾನಕ್ಕೆಂದು ಬಂದ ಮಹಿಳೆಯ ಜೊತೆ ಯುವಕನ ಅಸಭ್ಯ ವರ್ತನೆ Read More »

ಉಪ್ಪಿನಂಗಡಿ: ಅನಾರೋಗ್ಯದಿಂದ ವಿದ್ಯಾರ್ಥಿ ಮೃತ್ಯು

ಸಮಗ್ರ ನ್ಯೂಸ್: ಉಪ್ಪಿನಂಗಡಿ ಸಮೀಪದ ಪೆದಮಲೆಯ ವಿದ್ಯಾರ್ಥಿಯೋರ್ವ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟ ಘಟನೆ ಆ. 21ರಂದು ರಾತ್ರಿ ವರದಿಯಾಗಿದೆ. ಪೆದಮಲೆ ನಿವಾಸಿ ಸಮದ್ ಹಾಜಿ ರವರ ಪುತ್ರ ಅಹ್ಮದ್ ಸಹದ್(15) ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್ ನ SSLC ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸಹದ್ ಕಳೆದ ಹಲವು ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಳಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಾಲಾ ಚಟುವಟಿಕೆಗಳಲ್ಲಿ ಬಹಳ ಚುರುಕಿನ ಮತ್ತು ಪ್ರತಿಭಾವಂತ ವಿದ್ಯಾರ್ಥಿಯನ್ನು ಕಳೆದುಕೊಂಡಂತಾಗಿದೆ. ಇನ್ನು ಸಂತಾಪ ಸೂಚಕವಾಗಿ

ಉಪ್ಪಿನಂಗಡಿ: ಅನಾರೋಗ್ಯದಿಂದ ವಿದ್ಯಾರ್ಥಿ ಮೃತ್ಯು Read More »

ಸುಳ್ಯ: ತಮಿಳುನಾಡು ಮೂಲದ ದಂಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ತಮಿಳುನಾಡು ಮೂಲದ ರಬ್ಬರ್ ಕಾರ್ಮಿಕ ದಂಪತಿ ತಾಲೂಕಿನ ದೇವಚಳ್ಳ ಗ್ರಾಮದ ಎಲಿಮಲೆಯ‌ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ವರದಿಯಾಗಿದೆ. ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ‌ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ. ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು, ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಇಬ್ಬರು ಪುತ್ರಿಯರು,

ಸುಳ್ಯ: ತಮಿಳುನಾಡು ಮೂಲದ ದಂಪತಿ ಆತ್ಮಹತ್ಯೆ Read More »

ಮಂಗಳೂರು: ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಯ ಬಂಧನ

ಸಮಗ್ರ ನ್ಯೂಸ್: ತಾನು ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ವಿದ್ಯಾರ್ಥಿ ಬೆನೆಡಿಕ್ಟ್ ಸಾಬು (22) ಬಂಧಿತ. ಈತ ನಗರದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ವಿಧ್ಯಾರ್ಥಿ. ಆರೋಪಿಯಿಂದ RAW, ಕೇರಳ ಸ್ಟೇಟ್ ಪೊಲೀಸ್ ಮತ್ತು ಅಗ್ರಿಕಲ್ಚರ್ ಡಿಪಾರ್ಟ್ಮೆಂಟ್ ಅಂಡ್ ಫಾರ್ಮರ್ಸ್ ವೆಲ್ಫೇರ್ ಡಿಪಾರ್ಟ್ಮೆಂಟ್ ಕೇರಳ ಹೆಸರಿನಲ್ಲಿ ನಕಲಿ ಐಡಿಗಳನ್ನು ಹೊಂದಿರುವುದು ಪತ್ತೆಯಾಗಿದೆ. ಇದಲ್ಲದೆ, ಪಿಎಸ್ಐ ಸಮವಸ್ತ್ರ, ಪೊಲೀಸ್ ಲೋಗೊ, ಮೆಡಲ್, ಬೆಲ್ಟ್, ಕ್ಯಾಪ್, ಒಂದು ಲ್ಯಾಪ್‌ಟಾಪ್, ಎರಡು ಮೊಬೈಲ್ ಸೆಟ್

ಮಂಗಳೂರು: ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಯ ಬಂಧನ Read More »

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ| ಇಬ್ಬರು ಆರೋಪಿಗಳಿಗೆ ಜಾಮೀನು

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಜನರನ್ನು ಬೆಚ್ಚಿ ಬೀಳಿಸಿದ್ದ ಸುರತ್ಕಲ್ ನ ಮಂಗಳ ಪೇಟೆ ನಿವಾಸಿ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾದ ಬಗ್ಗೆ ವರದಿಯಾಗಿದೆ. ಕೊಲೆ ಪ್ರಕರಣದ ಏಳು ಮಂದಿ ಆರೋಪಿಗಳಲ್ಲಿ ಇಬ್ಬರಾದ ಅಜಿತ್ ಕ್ರಾಸ್ತಾ ಮತ್ತು ಶ್ರೀನಿವಾಸ್ ಗೆ ಜಾಮೀನು ನೀಡಲಾಗಿದೆ. ಕಳೆದ ವರ್ಷ ಜುಲೈ 28 ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್ ನಲ್ಲಿ ಫಾಝಿಲ್ ನ ಬರ್ಬರ ಹತ್ಯೆ ನಡೆದಿತ್ತು.

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ| ಇಬ್ಬರು ಆರೋಪಿಗಳಿಗೆ ಜಾಮೀನು Read More »

ದಿ. ಸೌಜನ್ಯ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಭೇಟಿ| ಘಟನೆಯ ಸಂಪೂರ್ಣ ಮಾಹಿತಿ ಪಡಕೊಂಡ ನಾಗಣ್ಣ

ಸಮಗ್ರ ನ್ಯೂಸ್: ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಧರ್ಮಸ್ಥಳದ ಪಾಂಗಾಳ ನಿವಾಸಿ ಸೌಜನ್ಯ ಮನೆಗೆ ಹಾಗೂ ಘಟನಾ ಸ್ಥಳಕ್ಕೆ ಆಗಸ್ಟ್ 20 ರಂದು ಸಂಜೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷರಾದ ನಾಗಣ್ಣ ಗೌಡ ಭೇಟಿ ನೀಡಿದರು. ಮೊದಲು ಕೊಲೆಯಾಗಿ ಪತ್ತೆಯಾದ ನೇತ್ರಾವತಿ ಮಣ್ಣಸಂಕ ಪ್ರದೇಶಕ್ಕೆ ಭೇಟಿ ನೀಡಿ ಧರ್ಮಸ್ಥಳ ಪೊಲೀಸರಿಂದ ಮಾಹಿತಿ ಪಡೆದುಕೊಂಡರು. ನಂತರ ಸೌಜನ್ಯಳ ಪಾಂಗಾಳ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ನೀಡಿ ಬಳಿಕ ಘಟನೆಗಳ ಬಗ್ಗೆ ಮಾತುಕತೆ ನಡೆಸಿದರು. ನಾಗಣ್ಣ

ದಿ. ಸೌಜನ್ಯ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಭೇಟಿ| ಘಟನೆಯ ಸಂಪೂರ್ಣ ಮಾಹಿತಿ ಪಡಕೊಂಡ ನಾಗಣ್ಣ Read More »

ಮಂಗಳೂರು: ಲಾರಿ-ಬೈಕ್ ನಡುವೆ ಭೀಕರ ಅಪಘಾತ|ಓರ್ವ ಸ್ಥಳದಲ್ಲೇ ಮೃತ

ಸಮಗ್ರ ನ್ಯೂಸ್: ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಆ .21 ರಂದು ಪಂಪ್ ವೆಲ್ ನಲ್ಲಿ ನಡೆದಿದೆ. ಬೈಕ್ ನಲ್ಲಿ ಯುವಕರು ವೇಗವಾಗಿ ರಾಂಗ್ ಸೈಡ್ ಬಂದಿರುವುದು, ಅಲ್ಲದೆ ಈ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.

ಮಂಗಳೂರು: ಲಾರಿ-ಬೈಕ್ ನಡುವೆ ಭೀಕರ ಅಪಘಾತ|ಓರ್ವ ಸ್ಥಳದಲ್ಲೇ ಮೃತ Read More »

ನಾಗ ನಿಲೆ -ನಾಗ ಬನ ಒರಿಪಾಲೆ

ಸಮಗ್ರ ನ್ಯೂಸ್:*“ತೆರಿಯೊಡು… ತೆರಿಯೊಡು… ಸತ್ಯದ ಮುದೆಲ್ ನ್ ತೆರಿಯೊಡು… ನಾಗ ನಿಲೆ ಜಾಗೆದ ಕಲೆ… ಒರಿಯೆರೆ ಕೊರುವೆರ್ ನಾಗತಂಬಿಲ”*  ಕುಳಾಯಿ ಮಾಧವ ಭಂಡಾರಿಲೆನ ನಾಗತಂಬಿಲ ಯಕ್ಷಗಾನದ ಪದೋ ಇನಿತ ದಿನೊ ನೆನಪು ಬರ್ಪುಂಡು. ಪರ್ಬದೈಟ್ ವಿಶೇಷವಾಯಿನ ಪರ್ಬ ನಾಗರ ಪಂಚೆಮಿ. ಉಂದು ತುಳುನಾಡ್ ದ ಸುರುತ ಪರ್ಬಲಾ ಆದುಂಡು. ನಾಗದೇವೆರೆಗ್ ಪೂಜೆ, ತನು ಪಾಡುನ (ಪೇರ್ ಮೈಪುನ)ಪರ್ಬ. ತುಳುನಾಡ್ದಕ್ಲೆಗ್ ಈ ನಾಗದೇವೆರ್ ಮಸ್ತ್ ನಂಬೊಲಿಕೆದ ದೇವೆರ್.ಮೂಲು ಒಂಜೊಂಜಿ ಕುಟುಂಬಗ್ ಒಂಜೊಂಜಿ ಬನ ಉಪ್ಪುಂಡು. ಆನಿ ಮಾತೆರ್ಲ ಸೇರ್ದ್

ನಾಗ ನಿಲೆ -ನಾಗ ಬನ ಒರಿಪಾಲೆ Read More »