ಕರಾವಳಿ

ಬಂಟ್ವಾಳ: ಹೃದಯಾಘಾತದಿಂದ ಪೆಟ್ರೋಲ್ ಬಂಕ್ ಮ್ಯಾನೆಜರ್ ಮೃತ್ಯು

ಸಮಗ್ರ ನ್ಯೂಸ್: ಹೃದಯಾಘಾತದಿಂದ ಬಿಸಿರೋಡಿನ ಪೆಟ್ರೋಲ್ ಬಂಕ್ ಮ್ಯಾನೇಜರ್ ಸಾವನಪ್ಪಿರುವ ಘಟನೆ ನಡೆದಿದೆ. ‌ ಮೃತರನ್ನು ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) ಎಂದು ಗುರುತಿಸಲಾಗಿದೆ.ಪುರುಷೋತ್ತಮ ಅವರು ಕೃಷಿಕನಾಗಿದ್ದುಕೊಂಡು ಬಿಸಿರೋಡಿನ ಸುತ್ತಮುತ್ತಲಿನ ಜನರ ಅಚ್ಚುಮೆಚ್ಚಿನ ಪುರುಷಣ್ಣ ಎಂದೇ ಹೆಸರುವಾಸಿಯಾಗಿ ಸಾಮಾಜಿಕ ಸೇವೆಯ ಮೂಲಕ ಚಿರಪರಿಚಿತರಾಗಿದ್ದರು.ನೇರ ನಡೆ ನುಡಿಯ ವ್ಯಕ್ತಿಯಾಗಿದ್ದ ಇವರು ಬಿಸಿರೋಡಿನ ಗುರುಕೃಪ ಪೆಟ್ರೋಲ್ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ಸುಮಾರು ಒಂದು ಗಂಟೆ ವೇಳೆ […]

ಬಂಟ್ವಾಳ: ಹೃದಯಾಘಾತದಿಂದ ಪೆಟ್ರೋಲ್ ಬಂಕ್ ಮ್ಯಾನೆಜರ್ ಮೃತ್ಯು Read More »

ವಿಟ್ಲ: ‌ಮುಂಗುಸಿ ಅಡ್ಡ ಬಂದು ರಿಕ್ಷಾ ಪಲ್ಟಿ

ಸಮಗ್ರ ನ್ಯೂಸ್: ಮುಂಗುಸಿ ಅಡ್ಡ ಬಂದು ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಮಂಗಲಪದವು ನಿವಾಸಿ ಆಟೋ ಚಾಲಕ ಇಸ್ಮಾಯಿಲ್ (53) ಗಾಯಾಳು. ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸೇತುವೆ ಬದಿಯಲ್ಲಿ ರಸ್ತೆ ದಾಟುತ್ತಿದ್ದ ಮುಂಗುಸಿಯೊಂದು ಅಡ್ಡಬಂದಿದೆ. ಮುಂಗುಸಿಯ ಪ್ರಾಣ ರಕ್ಷಣೆಗಾಗಿ ಚಾಲಕ ಹಠಾತ್ ಬ್ರೇಕ್ ಹಾಕುತ್ತಿದ್ದಂತೆ ನಿಯಂತ್ರಣ ತಪ್ಪಿದ ಆಟೋ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಬಲವಾಗಿ ಅಪ್ಪಳಿಸಿ ಜಖಂಗೊಂಡಿದ್ದು

ವಿಟ್ಲ: ‌ಮುಂಗುಸಿ ಅಡ್ಡ ಬಂದು ರಿಕ್ಷಾ ಪಲ್ಟಿ Read More »

ಸುಳ್ಯ ತಾಲೂಕು ಮಟ್ಟದ ಚೆನ್ನೆಮಣೆ ಸ್ಪರ್ಧೆ|ಚೆನ್ನೆಮಣೆ ಬಗ್ಗೆ ಅರಿವು ಅಗತ್ಯ; ತೀರ್ಥರಾಮ

ಸಮಗ್ರ ನ್ಯೂಸ್:ತುಳುನಾಡಿನ ಜಾನಪದ ಕ್ರೀಡೆಗಳಲ್ಲೊಂದಾದ ಚೆನ್ನೆಮಣೆ ಆಟ ಇಂದು ನಶಿಸಿ ಹೋಗುವ ಹಂತದಲ್ಲಿದೆ. ಚೆನ್ನೆಮಣೆ ಆಟದ ಬಗ್ಗೆ ಹಿರಿಯರು, ಪೋಷಕರು ಇಂದಿನ ಮಕ್ಕಳಿಗೆ ತಿಳಿಸುವ ಜೊತೆಗೆ ಆಟವನ್ನು ಕಲಿಸುವ ಮೂಲಕ ಚೆನ್ನೆಮಣೆ ಆಟದ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ ಎಂದು ಸರಕಾರಿ ನೌಕರರ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ಹೇಳಿದರು. ಅವರು ಶನಿವಾರ ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸುಳ್ಯ ತಾಲೂಕು ಶಾಲಾ ಶಿಕ್ಷಣ ಇಲಾಖೆ, ಸಿ.ಸಿ.ಆರ್.ಟಿ. ಗ್ರೂಪ್ ಸುಳ್ಯ ಮತ್ತು ದುಗ್ಗಲಡ್ಕ ಸರಕಾರಿ

ಸುಳ್ಯ ತಾಲೂಕು ಮಟ್ಟದ ಚೆನ್ನೆಮಣೆ ಸ್ಪರ್ಧೆ|ಚೆನ್ನೆಮಣೆ ಬಗ್ಗೆ ಅರಿವು ಅಗತ್ಯ; ತೀರ್ಥರಾಮ Read More »

ಸುಳ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಐವರ ವಿರುದ್ಧ ದೂರು; ಓರ್ವ ಅರೆಸ್ಟ್

ಸಮಗ್ರ ನ್ಯೂಸ್: ತಡರಾತ್ರಿ ಸುಳ್ಯ ತಾಲೂಕಿನ ಅರಂತೋಡು ಸಮೀಪ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿರುವ ಯುವಕ ಸುಳ್ಯ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳ ದೂರು ನೀಡಿದ್ದು, ಓರ್ವ ಆರೋಪಿಯ ಬಂಧನವಾಗಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು ಯುವಕ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅರ್ಜುನ್ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಈ ವಿಚಾರ ತಿಳಿದ ಸುಳ್ಯದ ಬಿಜೆಪಿ ಮುಖಂಡರು ಪೊಲೀಸ್ ಠಾಣೆಗೆ ತೆರಳಿದ್ದರು. ಪುತ್ತೂರಿನಿಂದ ಅರುಣ್ ಕುಮಾರ್ ಪುತ್ತಿಲ ಕೂಡಾ ಆಗಮಿಸಿದ್ದರು. ಹಲವು

ಸುಳ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಐವರ ವಿರುದ್ಧ ದೂರು; ಓರ್ವ ಅರೆಸ್ಟ್ Read More »

ಸುಳ್ಯ: ನೈತಿಕ ಪೊಲೀಸ್‌ಗಿರಿ ಪ್ರಕರಣ| ಪೊಲೀಸ್‌ ಠಾಣೆಗೆ ಅರುಣ್‌ ಕುಮಾರ್‌ ಪುತ್ತಿಲ ಭೇಟಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ(sullia) ತೊಡಿಕಾನದಲ್ಲಿ ಅನ್ಯಕೋಮಿನ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಸುಳ್ಯ ಪೊಲೀಸ್‌ ಠಾಣೆಗೆ ಅರುಣ್‌ ಕುಮಾರ್‌ ಪುತ್ತಿಲ (Arun kumar puttila) ಭೇಟಿ ನೀಡಿದ್ದಾರೆ. ಘಟನೆಯ ವಿವರ: ಸುಳ್ಯ ತಾಲೂಕಿ‌ನ ಅರಂತೋಡು(Aranthodu) ಕಡೆ ಟ್ಯಾಪಿಂಗ್ ಕೆಲಸ ವಹಿಸಿಕೊಂಡು ಮಾಡುತ್ತಿದ್ದ ಅನ್ಯಕೋಮಿನ ವ್ಯಕ್ತಿ ಮಹಿಳೆಯೊಬ್ಬರನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆ ಎಂಬ ಅನುಮಾನದಿಂದ ಕೆಲ ಯುವಕರು ಕಾರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ಆ.12ರ ಸಂಜೆ ಆತ ಮಹಿಳೆಯನ್ನು ಸುಳ್ಯಕ್ಕೆ ಬಿಟ್ಟು ತೊಡಿಕಾನ ಕಡೆಗೆ ಬರುತ್ತಿದ್ದಾನೆಂಬ

ಸುಳ್ಯ: ನೈತಿಕ ಪೊಲೀಸ್‌ಗಿರಿ ಪ್ರಕರಣ| ಪೊಲೀಸ್‌ ಠಾಣೆಗೆ ಅರುಣ್‌ ಕುಮಾರ್‌ ಪುತ್ತಿಲ ಭೇಟಿ Read More »

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಲ್ಲಿ ಅನ್ಯಕೋಮಿನ ಕಾರು ಚಾಲಕನ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಮಹಿಳೆಯನ್ನು ತನ್ನ ಕಾರಲ್ಲಿ ಕರೆದೊಯ್ಯುತ್ತಿದ್ದ ಎಂಬ ಕಾರಣಕ್ಕೆ ಕಾರಲ್ಲಿ ಹೋಗುತ್ತಿದ್ದ ಅನ್ಯಕೋಮಿನ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನದಿಂದ ವರದಿಯಾಗಿದೆ. ಸದ್ಯ ಸುಳ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ತಾಲೂಕಿ‌ನ ಅರಂತೋಡು ಕಡೆ ಟ್ಯಾಪಿಂಗ್ ಕೆಲಸ ವಹಿಸಿಕೊಂಡು ಮಾಡುತ್ತಿದ್ದ ಅನ್ಯಕೋಮಿನ ವ್ಯಕ್ತಿ ಮಹಿಳೆಯೊಬ್ಬರನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆ ಎಂಬ ಅನುಮಾನದಿಂದ ಕೆಲ ಯುವಕರು ಕಾರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ಇಂದು ಸಂಜೆ ಆತ ಮಹಿಳೆಯನ್ನು ಸುಳ್ಯಕ್ಕೆ

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಲ್ಲಿ ಅನ್ಯಕೋಮಿನ ಕಾರು ಚಾಲಕನ ಮೇಲೆ ಹಲ್ಲೆ Read More »

ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆ ಕೊಡಗಿನ ಮತ್ತಿಗೋಡು ಶಿಬಿರದಲ್ಲಿ ಮೃತ್ಯು

ಸಮಗ್ರ ನ್ಯೂಸ್: ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದ ಆನೆಯನ್ನು ಕಡಬ ತಾಲೂಕಿನ ಕೊಂಬಾರು ಸಮೀಪ ಸೆರೆ ಹಿಡಿದಿದ್ದ ಕಾಡಾನೆಯೊಂದು ಕೊಡಗಿನ ಮತ್ತಿಗೋಡು ಆನೆ ಶಿಬಿರದಲ್ಲಿ ಮೃತಪಟ್ಟಿದೆ ಎಂದು ಆ. 11ರಂದು ವರದಿಯಾಗಿದೆ. ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆಯನ್ನು ಕೊಡಗಿನ ಮತ್ತಿಗೋಡು ಆನೆ ಶಿಬಿರಕ್ಕೆ ಸೇರಿಸಲಾಗಿತ್ತು. ಆದರೆ ಆ.11ರಂದು ಈ ಆನೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಅದರ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲದಲ್ಲಿ ಫೆಬ್ರವರಿ

ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆ ಕೊಡಗಿನ ಮತ್ತಿಗೋಡು ಶಿಬಿರದಲ್ಲಿ ಮೃತ್ಯು Read More »

ಸೌಜನ್ಯ ಕುಟುಂಬ ಹಾಗೂ ಮಹೇಶ್ ಶೆಟ್ಟಿ ಮನೆಗೆ ಭೇಟಿ ನೀಡಿದ ಪ್ರಮೋದ್ ಮುತಾಲಿಕ್| ಹೋರಾಟ ಇನ್ನಷ್ಟು ಪ್ರಬಲ ಸಾಧ್ಯತೆ

ಸಮಗ್ರ ನ್ಯೂಸ್: ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ಬೆನ್ನಲ್ಲೇ ಇಂದು (ಆ.12) ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಧರ್ಮಸ್ಥಳ ಸಮೀಪ ಪಾಂಗಾಳದ ಸೌಜನ್ಯ ಮನೆ ಹಾಗೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಭೇಟಿ ನೀಡಿದ್ದಾರೆ. ಸೌಜನ್ಯ ಪ್ರಕರಣದ ಈವರೆಗಿನ ಹೋರಾಟದ ಬಗ್ಗೆ ಜೊತೆಗೆ , ಮುಂದೆ ಯಾವ ರೀತಿಯಾಗಿ ಹೋರಾಟ ನಡೆಯಲಿದೆ ಎಂಬ ಕುರಿತು ಮಾಹಿತಿ ಪಡೆದಿದ್ದಲ್ಲದೆ ಈ ನ್ಯಾಯದ ಹೋರಾಟಕ್ಕೆ

ಸೌಜನ್ಯ ಕುಟುಂಬ ಹಾಗೂ ಮಹೇಶ್ ಶೆಟ್ಟಿ ಮನೆಗೆ ಭೇಟಿ ನೀಡಿದ ಪ್ರಮೋದ್ ಮುತಾಲಿಕ್| ಹೋರಾಟ ಇನ್ನಷ್ಟು ಪ್ರಬಲ ಸಾಧ್ಯತೆ Read More »

ಮಾಜಿ ಸಿಎಂ ಡಿವಿಎಸ್, ಸಂಸದ ನಳಿನ್ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣ| ದೌರ್ಜನ್ಯದ ಹಿಂದಿನ ರೂವಾರಿಗಳ ಹೆಸರನ್ನು ಇನ್ನೂ ಬಹಿರಂಗಗೊಳಿಸದ ಅಶೋಕ್ ರೈ

ಸಮಗ್ರ ನ್ಯೂಸ್: ಕಳೆದ ಬಾರಿಯ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಬಿಜೆಪಿ ಸೋಲಿಗೆ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ರಾಜಕಾರಣವೇ ಕಾರಣವೆಂದು ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಿಎಂ ಡಿ.ವಿ ಸದಾನಂದ ಗೌಡರ ಮೇಲೆ ಆರೋಪಿಸಿ ಅವರ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಯುವಕರ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆಸಲಾಗಿತ್ತು. ಸದ್ಯ ಪ್ರಕರಣ ನ್ಯಾಯಾಲಯದಲ್ಲಿ ಇದ್ದರೂ ಇದರ ಹಿಂದಿನ ಕಾಣದ ಕೈಗಳ ಹೆಸರು ವಾರದೊಳಗೆ ಬಹಿರಂಗ ಪಡಿಸುತ್ತೇನೆ ಎಂದಿರುವ ಶಾಸಕ ಅಶೋಕ್ ರೈ ಸೈಲೆಂಟ್

ಮಾಜಿ ಸಿಎಂ ಡಿವಿಎಸ್, ಸಂಸದ ನಳಿನ್ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣ| ದೌರ್ಜನ್ಯದ ಹಿಂದಿನ ರೂವಾರಿಗಳ ಹೆಸರನ್ನು ಇನ್ನೂ ಬಹಿರಂಗಗೊಳಿಸದ ಅಶೋಕ್ ರೈ Read More »

ಸೌಜನ್ಯ ಪ್ರಕರಣ ಮರುತನಿಖೆಗೆ ಆಗ್ರಹಿಸುವೆ – ಅಶೋಕ್ ಕುಮಾರ್ ರೈ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ಜನರಿಗೆ ಸಂಶಯ ಮತ್ತು ಗೊಂದಲ ಇದೆ. ಈ ಕಾರಣದಿಂದ ಪ್ರಕರಣದ ಮರು ತನಿಖೆಯಾಗಬೇಕಿದ್ದು, ಈ ನಿಟ್ಟಿನಲ್ಲಿ ಪ್ರಕರಣದ ಮರು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಅಶೋಕ್‌ಕುಮಾರ್‌ ರೈ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ನೈಜ ಆರೋಪಿಗಳ ಬಂಧನ ಆಗಬೇಕು. ಆ ಮೂಲಕ ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸಬಾರದು. ನಿಷ್ಪಕ್ಷಪಾತ ತನಿಖೆ ನಡೆಸಿ

ಸೌಜನ್ಯ ಪ್ರಕರಣ ಮರುತನಿಖೆಗೆ ಆಗ್ರಹಿಸುವೆ – ಅಶೋಕ್ ಕುಮಾರ್ ರೈ Read More »