ಕರಾವಳಿ

ಕಡಬ:ನೂತನ ತಹಶೀಲ್ದಾರ್ ಆಗಿ ಪ್ರಭಾಕರ್ ಖಜೂರೆ

ಸಮಗ್ರ ನ್ಯೂಸ್:ಕಡಬ ತಾಲೂಕು ಗ್ರೇಡ್ 1 ತಹಶೀಲ್ದಾರ್ ಆಗಿ ಉಳ್ಳಾಲ ತಹಶೀಲ್ದಾರ್ ಪ್ರಭಾಕರ್ ಖಜೂರೆ ಅವರನ್ನು ನೇಮಕ ಮಾಡಿ ಸರಕಾರ ಇಂದು ಆದೇಶ ಹೊರಡಿಸಿದೆ. ಕಡಬ ತಹಶೀಲ್ದಾರ್ ಆಗಿದ್ದ ರಮೇಶ್ ಬಾಬು ಅವರನ್ನು ಇತ್ತೀಚೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಸುಳ್ಯ ತಹಶೀಲ್ದಾರ್ ಮಂಜುನಾಥ್ ಪ್ರಭಾರ ತಹಶೀಲ್ದಾರ್ ಆಗಿದ್ದರು. ಇದೀಗ ನೂತನ ತಹಶೀಲ್ದಾರ್ ನೇಮಕ ಮಾಡಲಾಗಿದೆ.

ಕಡಬ:ನೂತನ ತಹಶೀಲ್ದಾರ್ ಆಗಿ ಪ್ರಭಾಕರ್ ಖಜೂರೆ Read More »

ಕಡಬ:ಎಂಡೋಪಾಲನಾ ಕೇಂದ್ರಕ್ಕೆ ಮಾನವಹಕ್ಕುಗಳ ಅಧ್ಯಕ್ಷ ಡಾ. ಯೋಗೇಶ್ ದುಬೆ ಭೇಟಿ.

ಸಮಗ್ರ ನ್ಯೂಸ್: ಕಡಬ ತಾಲೂಕು ಕೊಯಿಲ ಎಂಡೋಪಾಲನಾ ಕೇಂದ್ರಕ್ಕೆ ಮಾನವ ಹಕ್ಕುಗಳ ಅಧ್ಯಕ್ಷ ಡಾ.ಯೋಗೇಶ್ ದುಬೆ ಆ. 10ರಂದು ಭೇಟಿ ನೀಡಿ ಪರಿಶೀಲಿಸಿದರು. ದ.ಕ ಜಿಲ್ಲೆಯಲ್ಲಿರುವ ಎಂಡೋಪೀಡಿತರ ಬಗ್ಗೆ ಮತ್ತೆ ಅವರಿಗಿರುವ ಸೌಲಭ್ಯದ ಬಗ್ಗೆ ಪುತ್ತೂರು ತಾಲ್ಲೂಕಿನ ಅರೋಗ್ಯಧಿಕಾರಿ ಡಾ. ದೀಪಕ್ ರೈ. ಜಿಲ್ಲಾ ಮೆಡಿಕಲ್ ಆಫಿಸರ್ ಡಾ. ನವೀನ್ ಕುಲಾಲ್ ಮಾಹಿತಿ ನೀಡಿದರು. ಇತ್ತೀಚಿಗೆಷ್ಟೆ ಕೊಯಿಲದಲ್ಲಿದ್ದ ಹಳೆ ಕಟ್ಟಡ ದಿಂದ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಇರುವ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿತ್ತು. ಇಲ್ಲಿಯ ವೆವಸ್ಥೆ,

ಕಡಬ:ಎಂಡೋಪಾಲನಾ ಕೇಂದ್ರಕ್ಕೆ ಮಾನವಹಕ್ಕುಗಳ ಅಧ್ಯಕ್ಷ ಡಾ. ಯೋಗೇಶ್ ದುಬೆ ಭೇಟಿ. Read More »

ಪುತ್ತಿಲ ಪರಿವಾರದಲ್ಲಿ ಬಿರುಕು!? ರಾಜಕೀಯಕ್ಕಷ್ಟೇ ಸೀಮಿತವಾಯ್ತೇ ಹಿಂದುತ್ವ?

ಸಮಗ್ರ ನ್ಯೂಸ್: ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅರುಣ್ ಕುಮಾರ್ ಪುತ್ತಿಲ ಟೀಂ ನಲ್ಲಿ ಬಿರುಕು ಕಾಣಿಸಿಕೊಂಡಿಸಿರುವ ಲಕ್ಷಣಗಳು ಗೋಚರಿಸುತ್ತಿವೆ. ಹೌದು, ಕಳೆದ ಬಾರಿಯ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ‌ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಪುತ್ತಿಲ ಟಿಕೆಟ್ ಮಿಸ್ ಆದ ಬಳಿಕ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಪ್ರಬಲ‌ ಪೈಪೋಟಿ ನೀಡಿದ ಪುತ್ತಿಲ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪರನ್ನು ಮೂರನೇ ಸ್ಥಾನಕ್ಕೆ ತಳ್ಳುವಲ್ಲಿ ಯಶಸ್ವಿಯಾಗಿದ್ದರು. ಸ್ವಲ್ಪ ಅಂತರದಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿತ್ತು.

ಪುತ್ತಿಲ ಪರಿವಾರದಲ್ಲಿ ಬಿರುಕು!? ರಾಜಕೀಯಕ್ಕಷ್ಟೇ ಸೀಮಿತವಾಯ್ತೇ ಹಿಂದುತ್ವ? Read More »

ದುರ್ಬಲಗೊಂಡ ಮುಂಗಾರು| ಕರಾವಳಿಯಲ್ಲಿ ಕುಂಠಿತಗೊಂಡ ಮಳೆ| ವೈರಲ್ ಜ್ವರ ಜೋರು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದ ಕರ್ನಾಟಕ ಕರಾವಳಿ ಹಾಗೆಯೇ ಕೇರಳದ ಕನ್ನಡ ಕರಾವಳಿಯಾದ ಕಾಸರಗೋಡು ಜಿಲ್ಲೆ ಸೇರಿದಂತೆ ಕಡಲತೀರದಲ್ಲಿ ಬಿಸಿಲ ಝಳ ಗುರುವಾರವೂ ಜಾಸ್ತಿ ಕಂಡುಬಂದಿದ್ದು, ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ದಕ್ಷಿಣೋತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಇತ್ತು. ಕೆಲವೆಡೆ ಇಡೀ ದಿನ ಮಳೆ ಸುರಿಯಲಿಲ್ಲ. ಆಷಾಢ ಮಾಸದ ಬಿಸಿಲಿಗೆ ರೋಗರುಜಿನಗಳು ಜಾಸ್ತಿಯಾಗುತ್ತವೆ ಎಂಬ ಹೇಳಿಕೆಗೆ ಇಂಬು ನೀಡುವಂತೆ ವೈದ್ಯರ ಬಳಿ ಸಾಲುಗಟ್ಟಲೆ

ದುರ್ಬಲಗೊಂಡ ಮುಂಗಾರು| ಕರಾವಳಿಯಲ್ಲಿ ಕುಂಠಿತಗೊಂಡ ಮಳೆ| ವೈರಲ್ ಜ್ವರ ಜೋರು Read More »

ಕರಾವಳಿಯಲ್ಲಿ ಕಿಚ್ಚು ಹಬ್ಬಿಸಿದ ಸೌಜನ್ಯ ಪ್ರಕರಣ| ಇಂದಿನಿಂದ ಸಾಲು – ಸಾಲು ಪ್ರತಿಭಟನೆ

ಸಮಗ್ರ ನ್ಯೂಸ್: ಹನ್ನೊಂದು ವರ್ಷಗಳ ಹಿಂದೆ ಕಾಮುಕರ ಕೈಯಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಗೌಡ ಪ್ರಕರಣಕ್ಕೆ ಮರುಜೀವ ಬಂದಿದ್ದು, ನ್ಯಾಯಕ್ಕಾಗಿ ಮತ್ತೆ ಹೋರಾಟಗಳು ಉಗ್ರ ರೂಪ ಪಡೆದುಕೊಳ್ಳುತ್ತಿವೆ. ರಾಜ್ಯದಲ್ಲಿ ತೀವ್ರ ಸಂಚಲನ ಉಂಟು ಮಾಡುತ್ತಿರುವ ಈ ಪ್ರಕರಣ ಕರಾವಳಿಯಲ್ಲಿ ಕಿಚ್ಚು ಹಬ್ಬಿಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳ ಬಗ್ಗೆ ಮರುತನಿಖೆ ನಡೆಸಿ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡುವಂತೆ ಸೌಜನ್ಯ ಹೋರಾಟ ಸಮಿತಿ ಕರಾವಳಿಯ ವಿವಿಧೆಡೆ

ಕರಾವಳಿಯಲ್ಲಿ ಕಿಚ್ಚು ಹಬ್ಬಿಸಿದ ಸೌಜನ್ಯ ಪ್ರಕರಣ| ಇಂದಿನಿಂದ ಸಾಲು – ಸಾಲು ಪ್ರತಿಭಟನೆ Read More »

ಕಲ್ಲುಗುಂಡಿ: ಹಿಟ್ ಆ್ಯಂಡ್ ರನ್; ಪಾದಚಾರಿ ಗಂಭೀರ

ಸಮಗ್ರ ನ್ಯೂಸ್:ಪಾದಚಾರಿಗೆ ಸ್ಕೂಟಿ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ಆ. 10ರಂದು ನಡೆದಿದ್ದು, ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದಾಗಿ ತಿಳಿದುಬಂದಿದೆ. ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಕೆಲಸ ಮಾಡುವ ವಿಶ್ವನಾಥ್ ಎಂಬವರು ನಡೆದುಕೊಂಡು ಹೋಗುತ್ತಿರುವಾಗ ಹಿಂಬದಿಯಿಂದ ಬಂದ ಸ್ಕೂಟಿ ಗುದ್ದಿದ್ದು, ಅಪಘಾತದಿಂದ ವಿಶ್ವನಾಥ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸಂಪಾಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ, ಸುಳ್ಯಕ್ಕೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಲ್ಲುಗುಂಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾದ ಸ್ಕೂಟಿ

ಕಲ್ಲುಗುಂಡಿ: ಹಿಟ್ ಆ್ಯಂಡ್ ರನ್; ಪಾದಚಾರಿ ಗಂಭೀರ Read More »

ಬಿಜೆಪಿ ಬೆಂಬಲದಿಂದ ಗ್ರಾ.ಪಂ ಅಧ್ಯಕ್ಷ ಸ್ಥಾನ ಗೆದ್ದ ಎಸ್ಡಿಪಿಐ| ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ ಬಿಜೆಪಿಗರು!!

ಸಮಗ್ರ ನ್ಯೂಸ್: ಮಂಗಳೂರು ತಾಲೂಕಿನ ತಲಪಾಡಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಎಸ್‌ಡಿಪಿಐ ಬೆಂಬಲಿತ ಟಿ.ಇಸ್ಮಾಯಿಲ್‌ ಅಧ್ಯಕ್ಷರಾಗಿ, ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾದರು. ಬಿಜೆಪಿ ಬೆಂಬಲಿತರು ಎಸ್‌ಡಿಪಿಐ ಬೆಂಬಲಿತ ಸದಸ್ಯರನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸತ್ಯರಾಜ್‌ ಪರಾಭವಗೊಂಡರು. ಪಂಚಾಯಿತಿಯಲ್ಲಿ ಒಟ್ಟು 24 ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, ಒಬ್ಬರು ಕಾಂಗ್ರೆಸ್‌ ಹಾಗೂ 10 ಎಸ್‌ಡಿಪಿಐ ಬೆಂಬಲಿತರು ಇದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ವೈಭವ್ ವೈ.

ಬಿಜೆಪಿ ಬೆಂಬಲದಿಂದ ಗ್ರಾ.ಪಂ ಅಧ್ಯಕ್ಷ ಸ್ಥಾನ ಗೆದ್ದ ಎಸ್ಡಿಪಿಐ| ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ ಬಿಜೆಪಿಗರು!! Read More »

ಕಡಬ: ಗ್ರಾಮಸಭೆಯಲ್ಲಿ ಹೀಗಾ ಪ್ರಶ್ನೆ ಕೇಳೋದು!? ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸುತ್ತಾ ಕುಸಿದು ಬಿದ್ದ ವೈದ್ಯೆ!!

ಸಮಗ್ರ ನ್ಯೂಸ್: ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸುವ ವೇಳೆ ವೈದ್ಯಾಧಿಕಾರಿಯೊಬ್ಬರು ಕುಸಿದು ಬಿದ್ದು, ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮ ಸಭೆಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ದನ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿ ಡಾ.ಶಿಶಿರ ಅವರು ಇಲಾಖೆಯ ಮಾಹಿತಿ ನೀಡುತ್ತಿದ್ದರು. ಈ ವೇಳೆ ಗ್ರಾಮಸ್ಥ ಡೀಕಯ್ಯ ಪೂಜಾರಿ ಅವರು, ‘ಕಳೆದ ಏಪ್ರಿಲ್‌ನಲ್ಲಿ ಗೋಳಿತ್ತೊಟ್ಟು ಗ್ರಾಮದ ಮಮತಾ ಎಂಬ ವಿದ್ಯಾರ್ಥಿನಿ ಚಿಕಿತ್ಸೆಗಾಗಿ

ಕಡಬ: ಗ್ರಾಮಸಭೆಯಲ್ಲಿ ಹೀಗಾ ಪ್ರಶ್ನೆ ಕೇಳೋದು!? ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸುತ್ತಾ ಕುಸಿದು ಬಿದ್ದ ವೈದ್ಯೆ!! Read More »

ಮಂಗಳೂರು: ಮರ್ಯಾದೆ ನೀಡದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ ನೀಡಿದ ಶಾಸಕರು

ಸಮಗ್ರ ನ್ಯೂಸ್:‌ ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕೆಲ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದಿಲ್ಲ, ಅದೂ ಅಲ್ಲದೆ ಶಾಸಕರಿಗೆ ಅಧಿಕಾರಿಗಳು ಮರ್ಯಾದಿಯೇ ನೀಡುತ್ತಿಲ್ಲ ಈ ಕಾರಣ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆಯನ್ನು ಶಾಸಕರು ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಸಕರ ಹಕ್ಕುಗಳಿಗೆ‌ ಚ್ಯುತಿ ತರುವ ಘಟನೆಗಳು ನಡೆಯುತ್ತಿವೆ. ವಿರೋಧ ಪಕ್ಷದ ಶಾಸಕರನ್ನು ಅಧಿಕಾರಿಗಳ ಮೂಲಕ ದಮನಿಸುವ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಮುಂದಿನ ಮೂರು ದಿನಗಳ

ಮಂಗಳೂರು: ಮರ್ಯಾದೆ ನೀಡದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ ನೀಡಿದ ಶಾಸಕರು Read More »

ಸುಳ್ಯ: ಭುಗಿಲೆದ್ದ ಅಸಮಾಧಾನ| ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಹಾಜರಾಗದ ಸ್ವಪಕ್ಷೀಯ ಸದಸ್ಯರು!?

ಸಮಗ್ರ ಸುದ್ದಿ: ಪಂಚಾಯತ್ ನ ಸದಸ್ಯರ ನಡುವಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸ್ವಪಕ್ಷೀಯ ಸದಸ್ಯರೇ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಹಾಜರಾಗದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾ.ಪಂ ನಲ್ಲಿ ನಡೆದಿದೆ. ಗುತ್ತಿಗಾರು ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ(ಬಿ) ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪ.ಜಾತಿಗೆ ಮೀಸಲಾತಿ ನಿಗದಿಯಾಗಿ ಇಂದು(ಆ.10) ಚುನಾವಣೆ ನಡೆದಿದೆ. ಆದರೆ ಪಕ್ಷದೊಳಗಿನ ಅಸಮಾಧಾನದಿಂದ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಒಂದನೇ ವಾರ್ಡ್ ನ ನಾಲ್ಕೂ ಸದಸ್ಯರು ಗೈರಾಗಿದ್ದರು. ಇನ್ನು

ಸುಳ್ಯ: ಭುಗಿಲೆದ್ದ ಅಸಮಾಧಾನ| ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಹಾಜರಾಗದ ಸ್ವಪಕ್ಷೀಯ ಸದಸ್ಯರು!? Read More »