ಸೌಜನ್ಯ ಪ್ರಕರಣ ಮರುತನಿಖೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ, ಕಾನೂನಾತ್ಮಕವಾಗಿ ಮುಗಿದ ಅಧ್ಯಾಯ| ಸಂಚಲನ ಸೃಷ್ಟಿಸಿದ ಗೃಹಸಚಿವ ಪರಮೇಶ್ವರ್ ಹೇಳಿಕೆ
ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ಸಂಭವಿಸಿದ ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣವನ್ನು ಮರು ತನಿಖೆಗೊಳಪಡಿಸಲು ತೀವ್ರ ಹೋರಾಟ ನಡೆಯುತ್ತಿರುವಾಗಲೇ ಸರಕಾರ ಮರು ತನಿಖೆ ಅಸಾಧ್ಯ ಎಂದು ಹೇಳಿದೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಜಿ. ಪರಮೇಶ್ವರ, ಈ ಪ್ರಕರಣ ಕಾನೂನಾತ್ಮಕವಾಗಿ ಮುಗಿದು ಹೋಗಿದೆ. ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸೌಜನ್ಯಾ ಹತ್ಯೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ವಿವಿಧ ವೇದಿಕೆಗಳಲ್ಲಿ ಹರಡುತ್ತಿರುವ ಎಲ್ಲ










