ಕರಾವಳಿ

ಸುಳ್ಯ: ಚೆಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್: ದ. ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆಯ 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚದುರಂಗ ಪಂದ್ಯಾಟವು ಆ.3 ರಂದು ಕೆಪಿಎಸ್ ಬೆಳ್ಳಾರೆಯಲ್ಲಿ ನಡೆಯಿತು. ಪ್ರೌಢಶಾಲಾ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿನೋಬನಗರ ಇಲ್ಲಿಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಗೌರಿ ಕೊಯಿಂಗಾಜೆ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ವಿದ್ಯಾ ಮತ್ತು ಹರಿಪ್ರಸಾದ್ ಕೊಯಿಂಗಾಜೆ ಇವರ ಸುಪುತ್ರಿ. ತಂದೆಯೇ ಈಕೆಯ ಕೋಚ್ ಅನ್ನೋದು […]

ಸುಳ್ಯ: ಚೆಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಸುಳ್ಯ:ಎನ್ಎಂಸಿಯಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ಡಾ.ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ| ಕೆವಿಜಿ ಅವರ ಭಾವಚಿತ್ರಕ್ಕೆ ಕಾಲೇಜಿನ ಸಿಬ್ಬಂದಿಗಳಿಂದ ಪುಷ್ಪಾರ್ಚನೆ

ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿಸುಳ್ಯದ ಆಧುನಿಕ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಸ್ಥಾಪಕಾಧ್ಯಕ್ಷ ದಿ. ಡಾ.ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ. ಕೆವಿಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಆದರ್ಶ ಹಾಗೂ ಶಿಕ್ಷಣ ಸಂಸ್ಥೆಗಳನ್ನು ರೂಪಿಸಿದ ಬಗೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ., ನೆಹರೂ ಮೆಮೋರಿಯಲ್ ಪದವಿ

ಸುಳ್ಯ:ಎನ್ಎಂಸಿಯಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ಡಾ.ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ| ಕೆವಿಜಿ ಅವರ ಭಾವಚಿತ್ರಕ್ಕೆ ಕಾಲೇಜಿನ ಸಿಬ್ಬಂದಿಗಳಿಂದ ಪುಷ್ಪಾರ್ಚನೆ Read More »

ಸೌಜನ್ಯ ಅತ್ಯಾಚಾರ; ಕೊಲೆ ಪ್ರಕರಣ| ಸೌಜನ್ಯ ಪರ ಬ್ಯಾನರ್ ತೆರವಿಗೆ ಬೆಳ್ತಂಗಡಿ ತಾ.ಪಂ ಇಒ ಆದೇಶ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಮಣ್ಣಸಂಕ ಬಳಿ ಕಳೆದ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಈಗಲೂ ಬಿಸಿಬಿಸಿ ಚರ್ಚೆಯಲ್ಲಿದೆ. ಈ ಪ್ರಕರಣದ ಆರೋಪಿಗಳು ಯಾರು ಅನ್ನೋದನ್ನು ತನಿಖಾಧಿಕಾರಿಗಳಿಗೆ ಇಲ್ಲಿಯ ತನಕ ಪತ್ತೆ ಹಚ್ಚಲಾಗದಿದ್ದರೂ ಕೂಡ ಜನರ ಬಾಯಲ್ಲಿ ಅವರಿವರ ಹೆಸರು ಕಳೆದ 11 ವರ್ಷಗಳಿಂದಲೂ ಹರಿದಾಡುತ್ತಲೇ ಇದೆ. ಈ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ರಕ್ಷಣೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬರುತ್ತಿರುವ ಮಧ್ಯೆಯೇ ಇತ್ತೀಚೆಗೆ ಬಂಧಿತನಾಗಿದ್ದ ಸಂತೋಷ್ ರಾವ್ ಅವರನ್ನು

ಸೌಜನ್ಯ ಅತ್ಯಾಚಾರ; ಕೊಲೆ ಪ್ರಕರಣ| ಸೌಜನ್ಯ ಪರ ಬ್ಯಾನರ್ ತೆರವಿಗೆ ಬೆಳ್ತಂಗಡಿ ತಾ.ಪಂ ಇಒ ಆದೇಶ Read More »

ಸೌಜನ್ಯ ಕುಟುಂಬದ ಪರ ನಿಂತ ಕಾಂಗ್ರೆಸ್| ನ್ಯಾಯ ಕೇಳುವುದೂ ಧರ್ಮವೇ…ಎಂದು ಟ್ವೀಟ್

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಸೌಜನ್ಯ ಕುಟುಂಬಕ್ಕೆ ರಕ್ಷಣೆ ನೀಡುವುದಾಗಿ ಹೇಳಿಕೊಂಡಿದೆ. ‘ಸೌಜನ್ಯಾ ಕುಟುಂಬದ ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ. ಧರ್ಮವೆಂದರೆ ನ್ಯಾಯ, ನ್ಯಾಯವನ್ನು ಕೇಳುವುದು ಕೂಡ ಧರ್ಮವೇ. ಸೌಜನ್ಯಾ ಕುಟುಂಬದ ರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ. ಸಂತ್ರಸ್ತ ಕುಟುಂಬದ ಮೇಲಿನ ಹಲ್ಲೆ, ಬೆದರಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನೊಂದ ಕುಟುಂಬದ

ಸೌಜನ್ಯ ಕುಟುಂಬದ ಪರ ನಿಂತ ಕಾಂಗ್ರೆಸ್| ನ್ಯಾಯ ಕೇಳುವುದೂ ಧರ್ಮವೇ…ಎಂದು ಟ್ವೀಟ್ Read More »

ಪುತ್ತೂರು:ಸೈನಿಕ ಕಲ್ಯಾಣ ನಿಧಿ ಕಾರ್ಯಕ್ರಮ

ಸಮಗ್ರ ನ್ಯೂಸ್: ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ಇದರ ವತಿಯಿಂದ ಅರ್ಹ ಮೂರು ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ಕಾರ್ಯಕ್ರಮವು ಆ.5 ರಂದು ಪುತ್ತೂರಿನ ಸೈನಿಕ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್, ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಬಾಳಾ ಹಾಗೂ ಪುತ್ತೂರು ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ರಾಷ್ಟ್ರ ಭಕ್ತರು ಉಪಸ್ಥಿತರಿದ್ದರು.

ಪುತ್ತೂರು:ಸೈನಿಕ ಕಲ್ಯಾಣ ನಿಧಿ ಕಾರ್ಯಕ್ರಮ Read More »

ಸಂಪಾಜೆ: ನಾಯಿ ನುಂಗಿದ ಹೆಬ್ಬಾವಿನ ರಕ್ಷಣೆ

ಸಮಗ್ರ ನ್ಯೂಸ್:‌ ನಾಯಿ ನುಂಗಿದ ಬೃಹತ್‌ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಿ ಪಟ್ಟಿಘಾಟ್ ಮೀಸಲು ಅರಣ್ಯಕ್ಕೆ ಬಿಡಲಾಯಿಇತು. ಸಂಪಾಜೆ ವಲಯದ ದಬ್ಬಡ್ಕ ಗ್ರಾಮದ ಪನೇಡ್ಕ ಸುಧಾ ಎಂಬುವವರ ಜಾಗದಲ್ಲಿ ಇದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಕೃಷ್ಣ ಕಡೆಪಾಲ ಮತ್ತು ನಾರಾಯಣ ಕಡೆಪಾಲ ಇವರ ನೆರವಿನಿಂದ ಸೆರೆಹಿಡಿದು ಪಟ್ಟಿಘಾಟ್ ಮಿಸಲು ಅರಣ್ಯಕ್ಕೆ ಬಿಡಲಾಯಿತು. ಕಾರ್ಯಾಚರಣೆಯಲ್ಲಿ ದಬ್ಬಡ್ಕ ಉಪ ವಲಯದ ಸಿಬ್ಬಂದಿ ಪಾಲ್ಗೊಂಡರು.

ಸಂಪಾಜೆ: ನಾಯಿ ನುಂಗಿದ ಹೆಬ್ಬಾವಿನ ರಕ್ಷಣೆ Read More »

ಯಕ್ಷ ಗುರು ವಿಶ್ವ ವಿನೋದ ಬನಾರಿ, ಕುಮಾರ ಸುಬ್ರಹ್ಮಣ್ಯರಿಗೆವನಜ ರಂಗಮನೆ ಪ್ರಶಸ್ತಿ 2022-23

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ ವತಿಯಿಂದರಂಗಮನೆಯ ಅಧ್ಯಕ್ಷ ಡಾ|| ಜೀವನ್ ರಾಂ ಸುಳ್ಯರವರ ಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ಇವರ ನೆನಪಿನಲ್ಲಿ ವರ್ಷಂಪ್ರತಿ ಕೊಡಮಾಡುವ ‘ವನಜ ರಂಗಮನೆ ಪ್ರಶಸ್ತಿ’ಗೆ 2022 ನೇ ಸಾಲಿನಲ್ಲಿ ಯಕ್ಷ ಗುರು ಕೆ.ವಿಶ್ವವಿನೋದ ಬನಾರಿ ಹಾಗೂ 2023 ನೇ ಸಾಲಿಗೆ ಹಿಮ್ಮೇಳ ಗುರುಗಳಾದ ವಳಕ್ಕುಂಜ ಕುಮಾರ ಸುಬ್ರಹ್ಮಣ್ಯರನ್ನು ಆಯ್ಕೆ ಮಾಡಲಾಗಿದೆ. ವಿಶ್ವ ವಿನೋದ ಬನಾರಿ ಮೇರುವ್ಯಕ್ತಿತ್ವದ ಯಕ್ಷಗುರು ಕಿರಿಕ್ಕಾಡು ವಿಷ್ಣು ಭಟ್ಟ ಮತ್ತು ಶ್ರೀಮತಿ ಪರಮೇಶ್ವರಿ ಅಮ್ಮ ದಂಪತಿಗಳ ಪುತ್ರರಾದ

ಯಕ್ಷ ಗುರು ವಿಶ್ವ ವಿನೋದ ಬನಾರಿ, ಕುಮಾರ ಸುಬ್ರಹ್ಮಣ್ಯರಿಗೆವನಜ ರಂಗಮನೆ ಪ್ರಶಸ್ತಿ 2022-23 Read More »

ಮಂಗಳೂರು: ಮಹಿಳೆಯ ಸ್ನಾನದ ದೃಶ್ಯ ಮೊಬೈಲ್ ನಲ್ಲಿ ಸೆರೆಹಿಡಿದ ಸಂಘಟನೆ ಕಾರ್ಯಕರ್ತ

ಸಮಗ್ರ ನ್ಯೂಸ್: ನೆರೆ ಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನೋರ್ವನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ. ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು ಬಂದಿದೆ. ಈತ ಹಿಂದೂ ಸಂಘಟನೆ ಪಕ್ಷಿಕೆರೆ ಘಟಕದ ಸಕ್ರಿಯ ಕಾರ್ಯಕರ್ತ ಎಂದು ಹೇಳಲಾಗಿದೆ. ಘಟನೆ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು ಶುಕ್ರವಾರ ಬೆಳಕಿಗೆ

ಮಂಗಳೂರು: ಮಹಿಳೆಯ ಸ್ನಾನದ ದೃಶ್ಯ ಮೊಬೈಲ್ ನಲ್ಲಿ ಸೆರೆಹಿಡಿದ ಸಂಘಟನೆ ಕಾರ್ಯಕರ್ತ Read More »

ಸುಳ್ಯ: ಕಳ್ಳತನ ಹೀಗೂ ಮಾಡಬಹುದಾ!? ದನದ ಕೊಟ್ಟಿಗೆಗೆ ನುಗ್ಗಿ ಕದ್ದು ಹಾಲು ಕರೆದ‌ ಮಹಿಳೆ

ಸಮಗ್ರ ನ್ಯೂಸ್: ದನದ ಕೊಟ್ಟಿಗೆಗೆ‌ ನುಗ್ಗಿ ಕದ್ದು ಹಾಲು‌ ಕರೆದು ಸಿಕ್ಕಿಬಿದ್ದ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ‌ ನಡೆದಿದೆ. ಕಳ್ಳತನದ ರೀತಿಯೇ ವಿಚಿತ್ರವಾಗಿದ್ದು ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ಕರಿಕ್ಕಳದ ಮನೆಯೊಂದರಲ್ಲಿ ಮಹಿಳೆಯೊಬ್ಬರು ಹಲವು ವರ್ಷಗಳಿಂದ ಹಾಲು ಕರೆಯುವ ಕೆಲಸದಲ್ಲಿದ್ದು ಅವರೇ ಡೈರಿಗೆ ಕೊಂಡೊಯ್ಯುತಿದ್ದರೆನ್ನಲಾಗಿದೆ. ಇತ್ತೀಚೆಗೆ ಆ ಮಹಿಳೆ 4-5 ದಿನ ರಜೆ ಮಾಡಿದ್ದರು. ಈ ಸಂದರ್ಭ‌ ಮನೆಯವರು ಹಾಲು ಕರೆಯುವ ಕೆಲಸಕ್ಕೆ ಬೇರೊಂದು ವ್ಯಕ್ತಿಯನ್ನು ಕೆಲಸಕ್ಕೆ ನೇಮಿಸಿದ್ದರೆನ್ನಲಾಗಿದೆ. ಆದರೆ ಹೊಸದಾಗಿ

ಸುಳ್ಯ: ಕಳ್ಳತನ ಹೀಗೂ ಮಾಡಬಹುದಾ!? ದನದ ಕೊಟ್ಟಿಗೆಗೆ ನುಗ್ಗಿ ಕದ್ದು ಹಾಲು ಕರೆದ‌ ಮಹಿಳೆ Read More »

ಹವಾಮಾನ ವರದಿ| ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮುಂದಿನ ಎರಡು ದಿನ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ

ಹವಾಮಾನ ವರದಿ| ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ Read More »